Homeಮುಖಪುಟಅಂದು ಅಮಿತ್ ಶಾ ಕೊಟ್ಟ ಮಾತು ಉಳಿಸಿಕೊಂಡಿದ್ದರೆ, ಇಂದು ಮಹಾರಾಷ್ಟ್ರ ಬಿಜೆಪಿ ಸಿಎಂ ಹೊಂದಿರುತ್ತಿತ್ತು: ಉದ್ಧವ್...

ಅಂದು ಅಮಿತ್ ಶಾ ಕೊಟ್ಟ ಮಾತು ಉಳಿಸಿಕೊಂಡಿದ್ದರೆ, ಇಂದು ಮಹಾರಾಷ್ಟ್ರ ಬಿಜೆಪಿ ಸಿಎಂ ಹೊಂದಿರುತ್ತಿತ್ತು: ಉದ್ಧವ್ ಠಾಕ್ರೆ

- Advertisement -
- Advertisement -

ಅಂದು ಅಮಿತ್ ಶಾ ಕೊಟ್ಟ ಮಾತು ಉಳಿಸಿಕೊಂಡಿದ್ದರೆ, ಇಂದು ಮಹಾರಾಷ್ಟ್ರದಲ್ಲಿ ಬಿಜೆಪಿ ವ್ಯಕ್ತಿ ಸಿಎಂ ಆಗಿರುತ್ತಿದ್ದರು ಎಂದು ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಂದು ಬಿಜೆಪಿಯು ಹೊರಗಿನ ವ್ಯಕ್ತಿಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿದೆ. 2019ರಲ್ಲಿಯೇ ಆ ಕೆಲಸ ಮಾಡಲು ಏಕೆ ಸಾಧ್ಯವಾಗಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

2019ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿಯೊಂದಿಗೆ ಚುನಾವಣೆ ಎದುರಿಸಿದ್ದವು. ಬಿಜೆಪಿ 106 ಸ್ಥಾನಗಳನ್ನು ಗೆದ್ದರೆ, ಶಿವಸೇನೆ 55 ಸ್ಥಾನಗಳಲ್ಲಿ ಜಯಗಳಿಸಿತ್ತು. ಆಗ ಸಿಎಂ ಯಾರಾಗಬೇಕು ಎಂಬ ದೊಡ್ಡ ಚರ್ಚೆ ನಡೆದಿತ್ತು. ತಲಾ 2.5 ವರ್ಷಗಳ ಅವಧಿಗೆ ಅಧಿಕಾರ ಹಂಚಿಕೊಳ್ಳಲು ಅಮಿತ್ ಶಾ ಮಾತು ಕೊಟ್ಟಿದ್ದಾರೆ. ಮೊದಲ ಎರಡೂವರೆ ವರ್ಷ ಶಿವಸೇನೆಯ ವ್ಯಕ್ತಿ ಸಿಎಂ ಆಗಲು ಒಪ್ಪಿದ್ದರು ಎಂದು ಉದ್ಧವ್ ಠಾಕ್ರೆ ವಾದಿಸಿದ್ದರು. ಆದರೆ ಆಗ ಬಿಜೆಪಿ ಅಂತಹ ಆಶ್ವಾಸನೆ ನೀಡಿಲ್ಲ ಎಂದು ವಾದಿಸಿತು. ಕೊನೆಗೆ ಬಿಜೆಪಿಯೊಂದಿಗೆ ಸುಧೀರ್ಘ ಮೈತ್ರಿ ಕಡಿದುಕೊಂಡ ಶಿವಸೇನೆ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆಗೂಡಿ ಅಧಿಕಾರ ಹಿಡಿದಿತ್ತು. ಉದ್ಧವ್ ಠಾಕ್ರೆ ಸಿಎಂ ಆಗಿದ್ದರು.

ಈಗ ಅದನ್ನು ನೆನಪಿಸಿರುವ ಉದ್ಧವ್ ಠಾಕ್ರೆಯವರು, “ಅಂದು ಬಿಜೆಪಿ ಕೊಟ್ಟ ಮಾತು ಉಳಿಸಿಕೊಂಡಿದ್ದರೆ ಒಪ್ಪಂದದಂತೆ ಉಳಿದ ಎರಡೂವರೆ ವರ್ಷ ಬಿಜೆಪಿ ವ್ಯಕ್ತಿ ಸಿಎಂ ಆಗಬಹುದಿತ್ತು. ಆದರೆ ಹಾಗೆ ಮಾಡದ ಕಾರಣ ಈಗಲೂ ಅವರು ಶಿವಸೇನೆಯ ವ್ಯಕ್ತಿಗೆ ಸಿಎಂ ಹುದ್ದೆ ಬಿಟ್ಟುಕೊಟ್ಟಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

2019ರಲ್ಲಿ ಉದ್ಧವ್ ಠಾಕ್ರೆಯವರು ಸಿಎಂ ಆದ ನಂತರ ಮುಂಬೈನ ಆರೇ ಅರಣ್ಯ ಪ್ರದೇಶದಲ್ಲಿ ಮೆಟ್ರೊ ಕಾರ್‌ ಶೆಡ್‌ ನಿರ್ಮಾಣವನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದ್ದರು. ಆ ಮೂಲಕ ಹಲವು ದಿನಗಳಿಂದ ಹೋರಾಡುತ್ತಿದ್ದ ಪರಿಸರ ಪ್ರೇಮಿಗಳ ಮನಗೆದ್ದಿದ್ದರು. ಈಗ ಏಕನಾಥ್ ಶಿಂಧೆಯವರು ಸಿಎಂ ಆದ ಕೂಡಲೆ ಆ ಆದೇಶವನ್ನು ಬದಲಿಸಿದ್ದಾರೆ. ಈ ಕುರಿತು ಸಹ ಉದ್ಧವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದು, ನನ್ನ ಮೇಲಿನ ಸೇಡನ್ನು ಸಾಮಾನ್ಯ ಮುಂಬೈ ಜನರ ಮೇಲೆ ತೋರಿಸಬೇಡಿ ಎಂದಿದ್ದಾರೆ.

ಇನ್ನೊಂದು ಕಡೆ ಏಕನಾಥ್ ಶಿಂಧೆ ಸಿಎಂ ಆಗಿರುವುದರಿಂದ ಮತ್ತು ಅವರ ಜೊತೆ 39 ಶಿವಸೇನೆ ಶಾಸಕರು ಇರುವುದರಿಂದ ನಿಜವಾದ ಶಿವಸೇನೆ ಪಕ್ಷ ಅವರಿಗೆ ಸೇರುತ್ತದೆ. ಇತ್ತ ಉದ್ಧವ್ ಠಾಕ್ರೆ ಅಧಿಕಾರದ ಆಸೆಯಿಂದ ಪಕ್ಷವನ್ನೇ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ವಾದಿಸಿದೆ.

ಫಡ್ನವೀಸ್ ಸದ್ಯ ಅತಂತ್ರ

ಮಹಾರಾಷ್ಟ್ರದ ಆಪರೇಷನ್ ಕಮಲದ ರೂವಾರಿ ಎಂದು ಬಿಂಬಿಸಿಕೊಳ್ಳುತ್ತಿದ್ದ ಮಾಜಿ ಸಿಎಂ, ಹಾಲಿ ಡಿಸಿಎಂ ದೇವೇಂದ್ರ ಫಡ್ನವೀಸ್ ಏಕಾಏಕಿ ಮೂಲೆಗೆ ತಳ್ಳಲ್ಪಟ್ಟರು. ಗುರವಾರದ ಬೆಳಿಗ್ಗೆಯವರೆಗೂ ತಾನೇ ಸಿಎಂ ಎಂದು ಬೀಗುತ್ತಿದ್ದ ಅವರು ಮಧ್ಯಾಹ್ನದ ವೇಳೆಗೆ ಸಿಹಿ ಹಂಚಿ ಸಂಭ್ರಮಿಸಿದ್ದರೂ ಕೂಡ. ಆದರೆ ಸಿಎಂ ಸ್ಥಾನ ಸಿಗುವುದಿಲ್ಲ ಎಂದು ಅರಿತ ನಂತರ ನನಗೆ ನೂತನ ಸರ್ಕಾರದಲ್ಲಿ ಯಾವುದೇ ಹುದ್ದೆ ಬೇಡ, ಸರ್ಕಾರ ಸುಗಮ ರೀತಿಯಲ್ಲಿ ನಡೆದುಕೊಂಡು ಹೋಗಲು ಸಹಕರಿಸುವುದಾಗಿ ಹೇಳಿದರು. ಒಂದು ರೀತಿಯಲ್ಲಿ ತಮ್ಮ ಮುನಿಸನ್ನು ಹೊರಹಾಕಿದರು. ಆದರೆ ಸಂಜೆ ವೇಳೆಗೆ ಉಪಮುಖ್ಯಮಂತ್ರಿ ಸ್ಥಾನವನ್ನು ಅನಿವಾರ್ಯವಾಗಿ ಒಪ್ಪಿಕೊಳ್ಳಬೇಕಾದ ಪರಿಸ್ಥಿತಿ ಅವರದ್ದಾಗಿತ್ತು.

ಇದನ್ನೂ ಓದಿ: ಫಡ್ನವೀಸ್‌ಗೆ ದಕ್ಕದ ಸಿಎಂ ಪಟ್ಟ: ಬಿಜೆಪಿ ಹೈಕಮಾಂಡ್ ಎದುರು ಮಂಡಿಯೂರಿದ್ದೇಕೆ?

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇವಲ ಒಂದು ಕುರ್ಚಿ ಮಾತ್ರ ಹಾಕಲಾಗಿತ್ತು. ಅತ್ತ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, “ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಾರೆ, ಫಡ್ನವೀಸ್ ಉಪಮುಖ್ಯಮಂತ್ರಿಯಾಗಬೇಕು. ನಾನು ಅವರನ್ನು ವೈಯಕ್ತಿಕವಾಗಿ ವಿನಂತಿಸುತ್ತೇನೆ” ಎಂದು ಟ್ವೀಟ್ ಮಾಡಿದರು. ಅದರ ಬೆನ್ನಲ್ಲೆ “ಬಿಜೆಪಿ ಅಧ್ಯಕ್ಷ ನಡ್ಡಾಜಿ ಅವರ ಆದೇಶದ ಮೇರೆಗೆ ಫಡ್ನವೀಸ್ ಅವರು ವಿಶಾಲ ಹೃದಯ ಮೆರೆದಿದ್ದಾರೆ ಮತ್ತು ಮಹಾರಾಷ್ಟ್ರದ ರಾಜ್ಯ ಮತ್ತು ಸಾರ್ವಜನಿಕರ ಹಿತಾಸಕ್ತಿಯಿಂದ ಸರ್ಕಾರಕ್ಕೆ ಸೇರಲು ನಿರ್ಧರಿಸಿದ್ದಾರೆ. ಈ ನಿರ್ಧಾರವು ಮಹಾರಾಷ್ಟ್ರದ ಬಗ್ಗೆ ಅವರ ನಿಜವಾದ ನಿಷ್ಠೆ ಮತ್ತು ಸೇವೆಯ ಸಂಕೇತವಾಗಿದೆ. ಇದಕ್ಕಾಗಿ ನಾನು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ” ಎಂದು ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದರು. ಆಗ ಆತುರಾತುರವಾಗಿ ವೇದಿಕೆಗೆ ಮತ್ತೊಂದು ಕುರ್ಚಿ ಹಾಕಿ ದೇವೇಂದ್ರ ಫಡ್ನವೀಸ್‌ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...