Homeಕರ್ನಾಟಕಖಾಯಮಾತಿಗೆ ಇನ್ನೆಷ್ಟು ವರ್ಷ ಕಾಯಬೇಕು?: ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಬೃಹತ್‌ ಪ್ರತಿಭಟನೆ ಆರಂಭ

ಖಾಯಮಾತಿಗೆ ಇನ್ನೆಷ್ಟು ವರ್ಷ ಕಾಯಬೇಕು?: ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಬೃಹತ್‌ ಪ್ರತಿಭಟನೆ ಆರಂಭ

- Advertisement -
- Advertisement -

ಕೆಲಸದ ಖಾಯಮಾತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯದ ಸ್ವಚ್ಛತಾ ಕಾರ್ಮಿಕರ ಆರಂಭಿಸಿದ್ದಾರೆ. ಸಾವಿರಾರು ಪೌರಕಾರ್ಮಿಕರು ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ಸೇರಿದ್ದು, ಸುರಿಯುತ್ತಿರುವ ಜಟಿ ಮಳೆಯನ್ನು ಲೆಕ್ಕಿಸದೆ ಹೋರಾಟಕ್ಕೆ ಕುಳಿತ್ತಿದ್ದಾರೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ, ಕರ್ನಾಟಕ ಪ್ರಗತಿಪರ ಪೌರ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಮುಷ್ಕರ ಶುರುವಾಗಿದ್ದು, ಸರ್ಕಾರ ನೀಡಿದ ಭರವಸೆಗಳು ಈಡೇರಬೇಕೆಂದು ಬಿಗಿಪಟ್ಟು ಹಿಡಿಯಲಾಗಿದೆ.

ರಾಜ್ಯದ ಎಲ್ಲಾ ನೇರ ಪಾವತಿ ಪೌರಕಾರ್ಮಿಕರು, ನೆಪಮಾತ್ರ ಗುತ್ತಿಗೆ ಪದ್ಧತಿಯಲ್ಲಿ ಶೋಷಣೆ ಅನುಭವಿಸುತ್ತಿರುವ ಘನತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ವಾಹನ ಚಾಲಕರು ಮತ್ತು ಸಹಾಯಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರನ್ನು ಒಂದೇ ಬಾರಿಗೆ ಖಾಯಂಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ನಗರಸ್ಥಳೀಯ ಸಂಸ್ಥೆಗಳಾದ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸ್ವಚ್ಛತಾ ಕೆಲಸವನ್ನು ಹೊರ ಗುತ್ತಿಗೆಗೆ ನೀಡಲಾಗಿದೆ. ಕಾರ್ಮಿಕರನ್ನು ಅಪಾರವಾಗಿ ಶೋಷಿಸುವ ಗುತ್ತಿಗೆ ಪದ್ಧತಿಯು ಸರ್ಕಾರವೇ ನಡೆಸುತ್ತಿರುವ ಗುಲಾಮಿ ಪದ್ಧತಿಯಾಗಿದೆ ಎಂದು ಸ್ವಚ್ಛತಾ ಕರ್ಮಿಗಳು ಪುನರುಚ್ಚರಿಸಿದ್ದಾರೆ.

ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಎಲ್ಲಾ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘ, ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘ ಹಾಗೂ ರಾಜ್ಯದ ವಿವಿಧ ಸಫಾಯಿಕರ್ಮಚಾರಿ ಸಂಘಟನೆಗಳು ನಿರಂತರವಾಗಿ ಹೋರಾಟ ನಡೆಸಿದ ಫಲವಾಗಿ 2016-17ರಲ್ಲಿ ಅಂದಿನ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಗುತ್ತಿಗೆ ಪದ್ಧತಿ ರದ್ದುಪಡಿಸಿ ಎಲ್ಲಾ ಸ್ವಚ್ಛತಾ ಕಾರ್ಮಿಕರನ್ನು ಖಾಯಂ ಮಾಡುವ ನಿರ್ಣಯ ತೆಗೆದುಕೊಂಡಿತು. ಈ ನಿಯಮಾನುಸಾರ ಗುತ್ತಿಗೆ ಪದ್ಧತಿ ರದ್ದಾದ ಕೂಡಲೇ ಎಲ್ಲ ಕಾರ್ಮಿಕರನ್ನು ವಿಲೀನಗೊಳಿಸಿ ಖಾಯಂಗೊಳಿಸಬೇಕಾಗಿತ್ತು. ಆದರೆ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಮಧ್ಯೆ ಭೇದ-ಭಾವ ಉಂಟು ಮಾಡುವ ಉದ್ದೇಶದಿಂದ ಸರ್ಕಾರವು ದಲಿತ ಕಾರ್ಮಿಕರ ವಿರುದ್ಧವಾಗಿ ಕಸ ಗುಡಿಸುವವರು, ಕಸವನ್ನು ಮನೆಗಳಿಂದ ಸಂಗ್ರಹಿಸುವವರು, ಟ್ರಾಕ್ಟರ್ ಲಾರಿ ಅಥವಾ ಆಟೋಗಳಿಗೆ ತುಂಬುವವರನ್ನು ಲೋಡರ್ಸ್, ಕ‌ಸ ಸಾಗಿಸುವವರನ್ನು ಚಾಲಕರು, ಒಳಚರಂಡಿಗಳಲ್ಲಿ ಕಟ್ಟಿಕೊಂಡ ಮಲ ಮೂತ್ರಗಳನ್ನು ತೆರವುಗೊಳಿಸಿ ಸ್ವಚ್ಛ ಮಾಡುವವರು- ಹೀಗೆ ವರ್ಗೀಕರಿಸಿ ವಿಂಗಡಿಸಲಾಗಿದೆ. ಈ ವಿಂಗಡಣೆಯ ಅನುಸಾರ ಸರ್ಕಾರವು ಪೊರಕೆ ಹಿಡಿದು ಕಸ ಗುಡಿಸುವವರನ್ನು ಮಾತ್ರ ಪೌರಕಾರ್ಮಿಕರೆಂದು ಪರಿಗಣಿಸಿ ಬೇರೆ ಕಾರ್ಮಿಕರನ್ನು ಪ್ರತ್ಯೇಕಗೊಳಿಸಿದ್ದಾರೆ. ಗುತ್ತಿಗೆ ಪದ್ಧತಿಯನ್ನು ಹೇಗಾದರೂ ಉಳಿಸಿಕೊಳ್ಳಬೇಕೆಂಬುದು ಈ ವಿಂಗಡಣೆಯ ಹಿಂದಿನ ದುರುದ್ದೇಶವಾಗಿದೆ ಎಂದು ಕಾರ್ಮಿಕರು ಎಚ್ಚರಿಸಿದ್ದಾರೆ.

ಗುತ್ತಿಗೆ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಪಡಿಸಲು ಇಷ್ಟವಿಲ್ಲದ ಅಧಿಕಾರಿಗಳು, ಗುತ್ತಿಗೆದಾರರು ನೀಡುವ ಕಮಿಷನ್‌ಗೆ ಆಸೆಯಿಂದ ಅವರೊಂದಿಗೆ ಶಾಮೀಲಾಗಿದ್ದಾರೆ. ಪೌರಕಾರ್ಮಿಕರೆಲ್ಲರನ್ನೂ ನೇರಪಾವತಿ, ನೇರ ನೇಮಕಾತಿ, ಹೊರಗುತ್ತಿಗೆ ಕ್ಷೇಮಾಭಿವೃದ್ಧಿ ಟೈಮ್‌ಸ್ಟೇಲ್‌ ಎಂಬಂತಹ ಅಸಂಬದ್ಧ ಗುಂಪುಗಳಾಗಿ ವಿಂಗಡಿಸಿದ್ದಾರೆ. ಅವರ ಕಪಿಮುಷ್ಟಿಯಲ್ಲಿರುವ ಅಧಿಕಾರಿಗಳು ತಮಗೆ ಹತ್ತಿರವಾಗಿರುವ, ಲಂಚ ನೀಡಿದ ಬೆರಳೆಣಿಕೆಯಷ್ಟು ನೌಕರರನ್ನು ನೆಪ ಮಾತ್ರಕ್ಕೆ ಖಾಯಂ ಮಾಡಿರುತ್ತಾರೆ ಎಂದು ಸಂಘಟನೆಗಳು ತಿಳಿಸಿವೆ.

ಪ್ರತಿಭಟನೆ ವೇಳೆ ಮಾತನಾಡಿರುವ ಪೌರಕಾರ್ಮಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“18 ಸಾವಿರ ಸಂಬಳ ಕೊಡುತ್ತಿದ್ದೇವೆ ಎನ್ನುತ್ತಾರೆ. ಎಲ್ಲಿ ಬರುತ್ತಿದೆ ಅಷ್ಟು ಸಂಬಳ. 13 ಸಾವಿರ ರೂಪಾಯಿ ಕೈ ಸೇರುತ್ತಿದೆ. ಮನೆ ಬಾಡಿಗೆ ಕಟ್ಟಲು, ಮಕ್ಕಳ ಶಾಲಾ ಶುಲ್ಕ ಪಾವತಿಸಲು ಆಗುತ್ತಿಲ್ಲ. ಅವರ ಮಕ್ಕಳ ಮಾತ್ರ ಕಾರಲ್ಲೇ ಓಡಾಡಬೇಕು, ನಮ್ಮ ಮಕ್ಕಳು ನಡೆದುಕೊಂಡೇ ತಿರುಗಾಡಬೇಕಾ? ಸರ್ಕಾರ ನಮ್ಮನ್ನು ಖಾಯಂ ಮಾಡಲೇಬೇಕು” ಎಂದು ತಾಯಿಯೊಬ್ಬರು ಆಗ್ರಹಿಸಿದರು.

“ಪರ್ಮನೆಂಟ್ ಆಗುತ್ತೆ ಅಂತ ಇಪತ್ತು ವರ್ಷಗಳಿಂದ ಹೇಳುತ್ತಲೇ ಇದ್ದಾರೆ. ನಮ್ಮನ್ನು ಖಾಯಂ ಮಾಡಲಿಲ್ಲ. ನಮ್ಮ ಹುಡುಗರಿಗೆ ಯಾವುದೇ ಸಹಾಯವಾಗಲಿಲ್ಲ. ಪರ್ಮನೆಂಟ್ ಆಗುತ್ತೇವೆ ಎಂದು ಕಾಯುತ್ತಲೇ ಅರ್ಧದಷ್ಟು ಕಾರ್ಮಿಕರು ತೀರಿಹೋದರು. 14 ಸಾವಿರ ಸಂಬಳ ಅನ್ನುತ್ತಾರೆ. ಆದರೆ 11,500 ಅಥವಾ 12,000 ಇಷ್ಟೇ ನಮ್ಮ ಖಾತೆಗೆ ಬೀಳುತ್ತಿದೆ. ಹುಷಾರಿಲ್ಲ ಅಂದರೆ ಸಂಬಳ ಕಟ್ ಆಗುತ್ತದೆ” ಎಂದು ಮತ್ತೊಬ್ಬ ಪೌರಕಾರ್ಮಿಕ ಮಹಿಳೆ ನೊಂದು ಹೇಳಿದರು.

ಪೌರಕಾರ್ಮಿಕರ ಬೇಡಿಕೆಗಳು

  • ನೇರಪಾವತಿ ಪೌರಕಾರ್ಮಿಕರು, ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ, ಮನೆ-ಮನೆ ಕಸ ಸಂಗ್ರಹಿಸುವ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಕಸದ ವಾಹನ ಚಾಲಕರು, ಸಹಾಯಕರು, ಹಾಗೂ ಪೌರಕಾರ್ಮಿಕರ ಮೇಲ್ವಿಚಾರಕರು ಎಂಬ ಅಸಂಬದ್ಧ ವಿಗಂಡಣೆಯನ್ನು ಕೈಬಿಟ್ಟು ಎಲ್ಲಾ ಸ್ವಚ್ಛತಾ ಕಾರ್ಮಿಕರನ್ನು ಏಕ ಕಾಲಕ್ಕೆ ಖಾಯಂ ಮಾಡಲೇಬೇಕು.
  • ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಮಹಿಳಾ ಪೌರಕಾರ್ಮಿಕರಿಗೆ ಶೌಚಾಲಯ, ಕುಡಿಯುವ ನೀರು, ಹೆರಿಗೆ ಭತ್ಯೆ, ಹೆರಿಗೆ ರಜೆ, ಬಾಲವಾಡಿ, ವಿಶ್ರಾಂತಿ ಗೃಹದಂತಹ ಅತ್ಯವಶ್ಯಕ ಮೂಲಭೂತ ಸೌಲಭ್ಯಗಳನ್ನು ಎಲ್ಲಿಯೂ ನೀಡಿಲ್ಲ. ಈ ಸೌಲಭ್ಯಗಳನ್ನು ರಾಜ್ಯದ ಎಲ್ಲಾ ಕಡೆ ನೀಡಲೇಬೇಕು ಎಂಬ ಸರ್ಕಾರಿ ಆದೇಶವನ್ನು ಕೂಡಲೇ ಹೊರಡಿಸಬೇಕು.
  • ಪೌರಕಾರ್ಮಿಕರಿಗಾಗಿ ಜಾರಿ ಮಾಡಿರುವ ಗೃಹ ಭಾಗ್ಯ ಯೋಜನೆಯನ್ನು ಕೇವಲ ಖಾಯಂ ಪೌರಕಾರ್ಮಿಕರಿಗೆ ಸೀಮಿತ ಮಾಡಿ ಶೇ.85 ರಷ್ಟು ಸ್ವಚ್ಛತಾ ಕಾರ್ಮಿಕರಿಗೆ ತಾರತಮ್ಯ ಮಾಡಲಾಗಿದೆ. ಆದ್ದರಿಂದ ಎಲ್ಲಾ ನೇರಪಾವತಿ, ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ, ಮನೆ-ಮನೆ ಕಸ ಸಂಗ್ರಹಿಸುವ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಕಸದ ವಾಹನಚಾಲಕರು, ಸಹಾಯಕರನ್ನು ಗೃಹ ಭಾಗ್ಯ ಯೋಜನೆಗೆ ಸೇರಿಸುವ ಸರ್ಕಾರಿ ಆದೇಶವನ್ನು ಕೂಡಲೇ ಹೊರಡಿಸಬೇಕು.
  • ನೇರಪಾವತಿ, ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ, ಮನೆ-ಮನೆ ಕಸ ಸಂಗ್ರಹಿಸುವ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಕಸದ ವಾಹನ ಚಾಲಕರು, ಸಹಾಯಕರ ಮಕ್ಕಳು ಖಾಸಗಿ ಶಾಲೆ-ಕಾಲೇಜುಗಳಲ್ಲಿಯೂ ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಅದಕ್ಕೆ ಅಗತ್ಯವಿರುವ ಹಣಕಾಸಿನ ನೆರವು ನೀಡಲು ಸೂಕ್ತ ಆದೇಶ ಹೊರಡಿಸಬೇಕು.
  • ನೇರ ಪಾವತಿಯಡಿ 60 ವರ್ಷದವರೆಗೂ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾಗುತ್ತಿರುವ ಸ್ವಚ್ಛತಾ ಕಾರ್ಮಿಕರು ಯಾವ ನಿವೃತ್ತಿ ಸೌಕರ್ಯಗಳಿಲ್ಲದೆ ಬರಿಗೈಲಿ ಹೋಗುತ್ತಿದ್ದಾರೆ. ಈ ಕಾರ್ಮಿಕರಿಗೆ ತಲಾ ರೂ.10 ಲಕ್ಷ ಪರಿಹಾರ ನೀಡಬೇಕು, ಮಾಸಿಕ ರೂ. 10,000 ಪಿಂಚಣಿ ಹಾಗೂ ಅವರ ಅವಲಂಬಿತರಿಗೆ ಉದ್ಯೋಗ ನೀಡಬೇಕು, ಮತ್ತು ಅವರ ಆರೋಗ್ಯ ಭದ್ರತೆಗಾಗಿ ಆರೋಗ್ಯ ಕಾರ್ಡ್ ನೀಡಬೇಕು.
  • ರಾಜ್ಯಾದ್ಯಂತ ನಗರ ಪ್ರದೇಶಗಳು (ನಗರ ಸ್ಥಳೀಯ ಸಂಸ್ಥೆಗಳು), ಗ್ರಾಮೀಣ ಭಾಗಗಳಲ್ಲಿ (ಗ್ರಾಮ ಪಂಚಾಯಿತಿಗಳು), ಖಾಸಗಿವಲಯಗಳಲ್ಲಿ (ಬಸ್‌ನಿಲ್ದಾಣ, ವಿಶ್ವವಿದ್ಯಾಲಯಗಳು, ಆಸ್ಪತ್ರೆಗಳು, ಕಂಪನಿಗಳು, ದೊಡ್ಡ ಕಚೇರಿಗಳು, ಲಾರ್ಡ್‌ಗಳು, ಹೋಟೆಲ್ ಇತ್ಯಾದಿ) ಸ್ವಚ್ಛತಾ ಕೆಲಸಗಳನ್ನು ಮಾಡುತ್ತಿರುವ ಸಾವಿರಾರು ಸ್ವಚ್ಛತಾ ಕಾರ್ಮಿಕರ ನೇಮಕಾತಿ, ವೇತನ ಮತ್ತು ಇತರ ಸಾಮಾಜಿಕ ಭದ್ರತೆಗಾಗಿ ಬೇಕಾದ ಸೂಕ್ತ ಕಾಯ್ದೆ ನಮ್ಮ ರಾಜ್ಯದಲ್ಲಿಲ್ಲ. ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯ, ಬೆಂಗಳೂರು ಇವರು ನಡೆಸಿರುವ ಅಧ್ಯಯನದ ಶಿಫಾರಸ್ಸಿನಂತೆ ಸ್ವಚ್ಛತಾ ಕಾರ್ಮಿಕರ ಭದ್ರತೆ, ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆ ನ್ಯಾಯಕ್ಕಾಗಿ ಸೂಕ್ತ ಕಾನೂನು ಜಾರಿಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...