Homeಕರ್ನಾಟಕಖಾಯಮಾತಿಗೆ ಇನ್ನೆಷ್ಟು ವರ್ಷ ಕಾಯಬೇಕು?: ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಬೃಹತ್‌ ಪ್ರತಿಭಟನೆ ಆರಂಭ

ಖಾಯಮಾತಿಗೆ ಇನ್ನೆಷ್ಟು ವರ್ಷ ಕಾಯಬೇಕು?: ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಬೃಹತ್‌ ಪ್ರತಿಭಟನೆ ಆರಂಭ

- Advertisement -
- Advertisement -

ಕೆಲಸದ ಖಾಯಮಾತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯದ ಸ್ವಚ್ಛತಾ ಕಾರ್ಮಿಕರ ಆರಂಭಿಸಿದ್ದಾರೆ. ಸಾವಿರಾರು ಪೌರಕಾರ್ಮಿಕರು ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ಸೇರಿದ್ದು, ಸುರಿಯುತ್ತಿರುವ ಜಟಿ ಮಳೆಯನ್ನು ಲೆಕ್ಕಿಸದೆ ಹೋರಾಟಕ್ಕೆ ಕುಳಿತ್ತಿದ್ದಾರೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ, ಕರ್ನಾಟಕ ಪ್ರಗತಿಪರ ಪೌರ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಮುಷ್ಕರ ಶುರುವಾಗಿದ್ದು, ಸರ್ಕಾರ ನೀಡಿದ ಭರವಸೆಗಳು ಈಡೇರಬೇಕೆಂದು ಬಿಗಿಪಟ್ಟು ಹಿಡಿಯಲಾಗಿದೆ.

ರಾಜ್ಯದ ಎಲ್ಲಾ ನೇರ ಪಾವತಿ ಪೌರಕಾರ್ಮಿಕರು, ನೆಪಮಾತ್ರ ಗುತ್ತಿಗೆ ಪದ್ಧತಿಯಲ್ಲಿ ಶೋಷಣೆ ಅನುಭವಿಸುತ್ತಿರುವ ಘನತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ವಾಹನ ಚಾಲಕರು ಮತ್ತು ಸಹಾಯಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರನ್ನು ಒಂದೇ ಬಾರಿಗೆ ಖಾಯಂಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ನಗರಸ್ಥಳೀಯ ಸಂಸ್ಥೆಗಳಾದ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸ್ವಚ್ಛತಾ ಕೆಲಸವನ್ನು ಹೊರ ಗುತ್ತಿಗೆಗೆ ನೀಡಲಾಗಿದೆ. ಕಾರ್ಮಿಕರನ್ನು ಅಪಾರವಾಗಿ ಶೋಷಿಸುವ ಗುತ್ತಿಗೆ ಪದ್ಧತಿಯು ಸರ್ಕಾರವೇ ನಡೆಸುತ್ತಿರುವ ಗುಲಾಮಿ ಪದ್ಧತಿಯಾಗಿದೆ ಎಂದು ಸ್ವಚ್ಛತಾ ಕರ್ಮಿಗಳು ಪುನರುಚ್ಚರಿಸಿದ್ದಾರೆ.

ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಎಲ್ಲಾ ಕಾರ್ಮಿಕರನ್ನು ಖಾಯಂ ಮಾಡಬೇಕು ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘ, ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘ ಹಾಗೂ ರಾಜ್ಯದ ವಿವಿಧ ಸಫಾಯಿಕರ್ಮಚಾರಿ ಸಂಘಟನೆಗಳು ನಿರಂತರವಾಗಿ ಹೋರಾಟ ನಡೆಸಿದ ಫಲವಾಗಿ 2016-17ರಲ್ಲಿ ಅಂದಿನ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಗುತ್ತಿಗೆ ಪದ್ಧತಿ ರದ್ದುಪಡಿಸಿ ಎಲ್ಲಾ ಸ್ವಚ್ಛತಾ ಕಾರ್ಮಿಕರನ್ನು ಖಾಯಂ ಮಾಡುವ ನಿರ್ಣಯ ತೆಗೆದುಕೊಂಡಿತು. ಈ ನಿಯಮಾನುಸಾರ ಗುತ್ತಿಗೆ ಪದ್ಧತಿ ರದ್ದಾದ ಕೂಡಲೇ ಎಲ್ಲ ಕಾರ್ಮಿಕರನ್ನು ವಿಲೀನಗೊಳಿಸಿ ಖಾಯಂಗೊಳಿಸಬೇಕಾಗಿತ್ತು. ಆದರೆ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಮಧ್ಯೆ ಭೇದ-ಭಾವ ಉಂಟು ಮಾಡುವ ಉದ್ದೇಶದಿಂದ ಸರ್ಕಾರವು ದಲಿತ ಕಾರ್ಮಿಕರ ವಿರುದ್ಧವಾಗಿ ಕಸ ಗುಡಿಸುವವರು, ಕಸವನ್ನು ಮನೆಗಳಿಂದ ಸಂಗ್ರಹಿಸುವವರು, ಟ್ರಾಕ್ಟರ್ ಲಾರಿ ಅಥವಾ ಆಟೋಗಳಿಗೆ ತುಂಬುವವರನ್ನು ಲೋಡರ್ಸ್, ಕ‌ಸ ಸಾಗಿಸುವವರನ್ನು ಚಾಲಕರು, ಒಳಚರಂಡಿಗಳಲ್ಲಿ ಕಟ್ಟಿಕೊಂಡ ಮಲ ಮೂತ್ರಗಳನ್ನು ತೆರವುಗೊಳಿಸಿ ಸ್ವಚ್ಛ ಮಾಡುವವರು- ಹೀಗೆ ವರ್ಗೀಕರಿಸಿ ವಿಂಗಡಿಸಲಾಗಿದೆ. ಈ ವಿಂಗಡಣೆಯ ಅನುಸಾರ ಸರ್ಕಾರವು ಪೊರಕೆ ಹಿಡಿದು ಕಸ ಗುಡಿಸುವವರನ್ನು ಮಾತ್ರ ಪೌರಕಾರ್ಮಿಕರೆಂದು ಪರಿಗಣಿಸಿ ಬೇರೆ ಕಾರ್ಮಿಕರನ್ನು ಪ್ರತ್ಯೇಕಗೊಳಿಸಿದ್ದಾರೆ. ಗುತ್ತಿಗೆ ಪದ್ಧತಿಯನ್ನು ಹೇಗಾದರೂ ಉಳಿಸಿಕೊಳ್ಳಬೇಕೆಂಬುದು ಈ ವಿಂಗಡಣೆಯ ಹಿಂದಿನ ದುರುದ್ದೇಶವಾಗಿದೆ ಎಂದು ಕಾರ್ಮಿಕರು ಎಚ್ಚರಿಸಿದ್ದಾರೆ.

ಗುತ್ತಿಗೆ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಪಡಿಸಲು ಇಷ್ಟವಿಲ್ಲದ ಅಧಿಕಾರಿಗಳು, ಗುತ್ತಿಗೆದಾರರು ನೀಡುವ ಕಮಿಷನ್‌ಗೆ ಆಸೆಯಿಂದ ಅವರೊಂದಿಗೆ ಶಾಮೀಲಾಗಿದ್ದಾರೆ. ಪೌರಕಾರ್ಮಿಕರೆಲ್ಲರನ್ನೂ ನೇರಪಾವತಿ, ನೇರ ನೇಮಕಾತಿ, ಹೊರಗುತ್ತಿಗೆ ಕ್ಷೇಮಾಭಿವೃದ್ಧಿ ಟೈಮ್‌ಸ್ಟೇಲ್‌ ಎಂಬಂತಹ ಅಸಂಬದ್ಧ ಗುಂಪುಗಳಾಗಿ ವಿಂಗಡಿಸಿದ್ದಾರೆ. ಅವರ ಕಪಿಮುಷ್ಟಿಯಲ್ಲಿರುವ ಅಧಿಕಾರಿಗಳು ತಮಗೆ ಹತ್ತಿರವಾಗಿರುವ, ಲಂಚ ನೀಡಿದ ಬೆರಳೆಣಿಕೆಯಷ್ಟು ನೌಕರರನ್ನು ನೆಪ ಮಾತ್ರಕ್ಕೆ ಖಾಯಂ ಮಾಡಿರುತ್ತಾರೆ ಎಂದು ಸಂಘಟನೆಗಳು ತಿಳಿಸಿವೆ.

ಪ್ರತಿಭಟನೆ ವೇಳೆ ಮಾತನಾಡಿರುವ ಪೌರಕಾರ್ಮಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“18 ಸಾವಿರ ಸಂಬಳ ಕೊಡುತ್ತಿದ್ದೇವೆ ಎನ್ನುತ್ತಾರೆ. ಎಲ್ಲಿ ಬರುತ್ತಿದೆ ಅಷ್ಟು ಸಂಬಳ. 13 ಸಾವಿರ ರೂಪಾಯಿ ಕೈ ಸೇರುತ್ತಿದೆ. ಮನೆ ಬಾಡಿಗೆ ಕಟ್ಟಲು, ಮಕ್ಕಳ ಶಾಲಾ ಶುಲ್ಕ ಪಾವತಿಸಲು ಆಗುತ್ತಿಲ್ಲ. ಅವರ ಮಕ್ಕಳ ಮಾತ್ರ ಕಾರಲ್ಲೇ ಓಡಾಡಬೇಕು, ನಮ್ಮ ಮಕ್ಕಳು ನಡೆದುಕೊಂಡೇ ತಿರುಗಾಡಬೇಕಾ? ಸರ್ಕಾರ ನಮ್ಮನ್ನು ಖಾಯಂ ಮಾಡಲೇಬೇಕು” ಎಂದು ತಾಯಿಯೊಬ್ಬರು ಆಗ್ರಹಿಸಿದರು.

“ಪರ್ಮನೆಂಟ್ ಆಗುತ್ತೆ ಅಂತ ಇಪತ್ತು ವರ್ಷಗಳಿಂದ ಹೇಳುತ್ತಲೇ ಇದ್ದಾರೆ. ನಮ್ಮನ್ನು ಖಾಯಂ ಮಾಡಲಿಲ್ಲ. ನಮ್ಮ ಹುಡುಗರಿಗೆ ಯಾವುದೇ ಸಹಾಯವಾಗಲಿಲ್ಲ. ಪರ್ಮನೆಂಟ್ ಆಗುತ್ತೇವೆ ಎಂದು ಕಾಯುತ್ತಲೇ ಅರ್ಧದಷ್ಟು ಕಾರ್ಮಿಕರು ತೀರಿಹೋದರು. 14 ಸಾವಿರ ಸಂಬಳ ಅನ್ನುತ್ತಾರೆ. ಆದರೆ 11,500 ಅಥವಾ 12,000 ಇಷ್ಟೇ ನಮ್ಮ ಖಾತೆಗೆ ಬೀಳುತ್ತಿದೆ. ಹುಷಾರಿಲ್ಲ ಅಂದರೆ ಸಂಬಳ ಕಟ್ ಆಗುತ್ತದೆ” ಎಂದು ಮತ್ತೊಬ್ಬ ಪೌರಕಾರ್ಮಿಕ ಮಹಿಳೆ ನೊಂದು ಹೇಳಿದರು.

ಪೌರಕಾರ್ಮಿಕರ ಬೇಡಿಕೆಗಳು

  • ನೇರಪಾವತಿ ಪೌರಕಾರ್ಮಿಕರು, ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ, ಮನೆ-ಮನೆ ಕಸ ಸಂಗ್ರಹಿಸುವ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಕಸದ ವಾಹನ ಚಾಲಕರು, ಸಹಾಯಕರು, ಹಾಗೂ ಪೌರಕಾರ್ಮಿಕರ ಮೇಲ್ವಿಚಾರಕರು ಎಂಬ ಅಸಂಬದ್ಧ ವಿಗಂಡಣೆಯನ್ನು ಕೈಬಿಟ್ಟು ಎಲ್ಲಾ ಸ್ವಚ್ಛತಾ ಕಾರ್ಮಿಕರನ್ನು ಏಕ ಕಾಲಕ್ಕೆ ಖಾಯಂ ಮಾಡಲೇಬೇಕು.
  • ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಮಹಿಳಾ ಪೌರಕಾರ್ಮಿಕರಿಗೆ ಶೌಚಾಲಯ, ಕುಡಿಯುವ ನೀರು, ಹೆರಿಗೆ ಭತ್ಯೆ, ಹೆರಿಗೆ ರಜೆ, ಬಾಲವಾಡಿ, ವಿಶ್ರಾಂತಿ ಗೃಹದಂತಹ ಅತ್ಯವಶ್ಯಕ ಮೂಲಭೂತ ಸೌಲಭ್ಯಗಳನ್ನು ಎಲ್ಲಿಯೂ ನೀಡಿಲ್ಲ. ಈ ಸೌಲಭ್ಯಗಳನ್ನು ರಾಜ್ಯದ ಎಲ್ಲಾ ಕಡೆ ನೀಡಲೇಬೇಕು ಎಂಬ ಸರ್ಕಾರಿ ಆದೇಶವನ್ನು ಕೂಡಲೇ ಹೊರಡಿಸಬೇಕು.
  • ಪೌರಕಾರ್ಮಿಕರಿಗಾಗಿ ಜಾರಿ ಮಾಡಿರುವ ಗೃಹ ಭಾಗ್ಯ ಯೋಜನೆಯನ್ನು ಕೇವಲ ಖಾಯಂ ಪೌರಕಾರ್ಮಿಕರಿಗೆ ಸೀಮಿತ ಮಾಡಿ ಶೇ.85 ರಷ್ಟು ಸ್ವಚ್ಛತಾ ಕಾರ್ಮಿಕರಿಗೆ ತಾರತಮ್ಯ ಮಾಡಲಾಗಿದೆ. ಆದ್ದರಿಂದ ಎಲ್ಲಾ ನೇರಪಾವತಿ, ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ, ಮನೆ-ಮನೆ ಕಸ ಸಂಗ್ರಹಿಸುವ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಕಸದ ವಾಹನಚಾಲಕರು, ಸಹಾಯಕರನ್ನು ಗೃಹ ಭಾಗ್ಯ ಯೋಜನೆಗೆ ಸೇರಿಸುವ ಸರ್ಕಾರಿ ಆದೇಶವನ್ನು ಕೂಡಲೇ ಹೊರಡಿಸಬೇಕು.
  • ನೇರಪಾವತಿ, ಹೊರಗುತ್ತಿಗೆ, ಕ್ಷೇಮಾಭಿವೃದ್ಧಿ, ಮನೆ-ಮನೆ ಕಸ ಸಂಗ್ರಹಿಸುವ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್, ಕಸದ ವಾಹನ ಚಾಲಕರು, ಸಹಾಯಕರ ಮಕ್ಕಳು ಖಾಸಗಿ ಶಾಲೆ-ಕಾಲೇಜುಗಳಲ್ಲಿಯೂ ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಅದಕ್ಕೆ ಅಗತ್ಯವಿರುವ ಹಣಕಾಸಿನ ನೆರವು ನೀಡಲು ಸೂಕ್ತ ಆದೇಶ ಹೊರಡಿಸಬೇಕು.
  • ನೇರ ಪಾವತಿಯಡಿ 60 ವರ್ಷದವರೆಗೂ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾಗುತ್ತಿರುವ ಸ್ವಚ್ಛತಾ ಕಾರ್ಮಿಕರು ಯಾವ ನಿವೃತ್ತಿ ಸೌಕರ್ಯಗಳಿಲ್ಲದೆ ಬರಿಗೈಲಿ ಹೋಗುತ್ತಿದ್ದಾರೆ. ಈ ಕಾರ್ಮಿಕರಿಗೆ ತಲಾ ರೂ.10 ಲಕ್ಷ ಪರಿಹಾರ ನೀಡಬೇಕು, ಮಾಸಿಕ ರೂ. 10,000 ಪಿಂಚಣಿ ಹಾಗೂ ಅವರ ಅವಲಂಬಿತರಿಗೆ ಉದ್ಯೋಗ ನೀಡಬೇಕು, ಮತ್ತು ಅವರ ಆರೋಗ್ಯ ಭದ್ರತೆಗಾಗಿ ಆರೋಗ್ಯ ಕಾರ್ಡ್ ನೀಡಬೇಕು.
  • ರಾಜ್ಯಾದ್ಯಂತ ನಗರ ಪ್ರದೇಶಗಳು (ನಗರ ಸ್ಥಳೀಯ ಸಂಸ್ಥೆಗಳು), ಗ್ರಾಮೀಣ ಭಾಗಗಳಲ್ಲಿ (ಗ್ರಾಮ ಪಂಚಾಯಿತಿಗಳು), ಖಾಸಗಿವಲಯಗಳಲ್ಲಿ (ಬಸ್‌ನಿಲ್ದಾಣ, ವಿಶ್ವವಿದ್ಯಾಲಯಗಳು, ಆಸ್ಪತ್ರೆಗಳು, ಕಂಪನಿಗಳು, ದೊಡ್ಡ ಕಚೇರಿಗಳು, ಲಾರ್ಡ್‌ಗಳು, ಹೋಟೆಲ್ ಇತ್ಯಾದಿ) ಸ್ವಚ್ಛತಾ ಕೆಲಸಗಳನ್ನು ಮಾಡುತ್ತಿರುವ ಸಾವಿರಾರು ಸ್ವಚ್ಛತಾ ಕಾರ್ಮಿಕರ ನೇಮಕಾತಿ, ವೇತನ ಮತ್ತು ಇತರ ಸಾಮಾಜಿಕ ಭದ್ರತೆಗಾಗಿ ಬೇಕಾದ ಸೂಕ್ತ ಕಾಯ್ದೆ ನಮ್ಮ ರಾಜ್ಯದಲ್ಲಿಲ್ಲ. ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯ, ಬೆಂಗಳೂರು ಇವರು ನಡೆಸಿರುವ ಅಧ್ಯಯನದ ಶಿಫಾರಸ್ಸಿನಂತೆ ಸ್ವಚ್ಛತಾ ಕಾರ್ಮಿಕರ ಭದ್ರತೆ, ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆ ನ್ಯಾಯಕ್ಕಾಗಿ ಸೂಕ್ತ ಕಾನೂನು ಜಾರಿಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...