Homeಕರ್ನಾಟಕಭಾರೀ ಮಳೆಗೆ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ಭಾರೀ ಮಳೆಗೆ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ಮಳೆಗಾಲದಲ್ಲಿ ಅಥವಾ ಯಾವುದೇ ಅನಿರೀಕ್ಷಿತ ಚಂಡಮಾರುತಗಳು ಬೀಸುವ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಹವಾಮಾನ ಇಲಾಖೆಯು ಈ ಅಲರ್ಟ್‌ಗಳನ್ನು ಹೊರಡಿಸುತ್ತದೆ.

- Advertisement -
- Advertisement -

ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯು ಜುಲೈ 5ರವರೆಗೂ ಮುಂದುವರೆಯುವ ಸಾಧ್ಯತೆಯಿದೆ. ಹಾಗಾಗಿ ಹವಾಮಾನ ಇಲಾಖೆಯು ಜುಲೈ 1 ಮತ್ತು 2 ರಂದು ಕರಾವಳಿಯ ಹಲುವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಈಗಾಗಲೇ ಒಂದು ದಿನದ ಮಳೆಗೆ ಮಂಗಳೂರು ನಗರ ಮುಳುಗಡೆಯಾಗಿದೆ. ಇನ್ನು 5 ದಿನಗಳು ಮಳೆ ಮುಂದುವರೆಯುವುದರಿಂದ ಮುನ್ನೆಚ್ಚರಿಕೆಯಾಗಿ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಏನಿವು ಅಲರ್ಟ್‌ಗಳು?

ಮಳೆಗಾಲದಲ್ಲಿ ಅಥವಾ ಯಾವುದೇ ಅನಿರೀಕ್ಷಿತ ಚಂಡಮಾರುತಗಳು ಬೀಸುವ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಹವಾಮಾನ ಇಲಾಖೆಯು ಹಸಿರು, ಕಿತ್ತಳೆ, ಕೆಂಪು ಮತ್ತು ಹಳದಿ ಅಲರ್ಟ್‌ಗಳನ್ನು ಹೊರಡಿಸುತ್ತದೆ. ಅವುಗಳ ಅರ್ಥವೇನು? ಅವು ಏನನ್ನು ಸೂಚಿಸುತ್ತವೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ

ನಮ್ಮ ದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ (IMD)ಯು ಈ ಎಚ್ಚರಿಕೆಗಳನ್ನು ನೀಡುತ್ತದೆ ಮತ್ತು ವಿಭಿನ್ನ ಸಂದೇಶಗಳನ್ನು ವಿವರಿಸಲು 4 ವಿಭಿನ್ನ ಬಣ್ಣದ ಕೋಡ್‌ಗಳನ್ನು ಬಳಸುತ್ತದೆ. ಹಸಿರು, ಹಳದಿ, ಕಿತ್ತಳೆ ಮತ್ತು ಕೆಂಪು ಬಣ್ಣದ ಎಚ್ಚರಿಕೆಗಳನ್ನು ನೀಡುತ್ತದೆ.

1. ಹಸಿರು ಎಚ್ಚರಿಕೆ (ಗ್ರೀನ್ ಅಲರ್ಟ್)

ಗ್ರೀನ್ ಅಲರ್ಟ್ ಎಂದರೆ ಸಾಮಾನ್ಯವಾಗಿ ಹವಾಮಾನ ಪರಿಸ್ಥಿತಿಗಳು ಉತ್ತಮವಾಗಿವೆ ಎಂದರ್ಥ. ಬಹುತೇಕ ಸಮಯದಲ್ಲಿ ಈ ಅಲರ್ಟ್ ಜಾರಿಯಲ್ಲಿರುತ್ತದೆ. ಅಲ್ಲದೆ ಈ ಎಚ್ಚರಿಕೆಯ ಸಮಯದಲ್ಲಿ ಭಾರತೀಯ ಹವಾಮಾನ ಇಲಾಖೆಯು ನಾಗರೀಕರಿಗೆ ಯಾವುದೇ ಸಲಹೆಯನ್ನು ನೀಡುವುದಿಲ್ಲ.

2. ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್)

ಹವಾಮಾನ ಇಲಾಖೆಯು ಜನರಿಗೆ ಎಚ್ಚರಿಕೆ ನೀಡಲು ಹಳದಿ ಅಲರ್ಟ್ ಅನ್ನು ನೀಡುತ್ತದೆ. 7.5 ರಿಂದ 15 ಮಿಮೀ ವರೆಗೆ ಭಾರೀ ಮಳೆಯಾಗಲಿದ್ದು, ಇದು ಮುಂದಿನ 1 ಅಥವಾ 2 ಗಂಟೆಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದಾಗ ಇದನ್ನು ಹೊರಡಿಸುತ್ತದೆ. ಅಂದರೆ ಇದು ಕೇವಲ ಮುಂದೊದಗಬಹುದಾದ ಅಪಾಯದ ಬಗ್ಗೆ ಎಚ್ಚರವಿರಲಿ ಎಂದರ್ಥ. ಹಳದಿ ಎಚ್ಚರಿಕೆಯ ಸಮಯದಲ್ಲಿ ಹವಾಮಾನವನ್ನು ನಿರಂತರವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.

3. ಕಿತ್ತಳೆ ಎಚ್ಚರಿಕೆ (ಆರೆಂಜ್ ಅಲರ್ಟ್)

ಹವಾಮಾನವು ಹದಗೆಟ್ಟಾಗ, ಹಳದಿ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ಆಗಿ ಬದಲಾಯಿಸಲಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳುತ್ತದೆ. “ಈ ಚಂಡಮಾರುತವು ಹವಾಮಾನ ಪರಿಸ್ಥಿತಿಗಳು ಹದಗೆಡಲು ಕಾರಣವಾಗಬಹುದು. ಇದು ರಸ್ತೆ ಮತ್ತು ವಾಯು ಸಾರಿಗೆಗೆ ಹಾನಿಯನ್ನುಂಟುಮಾಡುತ್ತದೆ ಮತ್ತು ಜೀವ ಮತ್ತು ಆಸ್ತಿ ನಷ್ಟವನ್ನು ಉಂಟುಮಾಡಬಹುದು” ಎಂಬುದನ್ನು ಆರೆಂಜ್ ಅಲರ್ಟ್ ವಿವರಿಸುತ್ತದೆ.

ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಿದ ಸಮಯದಲ್ಲಿ ಜನರು ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗುತ್ತದೆ. ಅಂತಹ ಪರಿಸ್ಥಿತಿಗಳಲ್ಲಿ ಗಾಳಿಯ ವೇಗ ಗಂಟೆಗೆ 65 ರಿಂದ 75 ಕಿಮೀ ಮತ್ತು 15 ರಿಂದ 33 ಮಿಮೀ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆರೆಂಜ್ ಅಲರ್ಟ್ ಘೋಷಿಸಿದಾಗ ಮಳೆ ಪೀಡಿತ ಪ್ರದೇಶದಲ್ಲಿ ಅಪಾಯಕಾರಿ ಪ್ರವಾಹದ ಸಾಧ್ಯತೆಯಿರುವುದರಿಂದ ಪೀಡಿತ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಸ್ಥಳೀಯ ಆಡಳಿತಗಳಿಗೆ ಸೂಚಿಸಲಾಗುತ್ತದೆ.

4. ಕೆಂಪು ಎಚ್ಚರಿಕೆ (ರೆಡ್ ಅಲರ್ಟ್)

ರೆಡ್ ಅಲರ್ಟ್ ಎಂದರೆ ಅಪಾಯಕಾರಿ ಪರಿಸ್ಥಿತಿ ಎಂದರ್ಥ. ಇದು ಅಂತಿಮ ಎಚ್ಚರಿಕೆಯಾಗಿದೆ. ಈ ಸಮಯದಲ್ಲಿ ಜನರು ಹೊರಗಡೆ ಹೋಗದಂತೆ ಸೂಚಿಸಲಾಗುತ್ತದೆ. ಚಂಡಮಾರುತವು ಗಂಟೆಗೆ 130 ಕಿಮೀ ಗಾಳಿಯ ವೇಗದ ತೀವ್ರತೆಯೊಂದಿಗೆ ಬೀಸಿದಾಗ ಮತ್ತು ತೀವ್ರ ಮಳೆ ಬಂದಾಗ ಭಾರತೀಯ ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ ನೀಡುತ್ತದೆ. ಆ ಪ್ರದೇಶದ ಆಡಳಿತವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗುತ್ತದೆ.

ಹವಾಮಾನವು ಅಪಾಯಕಾರಿ ಮಟ್ಟಕ್ಕೆ ತಲುಪಿದಾಗ ಮತ್ತು ಭಾರೀ ಹಾನಿಯ ಅಪಾಯವಿದ್ದರೆ, ಆಗ ರೆಡ್ ಅಲರ್ಟ್ ನೀಡಲಾಗುವುದು ಎಂದು ಹವಾಮಾನ ಇಲಾಖೆ ಹೇಳಿದೆ. 30 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಮತ್ತು ಕನಿಷ್ಠ 2 ಗಂಟೆಗಳ ಕಾಲ ಇದು ಮುಂದುವರಿಯುವ ಸಾಧ್ಯತೆ ಇದ್ದಾಗ ಮಾತ್ರ ಈ ರೀತಿಯ ಎಚ್ಚರಿಕೆಯನ್ನು ಘೋಷಿಸಲಾಗುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಅಪಾಯವು ಹಲವಾರು ಪಟ್ಟು ಹೆಚ್ಚಾಗುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲಾಗುತ್ತದೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

ಈ ಎಚ್ಚರಿಕೆಗಳನ್ನು ಟಿವಿ, ರೆಡಿಯೋ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಹವಾಮಾನ ಇಲಾಖೆ ಹೊರಡಿಸುತ್ತದೆ. ಇವುಗಳನ್ನು ಜನರು ಪಾಲಿಸುವುದು ಸುರಕ್ಷತೆಯ ದೃಷ್ಟಿಯಿಂದ ಒಳ್ಳೆಯದು. ಅಲ್ಲದೆ ಇದರಿಂದ ತೀವ್ರ ಮಳೆ ಸಂದರ್ಭದಲ್ಲಿ ಹೆಚ್ಚಿನ ಜೀವ ಹಾನಿಯಾಗದಂತೆ ತಡೆಯಲು ಸ್ಥಳೀಯ ಆಡಳಿತಗಳಿಗೆ ಸಹಕಾರಿಯಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನು ಗೌರಿ. ಕಾಮ್ ಚಾನಲ್ ಗೆ ನನ್ನ ನಮಸ್ಕಾರಗಳು.
    ನಿಮ್ಮ ಸುದ್ದಿ ವಾಹಿನಿ ನೈಜ ಭಾರತಕ್ಕೆ ಹಿಡಿದ ಕನ್ನಡಿಯಾಗಿದೆ. ನಿಸ್ಪಕ್ಷ ವಾಗಿ ಸೇವೆ ನನಗೆ ತುಂಬಾ ಇಷ್ಟ.

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....