Homeಕರ್ನಾಟಕದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿದ ರಾಜಣ್ಣನಿಗೆ ತಕ್ಕ ಪಾಠ ಕಲಿಸುತ್ತೇನೆ: ಕುಮಾರಸ್ವಾಮಿ ಪ್ರತಿಜ್ಞೆ

ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿದ ರಾಜಣ್ಣನಿಗೆ ತಕ್ಕ ಪಾಠ ಕಲಿಸುತ್ತೇನೆ: ಕುಮಾರಸ್ವಾಮಿ ಪ್ರತಿಜ್ಞೆ

- Advertisement -
- Advertisement -

ಮಾಜಿ ಪ್ರಧಾನಿ, ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ. ದೇವೇಗೌಡರ ಬಗ್ಗೆ ಮಾಜಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, “ಅತ್ಯಂತ ಅನಾಗರಿಕ, ವಿಕೃತವಾಗಿ ಮಾತನಾಡಿರುವ ರಾಜಣ್ಣನಿಗೆ ತಕ್ಕ ಪಾಠ ಕಲಿಸುತ್ತೇನೆ” ಎಂದು ಶುಕ್ರವಾರ ಪ್ರತಿಜ್ಞೆ ಮಾಡಿದ್ದಾರೆ.

ಬೆಂಗಳೂರಿನ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ‘‘ಜನತಾ ಮಿತ್ರ” ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆಯೇ ಆಕ್ರೋಶ ಹೊರ ಹಾಕಿದ ಕುಮಾರಸ್ವಾಮಿ, “ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿರುವ ರಾಜಣ್ಣ ತನ್ನ ಹೀನ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಈ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ ಅನುಭವಿಸಲಿದ್ದಾರೆ” ಎಂದು ಕಿಡಿಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“2004ರಲ್ಲಿ ರಾಜಣ್ಣ ಅವರು ಬೆಳ್ಳಾವಿ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಚುನಾವಣೆಯ ಕೊನೆಯ ದಿನ ದೇವೇಗೌಡರು ಹೋಗಿ ಪ್ರಚಾರ ಮಾಡಿದ್ದರು. ಆಗ ಆ ವ್ಯಕ್ತಿ ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಯಿತು. ಇಲ್ಲದಿದ್ದರೆ ಅವರನ್ನು ಯಾರು ಕೇಳುತ್ತಿದ್ದರು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ: ರಾಜಣ್ಣ ಕ್ಷಮೆ ಕೇಳಬೇಕು ಎಂದ ಡಿಕೆ ಶಿವಕುಮಾರ್‌
“ದೇವೇಗೌಡರು ಅಂದು ತಮ್ಮ ಅನಾರೋಗ್ಯವನ್ನೂ ಲೆಕ್ಕಿಸದೆ ತೆರಳಿ ಪ್ರಚಾರ ಮಾಡಿದ್ದರು. ಇಬ್ಬರು ದೇವೇಗೌಡರ ಹೆಗಲಿಗೆ ಹೆಗಲು ಕೊಡುತ್ತಾರೆ. ನಿಜ, ರಾಜಣ್ಣನವರಿಗೆ ಅರಿವಿದ್ದಂತೆ ಇಲ್ಲ. ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸುತ್ತೇವೆ. ದೇವರ ಮೆರವಣಿಗೆಗೂ ಭುಜ ಕೊಡುತ್ತೇವೆ. ಭುಜ ಕೊಟ್ಟೇ ಮೆರವಣಿಗೆ ಮಾಡೋದಲ್ಲವೇ? ದೇವೇಗೌಡರು ಕೂಡ ಹಾಗೆಯೇ, ನಮ್ಮ ಪಾಲಿಗೆ ಅವರು ದೈವವೇ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ರಾಜಣ್ಣನ ಮಾತಿನ ದುರಹಂಕಾರ ಕೇಳಿದ್ದೇನೆ. ಆತ ಬ್ರಹ್ಮನಲ್ಲ, ಆತನೂ ಒಬ್ಬ ಹುಲು ಮಾನವ. ದೇವೇಗೌಡರು ಶತಾಯುಷಿಗಳಾಗಿ ನಾಡಿನಲ್ಲಿ ಬದುಕುತ್ತಾರೆ ಎಂಬ ನಂಬಿಕೆ ನನ್ನದು. ಹಲವಾರು ಒತ್ತಡಗಳಿಂದ ತುಮಕೂರಿನಲ್ಲಿ ದೇವೇಗೌಡರನ್ನು ಚುನಾವಣೆಗೆ ನಿಲ್ಲಿಸಿ ಸೋಲಿಸಿದರು. ಅವರನ್ನು ಸೋಲಿಸಲು ಕುತಂತ್ರ ನಡೆಸಿದ್ದು ಇದೇ ರಾಜಣ್ಣ” ಎಂದು ಅವರು ಹೇಳಿದ್ದಾರೆ.

“ಇನ್ನೆರಡು ಮೂರು ತಿಂಗಳು ನೋಡಲಿ. ದೇವೇಗೌಡರೇ ಸ್ವತಂತ್ರವಾಗಿ ಓಡಾಡುತ್ತಾರೆ. ರಾಜಣ್ಣ ಕ್ಷಮೆ ಕೇಳಬೇಕು ಅಂತಾ ಹೇಳುವುದಿಲ್ಲ. ದೇವೇಗೌಡರ ಮಗ ನಾನು ಇನ್ನೂ ಬದುಕಿದ್ದೇನೆ. ಮಧುಗಿರಿಗೆ ಬಂದು ತೋರಿಸುತ್ತೇನೆ. ನಾನು ಉತ್ತರ ಕೊಡುವುದಲ್ಲ, ಅಲ್ಲಿನ ಜನರಿಂದಲೇ ಉತ್ತರ ಕೊಡಿಸುತ್ತೇನೆ” ಎಂದು ಕುಮಾರಸ್ವಾಮಿ ಅವರು ಪ್ರತಿಜ್ಞೆಗೈದಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಹೇಳಿದ್ದೇನು?

ಮಧುಗಿರಿ ತಾಲ್ಲೂಕಿನ ಕಾವಣದಾಲ ಗ್ರಾಮದಲ್ಲಿ ಮಾತನಾಡುತ್ತಿದ್ದ ಅವರು, “ಇದು ನನ್ನ‌ ಕೊನೇ ಚುನಾವಣೆ. ಶೋಕಿಗೆ, ಮುಖಸ್ತುತಿಗೆ ರಾಜಕಾರಣ ಮಾಡೋದು ಬೇಡ. ನಾನು ಶಾಸಕನಾದರೆ ನೀವೆಲ್ಲರೂ ಆದಂತೆ. ನೀವು ಹೋರಾಟ ಮಾಡಿ, ನಾನು ಶಾಸಕನಾದರೆ ನಾಮಕಾವಸ್ಥೆಗೆ ಇರ್ತೀನಿ. ಏನಾದರೂ ಕೆಲಸ ಆಗಬೇಕಾದ್ರೆ ನೀವೇ ಅಧಿಕಾರಿಗಳನ್ನ ಕೇಳೋ ಶಕ್ತಿ ಬರುತ್ತೆ” ಎಂದು ಹೇಳಿದ್ದರು.

“ಮುಂದಿನ ದಿನಗಳಲ್ಲಿ ಪ್ರತಿ ಮನೆ ಬಾಗಿಲಿಗೂ ಬಂದು ಓಟ್ ಕೇಳ್ತೀನಿ. ಮುಂದೆ ನೀವು ನಿಂತ್ಕೋ ಅಂದ್ರೂ ನಿಲ್ಲಲ್ಲಾ… ನನಗೆ ಆಗಲೇ 72 ವರ್ಷ, 77 ಆದ್ರೆ ಕೈಕಾಲು ಅಲಾಡ್ತಿರುತ್ತೆ. ನಮ್ಮ ಸರ್ಕಾರ ಬಂದ್ರೆ ನೂರಕ್ಕೆ ನೂರರಷ್ಟು ಮಂತ್ರಿ ಆಗ್ತೀನಿ. ದೇವೇಗೌಡರು ಇಬ್ಬರು ಮೇಲೆ ಹಾಕ್ಕೊಂಡು ಹೋಗ್ತಾವ್ರೇ.. ಹತ್ತಿರದಲ್ಲೇ ಇದೇ ನಾಲ್ಕರ ಮೇಲೆ ಹೋಗೋದು” ಎಂದು ರಾಜಣ್ಣ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...