Homeಕರ್ನಾಟಕದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿದ ರಾಜಣ್ಣನಿಗೆ ತಕ್ಕ ಪಾಠ ಕಲಿಸುತ್ತೇನೆ: ಕುಮಾರಸ್ವಾಮಿ ಪ್ರತಿಜ್ಞೆ

ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿದ ರಾಜಣ್ಣನಿಗೆ ತಕ್ಕ ಪಾಠ ಕಲಿಸುತ್ತೇನೆ: ಕುಮಾರಸ್ವಾಮಿ ಪ್ರತಿಜ್ಞೆ

- Advertisement -
- Advertisement -

ಮಾಜಿ ಪ್ರಧಾನಿ, ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ. ದೇವೇಗೌಡರ ಬಗ್ಗೆ ಮಾಜಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, “ಅತ್ಯಂತ ಅನಾಗರಿಕ, ವಿಕೃತವಾಗಿ ಮಾತನಾಡಿರುವ ರಾಜಣ್ಣನಿಗೆ ತಕ್ಕ ಪಾಠ ಕಲಿಸುತ್ತೇನೆ” ಎಂದು ಶುಕ್ರವಾರ ಪ್ರತಿಜ್ಞೆ ಮಾಡಿದ್ದಾರೆ.

ಬೆಂಗಳೂರಿನ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ‘‘ಜನತಾ ಮಿತ್ರ” ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆಯೇ ಆಕ್ರೋಶ ಹೊರ ಹಾಕಿದ ಕುಮಾರಸ್ವಾಮಿ, “ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿರುವ ರಾಜಣ್ಣ ತನ್ನ ಹೀನ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಈ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ ಅನುಭವಿಸಲಿದ್ದಾರೆ” ಎಂದು ಕಿಡಿಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“2004ರಲ್ಲಿ ರಾಜಣ್ಣ ಅವರು ಬೆಳ್ಳಾವಿ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಚುನಾವಣೆಯ ಕೊನೆಯ ದಿನ ದೇವೇಗೌಡರು ಹೋಗಿ ಪ್ರಚಾರ ಮಾಡಿದ್ದರು. ಆಗ ಆ ವ್ಯಕ್ತಿ ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಯಿತು. ಇಲ್ಲದಿದ್ದರೆ ಅವರನ್ನು ಯಾರು ಕೇಳುತ್ತಿದ್ದರು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ: ರಾಜಣ್ಣ ಕ್ಷಮೆ ಕೇಳಬೇಕು ಎಂದ ಡಿಕೆ ಶಿವಕುಮಾರ್‌
“ದೇವೇಗೌಡರು ಅಂದು ತಮ್ಮ ಅನಾರೋಗ್ಯವನ್ನೂ ಲೆಕ್ಕಿಸದೆ ತೆರಳಿ ಪ್ರಚಾರ ಮಾಡಿದ್ದರು. ಇಬ್ಬರು ದೇವೇಗೌಡರ ಹೆಗಲಿಗೆ ಹೆಗಲು ಕೊಡುತ್ತಾರೆ. ನಿಜ, ರಾಜಣ್ಣನವರಿಗೆ ಅರಿವಿದ್ದಂತೆ ಇಲ್ಲ. ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸುತ್ತೇವೆ. ದೇವರ ಮೆರವಣಿಗೆಗೂ ಭುಜ ಕೊಡುತ್ತೇವೆ. ಭುಜ ಕೊಟ್ಟೇ ಮೆರವಣಿಗೆ ಮಾಡೋದಲ್ಲವೇ? ದೇವೇಗೌಡರು ಕೂಡ ಹಾಗೆಯೇ, ನಮ್ಮ ಪಾಲಿಗೆ ಅವರು ದೈವವೇ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ರಾಜಣ್ಣನ ಮಾತಿನ ದುರಹಂಕಾರ ಕೇಳಿದ್ದೇನೆ. ಆತ ಬ್ರಹ್ಮನಲ್ಲ, ಆತನೂ ಒಬ್ಬ ಹುಲು ಮಾನವ. ದೇವೇಗೌಡರು ಶತಾಯುಷಿಗಳಾಗಿ ನಾಡಿನಲ್ಲಿ ಬದುಕುತ್ತಾರೆ ಎಂಬ ನಂಬಿಕೆ ನನ್ನದು. ಹಲವಾರು ಒತ್ತಡಗಳಿಂದ ತುಮಕೂರಿನಲ್ಲಿ ದೇವೇಗೌಡರನ್ನು ಚುನಾವಣೆಗೆ ನಿಲ್ಲಿಸಿ ಸೋಲಿಸಿದರು. ಅವರನ್ನು ಸೋಲಿಸಲು ಕುತಂತ್ರ ನಡೆಸಿದ್ದು ಇದೇ ರಾಜಣ್ಣ” ಎಂದು ಅವರು ಹೇಳಿದ್ದಾರೆ.

“ಇನ್ನೆರಡು ಮೂರು ತಿಂಗಳು ನೋಡಲಿ. ದೇವೇಗೌಡರೇ ಸ್ವತಂತ್ರವಾಗಿ ಓಡಾಡುತ್ತಾರೆ. ರಾಜಣ್ಣ ಕ್ಷಮೆ ಕೇಳಬೇಕು ಅಂತಾ ಹೇಳುವುದಿಲ್ಲ. ದೇವೇಗೌಡರ ಮಗ ನಾನು ಇನ್ನೂ ಬದುಕಿದ್ದೇನೆ. ಮಧುಗಿರಿಗೆ ಬಂದು ತೋರಿಸುತ್ತೇನೆ. ನಾನು ಉತ್ತರ ಕೊಡುವುದಲ್ಲ, ಅಲ್ಲಿನ ಜನರಿಂದಲೇ ಉತ್ತರ ಕೊಡಿಸುತ್ತೇನೆ” ಎಂದು ಕುಮಾರಸ್ವಾಮಿ ಅವರು ಪ್ರತಿಜ್ಞೆಗೈದಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಹೇಳಿದ್ದೇನು?

ಮಧುಗಿರಿ ತಾಲ್ಲೂಕಿನ ಕಾವಣದಾಲ ಗ್ರಾಮದಲ್ಲಿ ಮಾತನಾಡುತ್ತಿದ್ದ ಅವರು, “ಇದು ನನ್ನ‌ ಕೊನೇ ಚುನಾವಣೆ. ಶೋಕಿಗೆ, ಮುಖಸ್ತುತಿಗೆ ರಾಜಕಾರಣ ಮಾಡೋದು ಬೇಡ. ನಾನು ಶಾಸಕನಾದರೆ ನೀವೆಲ್ಲರೂ ಆದಂತೆ. ನೀವು ಹೋರಾಟ ಮಾಡಿ, ನಾನು ಶಾಸಕನಾದರೆ ನಾಮಕಾವಸ್ಥೆಗೆ ಇರ್ತೀನಿ. ಏನಾದರೂ ಕೆಲಸ ಆಗಬೇಕಾದ್ರೆ ನೀವೇ ಅಧಿಕಾರಿಗಳನ್ನ ಕೇಳೋ ಶಕ್ತಿ ಬರುತ್ತೆ” ಎಂದು ಹೇಳಿದ್ದರು.

“ಮುಂದಿನ ದಿನಗಳಲ್ಲಿ ಪ್ರತಿ ಮನೆ ಬಾಗಿಲಿಗೂ ಬಂದು ಓಟ್ ಕೇಳ್ತೀನಿ. ಮುಂದೆ ನೀವು ನಿಂತ್ಕೋ ಅಂದ್ರೂ ನಿಲ್ಲಲ್ಲಾ… ನನಗೆ ಆಗಲೇ 72 ವರ್ಷ, 77 ಆದ್ರೆ ಕೈಕಾಲು ಅಲಾಡ್ತಿರುತ್ತೆ. ನಮ್ಮ ಸರ್ಕಾರ ಬಂದ್ರೆ ನೂರಕ್ಕೆ ನೂರರಷ್ಟು ಮಂತ್ರಿ ಆಗ್ತೀನಿ. ದೇವೇಗೌಡರು ಇಬ್ಬರು ಮೇಲೆ ಹಾಕ್ಕೊಂಡು ಹೋಗ್ತಾವ್ರೇ.. ಹತ್ತಿರದಲ್ಲೇ ಇದೇ ನಾಲ್ಕರ ಮೇಲೆ ಹೋಗೋದು” ಎಂದು ರಾಜಣ್ಣ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...