Homeಮುಖಪುಟತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

- Advertisement -
- Advertisement -

ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ಶನಿವಾರ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಬರಮಾಡಿಕೊಳ್ಳಲು ಹೋಗುವುದಿಲ್ಲ. ಆರು ತಿಂಗಳಲ್ಲಿ ಮೂರನೇ ಬಾರಿಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌‌ ಅವರು ಪ್ರಧಾನಿಯವರನ್ನು ಸ್ವಾಗತಿಸದೆ ಪ್ರೋಟೋಕಾಲ್‌ ಅನುಸರಿಸಿಲ್ಲ ಎಂದು ಆರೋಪಿಸಲಾಗಿದೆ.

ತೆಲಂಗಾಣ ಸರ್ಕಾರವು ಹಂಚಿಕೊಂಡ ಟಿಪ್ಪಣಿಯ ಪ್ರಕಾರ, ಪ್ರಧಾನಿ ಮೋದಿ ಅವರು ಮಧ್ಯಾಹ್ನ 2:55ಕ್ಕೆ ಹೈದರಾಬಾದ್‌ಗೆ ಬಂದಿಳಿಯಲಿದ್ದಾರೆ. ರಾಜ್ಯದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳಲಿದ್ದಾರೆ. ಸಚಿವರು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕರಾಗಿದ್ದು, ಪ್ರಧಾನ ಮಂತ್ರಿಯನ್ನು ಬರಮಾಡಿಕೊಳ್ಳುವಂತೆ ಟಿಆರ್‌ಎಸ್‌ನ ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿಯವರು ನಿರ್ದೇಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಕೊನೆಗೊಳ್ಳಲಿರುವ ಬಿಜೆಪಿಯ 2 ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ತೆಲಂಗಾಣಕ್ಕೆ ಆಗಮಿಸಲಿದ್ದಾರೆ.

ಇದರ ನಡುವೆ ಮತ್ತೊಂದು ಬೆಳವಣಿಗೆಯಾಗಿದೆ. ತೆಲಂಗಾಣ ಸಿಎಂ ಚಂದ್ರಶೇರ್‌ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳದೆ, ಯಶವಂತ್ ಸಿನ್ಹಾ ಅವರನ್ನು ಸ್ವಾಗತಿಸಲು ಮುಂದಾದರು. ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಸ್ಪರ್ಧಿಸಿದ್ದು, ಪ್ರಧಾನಿ ಆಗಮಿಸುವ ಎರಡು ಗಂಟೆಗಳ ಮೊದಲು ಐಟಿ ನಗರಕ್ಕೆ ಸಿನ್ಹಾ ಬರುವುದು ನಿಗದಿಯಾಗಿತ್ತು.

ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ಕೆಸಿಆರ್ ಅವರು ತಮ್ಮ ಪಕ್ಷದ ಬೆಂಬಲವನ್ನು ಸಿನ್ಹಾಗೆ ನೀಡಿದ್ದಾರೆ. ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರು ಎನ್‌ಡಿಎ ಪರವಾಗಿ ಸ್ಪರ್ಧಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ, ಕೆಸಿಆರ್ ಅವರು ಕೇಂದ್ರ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ಕಳೆದ ತಿಂಗಳಷ್ಟೇ ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯ ವಿರುದ್ಧ ಕೆಸಿಆರ್‌ ಮಾತನಾಡಿದ್ದರು. ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಅಗ್ನಿಪಥ್ ವಿರುದ್ಧ ಆಕ್ರೋಶ ಹೊರಹಾಕಿವೆ.

ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಹೈದರಾಬಾದ್‌ಗೆ ಭೇಟಿ ನೀಡಿದಾಗ ಕೆಸಿಆರ್ ಗೈರು ಹಾಜರಾಗಿದ್ದರು. ಫೆಬ್ರವರಿಯಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನ 20ನೇ ವರ್ಷದ ವಾರ್ಷಿಕ ಸಮಾರಂಭಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಹೈದರಾಬಾದ್‌ಗೆ ಭೇಟಿ ನೀಡಿದಾಗಲೂ ಅವರು ಬೆಂಗಳೂರಿಗೆ ಬಂದಿದ್ದರು.

ಇರಾನಿ ಟೀ, ಧಮ್‌ ಬಿರಿಯಾನಿ ಸೇವಿಸುವುದು ಮರೆಯದಿರಿ: ಕೆ.ಟಿ.ರಾಮರಾವ್‌

ತೆಲಂಗಾಣ ಐಟಿ ಸಚಿವ ಕೆಟಿ ರಾಮರಾವ್ ಅವರು ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ಬೃಹತ್‌‌ ಕಟ್ಟಡಗಳ ಚಿತ್ರಗಳನ್ನು ಹಂಚಿಕೊಂಡು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ರಾವ್ ಅವರು ಬಿಜೆಪಿಯ ಹೆಸರನ್ನು ಉಲ್ಲೇಖಿಸದಿದ್ದರೂ, “ವಾಟ್ಸ್‌‌ಅಪ್‌‌ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿ ಸಭೆ” ಮತ್ತು “ಜುಮ್ಲಾ ಜೀವೀಸ್‌” ಥರದ ಪದಗಳನ್ನು ಬಳಸಿ ಟಾರ್ಗೆಟ್ ಮಾಡಿದ್ದಾರೆ.

ನಕಲಿ ಸುದ್ದಿ, ವದಂತಿ ಹರಡುವವರನ್ನು “ವಾಟ್ಸ್‌ಅಪ್‌ ವಿಶ್ವವಿದ್ಯಾನಿಲಯದವರು”ಎಂದು ಸಾಮಾನ್ಯವಾಗಿ ಕಾಲೆಳೆಯಲಾಗುತ್ತದೆ. ಬಿಜೆಪಿಯನ್ನು ಗೇಲಿ ಮಾಡಲೂ ವಿರೋಧ ಪಕ್ಷಗಳು ಈ ಸಾಲನ್ನು ಹೆಚ್ಚಾಗಿ ಬಳಸುತ್ತವೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

“ತೆಲಂಗಾಣಕ್ಕೆ ಭೇಟಿ ನೀಡುವವರು, ಇಲ್ಲಿನ ಸರ್ಕಾರವು ಜಾರಿಗೊಳಿಸುತ್ತಿರುವ ಉತ್ತಮ ಯೋಜನೆಗಳನ್ನು ಅನುಸರಿಸಬೇಕು” ಎಂದು ರಾಮರಾವ್‌ ಸಲಹೆ ನೀಡಿದ್ದಾರೆ.

“ನಮ್ಮ ದಮ್ ಬಿರಿಯಾನಿ ಮತ್ತು ಇರಾನಿ ಚಾಯ್ ಅನ್ನು ಆನಂದಿಸಲು ಮರೆಯಬೇಡಿ” ಎಂದು ತಿಳಿಸಿದ್ದಾರೆ.

18 ವರ್ಷಗಳ ನಂತರ ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ದಕ್ಷಿಣ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿಯ ಮೂರನೇ ಸಭೆ ಇದಾಗಿದೆ.

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ ಬಿಜೆಪಿಯು ದಕ್ಷಿಣದ ರಾಜ್ಯಗಳ ಮೇಲೆ ವಿಶೇಷವಾಗಿ ತೆಲಂಗಾಣದ ಮೇಲೆ ತನ್ನ ದೃಷ್ಟಿ ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಹೈದರಾಬಾದ್‌ನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿ ನಾಲ್ಕು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಾಟ್ಸಪ್ ಯೂನಿವರ್ಸಿಟಿಯವರಿಗೆ ಹಿಂಬಾಗಿಲಿನಿಂದ ಬಂದು ಅಧಿಕಾರ ಮಾಡೊ ಅಭ್ಯಾಸ ಇದೆ. ನೇರವಾಗಿ ಚುನಾವಣೆ ಎದುರಿಸಿ ಅಧಿಕಾರ ಹಿಡಿಯಲು ಆಗುವುದಿಲ್ಲಾ… Ekanath and Devendra Fadnavis (ED) govt. ಇದಕ್ಕೆ ಉದಾಹರಣೆ…

  2. ದುರಂಕಾರಿ ಕೆಸಿಆರ್ ಗೆ ಮುಂಂದಿನ ದಿನಗಳಲ್ಲಿ ತೆಲಂಗಾಣ ರಾಜ್ಯದ ಜನ ಚಿಪ್ಪೆಯಲ್ಲಿ ನೀರು ಕುಡಿಸ್ತಾರೆ ಅನ್ನೋದು ಖಚಿತ ಆಗಿದೆ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...