Homeರಾಷ್ಟ್ರೀಯಪುಲಿಟ್ಜರ್‌ ವಿಜೇತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ‘ಸನ್ನಾ ಇರ್ಷಾದ್ ಮಟ್ಟೂ’ ವಿದೇಶ ಪ್ರಯಾಣಕ್ಕೆ ತಡೆ

ಪುಲಿಟ್ಜರ್‌ ವಿಜೇತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ‘ಸನ್ನಾ ಇರ್ಷಾದ್ ಮಟ್ಟೂ’ ವಿದೇಶ ಪ್ರಯಾಣಕ್ಕೆ ತಡೆ

ವಿದೇಶಕ್ಕೆ ತೆರಳಲು ಅನುಮತಿ ನೀಡದೇ ಇರುವುದಕ್ಕೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಹೇಳಲಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ತನ್ನ ಫೋಟೊಗಳಿಗಾಗಿ ಪ್ರತಿಷ್ಠಿತ ಪುಲಿಟ್ಜರ್‌ ಪ್ರಶಸ್ತಿ ವಿಜೇತರಾಗಿರುವ ಖ್ಯಾತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅವರನ್ನು ದೆಹಲಿಯ ವಿಮಾನ ನಿಲ್ದಾಣದ ಅಧಿಕಾರಿಗಳು ವಿದೇಶಕ್ಕೆ ತೆರಳದಂತೆ ತಡೆದಿದ್ದಾರೆ ಎಂದು ಶನಿವಾರ ಆರೋಪಿಸಿದ್ದಾರೆ. ಮಾನ್ಯ ಮಾಡಲಾಗಿರುವ ಫ್ರೆಂಚ್ ವೀಸಾವನ್ನು ಹೊಂದಿದ್ದರೂ ದೆಹಲಿಯಿಂದ ಪ್ಯಾರಿಸ್‌ಗೆ ತೆರಳಲು ಪ್ರಯತ್ನಿಸುತ್ತಿರುವಾಗ ಅಧಿಕಾರಿಗಳು ತನ್ನನ್ನು ತಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.

‘ಸೆರೆಂಡಿಪಿಟಿ ಆರ್ಲೆಸ್ ಅನುದಾನ-2020’ ರ 10 ಪ್ರಶಸ್ತಿ ವಿಜೇತರಲ್ಲಿ ಒಬ್ಬರಾಗಿ ಪುಸ್ತಕ ಬಿಡುಗಡೆ ಮತ್ತು ಛಾಯಾಗ್ರಹಣ ಪ್ರದರ್ಶನಕ್ಕಾಗಿ ಪ್ಯಾರಿಸ್‌ಗೆ ಹೋಗುತ್ತಿರುವಾಗ ಈ ಘಟನೆ ನಡೆದಿದೆ ಎಂದು ಸನ್ನಾ ಅವರು ಟ್ವೀಟ್‌ನಲ್ಲಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದೇಶಕ್ಕೆ ತೆರಳಲು ಅನುಮತಿ ನೀಡದೇ ಇರುವುದಕ್ಕೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಹೇಳಲಿಲ್ಲ, ಆದರೆ ಸರಳವಾಗಿ ಅಂತಾರಾಷ್ಟ್ರೀಯವಾಗಿ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಹೇಳಿದರು ಎಂದು ಸನ್ನಾ ಹೇಳಿದ್ದಾರೆ.

ಸ್ವತಂತ್ರ ಛಾಯಾಗ್ರಾಹಕಿಯಾಗಿರುವ ಸನ್ನಾ ಅವರು 2022ರ ಮೇ ತಿಂಗಳಲ್ಲಿ ರಾಯಿಟರ್ಸ್ ಪ್ರಕಟಿಸಿದ ಅವರ ಚಿತ್ರಕ್ಕಾಗಿ ‘ವೈಶಿಷ್ಟ್ಯ ಛಾಯಾಗ್ರಹಣ ವಿಭಾಗ’ದಲ್ಲಿ ಪುಲಿಟ್ಜೆರ್ ಪ್ರಶಸ್ತಿಯನ್ನು ಗೆದ್ದಿದ್ದರು. ಭಾರತದಲ್ಲಿನ ಕೊರೊನಾ ಬಿಕ್ಕಟ್ಟಿನ ಚಿತ್ರಗಳನ್ನು ಹಿಡಿದಿದ್ದಕ್ಕಾಗಿ ಸನ್ನಾ ಅವರೊಂದಿಗೆ ದಿವಂಗತ ಡ್ಯಾನಿಶ್ ಸಿದ್ದಿಕಿ, ಅಮಿತ್ ದವೆ ಮತ್ತು ಅದ್ನಾನ್ ಅಬಿದಿ ಸೇರಿದ ರಾಯಿಟರ್ಸ್ ತಂಡ ಪ್ರಶಸ್ತಿ ವಿಜೇತರಾಗಿದ್ದಾರೆ.

ಇದನ್ನೂ ಓದಿ: ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾನಿಲಯದಿಂದ ಕನ್ವರ್ಜೆಂಟ್ ಜರ್ನಲಿಸಂನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸನ್ನಾ, ಪ್ರಪಂಚದಾದ್ಯಂತದ ಹಲವಾರು ಮಳಿಗೆಗಳಲ್ಲಿ ತಮ್ಮ ಕೃತಿಗಳನ್ನು ಪ್ರಕಟಿಸಿದ್ದಾರೆ. 2021 ರಲ್ಲಿ, ಅವರಿಗೆ ಪ್ರತಿಷ್ಠಿತ ಮ್ಯಾಗ್ನಮ್ ಫೌಂಡೇಶನ್‌ನಲ್ಲಿ ಫೆಲೋಶಿಪ್ ನೀಡಲಾಯಿತು.

ಯಾವುದೇ ಮುನ್ಸೂಚನೆ ನೀಡದೆ ಕಾಶ್ಮೀರಿ ಪತ್ರಕರ್ತರನ್ನು ದೇಶ ತೊರೆಯದಂತೆ ತಡೆದಿರುವುದು ಇದೇ ಮೊದಲಲ್ಲ. ಸೆಪ್ಟೆಂಬರ್ 2019 ರಲ್ಲಿ, ಕೇಂದ್ರ ಸರ್ಕಾರವು ಆರ್ಟಿಕಲ್ 370 ಅನ್ನು ವಾಪಾಸು ಪಡೆದ ಕೂಡಲೇ, ಪತ್ರಕರ್ತ-ಲೇಖಕ ಗೌಹರ್ ಗಿಲಾನಿ ಅವರನ್ನು ಕೂಡಾ ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾನ್‌ಗೆ ಪ್ರಯಾಣಿಸುವುದನ್ನು ತಡೆಯಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...