Homeಅಂಕಣಗಳುಮಹಿಳಾ ಮೀಸಲಾತಿಯ ಸುತ್ತ....

ಮಹಿಳಾ ಮೀಸಲಾತಿಯ ಸುತ್ತ….

- Advertisement -
- Advertisement -

| ಗೌರಿ ಲಂಕೇಶ್ |
ಜೂನ್ 24, 2009 (ಸಂಪಾದಕೀಯದಿಂದ)

ಸಂಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕುರಿತಂತೆ ಮತ್ತೆ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಒಂದು ದಶಕಕ್ಕಿಂತಲೂ ಹಿಂದೆ ಪ್ರಾರಂಭವಾದ ಈ ಚರ್ಚೆ ಎಂದೂ ತಾರ್ಕಿಕ ಅಂತ್ಯ ಮುಟ್ಟದೆ ಹಿಂದೆ ಸರಿಯುತ್ತದೆ; ಮತ್ತೆ ಮುಂದೊಂದು ದಿನ ಭುಗಿಲೇಳುತ್ತದೆ.

ವಾಸ್ತವವಾಗಿ ನಮ್ಮ ದೇಶದ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯ ಎಷ್ಟಿದೆ? ನಮ್ಮ ಮತದಾರರ ಪೈಕಿ ಶೇ.50 ಜನರು ಮಹಿಳೆಯರಾಗಿದ್ದರೂ ಕಳೆದ 62 ವರ್ಷಗಳಲ್ಲಿ ಮಹಿಳಾ ಸಂಸದರ ಪ್ರಮಾಣ ಶೇ.10ನ್ನೂ ಮೀರಿರಲಿಲ್ಲ. ಆದರೆ ಮೊನ್ನಿನ ಚುನಾವಣೆಯಲ್ಲಿ 15ನೇ ಲೋಕಸಭೆಗೆ ಮಹಿಳೆಯರು ‘ಅತಿಹೆಚ್ಚು’ ಸಂಖ್ಯೆಯಲ್ಲಿ ಗೆದ್ದುಬಂದದ್ದು ಮೊದಲನೆ ಬಾರಿಗೆ 524 ಸಂಸದರಲ್ಲಿ 59 ಮಹಿಳೆಯರಿದ್ದಾರೆ.

ಮಹಿಳೆಯರಿಗೆ 33% ಮೀಸಲಾತಿ ಇರಬೇಕೆಂದು ಕೋರುತ್ತಿರುವ ಇಂದಿನ ಸಂದರ್ಭದಲ್ಲಿ ಯಾವ ಮೀಸಲಾತಿಯೂ ಇಲ್ಲದೇ 10% ಗಿಂತ ಸ್ವಲ್ಪ ಹೆಚ್ಚು ಮಹಿಳೆಯರು ಆಯ್ಕೆಯಾಗಿ ಬಂದಿರುವುದು ಬೇರೆ ಸಂದರ್ಭದಲ್ಲಿ ಶ್ಲಾಘನೀಯ ಸಾಧನೆಯಾಗಿರುತ್ತಿತ್ತೇನೋ, ಆದರೆ ಆ 59 ಮಹಿಳೆಯರು ಯಾರೆಂದು ನೋಡಿದಾಗ ಬೇಸರವಾಗುತ್ತದೆ. ಅಂಜಲಿ ಪೂರಿ ಲೇಖನವೊಂದರಲ್ಲಿ ಬರೆದಿರುವಂತೆ ‘ಅವರಲ್ಲಿ ಒಂದಿಬ್ಬರನ್ನು ಹೊರತುಪಡಿಸಿದರೆ ಉಳಿದವರೆಲ್ಲಾ ಪ್ರಭಾವಿ ರಾಜಕಾರಣಿಗಳ ಪತ್ನಿ, ಪುತ್ರಿ, ವಿಧವೆ, ಸೊಸೆ ಅಥವಾ ಸಹೋದರಿಗಳೇ..

ಅದೇನೆ ಇದ್ದರೂ ಮಹಿಳೆಯರಿಗೆ ಮೀಸಲಾತಿ ಇರಬೇಕು ಏಕೆಂದರೆ ನಿಜವಾದ ಪ್ರಜಾಪ್ರಭುತ್ವದಲ್ಲಿ ಎಲ್ಲಾ ಶೋಷಿತ ವರ್ಗಗಳಿಗೆ ಪ್ರಾತಿನಿಧ್ಯ ಇರಬೇಕು, ನಮ್ಮ ಸಂವಿಧಾನ ಸಭೆಯಲ್ಲಿ ದಲಿತರಿಗೆ ರಾಜಕೀಯ ಮೀಸಲಾತಿ ಘೋಷಿಸಿದ್ದೂ ಈ ಕಾರಣಕ್ಕಾಗಿಯೇ.

ಈಗಾಗಲೇ ಸುಮಾರು 90 ದೇಶಗಳ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಇವತ್ತು ಭಾರತಕ್ಕಿಂತ ಅಫಘಾನಿಸ್ತಾನ, ಪಾಕಿಸ್ತಾನ, ಇರಾಕ್ ತರಹದ ಇಸ್ಲಾಮಿಕ್ ದೇಶಗಳಲ್ಲೂ ಚೀನಾದಂತಹ ಕಮ್ಯುನಿಸ್ಟ್ ದೇಶದಲ್ಲೂ ಮಹಿಳೆಯರಿಗೆ ಮೀಸಲಾತಿ ಇದೆಯಲ್ಲದೆ, ಆ ದೇಶಗಳ ಸಂಸತ್ತಿನಲ್ಲಿ ಭಾರತಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರಿದ್ದಾರೆ. ರ್ವಾಂಡದಂತಹ ಆಫ್ರಿಕನ್ ದೇಶದಲ್ಲಿ ಎಲ್ಲಾ ದೇಶಗಳಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ಮಹಿಳೆಯರಿಗೆ 48.8% ಮೀಸಲಾತಿ ನೀಡಲಾಗಿದೆ. ಆದರೆ ಇಲ್ಲಿ 33% ಕೊಡುವುದರ ಬಗ್ಗೆಯೇ Hair spilling ನಡೆಯುತ್ತಿದ್ದು ಅದು ಜಾರಿಗೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ.

ಭಾರತದ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೂ ನಮ್ಮ ಸಂವಿಧಾನಕ್ಕೆ 1993ರಲ್ಲಿ 73 ಮತ್ತು 74ನೇ ತಿದ್ದುಪಡಿ ಮಾಡುವ ಮೂಲಕ ಪ್ರಜಾಪ್ರಭುತ್ವದ ಕೆಳಹಂತದ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಾಯಿತು. ಆಗ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳದಂತಹ ರಾಜ್ಯಗಳ ಪಂಚಾಯತ್ ವ್ಯವಸ್ಥೆಯಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ

ಭಾಗವಹಿಸಲಾರಂಭಿಸಿದರು. ಮಹಿಳೆಯರ ಈ ರಾಜಕೀಯ ಪ್ರವೇಶಕ್ಕೆ ಹಲವಾರು ಅಡಚಣೆಗಳಿದ್ದರೂ ಅವರಲ್ಲಿ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆ ಹೆಚ್ಚಾಗಿ ಅವರ ಕೊಡುಗೆಯೂ ಅಧಿಕವಾಯಿತು. ಈ ಅನುಭವವನ್ನು ಆಧರಿಸಿಯೇ ಸಂಸತ್ತಿನಲ್ಲೂ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂಬ ಹೋರಾಟ 1996ರಲ್ಲಿ ಪ್ರಾರಂಭವಾಯಿತು.

ಮೊನ್ನೆ ಶರದ್ ಯಾದವ್, ಮುಲಾಯಂ ಸಿಂಗ್ ಮತ್ತು ಲಾಲೂ ಪ್ರಸಾದ್ ಯಾದವ್ ತರಹದ ಓಬಿಸಿ ನಾಯಕರು “ಮಹಿಳಾ ಮೀಸಲಾತಿಯಲ್ಲಿ ಒಳ ಮೀಸಲಾತಿ ಇರಬೇಕು’ ಎಂದಿದ್ದಾರಲ್ಲದೆ, ಶರದ್ ಯಾದವ್ ‘ಈ ತಿದ್ದುಪಡಿಯನ್ನು ತರದೆ ಹಾಗೆಯೇ ಜಾರಿಗೆ ತಂದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಬೆದರಿಸಿದ್ದಾರೆ. ಶರದ್ ಯಾದವ್ ಅವರಂತೂ ತಮ್ಮ ಹೇಳಿಕೆಯಿಂದಾಗಿ, ಅಪಾರ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ಮಹಿಳಾ ಮೀಸಲಾತಿ ಎಷ್ಟು ಮುಖ್ಯವೋ ಅಷ್ಟೇ ಅವರು ಹೇಳುತ್ತಿರುವ ಒಳ ಮೀಸಲಾತಿ ಕೂಡ. ಇಲ್ಲವೆಂದರೆ ಮಹಿಳಾ ಮೀಸಲಾತಿಯನ್ನು ದುರುಪಯೋಗ ಪಡಿಸಿಕೊಂಡು ಮೇಲ್ಜಾತಿ ಮತ್ತು ಮೇಲ್ವರ್ಗಗಳೇ ಅಧಿಕ ಸಂಖ್ಯೆಯಲ್ಲಿ ಗೆದ್ದುಬರುವ ಅಪಾಯವಿದೆ.

ನ್ಯಾಯಬದ್ಧವಾಗಿ ಮಹಿಳೆಯರಿಗೆ 33% ಮೀಸಲಾತಿಯಲ್ಲ, 50% ಮೀಸಲಾತಿಯನ್ನು ಕೊಡಲೇಬೇಕು. ಆದರೆ ಸದ್ಯಕ್ಕೆ 33% ರಷ್ಟನ್ನಾದರೂ ಕೊಡಿ ಮಾರಾಯರೆ ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...