Homeಅಂಕಣಗಳುಮಹಿಳಾ ಮೀಸಲಾತಿಯ ಸುತ್ತ....

ಮಹಿಳಾ ಮೀಸಲಾತಿಯ ಸುತ್ತ….

- Advertisement -
- Advertisement -

| ಗೌರಿ ಲಂಕೇಶ್ |
ಜೂನ್ 24, 2009 (ಸಂಪಾದಕೀಯದಿಂದ)

ಸಂಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕುರಿತಂತೆ ಮತ್ತೆ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಒಂದು ದಶಕಕ್ಕಿಂತಲೂ ಹಿಂದೆ ಪ್ರಾರಂಭವಾದ ಈ ಚರ್ಚೆ ಎಂದೂ ತಾರ್ಕಿಕ ಅಂತ್ಯ ಮುಟ್ಟದೆ ಹಿಂದೆ ಸರಿಯುತ್ತದೆ; ಮತ್ತೆ ಮುಂದೊಂದು ದಿನ ಭುಗಿಲೇಳುತ್ತದೆ.

ವಾಸ್ತವವಾಗಿ ನಮ್ಮ ದೇಶದ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯ ಎಷ್ಟಿದೆ? ನಮ್ಮ ಮತದಾರರ ಪೈಕಿ ಶೇ.50 ಜನರು ಮಹಿಳೆಯರಾಗಿದ್ದರೂ ಕಳೆದ 62 ವರ್ಷಗಳಲ್ಲಿ ಮಹಿಳಾ ಸಂಸದರ ಪ್ರಮಾಣ ಶೇ.10ನ್ನೂ ಮೀರಿರಲಿಲ್ಲ. ಆದರೆ ಮೊನ್ನಿನ ಚುನಾವಣೆಯಲ್ಲಿ 15ನೇ ಲೋಕಸಭೆಗೆ ಮಹಿಳೆಯರು ‘ಅತಿಹೆಚ್ಚು’ ಸಂಖ್ಯೆಯಲ್ಲಿ ಗೆದ್ದುಬಂದದ್ದು ಮೊದಲನೆ ಬಾರಿಗೆ 524 ಸಂಸದರಲ್ಲಿ 59 ಮಹಿಳೆಯರಿದ್ದಾರೆ.

ಮಹಿಳೆಯರಿಗೆ 33% ಮೀಸಲಾತಿ ಇರಬೇಕೆಂದು ಕೋರುತ್ತಿರುವ ಇಂದಿನ ಸಂದರ್ಭದಲ್ಲಿ ಯಾವ ಮೀಸಲಾತಿಯೂ ಇಲ್ಲದೇ 10% ಗಿಂತ ಸ್ವಲ್ಪ ಹೆಚ್ಚು ಮಹಿಳೆಯರು ಆಯ್ಕೆಯಾಗಿ ಬಂದಿರುವುದು ಬೇರೆ ಸಂದರ್ಭದಲ್ಲಿ ಶ್ಲಾಘನೀಯ ಸಾಧನೆಯಾಗಿರುತ್ತಿತ್ತೇನೋ, ಆದರೆ ಆ 59 ಮಹಿಳೆಯರು ಯಾರೆಂದು ನೋಡಿದಾಗ ಬೇಸರವಾಗುತ್ತದೆ. ಅಂಜಲಿ ಪೂರಿ ಲೇಖನವೊಂದರಲ್ಲಿ ಬರೆದಿರುವಂತೆ ‘ಅವರಲ್ಲಿ ಒಂದಿಬ್ಬರನ್ನು ಹೊರತುಪಡಿಸಿದರೆ ಉಳಿದವರೆಲ್ಲಾ ಪ್ರಭಾವಿ ರಾಜಕಾರಣಿಗಳ ಪತ್ನಿ, ಪುತ್ರಿ, ವಿಧವೆ, ಸೊಸೆ ಅಥವಾ ಸಹೋದರಿಗಳೇ..

ಅದೇನೆ ಇದ್ದರೂ ಮಹಿಳೆಯರಿಗೆ ಮೀಸಲಾತಿ ಇರಬೇಕು ಏಕೆಂದರೆ ನಿಜವಾದ ಪ್ರಜಾಪ್ರಭುತ್ವದಲ್ಲಿ ಎಲ್ಲಾ ಶೋಷಿತ ವರ್ಗಗಳಿಗೆ ಪ್ರಾತಿನಿಧ್ಯ ಇರಬೇಕು, ನಮ್ಮ ಸಂವಿಧಾನ ಸಭೆಯಲ್ಲಿ ದಲಿತರಿಗೆ ರಾಜಕೀಯ ಮೀಸಲಾತಿ ಘೋಷಿಸಿದ್ದೂ ಈ ಕಾರಣಕ್ಕಾಗಿಯೇ.

ಈಗಾಗಲೇ ಸುಮಾರು 90 ದೇಶಗಳ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಇವತ್ತು ಭಾರತಕ್ಕಿಂತ ಅಫಘಾನಿಸ್ತಾನ, ಪಾಕಿಸ್ತಾನ, ಇರಾಕ್ ತರಹದ ಇಸ್ಲಾಮಿಕ್ ದೇಶಗಳಲ್ಲೂ ಚೀನಾದಂತಹ ಕಮ್ಯುನಿಸ್ಟ್ ದೇಶದಲ್ಲೂ ಮಹಿಳೆಯರಿಗೆ ಮೀಸಲಾತಿ ಇದೆಯಲ್ಲದೆ, ಆ ದೇಶಗಳ ಸಂಸತ್ತಿನಲ್ಲಿ ಭಾರತಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರಿದ್ದಾರೆ. ರ್ವಾಂಡದಂತಹ ಆಫ್ರಿಕನ್ ದೇಶದಲ್ಲಿ ಎಲ್ಲಾ ದೇಶಗಳಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ಮಹಿಳೆಯರಿಗೆ 48.8% ಮೀಸಲಾತಿ ನೀಡಲಾಗಿದೆ. ಆದರೆ ಇಲ್ಲಿ 33% ಕೊಡುವುದರ ಬಗ್ಗೆಯೇ Hair spilling ನಡೆಯುತ್ತಿದ್ದು ಅದು ಜಾರಿಗೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ.

ಭಾರತದ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೂ ನಮ್ಮ ಸಂವಿಧಾನಕ್ಕೆ 1993ರಲ್ಲಿ 73 ಮತ್ತು 74ನೇ ತಿದ್ದುಪಡಿ ಮಾಡುವ ಮೂಲಕ ಪ್ರಜಾಪ್ರಭುತ್ವದ ಕೆಳಹಂತದ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಾಯಿತು. ಆಗ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳದಂತಹ ರಾಜ್ಯಗಳ ಪಂಚಾಯತ್ ವ್ಯವಸ್ಥೆಯಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ

ಭಾಗವಹಿಸಲಾರಂಭಿಸಿದರು. ಮಹಿಳೆಯರ ಈ ರಾಜಕೀಯ ಪ್ರವೇಶಕ್ಕೆ ಹಲವಾರು ಅಡಚಣೆಗಳಿದ್ದರೂ ಅವರಲ್ಲಿ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆ ಹೆಚ್ಚಾಗಿ ಅವರ ಕೊಡುಗೆಯೂ ಅಧಿಕವಾಯಿತು. ಈ ಅನುಭವವನ್ನು ಆಧರಿಸಿಯೇ ಸಂಸತ್ತಿನಲ್ಲೂ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂಬ ಹೋರಾಟ 1996ರಲ್ಲಿ ಪ್ರಾರಂಭವಾಯಿತು.

ಮೊನ್ನೆ ಶರದ್ ಯಾದವ್, ಮುಲಾಯಂ ಸಿಂಗ್ ಮತ್ತು ಲಾಲೂ ಪ್ರಸಾದ್ ಯಾದವ್ ತರಹದ ಓಬಿಸಿ ನಾಯಕರು “ಮಹಿಳಾ ಮೀಸಲಾತಿಯಲ್ಲಿ ಒಳ ಮೀಸಲಾತಿ ಇರಬೇಕು’ ಎಂದಿದ್ದಾರಲ್ಲದೆ, ಶರದ್ ಯಾದವ್ ‘ಈ ತಿದ್ದುಪಡಿಯನ್ನು ತರದೆ ಹಾಗೆಯೇ ಜಾರಿಗೆ ತಂದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಬೆದರಿಸಿದ್ದಾರೆ. ಶರದ್ ಯಾದವ್ ಅವರಂತೂ ತಮ್ಮ ಹೇಳಿಕೆಯಿಂದಾಗಿ, ಅಪಾರ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ಮಹಿಳಾ ಮೀಸಲಾತಿ ಎಷ್ಟು ಮುಖ್ಯವೋ ಅಷ್ಟೇ ಅವರು ಹೇಳುತ್ತಿರುವ ಒಳ ಮೀಸಲಾತಿ ಕೂಡ. ಇಲ್ಲವೆಂದರೆ ಮಹಿಳಾ ಮೀಸಲಾತಿಯನ್ನು ದುರುಪಯೋಗ ಪಡಿಸಿಕೊಂಡು ಮೇಲ್ಜಾತಿ ಮತ್ತು ಮೇಲ್ವರ್ಗಗಳೇ ಅಧಿಕ ಸಂಖ್ಯೆಯಲ್ಲಿ ಗೆದ್ದುಬರುವ ಅಪಾಯವಿದೆ.

ನ್ಯಾಯಬದ್ಧವಾಗಿ ಮಹಿಳೆಯರಿಗೆ 33% ಮೀಸಲಾತಿಯಲ್ಲ, 50% ಮೀಸಲಾತಿಯನ್ನು ಕೊಡಲೇಬೇಕು. ಆದರೆ ಸದ್ಯಕ್ಕೆ 33% ರಷ್ಟನ್ನಾದರೂ ಕೊಡಿ ಮಾರಾಯರೆ ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...