Homeಅಂಕಣಗಳುಮಹಿಳಾ ಮೀಸಲಾತಿಯ ಸುತ್ತ....

ಮಹಿಳಾ ಮೀಸಲಾತಿಯ ಸುತ್ತ….

- Advertisement -
- Advertisement -

| ಗೌರಿ ಲಂಕೇಶ್ |
ಜೂನ್ 24, 2009 (ಸಂಪಾದಕೀಯದಿಂದ)

ಸಂಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕುರಿತಂತೆ ಮತ್ತೆ ಎಲ್ಲೆಡೆ ಚರ್ಚೆಗಳಾಗುತ್ತಿವೆ. ಒಂದು ದಶಕಕ್ಕಿಂತಲೂ ಹಿಂದೆ ಪ್ರಾರಂಭವಾದ ಈ ಚರ್ಚೆ ಎಂದೂ ತಾರ್ಕಿಕ ಅಂತ್ಯ ಮುಟ್ಟದೆ ಹಿಂದೆ ಸರಿಯುತ್ತದೆ; ಮತ್ತೆ ಮುಂದೊಂದು ದಿನ ಭುಗಿಲೇಳುತ್ತದೆ.

ವಾಸ್ತವವಾಗಿ ನಮ್ಮ ದೇಶದ ಸಂಸತ್ತಿನಲ್ಲಿ ಮಹಿಳಾ ಪ್ರಾತಿನಿಧ್ಯ ಎಷ್ಟಿದೆ? ನಮ್ಮ ಮತದಾರರ ಪೈಕಿ ಶೇ.50 ಜನರು ಮಹಿಳೆಯರಾಗಿದ್ದರೂ ಕಳೆದ 62 ವರ್ಷಗಳಲ್ಲಿ ಮಹಿಳಾ ಸಂಸದರ ಪ್ರಮಾಣ ಶೇ.10ನ್ನೂ ಮೀರಿರಲಿಲ್ಲ. ಆದರೆ ಮೊನ್ನಿನ ಚುನಾವಣೆಯಲ್ಲಿ 15ನೇ ಲೋಕಸಭೆಗೆ ಮಹಿಳೆಯರು ‘ಅತಿಹೆಚ್ಚು’ ಸಂಖ್ಯೆಯಲ್ಲಿ ಗೆದ್ದುಬಂದದ್ದು ಮೊದಲನೆ ಬಾರಿಗೆ 524 ಸಂಸದರಲ್ಲಿ 59 ಮಹಿಳೆಯರಿದ್ದಾರೆ.

ಮಹಿಳೆಯರಿಗೆ 33% ಮೀಸಲಾತಿ ಇರಬೇಕೆಂದು ಕೋರುತ್ತಿರುವ ಇಂದಿನ ಸಂದರ್ಭದಲ್ಲಿ ಯಾವ ಮೀಸಲಾತಿಯೂ ಇಲ್ಲದೇ 10% ಗಿಂತ ಸ್ವಲ್ಪ ಹೆಚ್ಚು ಮಹಿಳೆಯರು ಆಯ್ಕೆಯಾಗಿ ಬಂದಿರುವುದು ಬೇರೆ ಸಂದರ್ಭದಲ್ಲಿ ಶ್ಲಾಘನೀಯ ಸಾಧನೆಯಾಗಿರುತ್ತಿತ್ತೇನೋ, ಆದರೆ ಆ 59 ಮಹಿಳೆಯರು ಯಾರೆಂದು ನೋಡಿದಾಗ ಬೇಸರವಾಗುತ್ತದೆ. ಅಂಜಲಿ ಪೂರಿ ಲೇಖನವೊಂದರಲ್ಲಿ ಬರೆದಿರುವಂತೆ ‘ಅವರಲ್ಲಿ ಒಂದಿಬ್ಬರನ್ನು ಹೊರತುಪಡಿಸಿದರೆ ಉಳಿದವರೆಲ್ಲಾ ಪ್ರಭಾವಿ ರಾಜಕಾರಣಿಗಳ ಪತ್ನಿ, ಪುತ್ರಿ, ವಿಧವೆ, ಸೊಸೆ ಅಥವಾ ಸಹೋದರಿಗಳೇ..

ಅದೇನೆ ಇದ್ದರೂ ಮಹಿಳೆಯರಿಗೆ ಮೀಸಲಾತಿ ಇರಬೇಕು ಏಕೆಂದರೆ ನಿಜವಾದ ಪ್ರಜಾಪ್ರಭುತ್ವದಲ್ಲಿ ಎಲ್ಲಾ ಶೋಷಿತ ವರ್ಗಗಳಿಗೆ ಪ್ರಾತಿನಿಧ್ಯ ಇರಬೇಕು, ನಮ್ಮ ಸಂವಿಧಾನ ಸಭೆಯಲ್ಲಿ ದಲಿತರಿಗೆ ರಾಜಕೀಯ ಮೀಸಲಾತಿ ಘೋಷಿಸಿದ್ದೂ ಈ ಕಾರಣಕ್ಕಾಗಿಯೇ.

ಈಗಾಗಲೇ ಸುಮಾರು 90 ದೇಶಗಳ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಇವತ್ತು ಭಾರತಕ್ಕಿಂತ ಅಫಘಾನಿಸ್ತಾನ, ಪಾಕಿಸ್ತಾನ, ಇರಾಕ್ ತರಹದ ಇಸ್ಲಾಮಿಕ್ ದೇಶಗಳಲ್ಲೂ ಚೀನಾದಂತಹ ಕಮ್ಯುನಿಸ್ಟ್ ದೇಶದಲ್ಲೂ ಮಹಿಳೆಯರಿಗೆ ಮೀಸಲಾತಿ ಇದೆಯಲ್ಲದೆ, ಆ ದೇಶಗಳ ಸಂಸತ್ತಿನಲ್ಲಿ ಭಾರತಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರಿದ್ದಾರೆ. ರ್ವಾಂಡದಂತಹ ಆಫ್ರಿಕನ್ ದೇಶದಲ್ಲಿ ಎಲ್ಲಾ ದೇಶಗಳಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ಮಹಿಳೆಯರಿಗೆ 48.8% ಮೀಸಲಾತಿ ನೀಡಲಾಗಿದೆ. ಆದರೆ ಇಲ್ಲಿ 33% ಕೊಡುವುದರ ಬಗ್ಗೆಯೇ Hair spilling ನಡೆಯುತ್ತಿದ್ದು ಅದು ಜಾರಿಗೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ.

ಭಾರತದ ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ಇಲ್ಲದಿದ್ದರೂ ನಮ್ಮ ಸಂವಿಧಾನಕ್ಕೆ 1993ರಲ್ಲಿ 73 ಮತ್ತು 74ನೇ ತಿದ್ದುಪಡಿ ಮಾಡುವ ಮೂಲಕ ಪ್ರಜಾಪ್ರಭುತ್ವದ ಕೆಳಹಂತದ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಾಯಿತು. ಆಗ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳದಂತಹ ರಾಜ್ಯಗಳ ಪಂಚಾಯತ್ ವ್ಯವಸ್ಥೆಯಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ

ಭಾಗವಹಿಸಲಾರಂಭಿಸಿದರು. ಮಹಿಳೆಯರ ಈ ರಾಜಕೀಯ ಪ್ರವೇಶಕ್ಕೆ ಹಲವಾರು ಅಡಚಣೆಗಳಿದ್ದರೂ ಅವರಲ್ಲಿ ಸಾಮಾಜಿಕ ಮತ್ತು ರಾಜಕೀಯ ಪ್ರಜ್ಞೆ ಹೆಚ್ಚಾಗಿ ಅವರ ಕೊಡುಗೆಯೂ ಅಧಿಕವಾಯಿತು. ಈ ಅನುಭವವನ್ನು ಆಧರಿಸಿಯೇ ಸಂಸತ್ತಿನಲ್ಲೂ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂಬ ಹೋರಾಟ 1996ರಲ್ಲಿ ಪ್ರಾರಂಭವಾಯಿತು.

ಮೊನ್ನೆ ಶರದ್ ಯಾದವ್, ಮುಲಾಯಂ ಸಿಂಗ್ ಮತ್ತು ಲಾಲೂ ಪ್ರಸಾದ್ ಯಾದವ್ ತರಹದ ಓಬಿಸಿ ನಾಯಕರು “ಮಹಿಳಾ ಮೀಸಲಾತಿಯಲ್ಲಿ ಒಳ ಮೀಸಲಾತಿ ಇರಬೇಕು’ ಎಂದಿದ್ದಾರಲ್ಲದೆ, ಶರದ್ ಯಾದವ್ ‘ಈ ತಿದ್ದುಪಡಿಯನ್ನು ತರದೆ ಹಾಗೆಯೇ ಜಾರಿಗೆ ತಂದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಬೆದರಿಸಿದ್ದಾರೆ. ಶರದ್ ಯಾದವ್ ಅವರಂತೂ ತಮ್ಮ ಹೇಳಿಕೆಯಿಂದಾಗಿ, ಅಪಾರ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ಮಹಿಳಾ ಮೀಸಲಾತಿ ಎಷ್ಟು ಮುಖ್ಯವೋ ಅಷ್ಟೇ ಅವರು ಹೇಳುತ್ತಿರುವ ಒಳ ಮೀಸಲಾತಿ ಕೂಡ. ಇಲ್ಲವೆಂದರೆ ಮಹಿಳಾ ಮೀಸಲಾತಿಯನ್ನು ದುರುಪಯೋಗ ಪಡಿಸಿಕೊಂಡು ಮೇಲ್ಜಾತಿ ಮತ್ತು ಮೇಲ್ವರ್ಗಗಳೇ ಅಧಿಕ ಸಂಖ್ಯೆಯಲ್ಲಿ ಗೆದ್ದುಬರುವ ಅಪಾಯವಿದೆ.

ನ್ಯಾಯಬದ್ಧವಾಗಿ ಮಹಿಳೆಯರಿಗೆ 33% ಮೀಸಲಾತಿಯಲ್ಲ, 50% ಮೀಸಲಾತಿಯನ್ನು ಕೊಡಲೇಬೇಕು. ಆದರೆ ಸದ್ಯಕ್ಕೆ 33% ರಷ್ಟನ್ನಾದರೂ ಕೊಡಿ ಮಾರಾಯರೆ ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...