Homeಮುಖಪುಟಸುಪ್ರೀಂ ಕೋರ್ಟ್‌ಗೆ ಅವಮಾನ - OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

ಸುಪ್ರೀಂ ಕೋರ್ಟ್‌ಗೆ ಅವಮಾನ – OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

- Advertisement -
- Advertisement -

ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದ್ದ ಬೆನ್ನಲ್ಲೆ ಸುಪ್ರೀಂ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದಕ್ಕಾಗಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಟಿಎಂಸಿ ಮುಖಂಡ ಸಾಕೇತ್ ಗೋಖಲೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ನೂಪೂರ್ ಜೆ ಶರ್ಮಾ ಎನ್ನುವವರು ಬಿಜೆಪಿ-ಆರ್‌ಎಸ್‌ಎಸ್‌ ಬೆಂಬಲಿತ ಒಪಿಇಂಡಿಯಾ ಎನ್ನುವ ಪ್ರಪಗಂಡಾ ವೆಬ್‌ಸೈಟ್‌ನ ಸಂಪಾದಕಿಯಾಗಿದ್ದಾರೆ. ಅದಕ್ಕೆ ಬಿಜೆಪಿಯಿಂದ ಉಚ್ಛಾಟನೆಯಾಗಿರುವ ಮತ್ತೊಬ್ಬ ನೂಪುರ್ ಶರ್ಮಾ ಕೂಡ ಈ ಹಿಂದೆ ಬರೆಯುತ್ತಿದ್ದರು.

ಸುಪ್ರೀಂ ಕೋರ್ಟ್ ಅನ್ನು ತೀವ್ರವಾಗಿ ಅವಮಾನಿಸಿದ್ದಕ್ಕಾಗಿ ಬಿಜೆಪಿ ಮುಖವಾಣಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕೋರಿ ಭಾರತದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರಿಗೆ ಪತ್ರ ಬರೆಯಲಾಗಿದೆ.

ತನ್ನ ಮೇಲೆ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳನ್ನು ಒಂದೇ ಎಫ್‌ಐಆರ್‌ಗೆ ವರ್ಗಾಹಿಸುವಂತೆ ಆರೋಪಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೇಶದಲ್ಲಿ ಉಂಟಾದ ಉದ್ವಿಗ್ನ ವಾತಾವರಣಕ್ಕೆ ನೂಪುರ್ ಶರ್ಮಾ ಒಬ್ಬರೆ ಕಾರಣವಾಗಿದ್ದಾರೆ, ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ, ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು” ಎಂದು ಸುಪ್ರೀಂ ಅಭಿಪ್ರಾಯಪಟ್ಟಿತು. ಅಲ್ಲದೆ ನೂಪುರ್ ಶರ್ಮಾ ವಿರುದ್ಧ ಕಿಡಿಕಾರಿತ್ತು.

ಇದಕ್ಕೆ ಪ್ರತಿಯಾಗಿ ಜುಲೈ 1 ರಂದು OPIndia ದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ “ಸುಪ್ರೀಂ ಕೋರ್ಟ್ ಇಸ್ಲಾಂ ಧರ್ಮೀಯರಂತೆ ಮಾತನಾಡುತ್ತದೆ, ಇಸ್ಲಾಮಿಕ್ ಮತಾಂಧರಿಂದ ಹಿಂದೂ ವ್ಯಕ್ತಿಯ ಶಿರಚ್ಛೇದಕ್ಕೆ ನೂಪುರ್ ಶರ್ಮಾ ಅವರ ‘ಸಡಿಲ ನಾಲಿಗೆ’ಯನ್ನು ದೂರುವ ಮೂಲಕ ಕೆಟ್ಟ ವಿಚಾರಣೆ ನಡೆಸುತ್ತದೆ. ಸುಪ್ರೀಂ ಕೋರ್ಟ್ ಷರಿಯಾವನ್ನು ಅನುಸರಿಸುತ್ತದೆಯೇ?” ಎಂದು ಟ್ವೀಟ್ ಮಾಡುವ ಮೂಲಕ ಅವಮಾನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅದೆ ಟ್ವಿಟರ್ ಹ್ಯಾಂಡಲ್ ನಿಂದ “ಆತ್ಮೀಯ ಮೈಲಾರ್ಡ್‌ಗಳೇ, ನೀವು ಇಸ್ಲಾಮಿಸ್ಟ್‌ಗಳನ್ನು ಸಹ ನಿಮ್ಮ ಸಡಿಲವಾದ ನಾಲಿಗೆಯಿಂದ ಪ್ರಚೋದಿಸಿದ್ದೀರಾ?” ಎಂದು ಬರೆದು ಲೇಖನದ ಲಿಂಕ್ ಒಂದನ್ನು ಪೋಸ್ಟ್ ಮಾಡಲಾಗಿದೆ. ಆ ಲೇಖನದಲ್ಲಿ “ನ್ಯಾಯಾಂಗವು ವಿಚಾರಣೆ ವೇಳೆ ತನ್ನ ಅಪರಿಮಿತ ಬುದ್ಧಿವಂತಿಕೆಯಲ್ಲಿ ಅವರು ಇಸ್ಲಾಮಿಕ್ ಧರ್ಮಗುರುಗಳಾಗಲು ಬಯಸುತ್ತಾರೆಯೇ ಅಥವಾ ನೈಸರ್ಗಿಕ ನ್ಯಾಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆಯೇ ಎಂದು ನಿರ್ಧರಿಸುವ ಅಗತ್ಯವಿದೆ” ಎಂದು ಬರೆಯಲಾಗಿದೆ ಎಂದು ಸಾಕೇತ್ ತಿಳಿಸಿದ್ದಾರೆ.

ಈ ರೀತಿಯಾಗಿ ಸುಪ್ರೀಂ ಕೋರ್ಟ್ ಅನ್ನು ಅವಮಾನಿಸಿದ್ದಕ್ಕಾಗಿ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಅವರು ಕೋರಿದ್ದಾರೆ.

ಇದನ್ನೂ ಓದಿ: ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ: ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು- ಸುಪ್ರೀಂ

ಕರ್ನಾಟಕದಲ್ಲಿಯೂ ಸಹ ನೂಪುರ್ ಶರ್ಮಾ ವಿರುದ್ಧದ ಸುಪ್ರೀಂ ಕೋರ್ಟ್‌ ಹೇಳಿಕೆಗಳನ್ನು ಖಂಡಿಸಿ ಬಿಜೆಪಿ ಬೆಂಬಲಿಗರಾದ ಚಕ್ರವರ್ತಿ ಸೂಲಿಬೆಲೆ, ಪ್ರಶಾಂತ್ ಸಂಬರ್ಗಿ ಸೇರಿದಂತೆ ಹಲವರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆ ದೇಶದ ಮಾನವನ್ನ ಪ್ರಪಂಚದ ರಾಷ್ಟ್ರಗಳ ಮುಂದೆ ಹರಾಜು ಹಾಕಿದ ಮತ್ತು ನ್ಯಾಯಾಂಗ ನಿಂದನೆ ಕೃತ್ಯ ಎಸಗಿರುವ ಈ ಹೆಂಗಸನ್ನ ಹಿಂದೆಯೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕಿತ್ತು ಆದರೆ ದುರದೃಷ್ಟವಶಾತ್ ಕೇಂದ್ರದಲ್ಲಿ ಇರುವ ಮತಿಯವಾದಿ, ಕೋಮುವಾದಿ ಸರ್ಕಾರವಿರುವುದರಿಂದ ಸಾಧ್ಯವಿಲ್ಲ.

  2. ಈ ಹೊಲಸು ಬಾಯಿನಾ ಪ್ರವಾದಿಯವರ ಬಗ್ಗೆ ಬೊಗಳಿದಾಗಲೇ ಮುಚ್ಚಿಸಿದ್ರೆ ಇವತ್ತು ಸುಪ್ರೀಂ ಕೋರ್ಟ್ ಗೆ ಅವಮಾನ ಮಾಡತಿರಲಿಲ್ಲ. ಇವಳ ಒಂದು ಮಾತು ಇಡೀ ದೇಶ ಹೊತ್ತಿ ಉರಿಯೋ ಹಾಗೆ ಮಾಡಿ ಪ್ರಪಂಚದ ಅತಿ ಚಿಕ್ಕ ಚಿಕ್ಕ ದೇಶಗಳ ಮುಂದೆ ನಮ್ಮ ದೇಶದ ಮರ್ಯಾದೆ ಹೋಯಿತು. ಇವಳನ್ನ ಅವತ್ತೇ ಪೊಲೀಸ್ ಕಸ್ಟಡಿಗೆ ಒಪ್ಸಿದ್ರೆ ಹೇಗಿರ್ತಿತ್ತು,, ಇವರಿಗೆಲ್ಲ ನಡು ರೋಡಲ್ಲಿ ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕು ಥೂ… ಇವಳು ಒಂದು ಭಾರತೀಯ ಹೆಣ್ಣೇ..?

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...