Homeಮುಖಪುಟಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

- Advertisement -
- Advertisement -

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದ ಜೊತೆಗೆ ಜಮ್ಮು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಾಮಾಜಿಕ ಮಾಧ್ಯಮ ಉಸ್ತುವಾರಿ ಕೂಡ ಆಗಿದ್ದ ಎಂಬ ಸ್ಪೋಟಕ ಮಾಹಿತಿ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

ಇಂದು ಬೆಳಗ್ಗೆ ಜಮ್ಮುವಿನ ರಿಯಾಸಿ ಪ್ರದೇಶದಲ್ಲಿ ಉಗ್ರರಾದ ತಾಲಿಬ್ ಹುಸೇನ್ ಶಾ ಮತ್ತು ಆತನ ಸಹಚರರನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ. ಅವರಿಂದ ಎರಡು ಎಕೆ ರೈಫಲ್‌ಗಳು, ಹಲವಾರು ಗ್ರೆನೇಡ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.

ಮೇ 9 ರಂದು ಬಿಜೆಪಿಯು ಜಮ್ಮು ಪ್ರಾಂತ್ಯದಲ್ಲಿ ಪಕ್ಷದ ಐಟಿ ಮತ್ತು ಸಾಮಾಜಿಕ ಮಾಧ್ಯಮದ ಉಸ್ತುವಾರಿಯಾಗಿ ತಾಲಿಬ್ ಹುಸೇನ್ ಶಾನನ್ನು ನೇಮಿಸಲಾಗಿತ್ತು ಎನ್ನಲಾಗಿದೆ. ಜಮ್ಮು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರೊಂದಿಗೆ ಉಗ್ರ ಶಾ ಇರುವ ಹಲವರು ಫೋಟೊಗಲು ವೈರಲ್ ಆಗುತ್ತಿವೆ.

ಭಯೋತ್ಪಾದಕನೊಬ್ಬನನ್ನು ಪಕ್ಷದ ಐಟಿ ಸೆಲ್ ಮುಖ್ಯಸ್ಥನಾಗಿ ಬಿಜೆಪಿ ನೇಮಿಸಿದೆ, ಹೆಸರಿಗೆ ಮಾತ್ರ ಭಯೋತ್ಪಾದನೆ ವಿರುದ್ಧ ಹೋರಾಡುವ ಬಿಜೆಪಿಯು ಭಯೋತ್ಪಾದಕರನ್ನೇ ಸಾಕುತ್ತಿದೆ ಎಂದು ಹಲವಾರು ಜನರು ದೂರಿದ್ದಾರೆ.

ಬಿಜೆಪಿ ಪಕ್ಷದಲ್ಲಿಯೇ ಉಗ್ರಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷವು, “ಆನ್‌ಲೈನ್ ಸದಸ್ಯತ್ವ ವ್ಯವಸ್ಥೆಯು ಯಾವುದೇ ಹಿನ್ನೆಲೆ ಪರಿಶೀಲನೆಯಿಲ್ಲದೆ ಜನರನ್ನು ಪಕ್ಷಕ್ಕೆ ಸೇರಲು ಅನುವು ಮಾಡಿಕೊಡುತ್ತದೆ” ಎಂದು ಹೇಳುವ ಮೂಲಕ ಜಾರಿಕೊಳ್ಳಲು ಯತ್ನಿಸಿದೆ.

ಬಿಜೆಪಿ ವಕ್ತಾರ ಆರ್.ಎಸ್.ಪಠಾನಿಯಾ ಮಾತನಾಡಿ, “ಇದು ಹೊಸ ಮಾದರಿಯಾಗಿದೆ. ಉಗ್ರರು ಬಿಜೆಪಿಗೆ ಪ್ರವೇಶ ಪಡೆಯುವುದು, ಅಲ್ಲಿ ಹೆಸರು ಗಳಿಸುವುದು ನಂತರ ಉನ್ನತ ನಾಯಕತ್ವವನ್ನು ಕೊಲ್ಲುವ ಸಂಚು ಮಾಡಿದ್ದರು, ಆದರೆ ಅದನ್ನು ಪೊಲೀಸರು ಭೇದಿಸಿದ್ದರು” ಎಂದು ಹೇಳಿದ್ದಾರೆ.

“ಗಡಿಯಲ್ಲಿ, ಭಯೋತ್ಪಾದನೆಯನ್ನು ಹರಡಲು ಬಯಸುವವರು ಇದ್ದಾರೆ. ಈಗ ಯಾರು ಬೇಕಾದರೂ ಆನ್‌ಲೈನ್‌ನಲ್ಲಿ ಬಿಜೆಪಿ ಸದಸ್ಯರಾಗಬಹುದು. ಇದು ಒಂದು ನ್ಯೂನತೆ ಎಂದು ನಾನು ಹೇಳುತ್ತೇನೆ ಏಕೆಂದರೆ ಅಪರಾಧ ದಾಖಲೆ ಅಥವಾ ಜನರ ಪೂರ್ವಾಪರಗಳನ್ನು ಪರಿಶೀಲಿಸುವ ವ್ಯವಸ್ಥೆ ಇಲ್ಲ” ಎಂದು ಅವರು ಹೇಳಿದರು.

ಸಾಮಾನ್ಯ ಸದಸ್ಯರಾದರೆ ಬೇರೆ ವಿಚಾರ. ಆದರೆ ಬಂಧಿಸಲ್ಪಟ್ಟಿರುವ ಉಗ್ರನಿಗೆ ಸಾಮಾಜಿಕ ಜಾಲತಾಣ ನಿರ್ವಹಣೆಯ ಹುದ್ದೆ ನೀಡಲಾಗಿದೆ. ಅಲ್ಲದೆ ಪಕ್ಷದ ಹಿರಿಯರೊಂದಿಗೆ ಆತನಿಗೆ ಉತ್ತಮ ಸಂಬಂಧವಿರುವುದು ಫೋಟೊಗಳಿಂದ ತಿಳಿದುಬಂದಿದೆ. ಇಷ್ಟಿದ್ದು ಆತ ಆನ್‌ಲೈನ್ ಮೂಲಕ ಸದಸ್ಯನಾಗಿದ್ದಾನೆ ಎಂಬುದನ್ನು ಒಪ್ಪಲು ಸಾಧ್ಯವೇ? ಎಂಬ ಪ್ರಶ್ನೆಗಳು ಕೇಳಿಬಂದಿವೆ.

“ಶ್ರೀ ತಾಲಿಬ್ ಹುಸೇನ್ ಷಾ, ಡ್ರಜ್ ಕೊಟ್ರಂಕಾ, ಬುಧಾನ್, ರಾಜೌರಿ ಜಿಲ್ಲೆ, ಇವರನ್ನು ತಕ್ಷಣವೇ ಜಾರಿಗೆ ಬರುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಮ್ಮು ಪ್ರಾಂತ್ಯದ ಹೊಸ ಐಟಿ ಮತ್ತು ಸಾಮಾಜಿಕ ಮಾಧ್ಯಮ ಉಸ್ತುವಾರಿಯಾಗನಿ ನೇಮಿಸಲಾಗಿದೆ” ಎಂದು ಬಿಜೆಪಿ J&K ಅಲ್ಪಸಂಖ್ಯಾತ ಮೋರ್ಚಾ ಮೇ 09 ರಂದು ಆದೇಶ ಹೊರಡಿಸಿತ್ತು. ಈ ಎರಡು ತಿಂಗಳೊಳಗೆ ಆತ ಭಯೋತ್ಪಾದನಾ ಚಟುವಟಿಕೆ ನಡೆಸಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಮಾನವ ಸಂಬಂಧಗಳನ್ನು ದ್ವೇಷದಿಂದ ಕದಡಿ ದೇಶ ಕಟ್ಟಲು ಸಾಧ್ಯವಿಲ್ಲ: ರಹಮತ್ ತರೀಕೆರೆ

ಉಗ್ರರನ್ನು ಹಿಡಿದುಕೊಟ್ಟ ರಿಯಾಸಿ ಜಿಲ್ಲೆಯ ತುಕ್ಸಾನ್‌ನ ಗ್ರಾಮಸ್ಥರ ಧೈರ್ಯವನ್ನು ಶ್ಲಾಘಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಪೊಲೀಸ್ ಮುಖ್ಯಸ್ಥರು ರಿಯಾಸಿ ಗ್ರಾಮಸ್ಥರಿಗೆ 2 ಲಕ್ಷ ರೂ ನಗದು ಬಹುಮಾನ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿಯ ತುಂಡು ಬಿಸ್ಕೆಟ್ ತಿನ್ನುವ ಹಲ್ಕಟ್, ಕಜ್ಜಿ, ಕಂತ್ರಿ ನಾಯಿ ಒಂದು ಯಾವಾಗ್ಲೂ ಒಂದು ಧರ್ಮದ ವಿರುದ್ಧ ಬೊಗಳತಿತ್ತು ಇವಾಗ ಬಂದು ಬೊಗಳೋಕೆ ಯಾವುದಾದರು ಇನ್ನೊಂದು ಕಂತ್ರಿ ನಾಯಿ ತೊಡ್ಡು ಸಿಕ್ಕಿದಿಯಾ ಬಾಯಲ್ಲಿ..? ಅಪ್ಪನಿಗೆ ಹುಟ್ಟಿದವರು ಮಾತ್ರ ಸತ್ಯ ಹೇಳ್ತಾರೆ ಮತ್ತೆ ಬೇರೆಯವರು ಹೇಳುವ ಸತ್ಯವನ್ನು ಒಪ್ಪುತ್ತಾರೆ. ಇಡೀ ಕ್ರಿಕೆಟ್ ತಂಡಕ್ಕೆ ಹುಟ್ಟಿದೋರು ಬರಿ ಬೊಗಳೆ ಬಿಟ್ಕೊಂಡ ದೇಶದ ಸ್ವಾಸ್ತ್ಯ ಹಾಳು ಮಾಡತಾವೆ ### ಮಕ್ಕಳು

  2. ಕೆಲವು ಸಮುದಾಯಕ್ಕೆ ಸೇರಿದವರನ್ನ ಯಾವುದೇ ಹುದ್ದೆಗೆ ನೇಮಿಸಿದರೂ ಆ ಹುದ್ದೆಯಿಂದ ನಿರ್ಗಮಿಸಿದ ನಂತರ ದೇಶ ದ್ರೋಹಿಗಳೇ ಆಗೋದು ಅನ್ನೋದು ಅವರ ಮೂಲದಲ್ಲಿಯೇ ಅಡಗಿದೆ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...