Homeಮುಖಪುಟಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

- Advertisement -
- Advertisement -

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದ ಜೊತೆಗೆ ಜಮ್ಮು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಾಮಾಜಿಕ ಮಾಧ್ಯಮ ಉಸ್ತುವಾರಿ ಕೂಡ ಆಗಿದ್ದ ಎಂಬ ಸ್ಪೋಟಕ ಮಾಹಿತಿ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

ಇಂದು ಬೆಳಗ್ಗೆ ಜಮ್ಮುವಿನ ರಿಯಾಸಿ ಪ್ರದೇಶದಲ್ಲಿ ಉಗ್ರರಾದ ತಾಲಿಬ್ ಹುಸೇನ್ ಶಾ ಮತ್ತು ಆತನ ಸಹಚರರನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ. ಅವರಿಂದ ಎರಡು ಎಕೆ ರೈಫಲ್‌ಗಳು, ಹಲವಾರು ಗ್ರೆನೇಡ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.

ಮೇ 9 ರಂದು ಬಿಜೆಪಿಯು ಜಮ್ಮು ಪ್ರಾಂತ್ಯದಲ್ಲಿ ಪಕ್ಷದ ಐಟಿ ಮತ್ತು ಸಾಮಾಜಿಕ ಮಾಧ್ಯಮದ ಉಸ್ತುವಾರಿಯಾಗಿ ತಾಲಿಬ್ ಹುಸೇನ್ ಶಾನನ್ನು ನೇಮಿಸಲಾಗಿತ್ತು ಎನ್ನಲಾಗಿದೆ. ಜಮ್ಮು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರೊಂದಿಗೆ ಉಗ್ರ ಶಾ ಇರುವ ಹಲವರು ಫೋಟೊಗಲು ವೈರಲ್ ಆಗುತ್ತಿವೆ.

ಭಯೋತ್ಪಾದಕನೊಬ್ಬನನ್ನು ಪಕ್ಷದ ಐಟಿ ಸೆಲ್ ಮುಖ್ಯಸ್ಥನಾಗಿ ಬಿಜೆಪಿ ನೇಮಿಸಿದೆ, ಹೆಸರಿಗೆ ಮಾತ್ರ ಭಯೋತ್ಪಾದನೆ ವಿರುದ್ಧ ಹೋರಾಡುವ ಬಿಜೆಪಿಯು ಭಯೋತ್ಪಾದಕರನ್ನೇ ಸಾಕುತ್ತಿದೆ ಎಂದು ಹಲವಾರು ಜನರು ದೂರಿದ್ದಾರೆ.

ಬಿಜೆಪಿ ಪಕ್ಷದಲ್ಲಿಯೇ ಉಗ್ರಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷವು, “ಆನ್‌ಲೈನ್ ಸದಸ್ಯತ್ವ ವ್ಯವಸ್ಥೆಯು ಯಾವುದೇ ಹಿನ್ನೆಲೆ ಪರಿಶೀಲನೆಯಿಲ್ಲದೆ ಜನರನ್ನು ಪಕ್ಷಕ್ಕೆ ಸೇರಲು ಅನುವು ಮಾಡಿಕೊಡುತ್ತದೆ” ಎಂದು ಹೇಳುವ ಮೂಲಕ ಜಾರಿಕೊಳ್ಳಲು ಯತ್ನಿಸಿದೆ.

ಬಿಜೆಪಿ ವಕ್ತಾರ ಆರ್.ಎಸ್.ಪಠಾನಿಯಾ ಮಾತನಾಡಿ, “ಇದು ಹೊಸ ಮಾದರಿಯಾಗಿದೆ. ಉಗ್ರರು ಬಿಜೆಪಿಗೆ ಪ್ರವೇಶ ಪಡೆಯುವುದು, ಅಲ್ಲಿ ಹೆಸರು ಗಳಿಸುವುದು ನಂತರ ಉನ್ನತ ನಾಯಕತ್ವವನ್ನು ಕೊಲ್ಲುವ ಸಂಚು ಮಾಡಿದ್ದರು, ಆದರೆ ಅದನ್ನು ಪೊಲೀಸರು ಭೇದಿಸಿದ್ದರು” ಎಂದು ಹೇಳಿದ್ದಾರೆ.

“ಗಡಿಯಲ್ಲಿ, ಭಯೋತ್ಪಾದನೆಯನ್ನು ಹರಡಲು ಬಯಸುವವರು ಇದ್ದಾರೆ. ಈಗ ಯಾರು ಬೇಕಾದರೂ ಆನ್‌ಲೈನ್‌ನಲ್ಲಿ ಬಿಜೆಪಿ ಸದಸ್ಯರಾಗಬಹುದು. ಇದು ಒಂದು ನ್ಯೂನತೆ ಎಂದು ನಾನು ಹೇಳುತ್ತೇನೆ ಏಕೆಂದರೆ ಅಪರಾಧ ದಾಖಲೆ ಅಥವಾ ಜನರ ಪೂರ್ವಾಪರಗಳನ್ನು ಪರಿಶೀಲಿಸುವ ವ್ಯವಸ್ಥೆ ಇಲ್ಲ” ಎಂದು ಅವರು ಹೇಳಿದರು.

ಸಾಮಾನ್ಯ ಸದಸ್ಯರಾದರೆ ಬೇರೆ ವಿಚಾರ. ಆದರೆ ಬಂಧಿಸಲ್ಪಟ್ಟಿರುವ ಉಗ್ರನಿಗೆ ಸಾಮಾಜಿಕ ಜಾಲತಾಣ ನಿರ್ವಹಣೆಯ ಹುದ್ದೆ ನೀಡಲಾಗಿದೆ. ಅಲ್ಲದೆ ಪಕ್ಷದ ಹಿರಿಯರೊಂದಿಗೆ ಆತನಿಗೆ ಉತ್ತಮ ಸಂಬಂಧವಿರುವುದು ಫೋಟೊಗಳಿಂದ ತಿಳಿದುಬಂದಿದೆ. ಇಷ್ಟಿದ್ದು ಆತ ಆನ್‌ಲೈನ್ ಮೂಲಕ ಸದಸ್ಯನಾಗಿದ್ದಾನೆ ಎಂಬುದನ್ನು ಒಪ್ಪಲು ಸಾಧ್ಯವೇ? ಎಂಬ ಪ್ರಶ್ನೆಗಳು ಕೇಳಿಬಂದಿವೆ.

“ಶ್ರೀ ತಾಲಿಬ್ ಹುಸೇನ್ ಷಾ, ಡ್ರಜ್ ಕೊಟ್ರಂಕಾ, ಬುಧಾನ್, ರಾಜೌರಿ ಜಿಲ್ಲೆ, ಇವರನ್ನು ತಕ್ಷಣವೇ ಜಾರಿಗೆ ಬರುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಮ್ಮು ಪ್ರಾಂತ್ಯದ ಹೊಸ ಐಟಿ ಮತ್ತು ಸಾಮಾಜಿಕ ಮಾಧ್ಯಮ ಉಸ್ತುವಾರಿಯಾಗನಿ ನೇಮಿಸಲಾಗಿದೆ” ಎಂದು ಬಿಜೆಪಿ J&K ಅಲ್ಪಸಂಖ್ಯಾತ ಮೋರ್ಚಾ ಮೇ 09 ರಂದು ಆದೇಶ ಹೊರಡಿಸಿತ್ತು. ಈ ಎರಡು ತಿಂಗಳೊಳಗೆ ಆತ ಭಯೋತ್ಪಾದನಾ ಚಟುವಟಿಕೆ ನಡೆಸಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಮಾನವ ಸಂಬಂಧಗಳನ್ನು ದ್ವೇಷದಿಂದ ಕದಡಿ ದೇಶ ಕಟ್ಟಲು ಸಾಧ್ಯವಿಲ್ಲ: ರಹಮತ್ ತರೀಕೆರೆ

ಉಗ್ರರನ್ನು ಹಿಡಿದುಕೊಟ್ಟ ರಿಯಾಸಿ ಜಿಲ್ಲೆಯ ತುಕ್ಸಾನ್‌ನ ಗ್ರಾಮಸ್ಥರ ಧೈರ್ಯವನ್ನು ಶ್ಲಾಘಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಪೊಲೀಸ್ ಮುಖ್ಯಸ್ಥರು ರಿಯಾಸಿ ಗ್ರಾಮಸ್ಥರಿಗೆ 2 ಲಕ್ಷ ರೂ ನಗದು ಬಹುಮಾನ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿಯ ತುಂಡು ಬಿಸ್ಕೆಟ್ ತಿನ್ನುವ ಹಲ್ಕಟ್, ಕಜ್ಜಿ, ಕಂತ್ರಿ ನಾಯಿ ಒಂದು ಯಾವಾಗ್ಲೂ ಒಂದು ಧರ್ಮದ ವಿರುದ್ಧ ಬೊಗಳತಿತ್ತು ಇವಾಗ ಬಂದು ಬೊಗಳೋಕೆ ಯಾವುದಾದರು ಇನ್ನೊಂದು ಕಂತ್ರಿ ನಾಯಿ ತೊಡ್ಡು ಸಿಕ್ಕಿದಿಯಾ ಬಾಯಲ್ಲಿ..? ಅಪ್ಪನಿಗೆ ಹುಟ್ಟಿದವರು ಮಾತ್ರ ಸತ್ಯ ಹೇಳ್ತಾರೆ ಮತ್ತೆ ಬೇರೆಯವರು ಹೇಳುವ ಸತ್ಯವನ್ನು ಒಪ್ಪುತ್ತಾರೆ. ಇಡೀ ಕ್ರಿಕೆಟ್ ತಂಡಕ್ಕೆ ಹುಟ್ಟಿದೋರು ಬರಿ ಬೊಗಳೆ ಬಿಟ್ಕೊಂಡ ದೇಶದ ಸ್ವಾಸ್ತ್ಯ ಹಾಳು ಮಾಡತಾವೆ ### ಮಕ್ಕಳು

  2. ಕೆಲವು ಸಮುದಾಯಕ್ಕೆ ಸೇರಿದವರನ್ನ ಯಾವುದೇ ಹುದ್ದೆಗೆ ನೇಮಿಸಿದರೂ ಆ ಹುದ್ದೆಯಿಂದ ನಿರ್ಗಮಿಸಿದ ನಂತರ ದೇಶ ದ್ರೋಹಿಗಳೇ ಆಗೋದು ಅನ್ನೋದು ಅವರ ಮೂಲದಲ್ಲಿಯೇ ಅಡಗಿದೆ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...