Homeಮುಖಪುಟಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

- Advertisement -
- Advertisement -

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದ ಜೊತೆಗೆ ಜಮ್ಮು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಾಮಾಜಿಕ ಮಾಧ್ಯಮ ಉಸ್ತುವಾರಿ ಕೂಡ ಆಗಿದ್ದ ಎಂಬ ಸ್ಪೋಟಕ ಮಾಹಿತಿ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

ಇಂದು ಬೆಳಗ್ಗೆ ಜಮ್ಮುವಿನ ರಿಯಾಸಿ ಪ್ರದೇಶದಲ್ಲಿ ಉಗ್ರರಾದ ತಾಲಿಬ್ ಹುಸೇನ್ ಶಾ ಮತ್ತು ಆತನ ಸಹಚರರನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ. ಅವರಿಂದ ಎರಡು ಎಕೆ ರೈಫಲ್‌ಗಳು, ಹಲವಾರು ಗ್ರೆನೇಡ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.

ಮೇ 9 ರಂದು ಬಿಜೆಪಿಯು ಜಮ್ಮು ಪ್ರಾಂತ್ಯದಲ್ಲಿ ಪಕ್ಷದ ಐಟಿ ಮತ್ತು ಸಾಮಾಜಿಕ ಮಾಧ್ಯಮದ ಉಸ್ತುವಾರಿಯಾಗಿ ತಾಲಿಬ್ ಹುಸೇನ್ ಶಾನನ್ನು ನೇಮಿಸಲಾಗಿತ್ತು ಎನ್ನಲಾಗಿದೆ. ಜಮ್ಮು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರೊಂದಿಗೆ ಉಗ್ರ ಶಾ ಇರುವ ಹಲವರು ಫೋಟೊಗಲು ವೈರಲ್ ಆಗುತ್ತಿವೆ.

ಭಯೋತ್ಪಾದಕನೊಬ್ಬನನ್ನು ಪಕ್ಷದ ಐಟಿ ಸೆಲ್ ಮುಖ್ಯಸ್ಥನಾಗಿ ಬಿಜೆಪಿ ನೇಮಿಸಿದೆ, ಹೆಸರಿಗೆ ಮಾತ್ರ ಭಯೋತ್ಪಾದನೆ ವಿರುದ್ಧ ಹೋರಾಡುವ ಬಿಜೆಪಿಯು ಭಯೋತ್ಪಾದಕರನ್ನೇ ಸಾಕುತ್ತಿದೆ ಎಂದು ಹಲವಾರು ಜನರು ದೂರಿದ್ದಾರೆ.

ಬಿಜೆಪಿ ಪಕ್ಷದಲ್ಲಿಯೇ ಉಗ್ರಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷವು, “ಆನ್‌ಲೈನ್ ಸದಸ್ಯತ್ವ ವ್ಯವಸ್ಥೆಯು ಯಾವುದೇ ಹಿನ್ನೆಲೆ ಪರಿಶೀಲನೆಯಿಲ್ಲದೆ ಜನರನ್ನು ಪಕ್ಷಕ್ಕೆ ಸೇರಲು ಅನುವು ಮಾಡಿಕೊಡುತ್ತದೆ” ಎಂದು ಹೇಳುವ ಮೂಲಕ ಜಾರಿಕೊಳ್ಳಲು ಯತ್ನಿಸಿದೆ.

ಬಿಜೆಪಿ ವಕ್ತಾರ ಆರ್.ಎಸ್.ಪಠಾನಿಯಾ ಮಾತನಾಡಿ, “ಇದು ಹೊಸ ಮಾದರಿಯಾಗಿದೆ. ಉಗ್ರರು ಬಿಜೆಪಿಗೆ ಪ್ರವೇಶ ಪಡೆಯುವುದು, ಅಲ್ಲಿ ಹೆಸರು ಗಳಿಸುವುದು ನಂತರ ಉನ್ನತ ನಾಯಕತ್ವವನ್ನು ಕೊಲ್ಲುವ ಸಂಚು ಮಾಡಿದ್ದರು, ಆದರೆ ಅದನ್ನು ಪೊಲೀಸರು ಭೇದಿಸಿದ್ದರು” ಎಂದು ಹೇಳಿದ್ದಾರೆ.

“ಗಡಿಯಲ್ಲಿ, ಭಯೋತ್ಪಾದನೆಯನ್ನು ಹರಡಲು ಬಯಸುವವರು ಇದ್ದಾರೆ. ಈಗ ಯಾರು ಬೇಕಾದರೂ ಆನ್‌ಲೈನ್‌ನಲ್ಲಿ ಬಿಜೆಪಿ ಸದಸ್ಯರಾಗಬಹುದು. ಇದು ಒಂದು ನ್ಯೂನತೆ ಎಂದು ನಾನು ಹೇಳುತ್ತೇನೆ ಏಕೆಂದರೆ ಅಪರಾಧ ದಾಖಲೆ ಅಥವಾ ಜನರ ಪೂರ್ವಾಪರಗಳನ್ನು ಪರಿಶೀಲಿಸುವ ವ್ಯವಸ್ಥೆ ಇಲ್ಲ” ಎಂದು ಅವರು ಹೇಳಿದರು.

ಸಾಮಾನ್ಯ ಸದಸ್ಯರಾದರೆ ಬೇರೆ ವಿಚಾರ. ಆದರೆ ಬಂಧಿಸಲ್ಪಟ್ಟಿರುವ ಉಗ್ರನಿಗೆ ಸಾಮಾಜಿಕ ಜಾಲತಾಣ ನಿರ್ವಹಣೆಯ ಹುದ್ದೆ ನೀಡಲಾಗಿದೆ. ಅಲ್ಲದೆ ಪಕ್ಷದ ಹಿರಿಯರೊಂದಿಗೆ ಆತನಿಗೆ ಉತ್ತಮ ಸಂಬಂಧವಿರುವುದು ಫೋಟೊಗಳಿಂದ ತಿಳಿದುಬಂದಿದೆ. ಇಷ್ಟಿದ್ದು ಆತ ಆನ್‌ಲೈನ್ ಮೂಲಕ ಸದಸ್ಯನಾಗಿದ್ದಾನೆ ಎಂಬುದನ್ನು ಒಪ್ಪಲು ಸಾಧ್ಯವೇ? ಎಂಬ ಪ್ರಶ್ನೆಗಳು ಕೇಳಿಬಂದಿವೆ.

“ಶ್ರೀ ತಾಲಿಬ್ ಹುಸೇನ್ ಷಾ, ಡ್ರಜ್ ಕೊಟ್ರಂಕಾ, ಬುಧಾನ್, ರಾಜೌರಿ ಜಿಲ್ಲೆ, ಇವರನ್ನು ತಕ್ಷಣವೇ ಜಾರಿಗೆ ಬರುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಮ್ಮು ಪ್ರಾಂತ್ಯದ ಹೊಸ ಐಟಿ ಮತ್ತು ಸಾಮಾಜಿಕ ಮಾಧ್ಯಮ ಉಸ್ತುವಾರಿಯಾಗನಿ ನೇಮಿಸಲಾಗಿದೆ” ಎಂದು ಬಿಜೆಪಿ J&K ಅಲ್ಪಸಂಖ್ಯಾತ ಮೋರ್ಚಾ ಮೇ 09 ರಂದು ಆದೇಶ ಹೊರಡಿಸಿತ್ತು. ಈ ಎರಡು ತಿಂಗಳೊಳಗೆ ಆತ ಭಯೋತ್ಪಾದನಾ ಚಟುವಟಿಕೆ ನಡೆಸಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಮಾನವ ಸಂಬಂಧಗಳನ್ನು ದ್ವೇಷದಿಂದ ಕದಡಿ ದೇಶ ಕಟ್ಟಲು ಸಾಧ್ಯವಿಲ್ಲ: ರಹಮತ್ ತರೀಕೆರೆ

ಉಗ್ರರನ್ನು ಹಿಡಿದುಕೊಟ್ಟ ರಿಯಾಸಿ ಜಿಲ್ಲೆಯ ತುಕ್ಸಾನ್‌ನ ಗ್ರಾಮಸ್ಥರ ಧೈರ್ಯವನ್ನು ಶ್ಲಾಘಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಪೊಲೀಸ್ ಮುಖ್ಯಸ್ಥರು ರಿಯಾಸಿ ಗ್ರಾಮಸ್ಥರಿಗೆ 2 ಲಕ್ಷ ರೂ ನಗದು ಬಹುಮಾನ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿಯ ತುಂಡು ಬಿಸ್ಕೆಟ್ ತಿನ್ನುವ ಹಲ್ಕಟ್, ಕಜ್ಜಿ, ಕಂತ್ರಿ ನಾಯಿ ಒಂದು ಯಾವಾಗ್ಲೂ ಒಂದು ಧರ್ಮದ ವಿರುದ್ಧ ಬೊಗಳತಿತ್ತು ಇವಾಗ ಬಂದು ಬೊಗಳೋಕೆ ಯಾವುದಾದರು ಇನ್ನೊಂದು ಕಂತ್ರಿ ನಾಯಿ ತೊಡ್ಡು ಸಿಕ್ಕಿದಿಯಾ ಬಾಯಲ್ಲಿ..? ಅಪ್ಪನಿಗೆ ಹುಟ್ಟಿದವರು ಮಾತ್ರ ಸತ್ಯ ಹೇಳ್ತಾರೆ ಮತ್ತೆ ಬೇರೆಯವರು ಹೇಳುವ ಸತ್ಯವನ್ನು ಒಪ್ಪುತ್ತಾರೆ. ಇಡೀ ಕ್ರಿಕೆಟ್ ತಂಡಕ್ಕೆ ಹುಟ್ಟಿದೋರು ಬರಿ ಬೊಗಳೆ ಬಿಟ್ಕೊಂಡ ದೇಶದ ಸ್ವಾಸ್ತ್ಯ ಹಾಳು ಮಾಡತಾವೆ ### ಮಕ್ಕಳು

  2. ಕೆಲವು ಸಮುದಾಯಕ್ಕೆ ಸೇರಿದವರನ್ನ ಯಾವುದೇ ಹುದ್ದೆಗೆ ನೇಮಿಸಿದರೂ ಆ ಹುದ್ದೆಯಿಂದ ನಿರ್ಗಮಿಸಿದ ನಂತರ ದೇಶ ದ್ರೋಹಿಗಳೇ ಆಗೋದು ಅನ್ನೋದು ಅವರ ಮೂಲದಲ್ಲಿಯೇ ಅಡಗಿದೆ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...