Homeಕರ್ನಾಟಕಇಂಧನ ಮತ್ತು ನಗದು ಬಿಕ್ಕಟ್ಟು: ಶಾಲೆಗಳಿಗೆ ರಜೆ ಘೋಷಿಸಿದ ಶ್ರೀಲಂಕಾ

ಇಂಧನ ಮತ್ತು ನಗದು ಬಿಕ್ಕಟ್ಟು: ಶಾಲೆಗಳಿಗೆ ರಜೆ ಘೋಷಿಸಿದ ಶ್ರೀಲಂಕಾ

- Advertisement -
- Advertisement -

ಭಾರಿ ಇಂಧನ ಮತ್ತು ಹಣದ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದ ಶಿಕ್ಷಣ ಸಚಿವಾಲಯವು ಎಲ್ಲಾ ಸರ್ಕಾರಿ ಮತ್ತು ರಾಜ್ಯ-ಅನುಮೋದಿತ ಖಾಸಗಿ ಶಾಲೆಗಳಿಗೆ ಜುಲೈ 4 ರಿಂದ ರಜಾ ವಾರವನ್ನು ಘೋಷಿಸಿದೆ. ಮುಂದಿನ ರಜೆಯ ಅವಧಿಯಲ್ಲಿ ಶಾಲೆಗಳು ಈ ಪಠ್ಯಗಳನ್ನು ಬೋಧಿಸಲಿದೆ ಎಂದು ಶ್ರೀಲಂಕಾದ ಶಿಕ್ಷಣ ಸಚಿವ ಹೇಳಿದ್ದಾರೆ.

“ದೀರ್ಘಕಾಲದ ವಿದ್ಯುತ್ ಕಡಿತದಿಂದಾಗಿ ಕೊಲಂಬೊ ನಗರ ಮಿತಿಗಳಲ್ಲಿನ ಎಲ್ಲಾ ಸರ್ಕಾರಿ ಮತ್ತು ಸರ್ಕಾರಿ-ಅನುಮೋದಿತ ಖಾಸಗಿ ಶಾಲೆಗಳು ಮತ್ತು ಇತರ ಪ್ರಾಂತ್ಯಗಳ ಇತರ ಪ್ರಮುಖ ನಗರಗಳಲ್ಲಿನ ಶಾಲೆಗಳನ್ನು ಮುಂದಿನ ವಾರದಲ್ಲಿ ಮುಚ್ಚಲಾಗುವುದು” ಎಂದು ಶಿಕ್ಷಣ ಸಚಿವಾಲಯವು ಭಾನುವಾರ ಪ್ರಕಟಿಸಿದೆ ಎಂದು ಡೈಲಿ ಮಿರರ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀಲಂಕಾ ಸರ್ಕಾರವೂ ಈ ಹಿಂದೆ ಕೂಡಾ ಜೂನ್ 18 ರಂದು ಎಲ್ಲಾ ಶಾಲೆಗಳನ್ನು ಒಂದು ವಾರ ಮುಚ್ಚುವುದಾಗಿ ಘೋಷಿಸಿತ್ತು.

ಇದನ್ನೂ ಓದಿ: ಶ್ರೀಲಂಕಾ ಬಿಕ್ಕಟ್ಟಿನ ಬೀಜಗಳು

ಶ್ರೀಲಂಕಾ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿ ನಿಹಾಲ್ ರಣಸಿಂಗ್ ಅವರು ಶಾಲೆಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸುವಂತೆ ಕೇಳಿಕೊಂಡಿದ್ದು, “ಸಾರಿಗೆಯ ತೊಂದರೆಗಳು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪ್ರಾಂಶುಪಾಲರ ಮೇಲೆ ಪರಿಣಾಮ ಬೀರದ ಪರಿಸ್ಥಿತಿಗಳಲ್ಲಿ ವಿಭಾಗೀಯ ಮಟ್ಟದಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳೊಂದಿಗೆ ತರಗತಿಗಳನ್ನು ನಡೆಸಲು ಅನುಮತಿಸಲಾಗುವುದು” ಎಂದು ಹೇಳಿದ್ದಾರೆ.

ವಾರದ ದಿನಗಳಲ್ಲಿ ಆನ್‌ಲೈನ್ ಬೋಧನೆಗೆ ಅನುಕೂಲವಾಗುವಂತೆ ಶ್ರೀಲಂಕಾದ ಲೋಕೋಪಯೋಗಿ ಆಯೋಗವು (PUCSL) ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಕಡಿತಗೊಳಿಸದಿರಲು ಒಪ್ಪಿಕೊಂಡಿದೆ ಎಂದು ಅವರು ಘೋಷಿಸಿದ್ದಾರೆ ಎಂದು ಡೈಲಿ ಮಿರರ್ ವರದಿ ಮಾಡಿದೆ.

ಶ್ರೀಲಂಕಾ ಈ ಹಿಂದೆ ಮೇಲ್ಮಧ್ಯಮ ಆದಾಯದ ದೇಶವಾಗಿತ್ತು. 1948 ರಲ್ಲಿ ದೇಶವು ಸ್ವಾತಂತ್ರ್ಯ ಗಳಿಸಿದಾಗಿನಿಂದ ದಾಖಲೆಯ ಆರ್ಥಿಕ ಬಿಕ್ಕಟ್ಟಗೆ ಸಿಲುಕಿದೆ. ಕಳೆದ ಮಾರ್ಚ್‌ನಿಂದ ದೇಶದಲ್ಲಿ ತೀವ್ರ ಅರ್ಥಿಕ ಬಿಕ್ಕಟ್ಟು ಪ್ರಾರಂಭವಾಗಿದ್ದು, ಭಾರಿ ಪ್ರತಿಭಟನೆಗಳು ನಡೆಯುತ್ತಿವೆ.

ಇದನ್ನೂ ಓದಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ತೀವ್ರ ಪ್ರತಿಭಟನೆಗಳು ರಾಜಕೀಯ ಅಶಾಂತಿಯನ್ನು ಹುಟ್ಟುಹಾಕಿದ್ದು, ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ಸಹೋದರ ಮಹಿಂದಾ ರಾಜಪಕ್ಸೆ ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಬದಲಾಗಿ ರನಿಲ್ ವಿಕ್ರಮಸಿಂಘೆ ಅವರನ್ನು ಮೇ ತಿಂಗಳಲ್ಲಿ ದೇಶದ ಪ್ರಧಾನಿಯಾಗಿ ನೇಮಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...