Homeಕರ್ನಾಟಕಅನಂತ್ಮಾಣಿ v/s ಸೂಲಿಬೆಲೆ, ಇದು ಟಿಕೆಟ್ ಕೈತಪ್ಪಿದ ಕದನ

ಅನಂತ್ಮಾಣಿ v/s ಸೂಲಿಬೆಲೆ, ಇದು ಟಿಕೆಟ್ ಕೈತಪ್ಪಿದ ಕದನ

- Advertisement -
- Advertisement -

| ಶುದ್ಧೋದನ |

ಉತ್ತರಕನ್ನಡದ ಸೋಶಿಯಲ್ ಮೀಡಿಯಾದಲ್ಲೀಗ ಕೇಸರಿ ಕುಮಾರರಿಬ್ಬರ ಗುದಮುರಗಿ ಜೋರು ಸದ್ದು ಮಾಡುತ್ತಿದೆ. ಬಿಜೆಪಿ ಸಂಸದ ಅನಂತ್‍ಕುಮಾರ್ ಹೆಗ್ಡೆ ಮತ್ತು ಕೇಸರಿ ಭಾಷಣ`ಕೋರ’ ಚಕ್ರವರ್ತಿ ಸೂಲಿಬೆಲೆ ಒಬ್ಬರಿಗೊಬ್ಬರು ಕೆಸರು ಎರಚಿಕೊಳ್ಳುತ್ತಿರೋದು ರೋಚಕವಿದೆ. ಹಾಗೆ ನೋಡಿದರೆ ಮೊನ್ನೆ ಮುಗಿದ ಇಲೆಕ್ಷನ್ ಸಂದರ್ಭದಲ್ಲೇ ಮಾಣಿಗೆ ಟಿಕೆಟ್ ಕೊಡಬಾರದೆಂದು ದೊಡ್ಡ ಕೂಗೆದ್ದಿತ್ತು. ಆತನ ಬದಲಿಗೆ ನಮೋ ಬ್ರಿಗೇಡ್‍ನ ಪ್ರೊಪ್ರೇಟರ್ ಚಕ್ರವರ್ತಿ ಸೂಲಿಬೆಲೆ ಹೆಸರು ತೇಲಿ ಬಂದಿತ್ತು. ಸ್ಥಳೀಯ ಆರೆಸ್ಸೆಸ್-ಹಿಂಜಾವೇ ಪಡೆಯೇ ಮಾಣಿ ವಿರುದ್ಧ ಮುರಕೊಂಡು ಬಿದ್ದಿತ್ತು. ಮತದಾರರು ಮತ್ತು ಬಿಜೆಪಿ ಕಾರ್ಯಕರ್ತರ ತಿರಸ್ಕಾರ, ತಾತ್ಸಾರಕ್ಕೆ ತುತ್ತಾಗಿರುವ ಮಾಣಿಗೆ ಟಿಕೆಟ್ ಕೊಡಬಾರದೆಂದು ಉತ್ತರ ಕನ್ನಡದ ಆರೆಸ್ಸೆಸ್‍ನ ಒಂದು ತಂಡ ಪ್ರಬಲ ಹೋರಾಟ ಮಾಡಿತ್ತು. ಉತ್ತರ ಕನ್ನಡ ಸಂಘಪರಿವಾರದ ಕಲ್ಲಡ್ಕ, ಹನ್ಮಂತ ಶಾನಭಾಗ್ ಎರಡೂ ಕಡೆ “ಆಟ” ಆಡಿದ್ದರು.

ಅಂತಿಮವಾಗಿ ಮಾಣಿಗೇ ಟಿಕೆಟ್ ಸಿಕ್ಕಿತು. ಆತ ಗೆದ್ದೂ ಬಿಟ್ಟ. ಆದರೆ ಬಿಜೆಪಿ ಒಳಮನೆಯ ಬೇಗುದಿ ಕಮ್ಮಿ ಆಗಲಿಲ್ಲ. ಸೂಲಿಬೆಲೆ ಟೀಮಂತೂ ಮೋದಿ ಮತ ಭಿಕ್ಷೆಯಿಂದ ಗೆದ್ದಿರುವ ಮಾಣಿ ಧೀಮಾಕಿಂದ ಬೀಗುವುದು ಬೇಕಾಗಿಲ್ಲ ಎಂಬ ರಹಸ್ಯ ಅಭಿಯಾನವನ್ನೇ ಹುಟ್ಟುಹಾಕಿತು! ಮಾಣಿ ಮಾಡಿದ ಜನದ್ರೋಹದ ಪಾಪಕ್ಕೇ ಮಂತ್ರಿಯಾಗದೆ ಮೂಲೆ ಪಾಲಾಗಿದ್ದಾನೆಂದು ಆತನ ವಿರೋಧಿ ಬಳಗ ತಿವಿಯತೊಡಗಿತ್ತು. ಇದೆಲ್ಲದರಿಂದ ಮಾಣಿ ಕೊತಕೊತ ಕುದಿಯುತ್ತಲೇ ಇದ್ದ. ತನಗೆ ಅಡ್ಡಗಾಲು ಹಾಕಿದವರನ್ನೆಲ್ಲಾ ಒಬ್ಬೊಬ್ಬರಾಗಿ ಸಂಹರಿಸಲು ಆತ ಸ್ಕೆಚ್ ರೆಡಿಮಾಡಿಕೊಂಡಿದ್ದ. ಸಂಘಪರಿವಾರದಲ್ಲಿ ತನಗಿರುವ ಸಂಪರ್ಕ ಬಳಸಿಕೊಂಡು ಮಾಣಿ ಈಗ ಜಿಲ್ಲಾ ಚೆಡ್ಡಿ ಪಡೆಯಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸುತ್ತಿದ್ದಾನೆ. ತನಗೆ ವಿರೋಧ ಮಾಡಿದ ಜಿಲ್ಲಾ ಆರೆಸ್ಸೆಸ್, ಹಿಂಜಾವೇ ಮುಖಂಡರನ್ನು ಸಂಘಟನೆಯ ಹುದ್ದೆಗಳಿಂದ ಕಿತ್ತುಹಾಕಿಸುತ್ತಿದ್ದಾನೆ. ಈಗಾಗಲೇ ಜಿಲ್ಲಾಮಟ್ಟದ ಒಬ್ಬ ಕಾರ್ಯವಾಹಕ ಮತ್ತು ಭಟ್ಕಳದ ಆರೆಸ್ಸೆಸ್ ಲೀಡರ್‍ಗೆ ಸ್ಥಾನ ಚ್ಯುತಿ ಮಾಡಲಾಗಿದೆ. ಎಲ್ಲಾ ತಾಲ್ಲೂಕಿನ ಬಿಜೆಪಿ-ಆರೆಸ್ಸೆಸ್‍ನಲ್ಲಿ ಮಾಣಿ ಮಾರಿಹಬ್ಬ ನಡೆಯಲಿದೆ!

ಇನ್ನೊಂದೆಡೆ ಮಾಣಿ ಬಂಡವಾಳ ಬಯಲು ಮಾಡುವ ಆನ್‍ಲೈನ್ ಕಸರತ್ತು ನಡೆಯಲಾರಂಭಿಸಿದೆ. ಚಕ್ರವರ್ತಿ ಸೂಲಿಬೆಲೆ, ಮಾಣಿ ಅಯೋಗ್ಯತೆಯನ್ನು ವ್ಯವಸ್ಥಿತವಾಗಿ ಜಗಜ್ಜಾಹೀರು ಮಾಡುತ್ತಿದ್ದಾನೆ. ಉತ್ತರ ಕನ್ನಡದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆಯ ಸೋಷಿಯಲ್ ಮೀಡಿಯಾ ಅಭಿಯಾನ ತನ್ನ ತೇಜೋವಧೆ ಮಾಡುವ ಹಿಕಮತ್ತೆಂಬ ಭಾವನೆ ಮಾಣಿಯದು. ಆಸ್ಪತ್ರೆ ಆಗದಿರುವುದು ಸಂಸದನ ಅಸಾಮಥ್ರ್ಯ ಬಿಂಬಿಸುತ್ತಿದೆ ಎಂಬಂತೆ ಪ್ರಚಾರ ಮಾಡಲಾಗಿತ್ತು. ಇದರ ಹಿಂದೆ ತನ್ನ ಹಿತಶತೃ ಸೂಲಿಬೆಲೆ ಇದ್ದಾನೆಂಬ ಖಚಿತ ನಂಬಿಕೆ ಮಾಣಿಯದು. ಹಾಗಾಗಿ ಆತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಇಡುವವರನ್ನೇ ತನ್ನ ಟ್ವಿಟರ್ ಖಾತೆಗೆ ಪ್ರವೇಶಿಸದಂತೆ ನಿಷೇಧ ಹೇರಿದ್ದರು. ಅಷ್ಟೇ ಅಲ್ಲ, ಆಸ್ಪತ್ರೆಗಾಗಿ ಮನವಿ ಹಿಡಿದುಕೊಂಡು ಬಂದ ಹುಡುಗರಿಗೆ ರೇಗಿ ಸೋಷಿಯಲ್ ಮೀಡಿಯಾದವರಿಂದಲೇ ಆಸ್ಪತ್ರೆ ಮಾಡಿಸಿಕೊಳ್ಳಿ ಎಂದಬ್ಬರಿಸಿದ್ದ.

ಈ ಜಗಳ ಸೂಲಿಬೆಲೆ ಮತ್ತು ಅನಂತ್ಮಾಣಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಾಚಾಮಗೋಚರವಾಗಿ ಬೈದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ. ಇವರ ಕಾಲೆಳೆದಾಟ ಫೇಸ್ಬುಕ್, ವಾಟ್ಸಾಪ್‍ನಲ್ಲಿ ಕದನ ಕುತೂಹಲ ಕೆರಳಿಸಿದೆ. ಗೆದ್ದವರ ಈ ಗದ್ದಲ ವಿರೋಧ ಪಕ್ಷಗಳಿಗೆ ಮಜಾ ನೀಡುತ್ತಿದ್ದರೆ, ಬಿಜೆಪಿಯಲ್ಲಿ ಮುಜುಗರ ಮೂಡಿಸಿದೆ.

ಇದೆಲ್ಲದರಿಂದ ಒಂದು ಹಂತದಲ್ಲಿ ತಬ್ಬಿಬ್ಬಾದ ಸೂಲಿಬೆಲೆ ಜಗಳ ಸಾಕು, ಕೆಲಸ ಮಾಡೋಣ ಎಂಬ ಟ್ವೀಟ್ ಮಾಡಿದರೂ ಆರೋಪ-ಪ್ರತ್ಯಾರೋಪದ ಬಯಲಾಟ ಮಾತ್ರ ನಿಂತಿಲ್ಲ. ಮೋದಿ ಮತ ಭಿಕ್ಷೆಯಿಂದ ಗೆದ್ದ ಸಂಸದರು ಧಿಮಾಕು ತೋರಿಸದೆ ಕೆಲಸ ಮಾಡಬೇಕು ಎಂದು ಸೂಲಿಬೆಲೆ ಟ್ವಿಟಿಸಿದ್ದೇ ಬಿಜೆಪಿಯಲ್ಲಿ ಕಂಪನ ಸೃಷ್ಠಿಯಾಗಲು ಮೂಲಕಾರಣ. ಸದಾನಂದ ಗೌಡ, ಶೋಭಾ ಕರಂದ್ಲಾಜೆಯಂಥ ದೊಡ್ಡವರೆ ಸೂಲಿಬೆಲೆ ಮಾತಿಂದ ಕೆರಳಿ ಕೆಂಡವಾದರು. ನಮಗೆ ಬುದ್ಧಿ ಹೇಳಲು ಚಕ್ರವರ್ತಿ ಯಾರು? ಎಂದು ಎಗರಾಡಿದರು.

ತನಗೆ ಟಿಕೆಟ್ ತಪ್ಪಲು ಕಾರಣವಾದ ನಾಯಕರನ್ನು ನಿರ್ದಿಷ್ಟವಾಗಿ ಗುರಿಮಾಡಿಕೊಂಡೇ ಸೂಲಿಬೆಲೆ ಸಂಸದರ ಬಣ್ಣ ಬಯಲಾಗಿಸುತ್ತಿದ್ದಾನೆ. ಇದು ಬಿಜೆಪಿಯ ಅಧಿಕಾರಸ್ಥರ ಚೇಲಾಗಳನ್ನು ಕೆರಳಿಸಿದೆ. ಜನಪ್ರತಿನಿಧಿಗಳು ಕೆಲಸ ಮಾಡಲಿ ಎಂದು ಹೇಳೋದು ತಪ್ಪೇನಲ್ಲ. ಆದರೆ ಹಾಗೆ ಹೇಳಿದ್ದು ಸೂಲಿಬೆಲೆಯಾದ್ದರಿಂದ ಬಿಜೆಪಿಯಲ್ಲಿ ಬೆಂಕಿಹೊತ್ತಿಕೊಂಡಿತು. ತನ್ನಿಂದಾಗಿಯೇ ಕರ್ನಾಟಕದಲ್ಲಿ ಬಿಜೆಪಿಯ 25 ಸಂಸದರು ಗೆದ್ದಿದ್ದಾರೆಂದು ಸೂಲಿಬೆಲೆ ಹೇಳಿದ್ದಾನೆಂದು ಕಿಡಿ ಹೊತ್ತಿಸಲಾಯಿತು. ಸೂಲಿಬೆಲೆ ಹಾಗೆ ಹೇಳಿಯೇ ಇಲ್ಲವೆಂದು ಆತನ ಬೆಂಬಲಿಗ ನೆಟ್ಟಿಗರ ವಾದ. ಅಸಲಿಗೆ ಆತ ಹಾಗೆ ಹೇಳಿಯೂ ಇರಲಿಲ್ಲ, ಅಂಥ ಸಂದೇಶವೂ ಲಭ್ಯವಿಲ್ಲ. ಆರು ಸಲ ಸಂಸದರಾದವರಿಗೆ, ಎಂಟು ಸಲ ಮಂತ್ರಿಯಾದವರಿಗೆ ಜನಸಾಮಾನ್ಯರ ಅಳಲಿಗೆ ಸ್ಪಂದಿಸಲಾಗದಾ? ಎಂದಾತ ಟ್ವಿಟಿಸಿದ್ದನಷ್ಟೇ. ಇದು ಮಾಣಿಗೆ ಚೆಡ್ಡಿಯೊಳಗೆ ಇರುವೆ ಕಡಿದಂತೆ ಚಡಪಡಿಕೆ ತಂದಿದೆ.

ಇದರ ಬೆನ್ನಿಗೇ ಕೊಡಗಿನಲ್ಲೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿತ್ತು. ಅದಕ್ಕೆ ಅಲ್ಲಿಯ ಸಂಸದ ತಕ್ಷಣ ಸ್ಪಂದಿಸಿದ್ದಾರೆ. ಉ.ಕನ್ನಡದ ಎಂಪಿ ಒಣ ರುಬಾಬು ಮಾಡುತ್ತ ತಲೆ ತಪ್ಪಿಸಿಕೊಳ್ಳುತ್ತಿದ್ದ. ಈ ಹೊತ್ತಲ್ಲಿ ಸೂಲಿಬೆಲೆ ಮಾಡಿದ ಟ್ವೀಟ್ ಮಾಣಿ ಬೆಂಬಲಿಗರಲ್ಲಿ ಆಕ್ರೋಶ ಮೂಡಿಸಿದೆ. ಈಗ ಟ್ರೋಲ್‍ಗಳು ಬರಪೂರ ನಡೆಯುತ್ತಿದೆ. ಬಿಜೆಪಿಯೊಳಗಿನ ಬಡಿದಾಟ ದಿನಕ್ಕೊಂದು ಆಯಾಮ ಪಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...