Homeಮುಖಪುಟರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ...

ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ತಿರುಚಿದ್ದ ಸುದ್ದಿ ಪ್ರಸಾರ ಮಾಡಿದ್ದ ಝೀ ನ್ಯೂಸ್‌ ನಿರೂಪಕ ರೋಹಿತ್ ರಂಜನ್ ರನ್ನು ನೋಯ್ಡಾ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಮೊದಲು ಛತ್ತೀಸ್‌ಘಡ ರಾಜ್ಯದಲ್ಲಿ ಝೀ ನ್ಯೂಸ್ ಮತ್ತು ಅದರ ನಿರೂಪಕನ ವಿರುದ್ಧ ದೂರು ದಾಖಲಾಗಿತ್ತು. ಹಾಗಾಗಿ ಛತ್ತೀಸ್‌ಘಡ ಪೊಲೀಸರು ಆತನ ಬಂಧನಕ್ಕೆ ಮುಂದಾಗಿದ್ದರು. ಆದರೆ ಆ ಬಂಧನವನ್ನು ತಪ್ಪಿಸಲು ಉತ್ತರ ಪ್ರದೇಶದ ಪೊಲೀಸರು ವಶಕ್ಕೆ ಪಡೆದು ರಕ್ಷಣೆ ನೀಡಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ನಡೆದ ಹತ್ಯೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮಿಸಿದ್ದು, ಹಂತಕರನ್ನು ‘ಮಕ್ಕಳು’ ಎಂದು ಹೇಳಿದ್ದಾರೆ ಎಂದು ತಿರುಚಿದ ಸುಳ್ಳು ಸುದ್ದಿಯನ್ನು ಝೀ ನ್ಯೂಸ್ ಪ್ರಸಾರ್ ಮಾಡಿತ್ತು. ನಿರೂಪಕ ರೋಹಿತ್ ರಂಜನ್ “ರಾಹುಲ್ ಗಾಂಧಿಯ ಪೂರ್ವಗ್ರಹವನ್ನು ಮತ್ತೊಮ್ಮೆ ನೋಡಿ. ಉದಯಪುರದ ಆರೋಪಿಗಳನ್ನು ಅವರು ಮಕ್ಕಳು ಎಂದು ಕರೆದಿದ್ದಾರೆ. ಅವರು ಮಕ್ಕಳೊ ಅಥವಾ ಆತಂಕವಾದಿಗಳೊ” ಎಂದು ಹೇಳಿ ದುರುದ್ದೇಶಪೂರಿತವಾಗಿ ಕೇರಳದ ವಯನಾಡ್‌ನ ಸುದ್ದಿಯನ್ನು ಲಿಂಕ್ ಮಾಡಿ ಮಾಧ್ಯಮದಲ್ಲಿ ತಪ್ಪಾಗಿ ವರದಿ ಮಾಡಿದ್ದರು.

ಕನೌಜ್‌ನ ಬಿಜೆಪಿ ಸಂಸದ ಸುಬ್ರತಾ ಪಾಠಕ್, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರಾಜವರ್ಧನ್ ರಾಥೋಡ್, ಬಿಜ್ನೋರ್‌ನ ಚಂದ್‌ಪುರ ವಿಧಾನಸಭೆಯ ಶಾಸಕ ಕಮಲೇಶ್ ಸೈನಿ ಸೇರಿದಂತೆ ಹಲವರು ಈ ವಿಡಿಯೋವನ್ನು ಹಂಚಿಕೊಂಡಿದ್ದರು.

ಇದರ ನಂತರ ಕಾಂಗ್ರೆಸ್‌ ಪಕ್ಷದ ನಾಯಕರು ಮತ್ತು ಸಮಾಜಿಕ ಮಾಧ್ಯಮಗಳ ಬಳಕೆದಾರರು ಝೀ ನ್ಯೂಸ್ ತಪ್ಪಾಗಿ ವರದಿ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೆ ಅಲ್ಲದೆ, ಛತ್ತೀಸ್‌ಗಡದ ರಾಯಪುರದಲ್ಲಿ ಝೀ ನ್ಯೂಸ್ ಮತ್ತು ನಿರೂಪಕ ರಂಜಿತ್ ರಂಜನ್ ವಿರುದ್ಧ ಎಫ್‌ಐಆರ್‌ ಕೂಡಾ ದಾಖಲಾಗಿತ್ತು.

ವಾಸ್ತವದಲ್ಲಿ ರಾಹುಲ್ ಗಾಂಧಿ ಉದಯಪುರದ ಹಂತಕರನ್ನು ಎಲ್ಲಿಯೂ ಮಕ್ಕಳು ಎಂದು ಕರೆದಿಲ್ಲ ಮತ್ತು ಅವರನ್ನು ಕ್ಷಮಿಸಿಲ್ಲ. ಬದಲಿಗೆ “ಉದಯಪುರದಲ್ಲಿ ನಡೆದ ಭೀಕರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ ಕ್ರೌರ್ಯದಿಂದ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಶಿಕ್ಷೆಯಾಗಬೇಕು.ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಸೋಲಿಸಬೇಕು. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ದಯವಿಟ್ಟು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಿ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ ನ್ಯೂಸ್’

ತಮ್ಮ ತಪ್ಪಿಗೆ ಝೀ ನ್ಯೂಸ್ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದು, ತಪ್ಪಿಗೆ ಕಾರಣರಾದ ಇಬ್ಬರು ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾ ಮಾಡಿದ್ದೇವೆ ಎಂದು ಹೇಳಿದೆ.

ಈ ತಿರುಚಿದ ಸುದ್ದಿಯನ್ನು ಪದೇ ಪದೇ ಪ್ರಸಾರ ಮಾಡಿದ ಆರೋಪಕ್ಕಾಗಿ ಅವರನ್ನು ಛತ್ತೀಸ್‌ಗಡ ಪೊಲೀಸರು ಬಂಧಿಸಲು ಉತ್ತರ ಪ್ರದೇಶದ ಪೊಲೀಸರ ಅಡ್ಡಗಾಲು ಹಾಕಿದ್ದಾರೆ. 2018ರಲ್ಲಿ ಚಲನಚಿತ್ರದ ಫೋಟೊವೊಂದನ್ನು ಟ್ವೀಟ್ ಮಾಡಿದ್ದಕ್ಕಾಗಿ ಮತ್ತೊಬ್ಬ ಪತ್ರಕರ್ತ ಮೊಹಮ್ಮದ್ ಜುಬೇರ್‌ರನ್ನು ಒಂದು ವಾರದಿಂದ ಬಂಧನದಲ್ಲಿಡಲಾಗಿದೆ. ಇಂತಹ ತಾರತಮ್ಯವೇಕೆ ಎಂಬ ಪ್ರಶ್ನೆ ಎದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...