Homeಮುಖಪುಟರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ...

ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ತಿರುಚಿದ್ದ ಸುದ್ದಿ ಪ್ರಸಾರ ಮಾಡಿದ್ದ ಝೀ ನ್ಯೂಸ್‌ ನಿರೂಪಕ ರೋಹಿತ್ ರಂಜನ್ ರನ್ನು ನೋಯ್ಡಾ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಮೊದಲು ಛತ್ತೀಸ್‌ಘಡ ರಾಜ್ಯದಲ್ಲಿ ಝೀ ನ್ಯೂಸ್ ಮತ್ತು ಅದರ ನಿರೂಪಕನ ವಿರುದ್ಧ ದೂರು ದಾಖಲಾಗಿತ್ತು. ಹಾಗಾಗಿ ಛತ್ತೀಸ್‌ಘಡ ಪೊಲೀಸರು ಆತನ ಬಂಧನಕ್ಕೆ ಮುಂದಾಗಿದ್ದರು. ಆದರೆ ಆ ಬಂಧನವನ್ನು ತಪ್ಪಿಸಲು ಉತ್ತರ ಪ್ರದೇಶದ ಪೊಲೀಸರು ವಶಕ್ಕೆ ಪಡೆದು ರಕ್ಷಣೆ ನೀಡಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ನಡೆದ ಹತ್ಯೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮಿಸಿದ್ದು, ಹಂತಕರನ್ನು ‘ಮಕ್ಕಳು’ ಎಂದು ಹೇಳಿದ್ದಾರೆ ಎಂದು ತಿರುಚಿದ ಸುಳ್ಳು ಸುದ್ದಿಯನ್ನು ಝೀ ನ್ಯೂಸ್ ಪ್ರಸಾರ್ ಮಾಡಿತ್ತು. ನಿರೂಪಕ ರೋಹಿತ್ ರಂಜನ್ “ರಾಹುಲ್ ಗಾಂಧಿಯ ಪೂರ್ವಗ್ರಹವನ್ನು ಮತ್ತೊಮ್ಮೆ ನೋಡಿ. ಉದಯಪುರದ ಆರೋಪಿಗಳನ್ನು ಅವರು ಮಕ್ಕಳು ಎಂದು ಕರೆದಿದ್ದಾರೆ. ಅವರು ಮಕ್ಕಳೊ ಅಥವಾ ಆತಂಕವಾದಿಗಳೊ” ಎಂದು ಹೇಳಿ ದುರುದ್ದೇಶಪೂರಿತವಾಗಿ ಕೇರಳದ ವಯನಾಡ್‌ನ ಸುದ್ದಿಯನ್ನು ಲಿಂಕ್ ಮಾಡಿ ಮಾಧ್ಯಮದಲ್ಲಿ ತಪ್ಪಾಗಿ ವರದಿ ಮಾಡಿದ್ದರು.

ಕನೌಜ್‌ನ ಬಿಜೆಪಿ ಸಂಸದ ಸುಬ್ರತಾ ಪಾಠಕ್, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರಾಜವರ್ಧನ್ ರಾಥೋಡ್, ಬಿಜ್ನೋರ್‌ನ ಚಂದ್‌ಪುರ ವಿಧಾನಸಭೆಯ ಶಾಸಕ ಕಮಲೇಶ್ ಸೈನಿ ಸೇರಿದಂತೆ ಹಲವರು ಈ ವಿಡಿಯೋವನ್ನು ಹಂಚಿಕೊಂಡಿದ್ದರು.

ಇದರ ನಂತರ ಕಾಂಗ್ರೆಸ್‌ ಪಕ್ಷದ ನಾಯಕರು ಮತ್ತು ಸಮಾಜಿಕ ಮಾಧ್ಯಮಗಳ ಬಳಕೆದಾರರು ಝೀ ನ್ಯೂಸ್ ತಪ್ಪಾಗಿ ವರದಿ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೆ ಅಲ್ಲದೆ, ಛತ್ತೀಸ್‌ಗಡದ ರಾಯಪುರದಲ್ಲಿ ಝೀ ನ್ಯೂಸ್ ಮತ್ತು ನಿರೂಪಕ ರಂಜಿತ್ ರಂಜನ್ ವಿರುದ್ಧ ಎಫ್‌ಐಆರ್‌ ಕೂಡಾ ದಾಖಲಾಗಿತ್ತು.

ವಾಸ್ತವದಲ್ಲಿ ರಾಹುಲ್ ಗಾಂಧಿ ಉದಯಪುರದ ಹಂತಕರನ್ನು ಎಲ್ಲಿಯೂ ಮಕ್ಕಳು ಎಂದು ಕರೆದಿಲ್ಲ ಮತ್ತು ಅವರನ್ನು ಕ್ಷಮಿಸಿಲ್ಲ. ಬದಲಿಗೆ “ಉದಯಪುರದಲ್ಲಿ ನಡೆದ ಭೀಕರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ ಕ್ರೌರ್ಯದಿಂದ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಶಿಕ್ಷೆಯಾಗಬೇಕು.ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಸೋಲಿಸಬೇಕು. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ದಯವಿಟ್ಟು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಿ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ ನ್ಯೂಸ್’

ತಮ್ಮ ತಪ್ಪಿಗೆ ಝೀ ನ್ಯೂಸ್ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದು, ತಪ್ಪಿಗೆ ಕಾರಣರಾದ ಇಬ್ಬರು ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾ ಮಾಡಿದ್ದೇವೆ ಎಂದು ಹೇಳಿದೆ.

ಈ ತಿರುಚಿದ ಸುದ್ದಿಯನ್ನು ಪದೇ ಪದೇ ಪ್ರಸಾರ ಮಾಡಿದ ಆರೋಪಕ್ಕಾಗಿ ಅವರನ್ನು ಛತ್ತೀಸ್‌ಗಡ ಪೊಲೀಸರು ಬಂಧಿಸಲು ಉತ್ತರ ಪ್ರದೇಶದ ಪೊಲೀಸರ ಅಡ್ಡಗಾಲು ಹಾಕಿದ್ದಾರೆ. 2018ರಲ್ಲಿ ಚಲನಚಿತ್ರದ ಫೋಟೊವೊಂದನ್ನು ಟ್ವೀಟ್ ಮಾಡಿದ್ದಕ್ಕಾಗಿ ಮತ್ತೊಬ್ಬ ಪತ್ರಕರ್ತ ಮೊಹಮ್ಮದ್ ಜುಬೇರ್‌ರನ್ನು ಒಂದು ವಾರದಿಂದ ಬಂಧನದಲ್ಲಿಡಲಾಗಿದೆ. ಇಂತಹ ತಾರತಮ್ಯವೇಕೆ ಎಂಬ ಪ್ರಶ್ನೆ ಎದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...