Homeಮುಖಪುಟಸರ್ಕಾರದ ವಿರುದ್ಧ ಅಸಮಾಧಾನ: ಮತ್ತೊಬ್ಬ ಐಎಎಸ್ ಅಧಿಕಾರಿಯ ರಾಜೀನಾಮೆ

ಸರ್ಕಾರದ ವಿರುದ್ಧ ಅಸಮಾಧಾನ: ಮತ್ತೊಬ್ಬ ಐಎಎಸ್ ಅಧಿಕಾರಿಯ ರಾಜೀನಾಮೆ

- Advertisement -
- Advertisement -

ತಮ್ಮ ಸಾಮರ್ಥ್ಯವನ್ನು ಕಡೆಗಣಿಸಿ, ಉಪಯೋಗಕ್ಕೆ ಬಾರದ ಹುದ್ದೆಗಳಿಗೆ ನೇಮಿಸುವ ಮೂಲಕ ತಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿರುವ 2008ರ ಬ್ಯಾಚ್‌ನ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಮತ್ತು ಔಷಧ ಇಲಾಖೆ (ಎಂಇಡಿಡಿ)ಯಲ್ಲಿ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ದೌಲತ್ ದೇಸಾಯಿ ಅವರು ಹಿಂದೆ ಬಿದ್ದಿರಲು ಬಹಳ ಬೇಸರವಾಗುತ್ತಿದೆ ಎಂದು ಹೇಳುವ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ.

ಅವರು MEDD ಗೆ ವರ್ಗಾವಣೆಯಾಗುವ ಮೊದಲು, ಕೊಲ್ಲಾಪುರದ ಜಿಲ್ಲಾಧಿಕಾರಿ ಆಗಿದ್ದರು ಮತ್ತು ಆ ಜಿಲ್ಲೆಯಲ್ಲಿ 2019 ರಲ್ಲಿ ಸಂಭವಿಸಿದ್ದ ಭಾರೀ ಪ್ರವಾಹವನ್ನು ನಿಭಾಯಿಸಿದ್ದರು. ಆನಂತರ ಅವರನ್ನು ಎಂಇಡಿಡಿಗೆ ವರ್ಗಾವಣೆ ಮಾಡಲಾಗಿತ್ತು. ಅದು ಅವರಿಗೆ ಇರಿಸು ಮುರಿಸು ತಂದಿತ್ತು.

ತಮ್ಮ ರಾಜೀನಾಮೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಧೀರ್ಘ ಪೋಸ್ಟ್ ಹಾಕಿರುವ ಅವರು, “ಮಿಶ್ರ ಭಾವನೆಗಳ ನಡುವೆ, ನಾನು ರಾಜೀನಾಮೆ ನೀಡಿ, ಸ್ವಯಂಪ್ರೇರಣೆಯಿಂದ ಹೊರನಡೆದಿದ್ದೇನೆ. ಉಕ್ಕಿನ ಚೌಕಟ್ಟು ಎಂದು ಕರೆಯಲ್ಪಡುವ ಭಾರತೀಯ ಆಡಳಿತ ಸೇವೆಯ ಅಧಿಕಾರ, ಭದ್ರತೆ, ಸ್ಥಾನಮಾನ ಮತ್ತು ಪ್ರತಿಷ್ಠೆಯನ್ನು ಬಿಟ್ಟುಬಿಟ್ಟಿದ್ದೇನೆ! ಏಕೆಂದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ಅತ್ಯಂತ ಸವಾಲಿನ ಅಧಿಕಾರಾವಧಿಯನ್ನು ಸಾಧಿಸಿದ ನಂತರವೂ ಹಿತ್ತಲಿನಲ್ಲಿ ಬಿದ್ದಿರುವುದು ನನಗೆ ಖಿನ್ನತೆಯನ್ನುಂಟು ಮಾಡಿದೆ. ಆ ಕಾರಣದಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ” ಎಂದಿದ್ದಾರೆ.

“ನನ್ನ ಅಧಿಕಾರಾವಧಿಯಲ್ಲಿ ಸ್ಥಾಪಿತ ಮತ್ತು ಶಕ್ತಿಶಾಲಿ ಪಟ್ಟಭದ್ರ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿ, ದುರ್ಬಲ ಮತ್ತು ನಿರ್ಗತಿಕರ ಧ್ವನಿಯನ್ನು ಯಾವಾಗಲೂ ಕೇಳುತ್ತಿದ್ದೆ. ನನ್ನ ಕೈಗಳು ನಡುಗಿದವು, ಆದರೆ ಅವರ ಪರವಾಗಿ ನಿರ್ಧಾರಗಳು ಆಗಲಿಲ್ಲ. ಅದಕ್ಕಾಗಿ ನನ್ನ ವಿರುದ್ಧ ಬಂದ ಟೀಕೆಗಳನ್ನು ಸಂತೋಷದಿಂದ ಎದುರಿಸಿದೆ. ಸಮಾಜದ ಒಳಿತಿಗಾಗಿ ನಿಯಮಗಳು ಮತ್ತು ನಿಬಂಧನೆಗಳ ಚೌಕಟ್ಟಿನೊಳಗೆ ನಾನು ಏನು ಮಾಡಬಹುದೋ ಅದನ್ನು ಮಾಡಿದ್ದೇನೆ. ಸಾರ್ವಜನಿಕ ಹಿತಾಸಕ್ತಿ ಅಪಾಯದಲ್ಲಿದ್ದರೆ ತಾನು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ದೇವನೂರ ಮಹದೇವ ಅವರ ಕಿರುಹೊತ್ತಿಗೆ ’ಆರ್‌ಎಸ್‌ಎಸ್- ಆಳ ಮತ್ತು ಅಗಲ’ದಿಂದ ಆಯ್ದ ಅಧ್ಯಾಯ; ಇಂದು,…

ಈ ಹಿಂದೆ ಸಸಿಕಾಂತ್ ಸೆಂಥಿಲ್ ಮತ್ತು ಕಣ್ಣನ್ ಗೋಪಿನಾಥನ್ ಸಹ ಮೋದಿ ಸರ್ಕಾರ ನೀತಿಗಳಿಂದ ಬೇಸತ್ತು ತಮ್ಮ ಐಎಎಸ್‌ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...