Homeಮುಖಪುಟಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

- Advertisement -
- Advertisement -

ಆಲ್ಟ್‌ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್‌ ಜುಬೇರ್ ಪ್ರಕರಣದಲ್ಲಿ ಏನೋ ತಪ್ಪಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ದೀಪಕ್ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.

ಕಾನೂನು ವಿದ್ಯಮಾನಗಳ ವರದಿಗಳನ್ನು ಮಾಡುವ ‘ಲೈವ್‌ ಲಾ’ ಜಾಲತಾಣದೊಂದಿಗೆ ಮಾತನಾಡಿರುವ ಅವರು, ಜುಬೇರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸಂಗತಿಗಳ ಕುರಿತು ಪ್ರಸ್ತಾಪ ಮಾಡಿದ್ದಾರೆ.

“ಈ ಟ್ವೀಟ್‌ ಮಾಡಿ ನಾಲ್ಕು ವರ್ಷಗಳಾಯಿತು. ಪೋಸ್ಟ್‌ ಮಾಡಲಾಗಿರುವ ಚಲನಚಿತ್ರದ ದೃಶ್ಯವನ್ನು ನಿರ್ಮಿಸಿ 40 ವರ್ಷಗಳಾಗಿದೆ. ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ. ಯಾರೂ ದೂರು ನೀಡಿಲ್ಲ. ಪೊಲೀಸರು ಇದ್ದಕ್ಕಿದ್ದಂತೆ ಹೇಗೆ ಎಚ್ಚರಗೊಂಡರು?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾರ್ವಜನಿಕ ಅಭಿಪ್ರಾಯಕ್ಕೆ ಭಯಬಿದ್ದು ಅನೇಕ ನ್ಯಾಯಾಧೀಶರು ಜಾಮೀನು ನೀಡಲು ಹೆದರುತ್ತಿದ್ದಾರೆ ಎಂದು ಹೇಳುತ್ತಿರುವುದಕ್ಕೆ ಕ್ಷಮೆ ಇರಲಿ. ನಮ್ಮ ಜೈಲುಗಳು ವಿಚಾರಣಾಧೀನ ಕೈದಿಗಳಿಂದ ತುಂಬಿವೆ. ಅವರಲ್ಲಿ 70-80% ಜನರು ಖುಲಾಸೆಯಾಗಿದ್ದಾರೆ. ನ್ಯಾಯಾಧೀಶರು ಮನಸ್ಥಿತಿಯನ್ನು ಬದಲಿಸಿ ದೇಶದ ನಿಯಮವನ್ನು ಅನುಸರಿಸಬೇಕು. ದೇಶದ ನಿಯಮ ಜಾಮೀನು ನೀಡುವುದಾಗಿದೆಯೇ ಹೊರತು ಜೈಲಲ್ಲ ಎಂದು ಜಸ್ಟೀಸ್‌ ದೀಪಕ್‌ ಗುಪ್ತಾ ತಿಳಿಸಿದ್ದಾರೆ.

ಜನರ ಹಕ್ಕುಗಳ ಪಾಲಕರಾಗಿ ಉನ್ನತ ನ್ಯಾಯಾಲಯಗಳು ವಿವಾದಗಳ ತೀರ್ಪುಗಾರರಾಗಿ ಉತ್ತಮ ಕೆಲಸ ಮಾಡುತ್ತಿದ್ದರೂ, ಸುಧಾರಣೆಗೆ ಅವಕಾಶವಿದೆ ಎಂದಿದ್ದಾರೆ.

ಸರಿಯಾದ ಪರೀಕ್ಷೆ ನಡೆಸದೆ ನ್ಯಾಯಾಲಯಗಳು ಜಾಮೀನು ನಿರಾಕರಿಸುವ ಆತಂಕಕಾರಿ ಪ್ರವೃತ್ತಿಯ ಬಗ್ಗೆ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಅಭಿಪ್ರಾಯದ ಭಯದಿಂದ ಅನೇಕ ನ್ಯಾಯಾಧೀಶರು ಜಾಮೀನು ನೀಡಲು ಹೆದರುತ್ತಾರೆ. ಮ್ಯಾಜಿಸ್ಟ್ರೇಟ್‌ಗಳಿಗೆ ತರಬೇತಿ ನೀಡುವ ನ್ಯಾಯಾಂಗ ಅಕಾಡೆಮಿಗಳು ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ನಾವಿದ್ದೇವೆ ಎಂಬುದನ್ನು ಅವರ ಮನಸ್ಸಿನಲ್ಲಿ ತುಂಬಬೇಕು ಎಂದಿದ್ದಾರೆ.

“ನಾನು ‘ದುರುದ್ದೇಶಪೂರಿತ’ ಎಂದು ಹೇಳುವ ಮಟ್ಟಕ್ಕೆ ಹೋಗುವುದಿಲ್ಲ. ಕಾನೂನಿನಲ್ಲಿನ ದುರುದ್ದೇಶವು ತುಂಬಾ ವಿಭಿನ್ನವಾಗಿದೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏನೋ ತಪ್ಪಾಗಿದೆ ಎಂದು ನಾನು ಖಂಡಿತವಾಗಿ ಭಾವಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಎರಡು ಧಾರ್ಮಿಕ ಸಮುದಾಯಗಳ ನಡುವೆ ದೊಡ್ಡ ಅಸಮಾಧಾನವನ್ನು ಉಂಟುಮಾಡುವ ಸಾಧ್ಯತೆಯಿರುವ ಯಾವುದೋ ವಿಷಯದ ವ್ಯಾಪ್ತಿಯಲ್ಲಿ ಈ ಟ್ವೀಟ್‌ ಬರುತ್ತದೆಯೇ? ಏನಾದರೂ ಅಪರಾಧವಾಗಬೇಕಾದರೆ, ಅದು ಧಾರ್ಮಿಕ ಭಾವನೆಗಳನ್ನು ನೋಯಿಸುವ ಪ್ರವೃತ್ತಿಯನ್ನು ಹೊಂದಿರಬೇಕು. ಈ ಟ್ವೀಟ್‌ ಮಾಡಿ ನಾಲ್ಕು ವರ್ಷಗಳ ನಂತರ ಮತ್ತು ಈ ಚಲನಚಿತ್ರವು ತಯಾರಾಗಿ 40 ವರ್ಷಗಳ ನಂತರ ವಿವಾದ ಸೃಷ್ಟಿಯಾಗಿದೆ. ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ. ಯಾರೂ ಈ ಟ್ವೀಟ್‌ಗೆ ದೂರು ನೀಡಿಲ್ಲ. ಪೊಲೀಸರು ಏಕಾಏಕಿ ಎಚ್ಚೆತ್ತುಕೊಂಡು ನಮಗೆ ಅನಾಮಧೇಯ ದೂರು ಬಂದಿದೆ ಎಂದು ಹೇಗೆ ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

ಇಂದು ನೀವು ದೂರು ನೀಡಲು ಹೋದರೆ, ಬಡವರು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ, ತುಂಬಾ ಗಂಭೀರವಾದ ಅಪರಾಧದಲ್ಲೂ ದೂರು ದಾಖಲಿಸುವುದು ತುಂಬಾ ಕಷ್ಟ. ಅವರು ‘ಲಿಖಿತ ದೂರು ಸಲ್ಲಿಸಿ, ಅಫಿಡವಿಟ್ ಸಲ್ಲಿಸಿ’ ಎಂದು ಹೇಳುತ್ತಾರೆ. ಈಗ ಟ್ವೀಟ್‌ ಸಂಬಂಧ ದೂರು ನೀಡಲಾಗಿದೆ ಎಂದು ಅವರು ಹೇಳುತ್ತಾರೆ. ಇದು ಕಾನೂನುಬಾಹಿರ ಎಂದು ನಾನು ಹೇಳುತ್ತಿಲ್ಲ – ಅವರು ಅದನ್ನು ಮಾಡಬಹುದು. ಆದರೆ ಸಾಮಾನ್ಯ ಪ್ರಕರಣಗಳಲ್ಲಿ ಅವರು ಹೀಗೆಯೇ ಮಾಡುತ್ತಾರೆಯೇ? ಸುಪ್ರೀಂ ಕೋರ್ಟ್‌ನಲ್ಲಿ ಮಹಿಳೆಯರು ಹೋಗಿ ಅತ್ಯಾಚಾರದ ದೂರು ನೀಡಿದರೂ ಪ್ರಕರಣ ದಾಖಲಾಗದ ಪ್ರಕರಣಗಳನ್ನು ನಾವು ಪ್ರತಿದಿನ ನೋಡುತ್ತೇವೆ. ನಾವು ಕಳೆದ ವರ್ಷ ಹತ್ರಾಸ್‌ ಪ್ರಕರಣ ಹಾಗೂ ಇತರ ಹಲವು ನಿದರ್ಶನ ಕಂಡಿದ್ದೇವೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...