Homeಮುಖಪುಟಚಕ್ರತೀರ್ಥ ಸಮಿತಿ ಸಂಭಾವನೆ ವಿಚಾರದಲ್ಲಿ ಹೀಗೇಕೆ ಸುಳ್ಳು ಹೇಳಿತು ಬಿಜೆಪಿ ಪರಿವಾರ?

ಚಕ್ರತೀರ್ಥ ಸಮಿತಿ ಸಂಭಾವನೆ ವಿಚಾರದಲ್ಲಿ ಹೀಗೇಕೆ ಸುಳ್ಳು ಹೇಳಿತು ಬಿಜೆಪಿ ಪರಿವಾರ?

‘ವಿಜಯ ಕರ್ನಾಟಕ’ ಪತ್ರಿಕೆಯಲ್ಲಿ ಆಗಿರುವ ವರದಿಗೆ ಸಂಬಂಧಿಸಿದಂತೆ ಬರಗೂರು ರಾಮಚಂದ್ರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

- Advertisement -
- Advertisement -

“ಪ್ರೊ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಹೋಲಿಸಿದರೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕಡಿಮೆ ಸಂಭಾವನೆ ಪಡೆದಿದೆ” ಎಂದು ಬಿಂಬಿಸುವ ವರದಿಯಾಗಿದ್ದು, ‘ಬಿಜೆಪಿ ಪರಿವಾರ ಹೀಗೇಕೆ ಸುಳ್ಳು ಹೇಳುತ್ತಿದೆ’ ಎಂಬ ಪ್ರಶ್ನೆ ಮೂಡಿದೆ.

‘ವಿಜಯ ಕರ್ನಾಟಕ’ ದಿನಪತ್ರಿಕೆಯಲ್ಲಿ ‘ಚಕ್ರತೀರ್ಥ ಸಮಿತಿ ಸಂಭಾವನೆ 5 ಸಾವಿರ’ ಎಂಬ ಹೆಡ್‌ಲೈನ್‌ನಲ್ಲಿ ವರದಿ ಪ್ರಕಟವಾಗಿದ್ದು ಚರ್ಚೆಗೆ ಗ್ರಾಸವಾಗಿದೆ. ಚಕ್ರತೀರ್ಥ ಸಮಿತಿ ಕಡಿಮೆ ಸಂಭಾವನೆ ಪಡೆದಿದೆ ಎಂದು ಹೇಳುವ ವರದಿಯು ಏಕಪಕ್ಷೀಯವಾಗಿದೆ ಎಂಬ ಟೀಕೆಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ವಿಜಯ ಕರ್ನಾಟಕ’ ವರದಿಯಲ್ಲಿನ ಮುಖ್ಯಾಂಶಗಳು

  • ಚಕ್ರತೀರ್ಥ ಸಮಿತಿ ಪಡೆದ ಸಂಭಾವನೆ ಕೇವಲ 33 ಸಾವಿರ ರೂಪಾಯಿ. ಸರ್ಕಾರ 28,600 ರೂ. ಬಾಕಿ ಉಳಿಸಿಕೊಂಡಿದೆ. ಸಮಿತಿಗೆ ಸಿಕ್ಕಿರುವುದು ಕೇವಲ 5200 ರೂ. ಸಮಿತಿ ಮಾಡಿದ ಒಟ್ಟು ವೆಚ್ಚ 50 ಲಕ್ಷ ರೂ.
  • ಈ ಹಿಂದಿನ ಸಮಿತಿಗಳು ಪಡೆದ ಸಂಭಾವನೆಗಿಂತ ಐದಾರು ಪಟ್ಟು ಕಮ್ಮಿ ಸಂಭಾವನೆಯನ್ನು ಚಕ್ರತೀರ್ಥ ಸಮಿತಿ ಪಡೆದಿದೆ. ಉಳಿದ ಸಮಿತಿಗಳ ಸಂಭಾವನೆ 3.75 ಲಕ್ಷ ರೂ.ಗಳಿಂದ 5.45 ಲಕ್ಷ ರೂ.ಗಳಾಗಿದೆ.

ಮೇಲು ನೋಟಕ್ಕೆ ಚಕ್ರತೀರ್ಥ ಸಮಿತಿಯು ಕಡಿಮೆ ವೆಚ್ಚ ಮಾಡಿದೆ ಎಂದು ಅನಿಸಿದರೂ ಇದು ಅರ್ಧ ಸತ್ಯದಿಂದ ಕೂಡಿದೆ. ಈ ಕುರಿತು ಸ್ವತಃ ಪ್ರೊ.ಬರಗೂರು ರಾಮಚಂದ್ರಪ್ಪ ಅವರೇ ಸ್ಪಷ್ಟನೆ ನೀಡಿದ್ದು, “ಪಠ್ಯಪುಸ್ತಕಗಳ ಖರ್ಚು ವೆಚ್ಚಕ್ಕೆ ಸಂಬಂಧಿಸಿದಂತೆ ಮಾಡಿರುವ ವರದಿಯಲ್ಲಿ ಏಕಪಕ್ಷೀಯವಾದ ವಿವರಗಳಿವೆ” ಎಂದು ಬರಗೂರರು ಸ್ಪಷ್ಟಪಡಿಸಿದ್ದಾರೆ.

ಬರಗೂರು ರಾಮಚಂದ್ರಪ್ಪ ಅವರ ಸ್ಪಷ್ಟನೆಗಳೇನು?

ಸ್ಪಷ್ಟನೆ 1: ಪಠ್ಯಪುಸ್ತಕಗಳ ರಚನೆ ಮತ್ತು ಪರಿಷ್ಕರಣೆಗಾಗಿ ಚಕ್ರತೀರ್ಥ ಸಮಿತಿ ರಚನೆಯಾಗಿದೆ ಎಂದು ವರದಿ ಹೇಳುತ್ತದೆ. ವಾಸ್ತವವಾಗಿ ಚಕ್ರತೀರ್ಥ ಸಮಿತಿ ರಚನೆಯಾಗಿದ್ದು ಪಠ್ಯಪುಸ್ತಕಗಳ ರಚನೆ ಹಾಗೂ ಪರಿಷ್ಕರಣೆಗಾಗಿ ಅಲ್ಲ. ಸಂಕೀರ್ಣ ವಿಷಯಗಳ ಪರಿಶೀಲನೆ ಮಾಡಿ ಒಂದು ತಿಂಗಳಲ್ಲಿ ವರದಿಯನ್ನು ಕೊಡಬೇಕೆಂದು ಸಮಿತಿ ರಚನೆಯಾಯಿತು.

ಸ್ಪಷ್ಟನೆ 2: ಚಕ್ರತೀರ್ಥ ಸಮಿತಿಗೆ ಕೇವಲ ಐದು ಸಾವಿರ ರೂಪಾಯಿಗಳ ಸಂಭಾವನೆಯನ್ನು ಕೊಡಲಾಗಿದೆ ಎಂದು ದೊಡ್ಡ ಶೀರ್ಷಿಕೆಯನ್ನು ವರದಿಗೆ ನೀಡಲಾಗಿದೆ. ಆದರೆ ಅದೇ ವರದಿಯಲ್ಲಿ ಸಂಭಾವನೆ 33,800 ರೂಪಾಯಿ ಎಂದಿದೆ. 28,000 ಬಾಕಿ ಉಳಿದಿದೆ ಎಂದು ಬರೆಯಲಾಗಿದೆ. ಬಾಕಿ ಉಳಿಸಿಕೊಂಡು ಆನಂತರ ಹಣ ಜಮಾ ಮಾಡುವ ಪದ್ಧತಿಯು ನಮ್ಮ ಸರ್ಕಾರದಲ್ಲಿ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ನಮ್ಮ ಸಮಿತಿಯಲ್ಲೂ ಅನೇಕರಿಗೆ ಬಾಕಿ ಉಳಿಸಿಕೊಂಡು ಆನಂತರದಲ್ಲಿ ಹಣ ನೀಡಲಾಯಿತು. ಹೀಗಾಗಿ ಚಕ್ರತೀರ್ಥ ಸಮಿತಿಗೆ ನೀಡಿರುವ ಸಂಭಾವನೆ 5,000 ರೂಪಾಯಿಯಲ್ಲ, 33,800 ರೂಪಾಯಿ ಎಂಬುದು ಸತ್ಯ ಸಂಗತಿ.

ಸ್ಪಷ್ಟನೆ- 3: ಮುಡಂಬಡಿತ್ತಾಯ ಸಮಿತಿಯು 3 ಕೋಟಿ 63 ಲಕ್ಷ ಖರ್ಚು ಮಾಡಿದೆ ಎಂದೂ, ನಮ್ಮ ಸಮಿತಿ 2 ಕೋಟಿ 59 ಲಕ್ಷ ಖರ್ಚು ಮಾಡಿದೆ ಎಂದೂ, ಚಕ್ರತೀರ್ಥ ಸಮಿತಿ 49 ಲಕ್ಷ 99 ಸಾವಿರ ರೂ. ಖರ್ಚು ಮಾಡಿದೆ ಎಂದೂ ವರದಿ ಹೇಳುತ್ತದೆ. ಇದು ನಿಜವೇ ಇರಬಹುದು. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಮೇಲ್ನೋಟಕ್ಕೆ ನಮ್ಮ ಸಮಿತಿ ತುಂಬಾ ಖರ್ಚು ಮಾಡಿದೆ ಎಂದೂ ಚಕ್ರತೀರ್ಥ ಸಮಿತಿಯು ಕಡಿಮೆ ಖರ್ಚು ಮಾಡಿದೆ ಎಂದೂ ತೋರಿಸಲಾಗುತ್ತಿದೆ. ಅರ್ಥ ಮಾಡಿಕೊಳ್ಳಬೇಕಾದ ಸಂಗತಿ ಏನೆಂದರೆ- ನಮ್ಮ ಸಮಿತಿ ಎರಡೂವರೆ ವರ್ಷಗಳ ಕಾಲ ಕೆಲಸ ಮಾಡಿದೆ. ವಾಸ್ತವವಾಗಿ ಮೊದಲು 27 ಸಮಿತಿಗಳ ರಚನೆ ಮಾಡಲಾಯಿತು. ಆ ನಂತರ ನನ್ನನ್ನು ಸರ್ವಾಧ್ಯಕ್ಷನನ್ನಾಗಿ ಆಯ್ಕೆ ಮಾಡಲಾಯಿತು. ಆ ಸಮಿತಿಗಳು ಎರಡೂವರೆ ವರ್ಷ ಕೆಲಸ ಮಾಡಿದವು. ನಾನು ಎರಡು ವರ್ಷ ಕೆಲಸ ಮಾಡಿದೆ. ಒಟ್ಟು ಸಮಿತಿಯಲ್ಲಿ 172 ಜನರಿದ್ದರು. ಅಧಿಕಾರಿಗಳನ್ನೂ ಒಳಗೊಂಡು ಚಕ್ರತೀರ್ಥ ಸಮಿತಿಯಲ್ಲಿದ್ದದ್ದು (ಸರ್ಕಾರದ ಆದೇಶದ ಪ್ರಕಾರ) ಕೇವಲ 16 ಜನ. ಇವರು ಕೆಲಸ ಮಾಡಿದ್ದು ಹೆಚ್ಚೆಂದರೆ ಎರಡು ಅಥವಾ ಮೂರು ತಿಂಗಳು ಮಾತ್ರ. ಇಲ್ಲಿ ವ್ಯತ್ಯಾಸ ಬಹಳ ಸ್ಪಷ್ಟವಾಗಿದೆ. ನಾನು ಸರ್ವಾಧ್ಯಕ್ಷನಾಗಿದ್ದಾಗ 27 ಸಮಿತಿಗಳು, 172 ಜನರು ಕೆಲಸ ಮಾಡಿದ್ದಾರೆ. ಅದರ ಜೊತೆಗೆ ಹೊರಗಿನ 30ಕ್ಕೂ ಹೆಚ್ಚು ತಜ್ಞರ ಜೊತೆಯಲ್ಲಿ, ಅಧ್ಯಾಪಕರ ಜೊತೆಯಲ್ಲಿ ಸಭೆ ಮಾಡಿದ್ದೇವೆ. ಒಟ್ಟಾರೆ ಹೇಳುವುದಾದರೆ ನೂರಾರು ಕಾರ್ಯಾಗಾರಗಳು ನಡೆದಿವೆ. ಇವರಿಗೆ ಪ್ರಯಾಣ  ಭತ್ಯೆ, ಸಭಾ ಭತ್ಯೆ ಇತ್ಯಾದಿಗಳನ್ನು ಭರಿಸಿದ್ದು ಪಠ್ಯಪುಸ್ತಕ ಸಂಘ. ಅದೆಲ್ಲವೂ ಈ ರಚನಾ ಪ್ರಕ್ರಿಯೆಯಲ್ಲಿ ಸೇರಿವೆ. ಇಷ್ಟು ಕಾಲ, ಇಷ್ಟು ಮಂದಿ ಮಾಡಿದ ರಚನೆಯ ಕುರಿತು ಆ ವರದಿಯಲ್ಲಿ ಉಲ್ಲೇಖ ಇಲ್ಲದೆ ಇರುವುದರಿಂದ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡುತ್ತದೆ. ಕಾಲವಧಿಯ ವ್ಯತ್ಯಾಸ, ಕೆಲಸದ ರೀತಿಯ ವ್ಯತ್ಯಾಸ, ಸದಸ್ಯರ ಸಂಖ್ಯೆಯ ವ್ಯತ್ಯಾಸ ಈ ವಿವರಗಳೆಲ್ಲ ವರದಿಯಲ್ಲಿ ಇದ್ದಿದ್ದರೆ ಓದುಗರಿಗೆ ಸ್ಪಷ್ಟವಾಗುತ್ತಿತ್ತು.

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಸ್ಪಷ್ಟನೆ – 4: ಪಠ್ಯಪುಸ್ತಕ ಪರಿಷ್ಕರಣೆಯ ಪ್ರಕ್ರಿಯೆಯಲ್ಲಿ ಡಿಟಿಪಿ ಮಾಡಿರುವ ಖರ್ಚುಗಳೂ ಸೇರಿರುತ್ತವೆ. ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಮೇಲೆ ನಿಯಮಗಳ ಪ್ರಕಾರ ಸರ್ಕಾರ ಕೊಡುವ ಭತ್ಯೆಗಳ ಜೊತೆಗೆ ಡಿಟಿಪಿ ಇತ್ಯಾದಿಗಳೆಲ್ಲವೂ ಸೇರಿರುತ್ತವೆ. ಸಮಿತಿಯ ಸದಸ್ಯರಿಗಾಗಲೀ, ಅಧ್ಯಕ್ಷರಿಗಾಗಿ ಹಣ ಕೊಟ್ಟು ಹಂಚಲಾಗುವುದಿಲ್ಲ. ಪಠ್ಯ ಪುಸ್ತಕ ಸಂಘ ಅಥವಾ ಇಲಾಖೆ ಆ ಹಣವನ್ನು ಹಂಚುತ್ತದೆ. ಇಡೀ ಹಣಕಾಸಿನ ವ್ಯವಹಾರವನ್ನು ನೋಡಿಕೊಳ್ಳುವುದು ನಿಯಮಾನುಸಾರ ಪಠ್ಯಪುಸ್ತಕ ಸಂಘವೇ ಹೊರತು ನಮ್ಮ ಸಮಿತಿಗಳೂ ಅಲ್ಲ, ಸದಸ್ಯರೂ ಅಲ್ಲ, ಅಧ್ಯಕ್ಷರೂ ಅಲ್ಲ. ಈ ವ್ಯತ್ಯಾಸವನ್ನು ಸಾರ್ವಜನಿಕರು ಗಮನಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪಠ್ಯ ಪುಸ್ತಕ ಪರಿಷ್ಕರಣೆಗಾಗಿ ನೇಮಕಗೊಂಡ ಬರಗೂರು ರಾಮಚಂದ್ರಪ್ಪ ಅವರ ಸಮಿತಿಯ ಕೆಲಸ ಕಾರ್ಯಗಳ ವ್ಯಾಪ್ತಿಗೂ, ಸಂಕೀರ್ಣ ವಿಷಯಗಳ ಪರಿಶೀಲನೆಗಾಗಿ ನೇಮಕವಾದ ರೋಹಿತ್ ಚಕ್ರತೀರ್ಥ ಸಮಿತಿಯ ಕೆಲಸ ಕಾರ್ಯಗಳ ವ್ಯಾಪ್ತಿಗೂ ವ್ಯತ್ಯಾಸ ಇದೆ; ಅದಕ್ಕಾಗಿ, ತೆಗೆದುಕೊಂಡ ಸಮಯ ಮತ್ತು ಮಾಡಿದ ಖರ್ಚು ಸಹಜವಾಗಿ ಬೇರೆ ಬೇರೆಯಾಗಿ ಇರುವುದು ಸಾಮಾನ್ಯ. ಒಬ್ಬ ವರದಿಗಾರನಿಗೆ ಈ ವ್ಯತ್ಯಾಸದ ಸಾಮಾನ್ಯ ಜ್ಞಾನ ಇರಬೇಕು. ಇಲ್ಲ ಎಂದಾದರೆ, ಈ ವರದಿ ದುರುದ್ದೇಶಪೂರಿತ ಎಂಬುದು ಸ್ಪಷ್ಟ! ಇಂತಹ ಕುಚೋದ್ಯ ಮಾಡಲು ಪತ್ರಿಕೆಯನ್ನು ಪ್ರತಿನಿಧಿಸುವವರಿಗೆ ನಾಚಿಕೆಯೂ ಆಗುವುದಿಲ್ಲವೆ?!?

  2. ಜೀ ಹುಜೂರ್‌ ಎನ್ನುವ ಗುಲಾಮ ವರದಿಗಾರ ಮಾತ್ರ ಈ ರೀತಿ ಸುಳ್ಳು ವರದಿ ನೀಡಲು ಸಾಧ್ಯ. ದೇವರಾಜ್‌ ಕನಕಪುರ ತಲೆಯು ಸಾಮಾನ್ಯರಂತೆ ಇಲ್ಲದಿರುವುದು ಆಶ್ಚರ್ಯ. ಇವನು ಹೊಟ್ಟೆಗೆ ಎಲ್ಲರ ತರಹ ಹೊಟ್ಟೆಗೆ ಅನ್ನ ತಿನ್ನುತ್ತಾನೋ? ಇಲ್ಲ ಇನ್ನೇನಾದರೂ ತಿನ್ನುತ್ತಾನೋ? ಗೊತ್ತಿಲ್ಲ. ಇಂತಹ ಭ್ರಷ್ಟ ವರದಿಗಾರು ಸುಳ್ಳು ಮಾಹಿತಿಯನ್ನು ದುರದ್ದೇಶಪೂರಿತವಾಗಿ ನೀಡಲು ಕಾರಣವೇನಿಬಹುದು ಎಂದು ಬಹಿರಂಗ ಪಡಿಸಲಿ. ಇಲ್ಲದಿದ್ದರೆ ಸಾರ್ವಜಿಕವಾಗಿ ಕನ್ನಡ ಜನತೆಯ ಕ್ಷಮೆ ಕೇಳಲಿ.

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...