Homeಮುಖಪುಟಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

ಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

- Advertisement -
- Advertisement -

ಕಾಳಿ ದೇವಿ ಕುರಿತು ಟಿಎಂಸಿ ಸಂಸದೆ ಮಹುವಾ ಮೊಯಿತ್ರ ನೀಡಿದ ಹೇಳಿಕೆಗಳು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಕೋಲ್ಕತ್ತಾದಲ್ಲಿ ಬಿಜೆಪಿ ಮುಖಂಡ ಜಿತಿನ್ ಚಟರ್ಜಿ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇಂಡಿಯಾ ಟುಡೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂಸದೆ ಮಹುವಾ ಮೊಯಿತ್ರಾರವರು “ಜನರು ತಮ್ಮ ದೇವರನ್ನು ಹೇಗೆ ನೋಡುತ್ತಾರೆ, ಕಲ್ಪಿಸಿಕೊಳ್ಳುತ್ತಾರೆ ಎಂಬುದು ಅವರಿಗೆ ಬಿಟ್ಟದ್ದು. ಅವರು ತಮಗಿಷ್ಟ ಬಂದಂತೆ ತಮ್ಮ ದೇವರನ್ನು ಪೂಜಿಸಬಹುದು. ಉದಾಹರಣೆಗೆ ನೀವು ಭೂತಾನ್ ಅಥವಾ ಸಿಕ್ಕಿಂಗೆ ಹೋದರೆ, ಅವರು ಪೂಜೆ ಮಾಡುವಾಗ ತಮ್ಮ ದೇವರಿಗೆ ವಿಸ್ಕಿ ಅರ್ಪಿಸುತ್ತಾರೆ. ಆದರೆ ನೀವು ಉತ್ತರ ಪ್ರದೇಶಕ್ಕೆ ಹೋಗಿ ನಿಮ್ಮ ದೇವರಿಗೆ ವಿಸ್ಕಿಯನ್ನು ಪ್ರಸಾದವಾಗಿ ಅರ್ಪಿಸಿ ಎಂದು ಹೇಳಿದರೆ, ಅದು ಧರ್ಮನಿಂದನೆಯೆಂದು ಕರೆಸಿಕೊಳ್ಳುತ್ತದೆ” ಎಂದು ಹೇಳಿದ್ದರು.

ಮುಂದುವರಿದು, “ನನಗೆ ಕಾಳಿ ದೇವಿಯು ಮಾಂಸ ತಿನ್ನುವ ಮತ್ತು ಮದ್ಯವನ್ನು ಸ್ವೀಕರಿಸುವ ದೇವತೆಯಂತೆ ಕಾಣುತ್ತಾರೆ. ನೀವು ತಾರಾಪೀಠಕ್ಕೆ ಹೋದರೆ, ನೀವು ಧೂಮಪಾನ ಮಾಡುವ ಸಾಧುಗಳನ್ನು ನೋಡುತ್ತೀರಿ. ಆ ರಿತಿಯಾಗಿ ಅವರು ಕಾಳಿಯನ್ನು ಪೂಜಿಸುತ್ತಾರೆ. ನಾನು ಹಿಂದೂ ಧರ್ಮದಲ್ಲಿ, ಕಾಳಿ ಆರಾಧಕಳಾಗಿ ಕಾಳಿಯನ್ನು ಆ ರೀತಿಯಲ್ಲಿ ಕಲ್ಪಿಸಿಕೊಳ್ಳುವ ಹಕ್ಕಿದೆ; ಅದು ನನ್ನ ಸ್ವಾತಂತ್ರ್ಯ” ಎಂದು ಹೇಳಿದ್ದರು.

“ನಿಮ್ಮ ದೇವರನ್ನು ಸಸ್ಯಾಹಾರಿಯಾಗಿ ಮತ್ತು ಬಿಳಿ ಬಟ್ಟೆ ತೊಟ್ಟವರಂತೆ ಪೂಜಿಸಲು ನಿಮಗೆ ಎಷ್ಟು ಸ್ವಾತಂತ್ರ್ಯವಿದೆಯೋ ಹಾಗೆಯೇ ಮಾಂಸ ತಿನ್ನುವ ದೇವತೆಯಾಗಿ ಕಲ್ಪಿಸಿಕೊಳ್ಳುವ ಹಕ್ಕು ಸಹ ನನಗಿದೆ” ಎಂದು ಹೇಳಿದ್ದರು.

ಈ ಕುರಿತು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೆ ಟಿಎಂಸಿ ಪಕ್ಷ ಸಹ ಮಹುವಾ ಹೇಳಿಕೆಯನ್ನು ಖಂಡಿಸಿತ್ತು. ಆ ಕುರಿತು ಟ್ವೀಟ್ ಮಾಡಿ, “#IndiaTodayConclaveEast2022 ನಲ್ಲಿ ಮಹುವಾ ಮೊಯಿತ್ರಾರವರು ನೀಡಿದ ಹೇಳಿಕೆ ಮತ್ತು ಕಾಳಿ ದೇವಿಯ ಕುರಿತು ಅವರ ಅಭಿಪ್ರಾಯಗಳನ್ನು ಅವರ ವೈಯಕ್ತಿಕವಾದವುಗಳಾಗಿವೆ. ಅವಗಳನ್ನು ಯಾವುದೇ ರೀತಿಯಲ್ಲಿ ಅಥವಾ ರೂಪದಲ್ಲಿ ಪಕ್ಷವು ಅನುಮೋದಿಸುವುದಿಲ್ಲ. ಇಂತಹ ಹೇಳಿಕೆಗಳನ್ನು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ” ಎಂದು ಪಕ್ಷ ಟ್ವೀಟ್ ಮಾಡಿತು. ಆದಾದ ನಂತರ ಮಹುವಾ ಮೊಯಿತ್ರ ಪಕ್ಷದ ಟ್ವಿಟರ್ ಖಾತೆಯನ್ನು ಅನ್‌ಫಾಲೋ ಮಾಡಿದ್ದರು.

ಕೆಲದಿನಗಳ ಹಿಂದೆ ಸಿನಿಮಾ ನಿರ್ದೇಶಕಿಯೊಬ್ಬರು ಕಾಳಿ ದೇವಿ ಸಿಗರೇಟ್ ಸೇದುತ್ತಿರುವ ಫೋಟೊವನ್ನು ತಮ್ಮ ಸಿನಿಮಾಗೆ ಬಳಸಿಕೊಂಡಿದ್ದರು. ಈ ಕುರಿತು ವಿವಾದ ಉಂಟಾಗಿ ಅವರ ಮೇಲೆ ದೂರು ದಾಖಲಾಗಿತ್ತು. ಅವರನ್ನು ಮಹುವಾ ಮೊಹಿತ್ರ ಬೆಂಬಲಿಸುತ್ತಿದ್ದಾರೆ ಎಂದು ಬಿಜೆಪಿಗರು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಮಹುವಾ, “ನಿಮಗೆಲ್ಲ ಸಂಘಿ-ಸುಳ್ಳು ಹೇಳುವುದು ನಿಮ್ಮನ್ನು ಉತ್ತಮ ಹಿಂದೂಗಳನ್ನಾಗಿ ಮಾಡುವುದಿಲ್ಲ. ನಾನು ಯಾವುದೇ ಚಲನಚಿತ್ರ ಅಥವಾ ಪೋಸ್ಟರ್ ಅನ್ನು ಬೆಂಬಲಿಸಿಲ್ಲ ಅಥವಾ ಧೂಮಪಾನದ ಪದವನ್ನು ಉಲ್ಲೇಖಿಸಿಲ್ಲ. ಭೋಗ್ ಆಗಿ ಯಾವ ಆಹಾರ ಮತ್ತು ಪಾನೀಯವನ್ನು ನೀಡಲಾಗುತ್ತದೆ ಎಂಬುದನ್ನು ನೋಡಲು ತಾರಾಪೀಠದಲ್ಲಿರುವ ನನ್ನ ಮಾ ಕಾಳಿ ದೇವಾಲಯಕ್ಕೆ ಭೇಟಿ ನೀಡಿ ಎಂದು ಸಲಹೆ ನೀಡಿದ್ದೇನೆ ಅಷ್ಟೆ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರಕರಣ ವಿವಾದದ ಸ್ವರೂಪ ಪಡೆದುಕೊಂಡ ಕೂಡಲೇ ಮಹುವಾ ಮೊಯಿತ್ರರವರು “ಜೈ ಮಾ ಕಾಳಿ, ಬಂಗಾಳಿಗರು ದೇವರನ್ನು ಯಾವುದೇ ಭಯವಿಲ್ಲದೆ ಆರಾಧನೆ ಮಾಡುತ್ತಾರೆಯೇ ಹೊರತು ತುಷ್ಟೀಕರಣ ಮಾಡುವುದಿಲ್ಲ” ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ತಮ್ಮ ವಿರುದ್ಧ ದೂರು ನೀಡಿದ ಬಿಜೆಪಿ ವಿರುದ್ಧವೂ ಅವರು ಕಿಡಿಕಾರಿದ್ದಾರೆ. “ನಾನು ಕಾಳಿಯ ಆರಾಧಕಿ, ನನಗೆ ಯಾರ ಭಯವಿಲ್ಲ. ನಿಮ್ಮ ಅಜ್ಞಾನಿಗಳ, ನಿಮ್ಮ ಗೂಂಡಾಗಳ, ನಿಮ್ಮ ಪೊಲೀಸರ ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮ ಟ್ರೋಲ್ ಪಡೆಯ ಭಯ ನನಗಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮಹುವಾ ಮೊಯಿತ್ರಾರವರ ವಿರುದ್ದದ ದಾಳಿಗಳನ್ನು ಖಂಡಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ನಮ್ಮ ಧಾರ್ಮಿಕ ಆಚರಣೆಗಳು ಇಡೀ ದೇಶಾದ್ಯಂತ ವಿಭಿನ್ನವಾಗಿವೆ ಎಂಬುದನ್ನು ಎಲ್ಲಾ ಹಿಂದೂಗಳು ತಿಳಿದಿದ್ದಾರೆ. ಅದನ್ನೆ ಮಹುವಾರವರು ಹೇಳಿದ್ದಾರೆ ಎಂದಿದ್ದಾರೆ.

ಅವೈದಿಕ ದೇವರುಗಳಿಗೆ ಮಾಂಸಾಹಾರವನ್ನು ಪ್ರಸಾದ, ನೈವೈದ್ಯವಾಗಿ ಅರ್ಪಿಸುವ ಪದ್ದತಿ ಕರ್ನಾಟಕದಲ್ಲಿಯೂ ನಡೆದುಕೊಂಡು ಬಂದಿದೆ. ಮಂಟೇಸ್ವಾಮಿ, ಮಾರಮ್ಮ ಸೇರಿದಂತೆ ಹಲವು ದೇವರುಗಳಿಗೆ ಕುರಿ-ಕೋಳಿಗಳನ್ನು ಬಲಿಕೊಟ್ಟು ಅಡುಗೆ ಮಾಡಿ ಬಡಿಸುವುದು ಎಲ್ಲರಿಗೂ ತಿಳಿದೇ ಇದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಲೇಖಕ, ಹೋರಾಟಗಾರ ಜಿ.ಎನ್ ನಾಗರಾಜುರವರು, “ಚೌಡಮ್ಮ, ಕಾಳಮ್ಮ, ಮಾರಮ್ಮ, ಊರಮ್ಮ ಇತ್ಯಾದಿ ನಮ್ಮ ಬಹಳಷ್ಟು ಅಮ್ಮ ದೇವತೆಗಳು ಮಾಂಸಾಹಾರಿಗಳು. ಬುಡಕಟ್ಟುಗಳ ಆರಾಧ್ಯ ದೇವತೆಗಳಾದ ಇವರು ಹಿಂದೆ ಸ್ವತಃ ಬೇಟೆ ಮತ್ತು ಯುದ್ದದಲ್ಲಿ ಭಾಗವಹಿಸುತ್ತಿದ್ದರು. ಆದ ಕಾರಣ ಇವರು ಮಾಂಸಾಹಾರಿಗಳು ಮತ್ತು ಆಯಾ ಬುಡಕಟ್ಟಿನ ಮದ್ಯವನ್ನು ಸೇವನೆ ಮಾಡುತ್ತಿದ್ದರು. ಇವೆಲ್ಲವೂ ಬುಡಕಟ್ಟು ಪದ್ದತಿಗಳಾಗಿವೆ” ಎಂದರು.

ಬುಡಕಟ್ಟು ಜನರು ತಮ್ಮ ಕುಲದೇವತೆಗಳೆಂದು ಪೂಜಿಸುತ್ತಾರೆ. ತಮ್ಮನ್ನು ಅಮ್ಮನ ಒಕ್ಕಲು ಎಂದು ಕರೆದುಕೊಳ್ಳುತ್ತಾರೆ. ಕಾಳೆ, ದುರ್ಗೆ, ಚಾಮುಂಡಿ ಎಲ್ಲರೂ ಇಂತಹ ಕುಲದೇವತೆಗಳೆ ಆಗಿದ್ದಾರೆ. ಅವರ ನಡುವೆಯೇ ಒಬ್ಬ ಪೂಜಾರಿ ಇದ್ದು ಪೂಜೆ ಸಲ್ಲಿಸುತ್ತಾರೆ. ದೇವಾಲಯದಲ್ಲಿಯೇ ಬಲಿ ಕೊಡಲಾಗುತ್ತಿತ್ತು. ಆದರೆ ಈ ದೇವಾಲಯಗಳಲ್ಲಿ ಕೆಲವು ಹೆಚ್ಚು ಆದಾಯ ತಂದ ನಂತರ ಅಲ್ಲಿ ಬ್ರಾಹ್ಮಣ ಪೂಜಾರಿಗಳು ಬಂದರು. ಕಾಲ ಅದನ್ನು ಸಸ್ಯಾಹಾರಿಗಳೆಂದು ಬಿಂಬಿಸುವುದು ಆರಂಭವಾಯಿತು. ಹಾಗಾಗಿ ಜನರು ದೇವಾಲಯದ ದೂರದಲ್ಲಿ ಬಲಿಕೊಡುವುದು ಇಂದಿಗೂ ನಡೆದುಕೊಂಡು ಬಂದಿದೆ. ನಮ್ಮ ಪುರುಷ ದೇವರುಗಳು ಸಹ ಮಾಂಸಾಹಾರಿಗಳೆ. ಸಸ್ಯಾಹಾರಿ ದೇವರುಗಳೆ ನನಗೆ ಕಂಡುಬರುವುದಿಲ್ಲ” ಎಂದರು.

ಕಾಳಿ ದೇವಿಯ ವಿಷಯಕ್ಕೆ ಬಂದರೆ ಅವರನ್ನು ಬಗೆ ಬಗೆಯಾಗಿ ಜನರು ಆರಾಧಿಸುತ್ತಾರೆ. ಕಪ್ಪು ಬಣ್ಣದ ಅರ್ಥ ನೀಡುವ ಕಾಳಿ ಬುಡಕಟ್ಟುಗಳ ಆರಾಧ್ಯ ದೈವ. ಕಾಳಿಯನ್ನು ಹೆಚ್ಚಾಗಿ ಪೂಜಿಸುವ ತಾಂತ್ರಿಕರು ಪಂಚಮಕರವನ್ನು ನಂಬಿದ್ದಾರೆ. ಅವರ ಪ್ರಕಾರ “ಮದ್ಯ, ಮಾಂಸ, ಮತ್ಸ್ಯ, ಮುದ್ರೆ ಮತ್ತು ಮೈಥುನ” ಇವೆಲ್ಲವ ಪೂಜ್ಯವಾಗಿವೆ, ಇವುಗಳಿಂದ ದೇವರು ಸಂಪ್ರೀತರಾಗುತ್ತಾರೆ ಎಂದು ನಂಬಿದ್ದಾರೆ.

ಇದನ್ನೂ ಓದಿ: ಭದ್ರಾವತಿ: ಬಜರಂಗದಳದ ದುಷ್ಕರ್ಮಿಗಳಿಂದ ದಾಂಧಲೆ; 6 ಮಂದಿ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಎಲ್ಲಾ ಪ್ರಣಿಗಳು ತಮ್ಮ ಹಸಿವಿಗಾಗಿ ಆಹಾರ ಸೇವನೆ ಮಾಡುತ್ತವೆ ,ನಾಯಿ,ಹಂದಿಗಳು ಜನರ ಹೊಲಸು ತಿನ್ನುವ ಕಾರಣ ಮಾನವ ಸಹ ಪ್ರಾಣಿ ಸಂಕುಲದ ಭಾಗ ಆಗಾಗಿ ಇವಳು ನಾಯಿ,ಹಂದಿ ತಿನ್ನುವ ಹೊಲಸನ್ನು ತಿನ್ನಲಿ ,ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಈ ರೀತಿಯ ಚೀನೀ ಬೆಂಬಲಿತ ಹೊಲಸು ತಿನ್ನುವ ಇಂತ ಕಮ್ಯೂನಿಸ್ಟ್ ಪಕ್ಷದ ಮೊಯಿತ್ರಾ ಸಂಸದರ ನಡವಳಿಕೆ ಅವರ ಕೊಳಕುತನ ನೋಡಿಸುತ್ತೇ

  2. ಎಲ್ಲಾ ಪ್ರಣಿಗಳು ತಮ್ಮ ಹಸಿವಿಗಾಗಿ ಆಹಾರ ಸೇವನೆ ಮಾಡುತ್ತವೆ ,ನಾಯಿ,ಹಂದಿಗಳು ಜನರ ಹೊಲಸು ತಿನ್ನುವ ಕಾರಣ ಮಾನವ ಸಹ ಪ್ರಾಣಿ ಸಂಕುಲದ ಭಾಗ ಆಗಾಗಿ ಇವಳು ನಾಯಿ,ಹಂದಿ ತಿನ್ನುವ ಹೊಲಸನ್ನು ತಿನ್ನಲಿ ,ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಈ ರೀತಿಯ ಚೀನೀ ಬೆಂಬಲಿತ ಹೊಲಸು ತಿನ್ನುವ ಇಂತ ಪಕ್ಷದ ಮೊಯಿತ್ರಾ ಸಂಸದರ ನಡವಳಿಕೆ ಅವರ ಕೊಳಕುತನ ನೋಡಿಸುತ್ತೇ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...