Homeಕರ್ನಾಟಕಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸಿದ ಪಠ್ಯಪುಸ್ತಕ ಹಗರಣದ ವಿರುದ್ಧದ ಹೋರಾಟ ರಾಜ್ಯದ ಇತರ ಪ್ರದೇಶಗಳಲ್ಲೂ ಅನುರಣಿಸಿದ್ದು, ಹಲವು ಭಾಗಗಳಲ್ಲಿ ನೂರಾರು ಪ್ರತಿಭಟನೆಗಳು ನಡೆದಿವೆ. ರಾಜಕೀಯ ದುರುದ್ದೇಶದಿಂದ ಮಾಡಲಾಗಿರುವ ತಿದ್ದುಪಡಿಯ ಕಾರಣಕ್ಕೆ ಸಾಹಿತಿ ದೇವನೂರು ಮಹಾದೇವ ಸೇರಿದಂತೆ ಹಲವಾರು ಸಾಹಿತಿಗಳು ತಮ್ಮ ಪಠ್ಯಗಳನ್ನು ಹಿಂಪಡೆದುಕೊಂಡಿದ್ದಾರೆ. ಈ ನಡುವೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರ ಸ್ವ-ಕ್ಷೇತ್ರವಾದ ತಿಪಟೂರಿನಲ್ಲಿ ಜನಸ್ಪಂದನಾ ಟ್ರಸ್ಟ್‌ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಒಕ್ಕೂಟ ‘ಜಾಗೃತ ತಿಪಟೂರು’ ಪರಿಷ್ಕೃತ ಪಠ್ಯಗಳ ವಿರುದ್ಧ ಜಾಗೃತಿ ಪಾದಯಾತ್ರೆ ನಡೆಸುತ್ತಿದೆ.

ಜುಲೈ 4 ರಂದು ತಿಪಟೂರು ತಾಲೂಕಿನ ಹಾಲ್ಕುರಿಕೆಯಲ್ಲಿ ಆರಂಭವಾಗಿರುವ ಪಾದಯಾತ್ರೆಯು ಬೈರಾಪುರ, ಘಟಕನಕೆರೆ, ರಾಮನಹಳ್ಳಿ, ಭಟ್ರಹಳ್ಳಿ ಹಾಗೂ ಹೊನ್ನವಳ್ಳಿ ಗ್ರಾಮಗಳಲ್ಲಿ ಸಂಚರಿಸಿದೆ. ಎಲ್ಲ ಗ್ರಾಮಗಳಲ್ಲಿಯೂ ಸಾರ್ವಜನಿಕ ಸಭೆ ನಡೆಸಿ, ಜನರಿಗೆ ಪಠ್ಯಪುಸ್ತಕದಲ್ಲಿರುವ ಲೋಪಗಳು ಹಾಗೂ ಅದರಿಂದ ಭವಿಷ್ಯದ ಮೇಲಾಗುವ ಪರಿಣಾಮಗಳ ಕುರಿತು ಅರಿವು ಮೂಡಿಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾದಯಾತ್ರೆಯ ಉದ್ದಕ್ಕೂ ಸಿಗುವ ಜನರಿಗೆ ಒಕ್ಕೂಟದ ಕಾರ್ಯಕರ್ತರು ಮರುಪರಿಷ್ಕೃತ ಪಠ್ಯದಲ್ಲಿರುವ ಲೋಪಗಳ ಕುರಿತು ವಿವರಿಸುತ್ತಿದ್ದಾರೆ. ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಠಿಯಿಂದ ಪಠ್ಯವನ್ನು ಹಿಂಪಡೆಯಲು ಒತ್ತಾಯಿಸಿ ಎಲ್ಲರೂ ಜೊತೆಗೂಡಬೇಕೆಂದು ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಮರು ಷರಿಷ್ಕರಣಾ ಸಮಿತಿಯ ರಚನೆಯ ವಿರುದ್ಧವೂ ಕಿಡಿಕಾರಿರುವ ಹೋರಾಟಗಾರರು, “ಪಠ್ಯಪುಸ್ತಕಗಳ ಮರುಪರಿಷ್ಕರಣಾ ಸಮಿತಿಗೆ ವಿಕೃತ ಮನಸ್ಸಿನ, ಯಾವುದೇ ಶಿಕ್ಷಣದ ವಿದ್ವತ್ತಿನ ಹಿನ್ನೆಲೆ ಇಲ್ಲದ ವ್ಯಕ್ತಿಯಾದ ರೋಹಿತ್ ಚಕ್ರತೀರ್ಥನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ಆತ ಐದು ವರ್ಷಗಳ ಹಿಂದೆ ನಾಡಕವಿ ಕುವೆಂಪು ರಚಿಸಿದ್ದ ನಾಡಗೀತೆಯನ್ನು ಅಸಭ್ಯಗೊಳಿಸಿದ್ದ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, ಸಮಿತಿಯ ಸದಸ್ಯರುಗಳು ಒಂದೇ ಕೋಮುವಿನವರಾಗಿದ್ದು, ದುರುದ್ದೇಶದಿಂದ ಬೆಳೆಯುವ ಮಕ್ಕಳ ಏಳಿಗೆಗೆ ಮಾರಕವಾಗುವಂತಹ ಬಲಪಂಥೀಯ ಮತ್ತು ತಿರುಚಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮರುಪರಿಷ್ಕರಣೆಗೆ ಒಳಪಡಿಸಿದ ಸಂಪೂರ್ಣ ಪಠ್ಯವನ್ನು ಕೈಬಿಡಬೇಕು. ತಾಲೂಕಿನವರೇ ಆದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಕುಮ್ಮಕ್ಕಿನಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಅವರು ಕೂಡಲೇ ರಾಜ್ಯದ ಜನತೆ ಎದುರು ಕ್ಷಮೆಯಾಚಿಸಬೇಕು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಪಾದಯಾತ್ರೆಯಲ್ಲಿ ಜಾಗೃತ ತಿಪಟೂರು ಆಗ್ರಹಿಸಿದೆ.

“ಪಠ್ಯಪುಸ್ತಕಗಳಲ್ಲಿ ದೇಶದ ಸ್ವಾತಂತ್ರ್ಯ, ದಲಿತರು, ಮಹಿಳೆಯರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಸಮಾನತೆಗಾಗಿ ದುಡಿದ ಸಾವಿತ್ರಿ ಬಾ ಪುಲೆ, ಬಸವಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್, ಟಿಪ್ಪು ಸುಲ್ತಾನ್, ಕನಕದಾಸರು, ವಾಲ್ಮೀಕಿ, ಪೆರಿಯಾರ್ ರಾಮಸ್ವಾಮಿ, ಸಂಗೊಳ್ಳಿ ರಾಯಣ್ಣ, ನಾರಾಯಣ ಗುರು, ಅಕ್ಕಮಹಾದೇವಿ, ಸುರಪುರ ನಾಯಕರು, ಕುವೆಂಪು ಸೇರಿದಂತೆ ಹಲವಾರು ಮಹನೀಯರ ಇತಿಹಾಸವನ್ನು ತಿರುಚಲಾಗಿದೆ”

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

“ತಪ್ಪು ಮಾಹಿತಿಗಳನ್ನೂ ಹಾಗೂ ಬಲಪಂಥೀಯ ಸಿದ್ಧಾಂತಗಳನ್ನು ಮಕ್ಕಳ ಮನಸ್ಸಿನಲ್ಲಿ ತುಂಬಿಸಿ, ಮಕ್ಕಳಲ್ಲಿ ದ್ವೇಷ ಬಿತ್ತುವ ಹುನ್ನಾರ ನಡೆದಿದೆ. ಇಂತಹ ತಿರುಚಿದ ವಿಚಾರಗಳನ್ನು ಮಕ್ಕಳು ಓದಬಾರದು. ಎಲ್ಲರೂ ಈ ಹುನ್ನಾರಗಳ ವಿರುದ್ಧ ಎಚ್ಚೆತ್ತುಕೊಳ್ಳಬೇಕು” ಎಂದು ಪಾದಯಾತ್ರೆಯಲ್ಲಿ ವಿವರಿಸಲಾಗುತ್ತಿದೆ.

ಪಾದಯಾತ್ರೆಯಲ್ಲಿ ಮಾತನಾಡಿದ ಜನಸ್ಪಂದನಾ ಟ್ರಸ್ಟ್‌ನ ಅಧ್ಯಕ್ಷ ಶಶಿಧರ್, “ನಾವು ಯಾವುದೇ ಪಕ್ಷದ ಪರ ಕೆಲಸ ಮಾಡುತ್ತಿಲ್ಲ. ಆದರೆ, ಬಿಜೆಪಿಗರು ತಮ್ಮ ರಾಜಕೀಯಕ್ಕೆ ನಾಡಿನ ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ನ್ಯಾಯವಲ್ಲ. ಸೌಹಾರ್ದಯುತ ನಾಡಿನಲ್ಲಿ ಒಳಗೊಳ್ಳುವಿಕೆಯಿಂದ ಬದುಕುವುದು ಮುಖ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಸಾಹಿತಿ ಎಸ್‌.ಜಿ ಸಿದ್ದರಾಮಯ್ಯ, “35 ವರ್ಷಗಳ ಕಾಲ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದೇನೆ. ಮಕ್ಕಳಿಗೆ ಯಾವ ಪಾಠ ಮುಖ್ಯವಾಗುತ್ತದೆ, ಹಿತವಾಗುತ್ತದೆ, ಬೆಳವಣಿಗೆ ಪೂರಕವಾಗಿರುತ್ತದೆ ಎಂಬುದನ್ನು ಅರಿತಿದ್ದೇನೆ. ಯಾವುದೇ ವಿಷಯದ ತಜ್ಞನಲ್ಲದವರನ್ನು ಮರುಪರಿಷ್ಕಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿ, ಅವರಿಂದ ಪಠ್ಯಗಳನ್ನು ತಿರುಚಿ ನಾಡಿಗೆ ಅನ್ಯಾಯ ಮಾಡುತ್ತಿದ್ದಾರೆ. ಕುರಿ ಕಾಯಬೇಕಾಗಿದ್ದ ನಾನು ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ನಿಮ್ಮ ಮುಂದೆ ನಿಂತು ಮಾತನಾಡುತ್ತಿದ್ದೇನೆ. ರಾಜಕೀಯ ದುರುದ್ದೇಶ ಮತ್ತು ಮತೀಯವಾದಿಗಳ ಪಿತೂರಿಗಳ ವಿರುದ್ಧ ನಾವೆಲ್ಲವೂ ಒಗ್ಗೂಡಬೇಕು” ಎಂದು ಕರೆಕೊಟ್ಟಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

ಸಭೆಗೆ ಅಡ್ಡಿಪಡಿಸಿದ ಬಿ.ಸಿ. ನಾಗೇಶ್‌ ಬೆಂಬಲಿಗರು

ಹೊನ್ನವಳ್ಳಿಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಸಭೆಗೆ ಸಚಿವ ಬಿ.ಸಿ ನಾಗೇಶ್‌ ಬೆಂಬಲಿಗರು ಅಡ್ಡಿಪಡಿಸಿದ ಘಟನೆಯೂ ನಡೆದಿದೆ. ಈ ವೇಳೆ, ಬಿಜೆಪಿ ಕಾರ್ಯಕರ್ತರು ಹಾಗೂ ಹೋರಾಟಗಾರರ ನಡುವೆ ವಾಗ್ವಾದವೂ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಆದರೂ ಪಟ್ಟುಬಿಡದ ಹೋರಾಟಗಾರರು ತಮ್ಮ ಸಭೆಯನ್ನು ಮುಂದುವರೆಸಿದ್ದಾರೆ. ‘‘ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ. ಬಿ.ಸಿ ನಾಗೇಶ್ ರಾಜೀನಾಮೆಯನ್ನು ಪಡೆದೇ ತೀರುತ್ತೇವೆ. ನಿಮಗೆ (ಬಿಜೆಪಿ) ಲಿಂಗಾಯಿತರ ಮತ ಬೇಕು, ಬಸವಣ್ಣ ಬೇಡ. ಒಕ್ಕಲಿಗರ ಮತ ಬೇಕು, ಕುವೆಂಪು-ನಾಡಪ್ರಭು ಕೆಂಪೇಗೌಡ ಬೇಡ. ದಲಿತರ ಮತ ಬೇಕು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಬೇಡ. ಕುರುಬರ ಮತ ಬೇಕು, ಕನಕದಾಸರು ಬೇಡ. ಮಹಿಳೆಯರ ಮತ ಬೇಕು, ಅಕ್ಕಮಹಾದೇವಿ-ಸಾವಿತ್ರಿ ಬಾ ಪುಲೆಯರಂತಹ ಮಹಾನ್‌ ತಾಯಂದಿರು ಬೇಡವಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿ ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ.

ಪಾದಯಾತ್ರೆಯಲ್ಲಿ ಜನ ಸ್ಪಂದನ ಟ್ರಸ್ಟ್, ರೈತ ಸಂಘ, ದಲಿತ ಸಂಘ ಕನ್ನಡ ರಕ್ಷಣಾ ವೇದಿಕೆ, ಸೌಹಾರ್ದ ವೇದಿಕೆ, ಕುವೆಂಪು ಯುವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

ಪಾದಯಾತ್ರೆ ನಡೆಯುತ್ತಿರುವ ಎಲ್ಲ ಗ್ರಾಮಗಳಲ್ಲಿಯೂ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ ಎಂದು ಸಂಘಟಕರು ಹೇಳಿದ್ದಾರೆ. ಜಾಗೃತಿ ಪಾದಯಾತ್ರೆಯು ಜೂನ್‌ 9 ರವರೆಗೆ ನಡೆಯಲಿದ್ದು, ಶನಿವಾರದಂದು ತಿಪಟೂರಿನಲ್ಲಿ ಸಮಾವೇಶಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...