Homeಕರ್ನಾಟಕಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

- Advertisement -
- Advertisement -

ಬಿಜೆಪಿ ಸರ್ಕಾರ ನಡೆಸಿದ ಪಠ್ಯಪುಸ್ತಕ ಹಗರಣದ ವಿರುದ್ಧದ ಹೋರಾಟ ರಾಜ್ಯದ ಇತರ ಪ್ರದೇಶಗಳಲ್ಲೂ ಅನುರಣಿಸಿದ್ದು, ಹಲವು ಭಾಗಗಳಲ್ಲಿ ನೂರಾರು ಪ್ರತಿಭಟನೆಗಳು ನಡೆದಿವೆ. ರಾಜಕೀಯ ದುರುದ್ದೇಶದಿಂದ ಮಾಡಲಾಗಿರುವ ತಿದ್ದುಪಡಿಯ ಕಾರಣಕ್ಕೆ ಸಾಹಿತಿ ದೇವನೂರು ಮಹಾದೇವ ಸೇರಿದಂತೆ ಹಲವಾರು ಸಾಹಿತಿಗಳು ತಮ್ಮ ಪಠ್ಯಗಳನ್ನು ಹಿಂಪಡೆದುಕೊಂಡಿದ್ದಾರೆ. ಈ ನಡುವೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರ ಸ್ವ-ಕ್ಷೇತ್ರವಾದ ತಿಪಟೂರಿನಲ್ಲಿ ಜನಸ್ಪಂದನಾ ಟ್ರಸ್ಟ್‌ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಒಕ್ಕೂಟ ‘ಜಾಗೃತ ತಿಪಟೂರು’ ಪರಿಷ್ಕೃತ ಪಠ್ಯಗಳ ವಿರುದ್ಧ ಜಾಗೃತಿ ಪಾದಯಾತ್ರೆ ನಡೆಸುತ್ತಿದೆ.

ಜುಲೈ 4 ರಂದು ತಿಪಟೂರು ತಾಲೂಕಿನ ಹಾಲ್ಕುರಿಕೆಯಲ್ಲಿ ಆರಂಭವಾಗಿರುವ ಪಾದಯಾತ್ರೆಯು ಬೈರಾಪುರ, ಘಟಕನಕೆರೆ, ರಾಮನಹಳ್ಳಿ, ಭಟ್ರಹಳ್ಳಿ ಹಾಗೂ ಹೊನ್ನವಳ್ಳಿ ಗ್ರಾಮಗಳಲ್ಲಿ ಸಂಚರಿಸಿದೆ. ಎಲ್ಲ ಗ್ರಾಮಗಳಲ್ಲಿಯೂ ಸಾರ್ವಜನಿಕ ಸಭೆ ನಡೆಸಿ, ಜನರಿಗೆ ಪಠ್ಯಪುಸ್ತಕದಲ್ಲಿರುವ ಲೋಪಗಳು ಹಾಗೂ ಅದರಿಂದ ಭವಿಷ್ಯದ ಮೇಲಾಗುವ ಪರಿಣಾಮಗಳ ಕುರಿತು ಅರಿವು ಮೂಡಿಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾದಯಾತ್ರೆಯ ಉದ್ದಕ್ಕೂ ಸಿಗುವ ಜನರಿಗೆ ಒಕ್ಕೂಟದ ಕಾರ್ಯಕರ್ತರು ಮರುಪರಿಷ್ಕೃತ ಪಠ್ಯದಲ್ಲಿರುವ ಲೋಪಗಳ ಕುರಿತು ವಿವರಿಸುತ್ತಿದ್ದಾರೆ. ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಠಿಯಿಂದ ಪಠ್ಯವನ್ನು ಹಿಂಪಡೆಯಲು ಒತ್ತಾಯಿಸಿ ಎಲ್ಲರೂ ಜೊತೆಗೂಡಬೇಕೆಂದು ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ಮರು ಷರಿಷ್ಕರಣಾ ಸಮಿತಿಯ ರಚನೆಯ ವಿರುದ್ಧವೂ ಕಿಡಿಕಾರಿರುವ ಹೋರಾಟಗಾರರು, “ಪಠ್ಯಪುಸ್ತಕಗಳ ಮರುಪರಿಷ್ಕರಣಾ ಸಮಿತಿಗೆ ವಿಕೃತ ಮನಸ್ಸಿನ, ಯಾವುದೇ ಶಿಕ್ಷಣದ ವಿದ್ವತ್ತಿನ ಹಿನ್ನೆಲೆ ಇಲ್ಲದ ವ್ಯಕ್ತಿಯಾದ ರೋಹಿತ್ ಚಕ್ರತೀರ್ಥನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ಆತ ಐದು ವರ್ಷಗಳ ಹಿಂದೆ ನಾಡಕವಿ ಕುವೆಂಪು ರಚಿಸಿದ್ದ ನಾಡಗೀತೆಯನ್ನು ಅಸಭ್ಯಗೊಳಿಸಿದ್ದ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, ಸಮಿತಿಯ ಸದಸ್ಯರುಗಳು ಒಂದೇ ಕೋಮುವಿನವರಾಗಿದ್ದು, ದುರುದ್ದೇಶದಿಂದ ಬೆಳೆಯುವ ಮಕ್ಕಳ ಏಳಿಗೆಗೆ ಮಾರಕವಾಗುವಂತಹ ಬಲಪಂಥೀಯ ಮತ್ತು ತಿರುಚಿದ ಇತಿಹಾಸವನ್ನು ಪಠ್ಯಗಳಲ್ಲಿ ಸೇರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮರುಪರಿಷ್ಕರಣೆಗೆ ಒಳಪಡಿಸಿದ ಸಂಪೂರ್ಣ ಪಠ್ಯವನ್ನು ಕೈಬಿಡಬೇಕು. ತಾಲೂಕಿನವರೇ ಆದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಕುಮ್ಮಕ್ಕಿನಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಅವರು ಕೂಡಲೇ ರಾಜ್ಯದ ಜನತೆ ಎದುರು ಕ್ಷಮೆಯಾಚಿಸಬೇಕು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಪಾದಯಾತ್ರೆಯಲ್ಲಿ ಜಾಗೃತ ತಿಪಟೂರು ಆಗ್ರಹಿಸಿದೆ.

“ಪಠ್ಯಪುಸ್ತಕಗಳಲ್ಲಿ ದೇಶದ ಸ್ವಾತಂತ್ರ್ಯ, ದಲಿತರು, ಮಹಿಳೆಯರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಸಮಾನತೆಗಾಗಿ ದುಡಿದ ಸಾವಿತ್ರಿ ಬಾ ಪುಲೆ, ಬಸವಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್, ಟಿಪ್ಪು ಸುಲ್ತಾನ್, ಕನಕದಾಸರು, ವಾಲ್ಮೀಕಿ, ಪೆರಿಯಾರ್ ರಾಮಸ್ವಾಮಿ, ಸಂಗೊಳ್ಳಿ ರಾಯಣ್ಣ, ನಾರಾಯಣ ಗುರು, ಅಕ್ಕಮಹಾದೇವಿ, ಸುರಪುರ ನಾಯಕರು, ಕುವೆಂಪು ಸೇರಿದಂತೆ ಹಲವಾರು ಮಹನೀಯರ ಇತಿಹಾಸವನ್ನು ತಿರುಚಲಾಗಿದೆ”

ಇದನ್ನೂ ಓದಿ: ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

“ತಪ್ಪು ಮಾಹಿತಿಗಳನ್ನೂ ಹಾಗೂ ಬಲಪಂಥೀಯ ಸಿದ್ಧಾಂತಗಳನ್ನು ಮಕ್ಕಳ ಮನಸ್ಸಿನಲ್ಲಿ ತುಂಬಿಸಿ, ಮಕ್ಕಳಲ್ಲಿ ದ್ವೇಷ ಬಿತ್ತುವ ಹುನ್ನಾರ ನಡೆದಿದೆ. ಇಂತಹ ತಿರುಚಿದ ವಿಚಾರಗಳನ್ನು ಮಕ್ಕಳು ಓದಬಾರದು. ಎಲ್ಲರೂ ಈ ಹುನ್ನಾರಗಳ ವಿರುದ್ಧ ಎಚ್ಚೆತ್ತುಕೊಳ್ಳಬೇಕು” ಎಂದು ಪಾದಯಾತ್ರೆಯಲ್ಲಿ ವಿವರಿಸಲಾಗುತ್ತಿದೆ.

ಪಾದಯಾತ್ರೆಯಲ್ಲಿ ಮಾತನಾಡಿದ ಜನಸ್ಪಂದನಾ ಟ್ರಸ್ಟ್‌ನ ಅಧ್ಯಕ್ಷ ಶಶಿಧರ್, “ನಾವು ಯಾವುದೇ ಪಕ್ಷದ ಪರ ಕೆಲಸ ಮಾಡುತ್ತಿಲ್ಲ. ಆದರೆ, ಬಿಜೆಪಿಗರು ತಮ್ಮ ರಾಜಕೀಯಕ್ಕೆ ನಾಡಿನ ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ನ್ಯಾಯವಲ್ಲ. ಸೌಹಾರ್ದಯುತ ನಾಡಿನಲ್ಲಿ ಒಳಗೊಳ್ಳುವಿಕೆಯಿಂದ ಬದುಕುವುದು ಮುಖ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಸಾಹಿತಿ ಎಸ್‌.ಜಿ ಸಿದ್ದರಾಮಯ್ಯ, “35 ವರ್ಷಗಳ ಕಾಲ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದೇನೆ. ಮಕ್ಕಳಿಗೆ ಯಾವ ಪಾಠ ಮುಖ್ಯವಾಗುತ್ತದೆ, ಹಿತವಾಗುತ್ತದೆ, ಬೆಳವಣಿಗೆ ಪೂರಕವಾಗಿರುತ್ತದೆ ಎಂಬುದನ್ನು ಅರಿತಿದ್ದೇನೆ. ಯಾವುದೇ ವಿಷಯದ ತಜ್ಞನಲ್ಲದವರನ್ನು ಮರುಪರಿಷ್ಕಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿ, ಅವರಿಂದ ಪಠ್ಯಗಳನ್ನು ತಿರುಚಿ ನಾಡಿಗೆ ಅನ್ಯಾಯ ಮಾಡುತ್ತಿದ್ದಾರೆ. ಕುರಿ ಕಾಯಬೇಕಾಗಿದ್ದ ನಾನು ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ನಿಮ್ಮ ಮುಂದೆ ನಿಂತು ಮಾತನಾಡುತ್ತಿದ್ದೇನೆ. ರಾಜಕೀಯ ದುರುದ್ದೇಶ ಮತ್ತು ಮತೀಯವಾದಿಗಳ ಪಿತೂರಿಗಳ ವಿರುದ್ಧ ನಾವೆಲ್ಲವೂ ಒಗ್ಗೂಡಬೇಕು” ಎಂದು ಕರೆಕೊಟ್ಟಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

ಸಭೆಗೆ ಅಡ್ಡಿಪಡಿಸಿದ ಬಿ.ಸಿ. ನಾಗೇಶ್‌ ಬೆಂಬಲಿಗರು

ಹೊನ್ನವಳ್ಳಿಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಸಭೆಗೆ ಸಚಿವ ಬಿ.ಸಿ ನಾಗೇಶ್‌ ಬೆಂಬಲಿಗರು ಅಡ್ಡಿಪಡಿಸಿದ ಘಟನೆಯೂ ನಡೆದಿದೆ. ಈ ವೇಳೆ, ಬಿಜೆಪಿ ಕಾರ್ಯಕರ್ತರು ಹಾಗೂ ಹೋರಾಟಗಾರರ ನಡುವೆ ವಾಗ್ವಾದವೂ ನಡೆಯಿತು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಆದರೂ ಪಟ್ಟುಬಿಡದ ಹೋರಾಟಗಾರರು ತಮ್ಮ ಸಭೆಯನ್ನು ಮುಂದುವರೆಸಿದ್ದಾರೆ. ‘‘ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ. ಬಿ.ಸಿ ನಾಗೇಶ್ ರಾಜೀನಾಮೆಯನ್ನು ಪಡೆದೇ ತೀರುತ್ತೇವೆ. ನಿಮಗೆ (ಬಿಜೆಪಿ) ಲಿಂಗಾಯಿತರ ಮತ ಬೇಕು, ಬಸವಣ್ಣ ಬೇಡ. ಒಕ್ಕಲಿಗರ ಮತ ಬೇಕು, ಕುವೆಂಪು-ನಾಡಪ್ರಭು ಕೆಂಪೇಗೌಡ ಬೇಡ. ದಲಿತರ ಮತ ಬೇಕು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಬೇಡ. ಕುರುಬರ ಮತ ಬೇಕು, ಕನಕದಾಸರು ಬೇಡ. ಮಹಿಳೆಯರ ಮತ ಬೇಕು, ಅಕ್ಕಮಹಾದೇವಿ-ಸಾವಿತ್ರಿ ಬಾ ಪುಲೆಯರಂತಹ ಮಹಾನ್‌ ತಾಯಂದಿರು ಬೇಡವಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿ ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ.

ಪಾದಯಾತ್ರೆಯಲ್ಲಿ ಜನ ಸ್ಪಂದನ ಟ್ರಸ್ಟ್, ರೈತ ಸಂಘ, ದಲಿತ ಸಂಘ ಕನ್ನಡ ರಕ್ಷಣಾ ವೇದಿಕೆ, ಸೌಹಾರ್ದ ವೇದಿಕೆ, ಕುವೆಂಪು ಯುವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

ಪಾದಯಾತ್ರೆ ನಡೆಯುತ್ತಿರುವ ಎಲ್ಲ ಗ್ರಾಮಗಳಲ್ಲಿಯೂ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ ಎಂದು ಸಂಘಟಕರು ಹೇಳಿದ್ದಾರೆ. ಜಾಗೃತಿ ಪಾದಯಾತ್ರೆಯು ಜೂನ್‌ 9 ರವರೆಗೆ ನಡೆಯಲಿದ್ದು, ಶನಿವಾರದಂದು ತಿಪಟೂರಿನಲ್ಲಿ ಸಮಾವೇಶಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...