Homeಕರ್ನಾಟಕಆಪರೇಷನ್ ಕಮಲ ಬಿಜೆಪಿ ಆಟ, ಶೋಭಾ ಕರಂದ್ಲಾಚೆಗೆ ಗಣಿತ ಗೊತ್ತಿಲ್ಲ: ಸಿದ್ದರಾಮಯ್ಯ

ಆಪರೇಷನ್ ಕಮಲ ಬಿಜೆಪಿ ಆಟ, ಶೋಭಾ ಕರಂದ್ಲಾಚೆಗೆ ಗಣಿತ ಗೊತ್ತಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ಒಂದು ಕಡೆ ಇಬ್ಬರು ಕಾಂಗ್ರೆಸ್ ಶಾಸಕರ ರಾಜಿನಾಮೆ ಹಿನ್ನೆಲೆಯಲ್ಲಿ ಮತ್ತೆ ಆಪರೇಷನ್ ಕಮಲ ಮುನ್ನೆಲೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವೆ ಟ್ವೀಟ್ ಸಮರ ಕೂಡ ನಡೆಯುತ್ತಿದೆ.

ಮೊದಲಿಗೆ ಇಬ್ಬರು ಶಾಸಕರು ರಾಜಿನಾಮೆ ಪ್ರಹಸನ ಶುರುವಾದಗ ಸಿದ್ದರಾಮಯ್ಯನವರು “ ಇತ್ತೀಚಿನ ರಾಜಕೀಯ ನಾಟಕಗಳು ಬಿಜೆಪಿಯವರ ಕೊಳಕು ರಾಜಕೀಯವನ್ನು ತೋರಿಸುತ್ತದೆ. ಅಸೆಂಬ್ಲಿಯಲ್ಲಿ ಬಿಜೆಪಿಗೆ ಜನತೆ ಬಹುಮತ ನೀಡದಿದ್ದರೂ ಸಹ ಅವರು ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಹವಣಿಸುತ್ತಿದ್ದಾರೆ. ನರೇಂದ್ರ ಮೋದಿಯವರಿಗೆ ಸ್ವಲ್ಪವಾದರೂ ಆತ್ಮಗೌರವವಿದ್ದಲ್ಲಿ ಅವರ ಪಕ್ಷದವರು ನಡೆಸುತ್ತಿರುವ ಅಸಾಂವಿಧಾನಿಕ ಕೃತ್ಯವನ್ನು ತಡೆಯಬೇಕು” ಎಂದು ಖಾರವಾಗಿ ಟ್ವೀಟ್ ಮಾಡಿದ್ದರು.

ಇದಕ್ಕೆ ಬಿಜೆಪಿಯ ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಚೆಯವರು ಮರು ಉತ್ತರ ನೀಡಿದ್ದರು. ಅವರು “ಪ್ರೀತಿಯ ಸಿದ್ದರಾಮಯ್ಯನವರೆ, 105>78- (ಬಿಜೆಪಿಯ 105ಕ್ಕಿಂತ ಕಾಂಗ್ರೆಸ್‍ನ 78 ಕಡಿಮೆ). ಆದರೂ ಕಾಂಗ್ರೆಸ್ ಜೆಡಿಎಸ್ ಸೇರಿ ಜನಾಭಿಪ್ರಾಯವನ್ನು ಕಡೆಗಣಿಸಿ ಅನೈತಿಕ ಸರ್ಕಾರ ರಚಿಸಿದ್ದೀರಿ. ಜನ ಬಿಜೆಪಿಗೆ ಬಹುಮತ ಕೊಟ್ಟಿದ್ದಾರೆ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿನ ಸೋಲಿನಿಂದ ನಿಮ್ಮ ಕಾಮನ್ ಸೆನ್ಸ್ ಅನ್ನು ಕಳೆದುಕೊಂಡಿದ್ದೀರಾ” ಎಂದು ಖಾರವಾಗಿ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯನವರು “ನನ್ನ ತಿಳುವಳಿಕೆ 113>105 (ಬಹುಮತಕ್ಕಿಂತ ಬಿಜೆಪಿ ಕಡಿಮೆ ಇದೆ) ಮತ್ತು 113 ಅನ್ನುವುದು ಕರ್ನಾಟಕ ವಿಧಾನಸಭೆಯಲ್ಲಿ ಯಾರಾದರೂ ಸರ್ಕಾರ ರಚಿಸಲು ಬೇಕಿರುವ ಅತ್ಯಮೂಲ್ಯ ಬಹುಮತವಾಗಿದೆ.

ಹಾಗಾಗಿ “ಏಕೀ ಮಿನಿಟ್” ತೆಗೆದುಕೊಂಡು ರಾಜಕೀಯದ ನಿಮ್ಮ ಸಣ್ಣತನವನ್ನು ಬಿಟ್ಟು ಪ್ರಜಾಪ್ರಭುತ್ವದ ಗಣಿತ ಶಾಸ್ತ್ರವನ್ನು ಕಲಿಯಿರಿ ಎಂದು ಹೇಳಿದ್ದಾರೆ. ಅವರ ಟ್ವೀಟ್‍ನಲ್ಲಿ ಇತ್ತೀಚೆಗೆ ಐಎಂಎ ಹಗರಣ ಕುರಿತು ಸಂಸತ್ತಿನಲ್ಲಿ ಹಿಂದಿಯಲ್ಲಿ ಭಾಷಣ ಮಾಡಲು ಹೋಗಿ ಮುಜುಗರಕ್ಕೊಳಗಾಗಿದ್ದ ಶೋಭಾ ಕರಂದ್ಲಾಚೆಯವರ ಏಕೀ ಮಿನಿಟ್ ಉಲ್ಲೇಖಿಸಿ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಕೋಪಗೊಂಡ ಶೋಭಾ ಕರಂದ್ಲಾಚೆಯವರು ಬಿಜೆಪಿಯ ವಿರುದ್ಧದ ನಿಮ್ಮ ನೀಚ ರಾಜಕಾರನವನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದರು.

ಮುಂದುವರಿದು ನಿಮ್ಮ 105 ಸಂಖ್ಯೆಯೊಂದಿಗೆ ಸರ್ಕಾರ ರಚಿಸಬಹುದೆಂಬ ವಿಶ್ವಾಸ ನಿಮಗಿದ್ದರೆ ರಾಜ್ಯಪಾಲರಿಗೆ ನಿಮ್ಮ ಬಹುಮತವನ್ನು ಸಾಬೀತು ಪಡಿಸಿ ಸರ್ಕಾರ ರಚಿಸಲು ಹಕ್ಕು ಮಂಡಿಸಿ. ಒಂದು ವೇಳೆ ರಾಜ್ಯಪಾಲರು ನಿಮ್ಮ ಹಕ್ಕನ್ನು ಒಪ್ಪಿಕೊಂಡಲ್ಲಿ ನಾವು ಸಂತೋಷದಿಂದ ಸರ್ಕಾರದಿಂದ ನಿರ್ಗಮಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...