Homeಕರ್ನಾಟಕಆಪರೇಷನ್ ಕಮಲ ಬಿಜೆಪಿ ಆಟ, ಶೋಭಾ ಕರಂದ್ಲಾಚೆಗೆ ಗಣಿತ ಗೊತ್ತಿಲ್ಲ: ಸಿದ್ದರಾಮಯ್ಯ

ಆಪರೇಷನ್ ಕಮಲ ಬಿಜೆಪಿ ಆಟ, ಶೋಭಾ ಕರಂದ್ಲಾಚೆಗೆ ಗಣಿತ ಗೊತ್ತಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ಒಂದು ಕಡೆ ಇಬ್ಬರು ಕಾಂಗ್ರೆಸ್ ಶಾಸಕರ ರಾಜಿನಾಮೆ ಹಿನ್ನೆಲೆಯಲ್ಲಿ ಮತ್ತೆ ಆಪರೇಷನ್ ಕಮಲ ಮುನ್ನೆಲೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ನಡುವೆ ಟ್ವೀಟ್ ಸಮರ ಕೂಡ ನಡೆಯುತ್ತಿದೆ.

ಮೊದಲಿಗೆ ಇಬ್ಬರು ಶಾಸಕರು ರಾಜಿನಾಮೆ ಪ್ರಹಸನ ಶುರುವಾದಗ ಸಿದ್ದರಾಮಯ್ಯನವರು “ ಇತ್ತೀಚಿನ ರಾಜಕೀಯ ನಾಟಕಗಳು ಬಿಜೆಪಿಯವರ ಕೊಳಕು ರಾಜಕೀಯವನ್ನು ತೋರಿಸುತ್ತದೆ. ಅಸೆಂಬ್ಲಿಯಲ್ಲಿ ಬಿಜೆಪಿಗೆ ಜನತೆ ಬಹುಮತ ನೀಡದಿದ್ದರೂ ಸಹ ಅವರು ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಹವಣಿಸುತ್ತಿದ್ದಾರೆ. ನರೇಂದ್ರ ಮೋದಿಯವರಿಗೆ ಸ್ವಲ್ಪವಾದರೂ ಆತ್ಮಗೌರವವಿದ್ದಲ್ಲಿ ಅವರ ಪಕ್ಷದವರು ನಡೆಸುತ್ತಿರುವ ಅಸಾಂವಿಧಾನಿಕ ಕೃತ್ಯವನ್ನು ತಡೆಯಬೇಕು” ಎಂದು ಖಾರವಾಗಿ ಟ್ವೀಟ್ ಮಾಡಿದ್ದರು.

ಇದಕ್ಕೆ ಬಿಜೆಪಿಯ ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಚೆಯವರು ಮರು ಉತ್ತರ ನೀಡಿದ್ದರು. ಅವರು “ಪ್ರೀತಿಯ ಸಿದ್ದರಾಮಯ್ಯನವರೆ, 105>78- (ಬಿಜೆಪಿಯ 105ಕ್ಕಿಂತ ಕಾಂಗ್ರೆಸ್‍ನ 78 ಕಡಿಮೆ). ಆದರೂ ಕಾಂಗ್ರೆಸ್ ಜೆಡಿಎಸ್ ಸೇರಿ ಜನಾಭಿಪ್ರಾಯವನ್ನು ಕಡೆಗಣಿಸಿ ಅನೈತಿಕ ಸರ್ಕಾರ ರಚಿಸಿದ್ದೀರಿ. ಜನ ಬಿಜೆಪಿಗೆ ಬಹುಮತ ಕೊಟ್ಟಿದ್ದಾರೆ. ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿನ ಸೋಲಿನಿಂದ ನಿಮ್ಮ ಕಾಮನ್ ಸೆನ್ಸ್ ಅನ್ನು ಕಳೆದುಕೊಂಡಿದ್ದೀರಾ” ಎಂದು ಖಾರವಾಗಿ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯನವರು “ನನ್ನ ತಿಳುವಳಿಕೆ 113>105 (ಬಹುಮತಕ್ಕಿಂತ ಬಿಜೆಪಿ ಕಡಿಮೆ ಇದೆ) ಮತ್ತು 113 ಅನ್ನುವುದು ಕರ್ನಾಟಕ ವಿಧಾನಸಭೆಯಲ್ಲಿ ಯಾರಾದರೂ ಸರ್ಕಾರ ರಚಿಸಲು ಬೇಕಿರುವ ಅತ್ಯಮೂಲ್ಯ ಬಹುಮತವಾಗಿದೆ.

ಹಾಗಾಗಿ “ಏಕೀ ಮಿನಿಟ್” ತೆಗೆದುಕೊಂಡು ರಾಜಕೀಯದ ನಿಮ್ಮ ಸಣ್ಣತನವನ್ನು ಬಿಟ್ಟು ಪ್ರಜಾಪ್ರಭುತ್ವದ ಗಣಿತ ಶಾಸ್ತ್ರವನ್ನು ಕಲಿಯಿರಿ ಎಂದು ಹೇಳಿದ್ದಾರೆ. ಅವರ ಟ್ವೀಟ್‍ನಲ್ಲಿ ಇತ್ತೀಚೆಗೆ ಐಎಂಎ ಹಗರಣ ಕುರಿತು ಸಂಸತ್ತಿನಲ್ಲಿ ಹಿಂದಿಯಲ್ಲಿ ಭಾಷಣ ಮಾಡಲು ಹೋಗಿ ಮುಜುಗರಕ್ಕೊಳಗಾಗಿದ್ದ ಶೋಭಾ ಕರಂದ್ಲಾಚೆಯವರ ಏಕೀ ಮಿನಿಟ್ ಉಲ್ಲೇಖಿಸಿ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಕೋಪಗೊಂಡ ಶೋಭಾ ಕರಂದ್ಲಾಚೆಯವರು ಬಿಜೆಪಿಯ ವಿರುದ್ಧದ ನಿಮ್ಮ ನೀಚ ರಾಜಕಾರನವನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದರು.

ಮುಂದುವರಿದು ನಿಮ್ಮ 105 ಸಂಖ್ಯೆಯೊಂದಿಗೆ ಸರ್ಕಾರ ರಚಿಸಬಹುದೆಂಬ ವಿಶ್ವಾಸ ನಿಮಗಿದ್ದರೆ ರಾಜ್ಯಪಾಲರಿಗೆ ನಿಮ್ಮ ಬಹುಮತವನ್ನು ಸಾಬೀತು ಪಡಿಸಿ ಸರ್ಕಾರ ರಚಿಸಲು ಹಕ್ಕು ಮಂಡಿಸಿ. ಒಂದು ವೇಳೆ ರಾಜ್ಯಪಾಲರು ನಿಮ್ಮ ಹಕ್ಕನ್ನು ಒಪ್ಪಿಕೊಂಡಲ್ಲಿ ನಾವು ಸಂತೋಷದಿಂದ ಸರ್ಕಾರದಿಂದ ನಿರ್ಗಮಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...