Homeಕರ್ನಾಟಕಪಠ್ಯ ಪುಸ್ತಕ ಹಗರಣ - ಸಚಿವ ಬಿಸಿ ನಾಗೇಶ್‌ ‘ಮೂರ್ಖ’: ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ

ಪಠ್ಯ ಪುಸ್ತಕ ಹಗರಣ – ಸಚಿವ ಬಿಸಿ ನಾಗೇಶ್‌ ‘ಮೂರ್ಖ’: ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ

- Advertisement -
- Advertisement -

ರಾಜ್ಯದ ಪಠ್ಯ ಪುಸ್ತಕ ಹಗರಣದ ಕುರಿತು ಮಾತನಾಡಿದ ಹಿರಿಯ ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಅವರು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ‘ಮೂರ್ಖ’ ಎಂದು ಬುಧವಾರ ಕರೆದಿದ್ದು, ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಕಲಾನಿಕೇತನ ಆಯೋಜಿಸಿದ್ದ ಪಠ್ಯ ಪುಸ್ತಕಗಳ ಪರಿಷ್ಕರಣೆ ಕುರಿತ ಸಂವಾದದಲ್ಲಿ ಮಾತನಾಡಿದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ನಿರಂಜನಾರಾಧ್ಯ ಅವರು, ‘‘ಸಚಿವ ಬಿ ಸಿ ನಾಗೇಶ್ ಅವರು ಎಷ್ಟು ಮೂರ್ಖರೆಂದರೆ ಅವರಿಗೆ ಶಿಕ್ಷಣದ ಬಗ್ಗೆ ಜ್ಞಾನವೇ ಇಲ್ಲ’’ ಎಂದು ಕಿಡಿಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘‘ಸಚಿವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿದ್ದರೆ, ಪಠ್ಯಕ್ರಮದ ಚೌಕಟ್ಟು ಲಭ್ಯವಿಲ್ಲ ಎಂಬ ಕಾರಣ ನೀಡಿ ಪಠ್ಯಪುಸ್ತಕ ಪರಿಷ್ಕರಣೆಗೆ ನೇಮಕಗೊಂಡ ವ್ಯಕ್ತಿಯನ್ನು ತಡೆಯುತ್ತಿದ್ದರು. ಈ ಸಮಿತಿಯನ್ನು ಹಿಂದಿನ ಸಚಿವರು ರಚಿಸಿದ್ದರು. ಆದರೆ ಸಚಿವ ಸ್ಥಾನವನ್ನು ಬಿಸಿ ನಾಗೇಶ್‌ ವಹಿಸಿಕೊಂಡ ನಂತರ, ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಯಾವುದಾದರೂ ನಿಯಮಗಳಿವೆಯೇ ಎಂಬುವುದನ್ನು ಕೂಡಾ ಅವರು ಪರಿಶೀಲಿಸಿಲ್ಲ” ಎಂದು ನಿರಂಜನಾರಾಧ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅವರು ಉದ್ದೇಶಪೂರ್ವಕವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ್ದಾರೆ ಎಂದು ಸಚಿವರ ಈ ದುರಹಂಕಾರವೇ  ಎತ್ತಿ ತೋರಿಸುತ್ತದೆ” ಎಂದು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ಉಲ್ಲೇಖಿಸಿ ನಿರಂಜನಾರಾಧ್ಯ ಹೇಳಿದ್ದಾರೆ.

ಪರಿಷ್ಕೃತ ಪಠ್ಯಪುಸ್ತಕಗಳನ್ನು ಶಾಲಾ ಮಕ್ಕಳಿಗೆ ವಿತರಿಸಲು ಸರಕಾರಕ್ಕೆ ಯಾವ ನೈತಿಕತೆ ಇದೆ ಎಂದು ನಿರಂಜನಾರಾಧ್ಯ ಪ್ರಶ್ನಿಸಿದ್ದು, ‘‘ಪರಿಷ್ಕರಣೆ ಬಳಿಕ ಯಾವುದೇ ಸಮಸ್ಯೆಗಳಿದ್ದರೆ ಸಮಿತಿ ಅಧ್ಯಕ್ಷರೇ ಹೊಣೆಗಾರರಾಗುತ್ತಾರೆ ಎಂದು ಸರಕಾರವೇ ತನ್ನ ಆದೇಶದಲ್ಲಿ ಹೇಳಿರುವಾಗ, ಇಷ್ಟೊಂದು ಆಕ್ಷೇಪಣೆಗಳು ವ್ಯಕ್ತವಾಗುತ್ತಿದ್ದರೂ ಇಲಾಖೆ ಯಾವ ಪ್ರಮಾಣದಲ್ಲಿ ಪುಸ್ತಕಗಳನ್ನು ವಿತರಿಸುತ್ತಿದೆ?’’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಕಾರ್ಯಕ್ರಮದಲ್ಲಿ ಹಿಂದಿನ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ನೇತೃತ್ವ ವಹಿಸಿದ್ದ ಹಿರಿಯ ಸಾಹಿತಿ, ಪ್ರೊಫೆಸರ್‌ ಬರಗೂರು ರಾಮಚಂದ್ರಪ್ಪ ಮಾತನಾಡಿ, ‘‘ರಾಜ್ಯದ ಧ್ವಜವನ್ನು ಒಳ ಉಡುಪಿಗೆ ಹೋಲಿಸಿದ, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ ವ್ಯಕ್ತಿಯಿಂದ ಪ್ರಮಾಣ ಪತ್ರ ಪಡೆಯುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ತಮ್ಮ ಸಮಿತಿ ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನು ಸಮರ್ಥಿಸಿಕೊಂಡ ಬರಗೂರು, “ನಾವು ಸಾವರ್ಕರ್ ಸೇರಿದಂತೆ ಯಾರ ಬಗ್ಗೆಯೂ ನಕಾರಾತ್ಮಕ ಮಾಹಿತಿಯನ್ನು ನೀಡಿಲ್ಲ” ಎಂದು ಹೇಳಿದ್ದಾರೆ.

“ಎಲ್ಲರಲ್ಲಿಯೂ ಧಾರ್ಮಿಕ ವಿಚಾರಧಾರೆ ಇರುವುದು ಸಾಮಾನ್ಯ. ಆದರೆ ಅದನ್ನು ಪಠ್ಯಪುಸ್ತಕಗಳ ಮೂಲಕ ಮಕ್ಕಳ ಮೇಲೆ ಹೇರುವುದು ಸ್ವೀಕಾರಾರ್ಹವಲ್ಲ. ಪಠ್ಯಪುಸ್ತಕಗಳನ್ನು ಬರೆಯುವಾಗ ಅಥವಾ ಪರಿಷ್ಕರಿಸುವಾಗ, ನಾವು ನಮ್ಮ ಸಿದ್ಧಾಂತದೊಂದಿಗೆ ಮಾನಸಿಕ ಅಂತರವನ್ನು ಕಾಯ್ದುಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ಸೇರಿಂದರೆ ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...