Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ...

ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

- Advertisement -
- Advertisement -

“ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯವು ಉಚಿತ ಲ್ಯಾಪ್‌ಟಾಪ್‌ಗಳನ್ನು (Free Laptop) ವಿತರಿಸುತ್ತಿದ್ದು, ಅದಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ” ಎಂದು ವಾಟ್ಸಾಪ್‌ನಲ್ಲಿ ಸಂದೇಶವೊಂದು ವೈರಲ್ ಆಗುತ್ತಿದೆ. ಈ ಸಂದೇಶದ ಜೊತೆಗೆ ಲಿಂಕ್‌ ಕೂಡಾ ಇದ್ದು, ಲಿಂಕ್‌ನಲ್ಲಿ, “ಭಾರತ ಸರ್ಕಾರ | ಶಿಕ್ಷಣ ಸಚಿವಾಲಯ” ಎಂಬ ಬರಹದೊಂದಿಗೆ ಲಾಷ್ಟ್ರ ಲಾಂಛನವಾದ ಅಶೋಕ ಸ್ತಂಭದ ಸಿಂಹಗಳ ಚಿತ್ರವು ಕಾಣುತ್ತದೆ.

ಮತ್ತೊಂದು ಸಂದೇಶದಲ್ಲಿ ಕೊರೊನಾ ಕಾರಣಕ್ಕೆ ಆನ್‌ಲೈನ್ ತರಗತಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ರೂಪಿಸಿದ್ದು ದೇಶಾದ್ಯಂತ ಎಲ್ಲಾ ಜನರಿಗೆ 5 ಲಕ್ಷ ಉಚಿತ ಲ್ಯಾಪ್‌ಟಾಪ್‌ಗಳನ್ನು ಒದಗಿಸಲು ಮುಂದಾಗಿದೆ ಎಂಬ ಶೀರ್ಷಿಕೆಯೊಂದಿಗೆ ವಾಟ್ಸಾಪ್‌ ಮತ್ತು  ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಆದರೆ, ಕೇಂದ್ರ ಸರ್ಕಾರ ನಿಜವಾಗಿಯೂ ಅಂತಹ ಯೋಜನೆಯನ್ನು ಘೋಷಿಸಿದೆಯೇ? ವೈರಲ್‌ ಸಂದೇಶದ ಸತ್ಯಾಸತ್ಯತೆ ಏನು ಎಂಬುವುದನ್ನು ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವೆಬ್‌ಸೈಟ್‌ ಅನ್ನು ಸರ್ಚ್‌ ಮಾಡಿ ವೈರಲ್ ಪೋಸ್ಟ್‌ನಲ್ಲಿ ಇರುವ ಯೋಜನೆಯನ್ನು ಕುರಿತು ಪರಿಶೀಲಿಸಿದಾಗ ಕೆಂದ್ರ ಸರ್ಕಾರ ಉಚಿತ ಲ್ಯಾಪ್‌ಟಾಪ್ ಯೋಜನೆಯನ್ನು ಜಾರಿ ಮಾಡಿದೆ ಎನ್ನುವ ಬಗ್ಗೆ ಯಾವ ಸುಳಿವು ಲಭ್ಯವಾಗಿಲ್ಲ.

ವಾಟ್ಸಾಪ್ ಸಂದೇಶದಲ್ಲಿ ಲಭ್ಯವಾಗಿರುವ ಲಿಂಕ್‌ಅನ್ನು ಪರಿಶೀಲಿಸಲಾಗಿದ್ದು ಅದರ ಮೇಲೆ ಕ್ಲಿಕ್ ಮಾಡಿದಾಗ ಒಂದು ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ ನಿಮ್ಮ ಹೆಸರನ್ನು ದಾಖಲಿಸುವಂತೆ ಕೇಳುತ್ತದೆ. ಅದನ್ನು ದಾಖಲಿಸಿ ಮುಂದುವರೆದರೆ, “ಪರಿಶೀಲನೆಯ ನಂತರ, ಉಚಿತ ಲ್ಯಾಪ್‌ಟಾಪ್ ಪಡೆಯಲು ನೀವು ಅರ್ಹತೆ ಪಡೆದಿದ್ದೀರಿ” ಎಂದು ಹೇಳಿ ಕೆಳಗಿನ ಮೂರು ಷರತ್ತನ್ನು ಇಟ್ಟು, ಅದನ್ನು ಪೂರೈಸುವಂತೆ ಕೇಳತ್ತದೆ.

  1. WhatsApp ನಲ್ಲಿ 5 ಗುಂಪುಗಳು ಅಥವಾ 15 ಸ್ನೇಹಿತರೊಂದಿಗೆ ಇದನ್ನು ಹಂಚಿಕೊಳ್ಳಿ (ಕೆಳಗಿನ “SHARE” ಐಕಾನ್ ಮೇಲೆ ಕ್ಲಿಕ್ ಮಾಡಿ).
  2. ಶೇರ್‌ ಮಾಡಿದಾಗ ಹಸಿರು ಬಾಕ್ಸ್‌ ಭರ್ತಿಯಾಗಿ ಶಿಕ್ಷಣ ಇಲಾಖೆ ಪುಟ ಸ್ವಯಂಚಾಲಿತವಾಗಿ ತೆರೆದುಕೊಳ್ಳುತ್ತದೆ.
  3. ಇದರ ದೃಢೀಕರಣವನ್ನು ನೀವು 15 ನಿಮಿಷಗಳಲ್ಲಿ SMS ಮೂಲಕ ಪಡೆಯುತ್ತೀರಿ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್

ಈ ಹಂತಗಳು ಮುಗಿದ ನಂತರ, ಅರ್ಜಿದಾರರ ವೈಯುಕ್ತಿಕ ವಿವರಗಳ್ನು ಕೇಳಲು ಪ್ರಾರಂಭಿಸುತ್ತದೆ.

ವಾಸ್ತವವಾಗಿ ಯಾವುದೇ ಸರ್ಕಾರಿ ಯೋಜನೆಗೆ ಅರ್ಜಿ ಸಲ್ಲಿಸುವ ವ್ಯಕ್ತಿಯ ವಿವರವನ್ನು ಕೇಳಲಾಗುತ್ತದೆ. ಆದರೆ ಯೋಜನೆ ಬಗ್ಗೆ ಇತರೆ 5 ವಾಟ್ಸಾಪ್ ಗುಂಪುಗಳಿಗೆ ಹಂಚಿಕೆ ಮಾಡಿ ಎಂದು ಕೇಳುವುದಿಲ್ಲ. ಹಸಿರು ಬಾಕ್ಸ್‌ ಭರ್ತಿ ಆದ ನಂತರ ಶಿಕ್ಷಣ ಇಲಾಖೆ ಪುಟ ಸ್ವಯಂ ಚಾಲಿತವಾಗಿ ತೆರೆದುಕೊಳ್ಳುತ್ತದೆ ಎಂಬ ನಿಯಮ ಇರುವುದಿಲ್ಲ.

ಈ ಎಲ್ಲಾ ವಿಚಾರಗಳನ್ನು ಗಮನಿಸಿದಾಗಲೇ ಇದು ಕೇಂದ್ರ ಸರ್ಕಾರದ ಯೋಜನೆ ಅಲ್ಲ ಎಂದು ಖಚಿತವಾಗುತ್ತದೆ.

ಅಷ್ಟೆ ಅಲ್ಲದೆ, ವೈರಲ್ ಸಂದೇಶದ ಬಗ್ಗೆ ತನಿಖೆ ನಡೆಸಿದ ಪಿಐಬಿ ಫ್ಯಾಕ್ಟ್ ಚೆಕ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ಮಾಹಿತಿಯನ್ನು ನೀಡಿದ್ದು, ಪ್ರಧಾನಿ ಉಚಿತ ಲ್ಯಾಪ್‌ಟಾಪ್  ವಿತರಣಾ ಯೋಜನೆಯಡಿ ಎಲ್ಲರಿಗೂ ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂದು ಸಂದೇಶದಲ್ಲಿ ಹೇಳಲಾಗುತ್ತಿದೆ. ಆದರೆ ಇದು ನಕಲಿ ಎಂದು ಪಿಐಬಿ ಹೇಳಿದೆ.

ಇಷ್ಟೆ ಅಲ್ಲದೆ,️ ಇಂತಹ ನಕಲಿ ಸಂದೇಶಗಳ ಬಗ್ಗೆ ಎಚ್ಚರದಿಂದಿರಿ ಎಂದು ಪಿಐಬಿ ಹೇಳಿದ್ದು, “ಇವುಗಳನ್ನು ಫಾರ್ವರ್ಡ್ ಮಾಡಬೇಡಿ/ಶೇರ್ ಮಾಡಬೇಡಿ ಹಾಗೂ️ ಅಂತಹ ಲಿಂಕ್‌ಗಳು ಮತ್ತು ವೆಬ್‌ಸೈಟ್‌ಗಳಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬೇಡಿ” ಎಂದು ಹೇಳಿದೆ.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್ ಫೋನ್ ನೀಡುತ್ತಿದೆ ಎಂದು ಈ ಹಿಂದೆಯೂ ಇಂತಹದೇ ಪೋಸ್ಟ್‌  ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದು ನಕಲಿ ಎಂದು ಏನ್‌ ಸುದ್ದಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಅದನ್ನು ನಕಲಿ ಎಂದು ನಿರೂಪಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ಅದನ್ನು ಓದುಗರು ಇಲ್ಲಿ ನೋಡಬಹುದು. ಈ ಜಾಹೀರಾತನ್ನು ನೀವು ಎಲ್ಲಾದರೂ ನೋಡಿದ್ದರೆ ಅಥವಾ ವಾಟ್ಸಾಪ್‌ನಲ್ಲಿ ನಿಮಗೆ ಬಂದಿದ್ದರೆ, ಅದನ್ನು ನಂಬಬೇಡಿ ಎಂದು ಪಿಐಬಿ ಎಚ್ಚರಿಸಿದೆ. ಅದರಲ್ಲಿ ನೀಡಿರುವ ಸಂಖ್ಯೆಗೆ ಯಾವುದೇ SMS ಕಳುಹಿಸಬೇಡಿ ಮತ್ತು ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಹೀಗೆ ಮಾಡುವುದರಿಂದ ನೀವು ವಂಚನೆಗೆ ಬಲಿಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಈ ವಂಚನೆಯ ಬಗ್ಗೆ ಇತರರಿಗೂ ಅರಿವು ಮೂಡಿಸಿ. ಇತ್ತೀಚಿನ ದಿನಗಳಲ್ಲಿ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ ಎಂದು ಹೇಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು ನಮ್ಮ ವಾಟ್ಸಪ್‌ ನಂಬರ್‌‌ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...