Homeಕರ್ನಾಟಕದ್ವೇಷ ಭಾಷಣ: ಬಿಜೆಪಿ ಬೆಂಬಲಿತ ಸಂಘಟನೆ ಹೆಚ್‌ಜೆವಿ ರಾಜ್ಯ ಸಂಚಾಲಕ ಕೇಶವ ಮೂರ್ತಿ ವಿರುದ್ಧ ಎಫ್‌ಐಆರ್‌

ದ್ವೇಷ ಭಾಷಣ: ಬಿಜೆಪಿ ಬೆಂಬಲಿತ ಸಂಘಟನೆ ಹೆಚ್‌ಜೆವಿ ರಾಜ್ಯ ಸಂಚಾಲಕ ಕೇಶವ ಮೂರ್ತಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಕುರಾನ್ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಿಜೆಪಿ ಬೆಂಬಲಿತ ಹೆಚ್‌ಜೆವಿ ಸಂಘಟನೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ ಮತ್ತು ಇತರರ ವಿರುದ್ಧ ಕೋಲಾರ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅವರ ವಿರುದ್ಧ ಅಂಜುಮನ್-ಎ-ಇಸ್ಲಾಮಿಯಾ ಸಂಘಟನೆಯ ಅಧ್ಯಕ್ಷ ಜಮೀರ್ ಅಹಮದ್ ಅವರು ದೂರು ದಾಖಲಿಸಿದ್ದರು.

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯನ್ನು ವಿರೋಧಿಸಿ ಜುಲೈ 1 ರಂದು ನಡೆದ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಕೇಶವ ಮೂರ್ತಿ, “ಕುರಾನ್ ಜನರನ್ನು ಕೊಲ್ಲು ಎಂದು ಹೇಳುತ್ತದೆ. ಆದ್ದರಿಂದ ಕುರಾನ್ ಓದುವವರು ಅದನ್ನು ಅನುಸರಿಸುತ್ತಾರೆ ಎಂದು ನೀವು ಭಾವಿಸುವುದಿಲ್ಲವೇ? ಯಾರು ಕುರಾನ್ ಅನ್ನು ಓದುತ್ತಾರೋ, ಅವರು ಭಯೋತ್ಪಾದಕರು” ಎಂದು ಹೇಳಿ ವಿವಾದ ಸೃಷ್ಟಿಸಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಶವ ಮೂರ್ತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 ಬಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿಯ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಟಿವಿ ಚರ್ಚೆಯೊಂದರಲ್ಲಿ ಮಾತನಾಡುತ್ತಾ, ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡಿದ್ದರು. ಇದರ ವಿರುದ್ದ ಹಲವಾರು ದೇಶಗಳು ಆಕ್ರೋಶ ವ್ಯಕ್ತಪಡಿಸಿತ್ತು. ತೀವ್ರ ಒತ್ತಡದಿಂದ ಬಿಜೆಪಿ ನೂಪುರ್‌ ಶರ್ಮಾ ಅವರನ್ನು ಪಕ್ಷದಿಂದ ಅಮಾನತು ಮಾಡಿತ್ತು.

ಇದನ್ನೂ ಓದಿ: ದ್ವೇಷ ಭಾಷಣ: ಬಲಪಂಥೀಯ ನಾಯಕಿ ಸಾಧ್ವಿ ಅನ್ನಪೂರ್ಣ ವಿರುದ್ಧ ಪ್ರಕರಣ ದಾಖಲು

ಇದರ ನಂತರ ಬಿಜೆಪಿ ಬೆಂಬಲಿಗರೇ ತಮ್ಮ ಪಕ್ಷದ ವಿರುದ್ಧ ತಿರುಗಿ ಬಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್‌ ಶರ್ಮಾ ಅವರನ್ನು ಬೆಂಬಲಿಸಿದ್ದರು. ಈ ವೇಳೆ ಟೈಲರ್ ಕನ್ಹಯ್ಯಾ ಲಾಲ್ ಅವರು ಕೂಡಾ ಸಾಮಾಜಿಕ ಮಾಧ್ಯಮಗಳಲ್ಲಿ ಬೆಂಬಲಿಸಿದ್ದರು. ಈ ದ್ವೇಷದಿಂದ ಇಬ್ಬರು ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ಆರೋಪಿಗಳಲ್ಲಿ ಒಬ್ಬ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎಂದು ಮಾಧ್ಯಮಗಳು ವರದಿ ಮಾಡಿದ್ದು, ಬಿಜೆಪಿ ನಾಯಕರೊಂದಿಗೆ ಆತನ ಚಿತ್ರಗಳು ವೈರಲ್ ಆಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...