Homeಕರ್ನಾಟಕಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಚುನಾವಣೆಗಳು ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ: ಸಿದ್ದರಾಮಯ್ಯ

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಸಚಿವ ನಾಗೇಶ್ ಹೇಳಿಕೆ ಅಮಾನವೀಯ, ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯವಾಗಿದ್ದು, ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ.
ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾವು ಮಾತನಾಡಬೇಕಾದರೆ ಕನಿಷ್ಠ ಮಟ್ಟದ ಪ್ರಜ್ಞೆ, ಲಜ್ಜೆ, ನೈತಿಕತೆ ಇವ್ಯಾವುಗಳೂ ಇಲ್ಲದಂತೆ ವರ್ತಿಸಲು ಪ್ರಾರಂಭಿಸುತ್ತಾರೆ. ಅದರ ಭಾಗವಾಗಿಯೆ ಕಲ್ಬುರ್ಗಿಯಲ್ಲಿ ನಿನ್ನೆ ಬಿ.ಸಿ ನಾಗೇಶ್ ಅವರು ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ’ ಎಂದು ಸಚಿವರು ಹೇಳಿದ್ದಾರೆ. ನಾನು ನಾಗೇಶ್ ಅವರನ್ನು ಕೇಳಬಯಸುತ್ತೇನೆ, ನಿಮ್ಮ ಮಕ್ಕಳಾಗಲಿ ಅಥವಾ ನೀವಾಗಲಿ ಎಂದಾದರೂ ಕಾಲಿಗೆ ಚಪ್ಪಲಿ ಇಲ್ಲದೆ ಓಡಾಡಿದ ಅನುಭವ ಇದೆಯೆ, ಅದರ ಅವಮಾನ, ಕೀಳರಿಮೆಗಳನ್ನು ಅನುಭವಿಸಿದ ಉದಾಹರಣೆಗಳಿವೆಯೆ? ಎಂದು ಅವರು ಪ್ರಶ್ನಿಸಿದ್ದಾರೆ.

“ಕಾನ್ವೆಂಟ್‌ ಸ್ಕೂಲಿಗೆ ಹೋಗುವ ಮಕ್ಕಳು ಶುಭ್ರ ಬಟ್ಟೆ, ಟೈ, ಕಾಲಿಗೆ ಶೂ, ಸಾಕ್ಸ್ ಹಾಕಿಕೊಂಡು ನಡೆದಾಡುವುದನ್ನು ನೋಡಿದಾಗ ಅದೇ ಬೀದಿಯಲ್ಲಿ, ಅದೇ ಹಳ್ಳಿಯಲ್ಲಿ ಆಟವಾಡುವ ಬಡವರ ಮಕ್ಕಳು ಬರಿಗಾಲಲ್ಲಿ, ಹರಿದ ಬಟ್ಟೆಯಲ್ಲಿದ್ದರೆ ನಿಮಗೆ ಏನೂ ಅನ್ನಿಸುವುದಿಲ್ಲವೆ? ಅಥವಾ ಆ ಕಷ್ಟದಲ್ಲಿರುವ ಮಕ್ಕಳಿಗೆ ಏನನ್ನಿಸುತ್ತದೆ ಎಂಬ ಅರಿವಾದರೂ ಇದೆಯೆ ನಿಮಗೆ? ಅವರು ಹಾಗೆಯೆ ಬರಿಗಾಲಿನಲ್ಲಿ ಇರಬೇಕೆಂದು ರಾಷ್ಟ್ರ ಭಕ್ತಿಯ ಬಗ್ಗೆ ಮಾತನಾಡುವ ಸಂಘ ನಿಮಗೆ ಹೇಳಿಕೊಟ್ಟಿದೆಯೆ? ಹೇಳಿಕೊಟ್ಟಿರಲು ಸಾಧ್ಯವಿದೆ. ಶೂದ್ರರ ಬಳಿ ವಿದ್ಯೆ, ಹಣ, ಅಧಿಕಾರಗಳು ಇರಬಾರದೆಂಬ ಕಾರಣಕ್ಕೆ ತಾನೆ ಈ ಸಂಘ ಹುಟ್ಟಿಕೊಂಡು ನಮ್ಮ ಮಕ್ಕಳ ಮೆದುಳಿಗೆ ವಿಷ ಹಾಕುತ್ತಿರುವುದು” ಎಂದು ಅವರು ಹೇಳಿದ್ದಾರೆ.

“ದಲಿತರು, ಅಲೆಮಾರಿಗಳು, ಹಿಂದುಳಿದವರ ಹಾಗೂ ಎಲ್ಲ ಜಾತಿಯ ಬಡವರ ಮಕ್ಕಳಿಗೆ ಸಣ್ಣ ಸ್ವಾಭಿಮಾನ ಇರಲಿ, ಕಲಿಯುವ, ಶಾಲೆಗೆ ಹೋಗುವ ಹುಮ್ಮಸ್ಸು ಬರಲಿ ಎಂಬ ಕಾರಣಕ್ಕೆ ನಾವು ಮಕ್ಕಳ ಸ್ನೇಹಿಯಾದ ಯೋಜನೆಗಳನ್ನು ಜಾರಿಗೆ ತಂದಿದ್ದೆವು. ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

“ನಿಮ್ಮ ಸರ್ಕಾರಕ್ಕೆ ಕನಿಷ್ಠ ಶೂ, ಸಾಕ್ಸ್, ಸೈಕಲ್‍ಗಳನ್ನೂ ನೀಡಲಾಗದಷ್ಟು ದರಿದ್ರ ಬಂದಿದೆಯೆ? ಹಾಗಿದ್ದರೆ ನಾಡಿನ ಬಡವನೊಬ್ಬನಿಂದಲೂ ವರ್ಷಕ್ಕೆ 1 ಲಕ್ಷ ರೂಪಾಯಿಗಳಷ್ಟು ತೆರಿಗೆಯನ್ನು ಮೋದಿ ಸರ್ಕಾರ ಮತ್ತು ಬೊಮ್ಮಾಯಿಯವರ ಸರ್ಕಾರಗಳು ವಸೂಲಿ ಮಾಡುತ್ತಿವೆಯೆಂದು ಪತ್ರಿಕೆಗಳು ಸಮೀಕ್ಷೆ ಮಾಡಿದ್ದವು. ಹಾಗೆ ಬಡವರಿಂದ ದೋಚಿಕೊಂಡ ತೆರಿಗೆ ಹಣವನ್ನು ಏನು ಮಾಡುತ್ತಿದ್ದೀರಿ?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

“40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಮಕ್ಕಳ ಶಿಕ್ಷಣವನ್ನೂ ನೋಡಿಕೊಳ್ಳುವ ಯೋಗ್ಯತೆ ಇಲ್ಲದ ಮೇಲೆ ನೀವು ಯಾರ ಸುಖಕ್ಕಾಗಿ ಸರ್ಕಾರ ನಡೆಸುತ್ತಿದ್ದೀರಿ? ನಿಮಗೆ ಸಣ್ಣ ಕಾಳಜಿಯೇನಾದರೂ ಇದ್ದರೆ ಹೀಗೆಲ್ಲ ಮಾತನಾಡಲು ಸಾಧ್ಯವೆ?” ಎಂದು ಅವರು ಕೇಳಿದ್ದಾರೆ.

“ಮಕ್ಕಳ ಕಲ್ಯಾಣಕ್ಕಾಗಿ ಇರುವ ಎಲ್ಲ ಹಿಂದಿನ ಯೋಜನೆಗಳನ್ನು ಮುಂದುವರೆಸಬೇಕು, ಶೂ, ಸಾಕ್ಸ್, ಸೈಕಲ್, ಹಾಲು, ಸಮವಸ್ತ್ರ, ಪುಸ್ತಕ, ವ್ಯವಸ್ಥಿತ ಕೊಠಡಿಗಳನ್ನು ಕೂಡಲೆ ಒದಗಿಸಬೇಕು. ಪ್ರವಾಹ, ಅತಿವೃಷ್ಟಿಯಿಂದ ಹಾನಿಯಾದ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ನಿರ್ಮಿಸುವ ಕೆಲಸ ಇನ್ನೂ ಆಗಿಲ್ಲ. ಅವುಗಳನ್ನು ಶೀಘ್ರವಾಗಿ ಪುನರ್ ‌ನಿರ್ಮಿಸಬೇಕು. ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ನಮ್ಮ ಸರ್ಕಾರದ ಅವಧಿಯಲ್ಲಿ 7,905 ಪ್ರಾಥಮಿಕ ಶಾಲಾ ಶಿಕ್ಷಕರು, 1,689 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಿದ್ದೆವು. ಜೊತೆಗೆ 10000 ಪಧವೀಧರ ವಿಷಯವಾರು ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಗ್ರಂಥ ಪಾಲಕರ ನೇಮಕಾತಿಯು ಅಂತಿಮಗೊಳಿಸುವ ಹಂತಕ್ಕೆ ಬಂದಿತ್ತು. ಇದರಿಂದಾಗಿ ಒಟ್ಟು 20,000 ಶಿಕ್ಷಕರ ನೇಮಕಾತಿ ಮಾಡಿದಂತಾಗಿತ್ತು. ಇದರ ಜೊತೆಗೆ ನಮ್ಮ ಅವಧಿಯಲ್ಲಿ 20,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೆವು”

“ನಮ್ಮ ಅವಧಿಯಲ್ಲಿ 1,763 ಪಿಯು ಕಾಲೇಜುಗಳ ಉಪನ್ಯಾಸಕರನ್ನು ನೇಮಕಾತಿ ಮಾಡಿದ್ದೆವು.
ನಮ್ಮ ಸರ್ಕಾರ 47 ಲಕ್ಷ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ಹಾಗೂ 5 ಲಕ್ಷ ಮಕ್ಕಳಿಗೆ ಬೈಸಿಕಲ್ ನೀಡಿದ್ದೆವು. ನಾವು ಮಕ್ಕಳ ಪೌಷ್ಟಿಕತೆ ಹೆಚ್ಚಿಸುವುದಕ್ಕಾಗಿಯೆ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ವಾರದಲ್ಲಿ 5 ದಿನ ಕೆನೆಭರಿತ ಹಾಲನ್ನು ನೀಡಿದ್ದೆವು”

“ನಾವು ಕೈಗೊಂಡ ಕ್ರಮಗಳಿಂದಾಗಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಮತ್ತು ಎನ್‍ಸಿಇಆರ್‌‌ಟಿ ಯು ರಾಜ್ಯದ ಶಾಲೆಗಳಲ್ಲಿ 3,5,8 ನೇ ತರಗತಿಗಳಲ್ಲಿ ಕಲಿಯುತ್ತಿದ್ದ 1.29 ಲಕ್ಷ ವಿದ್ಯಾರ್ಥಿಗಳಿಗೆ ನಡೆಸಿದ ರಾಷ್ಟ್ರೀಯ ಸಾಧನೆ ಸಮೀಕ್ಷೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲೆ ಇತ್ತು”

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

“ನಾವು ಮಕ್ಕಳ ಶಿಕ್ಷಣಕ್ಕಾಗಿಯೆ 1400 ಕ್ಕೂ ಹೆಚ್ಚು ಹಾಸ್ಟೆಲ್‍ಗಳು, ಆಶ್ರಮ ಶಾಲೆಗಳು, ಮತ್ತು ವಸತಿ ಶಾಲೆಗಳನ್ನು ನಿರ್ಮಿಸಿದ್ದೆವು. ಬಿಜೆಪಿ ಸರ್ಕಾರ ಎಷ್ಟನ್ನು ನಿರ್ಮಿಸಿದೆ ಎಂಬುದನ್ನು ನಾಡಿಗೆ ತಿಳಿಸಬೇಕು.
ನಮ್ಮ ಸರ್ಕಾರದ ಅವಧಿಯಲ್ಲಿ ನನ್ನ ಮಾಹಿತಿಯ ಪ್ರಕಾರ 71,279 ಕೊಠಡಿಗಳ ನವೀಕರಣ, ಪುನರ್ ನವೀಕರಣ ಕಾರ್ಯಗಳನ್ನು ಮಾಡಿ ಮುಗಿಸಿದ್ದೆವು. ಈ ಕುರಿತು ಇನ್ನಷ್ಟು ಮಾಹಿತಿಯನ್ನು ಮುಂದೆ ಬಿಡುಗಡೆ ಮಾಡುವೆ”

“ಬಿಜೆಪಿ ಸರ್ಕಾರ ಎಷ್ಟು ಜನ ಶಿಕ್ಷಕರನ್ನು ನೇಮಕ ಮಾಡಿದೆ? ಎಷ್ಟು ಜನ ಮಕ್ಕಳಿಗೆ ಸೈಕಲ್ ನೀಡಿದೆ? ಎಷ್ಟು ಶಾಲೆಗಳನ್ನು, ವಸತಿ ಶಾಲೆಗಳನ್ನು ನಿರ್ಮಿಸಿದೆ ಎಂದು ಹೇಳಬೇಕು. ಮಕ್ಕಳಿಗೆ ಶೂ, ಸಾಕ್ಸ್, ಪುಸ್ತಕ, ಸೈಕಲ್ ಅಷ್ಟೆ ಅಲ್ಲ ಸಮರ್ಪಕವಾಗಿ ವಿದ್ಯಾರ್ಥಿ ವೇತನಗಳನ್ನೂ ಬಿಜೆಪಿ ಸರ್ಕಾರಕ್ಕೆ ನೀಡಲು ಸಾಧ್ಯವಾಗಿಲ್ಲ.
ನಮ್ಮ ಸರ್ಕಾರ ತೆಗೆದುಕೊಂಡ ಕ್ರಮಗಳಿಂದ ಮಕ್ಕಳ ಅಪೌಷ್ಟಿಕತೆ ಕಡಿಮೆಯಾಗಿತ್ತು. ಶಾಲೆಗಳ ಹಾಜರಾತಿ ಹೆಚ್ಚಿತ್ತು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಈಗ ಸರ್ಕಾರವೆ ಹೈ ಕೋರ್ಟಿಗೆ ಸಲ್ಲಿಸಿರುವ ವರದಿ ಪ್ರಕಾರ ಸುಮಾರು 10.12 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ ಇದ್ದಾರೆ. ಈ ಮಕ್ಕಳ ಭವಿಷ್ಯವೇನಾಗಬಹುದು ಎಂದು ಸರ್ಕಾರ ಯೋಚಿಸಿದೆಯೆ?
ಆಡಳಿತ ಪಕ್ಷದಲ್ಲಿರುವ ಸಚಿವರು ವಿರೋಧ ಪಕ್ಷಗಳಿಗೆ ಪ್ರಶ್ನೆ ಕೇಳುವುದಲ್ಲ. ಸರ್ಕಾರದ ಕೆಲಸಗಳು ಉತ್ತರ ನೀಡುವಂತೆ ಇರಬೇಕೆ ಹೊರತು, ಮಂತ್ರದಿಂದ ಮಾವಿನ ಉದುರಿಸಲು ಸಾಧ್ಯವಿಲ್ಲ”

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

“ಅಷ್ಟಕ್ಕೂ ಶಿಕ್ಷಣ ಸಚಿವರಿಗೆ ಕಾಳಜಿ, ಬದ್ಧತೆ ಇದ್ದರೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯಲ್ಲಿ 2008 ರಿಂದ ಇದುವರೆಗೆ ಏನೇನಾಗಿದೆ? ಯಾವ ಸಾಧನೆಗಳಾಗಿವೆ ಎಂಬ ಕುರಿತು ಹಾಗೂ ಈ 14 ವರ್ಷಗಳಲ್ಲಿ ಸದರಿ ಇಲಾಖೆಯಲ್ಲಿ ಖರ್ಚು ಮಾಡಿದ ಪ್ರತಿ ಪೈಸೆಗೂ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....