Homeರಾಷ್ಟ್ರೀಯಇಸ್ಲಾಂ ವಿರೋಧಿ ಟ್ವೀಟ್‌: ಹರಿಯಾಣ ಐಟಿ ಸೆಲ್ ಮುಖ್ಯಸ್ಥನನ್ನು ಕೈಬಿಟ್ಟ ಬಿಜೆಪಿ

ಇಸ್ಲಾಂ ವಿರೋಧಿ ಟ್ವೀಟ್‌: ಹರಿಯಾಣ ಐಟಿ ಸೆಲ್ ಮುಖ್ಯಸ್ಥನನ್ನು ಕೈಬಿಟ್ಟ ಬಿಜೆಪಿ

- Advertisement -
- Advertisement -

ಮುಸ್ಲಿಮರು ಮತ್ತು ಇಸ್ಲಾಂ ವಿರುದ್ಧ ವಿವಾದಾತ್ಮಕ ಟ್ವೀಟ್‌ ಮಾಡಿದ್ದಕ್ಕಾಗಿ ಹರಿಯಾಣ ಬಿಜೆಪಿ ಐಟಿ ಸೆಲ್‌‌ ವಿಭಾಗದ ಮುಖ್ಯಸ್ಥ ಅರುಣ್ ಯಾದವ್ ಅವರನ್ನು ಪಕ್ಷವು ಗುರುವಾರ ಕೈಬಿಟ್ಟಿದೆ. ಅವರನ್ನು ಬಂಧಿಸುವಂತೆ ಒತ್ತಡಗಳು ಹೆಚ್ಚುತ್ತಿವೆ. 2018 ರ ಟ್ವೀಟ್‌ಗಾಗಿ ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಬಂಧಿಸಿರುವ ಹಿನ್ನಲೆಯಲ್ಲಿ, ಅರುಣ್ ಯಾದವ್ ಅವರನ್ನು ಕೂಡಾ ಟ್ವೀಟ್‌ ಆಧಾರದಲ್ಲಿ ಬಂಧಿಸಬೇಕು ಎಂದು ಅವರ ವಿರೋಧಿಗಳು ಅವರ ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ ಅನ್ನು ಹಂಚಿಕೊಳ್ಳುತ್ತಿದ್ದಾರೆ.

#ArrestArunYadav ಎಂಬ ಹ್ಯಾಶ್‌ ಟ್ಯಾಗ್ ಗುರುವಾರ ಟ್ವಿಟರ್‌ನಲ್ಲಿ ಟಾಪ್ ಟ್ರೆಂಡ್‌ಗಳಲ್ಲಿ ಒಂದಾಗಿತ್ತು. 2017 ಮತ್ತು ಈ ವರ್ಷದ ಮೇ ತಿಂಗಳ ನಡುವೆ ಪೋಸ್ಟ್ ಮಾಡಲಾಗಿರುವ ಅವರ ಟ್ವೀಟ್‌ಗಳನ್ನು ಸಾವಿರಾರು ಬಾರಿ ಜನರು ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರುಣ್‌ ಯಾದವ್ ವಿರುದ್ಧ ಇನ್ನೂ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ ಎಂದು ಹರಿಯಾಣ ಅಧಿಕಾರಿಗಳು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಬಿಜೆಪಿ ಅವರನ್ನು ಇನ್ನೂ ಪಕ್ಷದಿಂದ ತೆಗೆದುಹಾಕಿಲ್ಲ.

“ಬಿಜೆಪಿಯು ಮತ್ತೊಂದು ‘ಫ್ರಿಂಜ್ ಎಲಿಮೆಂಟ್’ ಅನ್ನು ವಜಾಗೊಳಿಸಿದೆ. ಆದರೆ ಈ ಕಣ್ಣಿಗೆ ಮಣ್ಣೆರೆಚುವ ಬದಲು, ಈ ‘ದ್ವೇಷದ ಗುಲಾಮರನ್ನು’ ಬಂಧನಕ್ಕೆ ಒಳಗಾಗುತ್ತಾರೆಯೆ?” ಎಂದು ಯುವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಬಿವಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ: ಬಿಜೆಪಿ ಬೆಂಬಲಿತ ಸಂಘಟನೆ ಹೆಚ್‌ಜೆವಿ ರಾಜ್ಯ ಸಂಚಾಲಕ ಕೇಶವ ಮೂರ್ತಿ ವಿರುದ್ಧ ಎಫ್‌ಐಆರ್‌

“ಹಲೋ ಹರಿಯಾಣ DGP, ದೆಹಲಿ ಪೊಲೀಸ್‌. 2018 ರ ಟ್ವೀಟ್‌ಗಾಗಿ ಜುಬೈರ್ ಅವರನ್ನು ಬಂಧಿಸಬಹುದಾದರೆ, ಅರುಣ್ ಯಾದವ್ ಯಾಕೆ ಬಂಧಿಸಬಾರದು” ಎಂದು ಟಿಪ್ಪು ಸುಲ್ತಾನ್ ಪಕ್ಷದ ಅಧ್ಯಕ್ಷ ಶೇಖ್ ಸಾದಿಕ್ ಟ್ವೀಟ್ ಮಾಡಿದ್ದಾರೆ.

ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೀಡಲಾಗಿದ್ದ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಯನ್ನು ಎತ್ತಿ ತೋರಿಸಿದ ನಂತರ ಜೂನ್ 27 ರಂದು ಜುಬೈರ್ ಅವರನ್ನು ದೆಹಲಿಯಲ್ಲಿ ಬಂಧಿಸಲಾಯಿತು.

ಜುಲೈ 2 ರಂದು, ಪೋಲೀಸರು ಜುಬೇರ್ ವಿರುದ್ಧ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯಡಿಯಲ್ಲಿ ಹೆಚ್ಚುವರಿ ಆರೋಪವನ್ನು ಸೇರಿಸಿದ್ದು, 14 ದಿನಗಳವರೆಗೆ ಕಸ್ಟಡಿಯಲ್ಲಿ ಇರಿಸಲಾಗಿದೆ. ಜುಲೈ 4 ರಂದು, ದ್ವೇಷದ ಆರೋಪ ಹೊತ್ತಿರುವ ಮೂವರು ಹಿಂದೂ ಕಟ್ಟರ್‌ವಾದಿಗಳನ್ನು “ಹೇಟ್‌ ಮೋಂಗರ್‌ಗಳು” ಎಂದು ಕರೆದಿದ್ದಕ್ಕಾಗಿ ಅವರ ವಿರುದ್ಧ ಉತ್ತರ ಪ್ರದೇಶದಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಲಾಯಿತು.

ಇದನ್ನೂ ಓದಿ: ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

ಕೊಲೆ ಬೆದರಿಕೆಗಳನ್ನು ಉಲ್ಲೇಖಿಸಿ ಜುಬೇರ್ ಅವರು ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಕಳೆದ ವಾರ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಆಕೆಯನ್ನು ಏಕೆ ಬಂಧಿಸಿಲ್ಲ ಮತ್ತು ‘ದೇಶದಾದ್ಯಂತ ಗಲಭೆ ಹೊತ್ತಿ ಉರಿಯಲು’ ಆಕೆಯೆ ಹೊಣೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...