Homeಕರ್ನಾಟಕಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

ಫೇಸ್‌ಬುಕ್‌ನಿಂದ ‘ಪ್ರತಿಧ್ವನಿ.ಕಾಂ’ ವೆಬ್‌ಸೈಟ್‌‌ಗೆ ತಡೆ; ಕಾಣದ ಕೈಗಳ ಷಢ್ಯಂತ್ರ ಎಂದು ಆಕ್ರೋಶ

- Advertisement -
- Advertisement -

ಸ್ವಯಂ ಸೇವಾ ಸಂಸ್ಥೆಯಾದ ‘ಟ್ರುಥ್ ಪ್ರೊ ಫೌಂಡೇಶನ್‌ ಇಂಡಿಯಾ’ ಮೂಲಕ ಕಳೆದ ನಾಲ್ಕು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಪ್ರತಿಧ್ವನಿ.ಕಾಂ ಸುದ್ದಿ ಪೋರ್ಟಲ್‌ ಅನ್ನು ಫೇಸ್‌ಬುಕ್ ಶುಕ್ರವಾರದಂದು ಏಕಾಏಕಿ ತಡೆ ಹಿಡಿದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರುವ ಪ್ರತಿಧ್ವನಿ.ಕಾಂ, “ಪ್ರತಿಧ್ವನಿ ವಿರುದ್ಧ ಷಢ್ಯಂತ್ರ ರೂಪಿಸಿದ್ದು, ಕಳೆದ ಕೆಲವು ತಿಂಗಳಿಂದ ಪ್ರತಿಧ್ವನಿಯ ಧ್ವನಿ ಅಡಗಿಸಲು ಕಾಣದ ಕೈಗಳು ನಡೆಸುತ್ತಿರುವ ಪ್ರಯತ್ನ ಇದಾಗಿದೆ” ಎಂದು ಹೇಳಿದೆ.

ಫೇಸ್‌ಬುಕ್ ಪ್ರತಿಧ್ವನಿ ವೆಬ್‌ಸೈಟ್‌‌ನ ಎಲ್ಲಾ ಸುದ್ದಿಗಳನ್ನು ವೆಬ್‌ಸೈಟ್‌ನ ಪೇಜ್‌ನಿಂದ ಈಗಾಗಲೆ ಡಿಲೀಟ್‌ ಮಾಡಿದೆ. ಅಷ್ಟೆ ಅಲ್ಲದೆ, ವೆಬ್‌ಸೈಟ್‌ನ ಸುದ್ದಿಗಳನ್ನು ಹಂಚಿಕೊಂಡಿದ್ದ ಇತರ ವ್ಯಕ್ತಿಗಳ ಪೋಸ್ಟ್‌ಗಳನ್ನೂ ಅದು ತೆಗೆದು ಹಾಕಿದೆ. ಜೊತೆಗೆ ಪ್ರತಿಧ್ವನಿ ವೆಬ್‌ಸೈಟ್‌ನ ಯಾವುದೇ ಹೊಸ ಸುದ್ದಿಗಳನ್ನೂ ಹಂಚಲು ಕೂಡಾ ಫೇಸ್‌ಬುಕ್ ಅನುಮತಿ ನೀಡುತ್ತಿಲ್ಲ ಎಂದು ಪ್ರತಿಧ್ವನಿ ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಳೆದ ಎರಡು ತಿಂಗಳಿಂದ ನಮ್ಮ ಅಧಿಕೃತ ಮೇಲ್ ಐಡಿ ಹ್ಯಾಕ್ ಮಾಡಿ ನಮ್ಮ ಡೇಟಾವನ್ನು ಕದಿಯಲಾಯ್ತು. ಇದರಿಂದಾಗಿ ಸಂಸ್ಥೆಯಲ್ಲಿ ಬಳಸಲಾಗುವ ಎಲ್ಲಾ ಕಂಪ್ಯೂಟರ್ ಜೊತೆಗೆ ಸಿಬ್ಬಂದಿಯ ಮೊಬೈಲ್‌ಗಳು ಸಹ ಸಂಪೂರ್ಣ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದ್ದವು. ಕೆಲವು ಮೊಬೈಲ್ ಆನ್ ಆದರೂ ಅದರಲ್ಲಿದ್ದ ಡೇಟಾ ಕಾಣೆಯಾಗಿದ್ದವು” ಎಂದು ಪ್ರತಿಧ್ವನಿ ತಂಡ ಹೇಳಿದೆ.

“ಸೈಬರ್ ಪೊಲೀಸರಿಗೆ ದೂರು ನೀಡಿದರೂ ಸಹ ಇದುವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ತಾಂತ್ರಿಕ ವರ್ಗದವರ ಸಹಾಯದಿಂದ ಎಲ್ಲವನ್ನು ಮತ್ತೊಮ್ಮೆ ರೀಸೆಟ್ ಮಾಡಿ ಕೆಲಸ ಆರಂಭಿಸಿದರೆ, ಯೂಟ್ಯೂಬ್ ಬ್ಲಾಕ್ ಮಾಡಲಾಯಿತು. ಕಳೆದ ಸೋಮವಾರವಷ್ಟೇ ಈ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಆದರೆ ಈಗ ಫೇಸ್ ಬುಕ್ ಸಮಸ್ಯೆ ಕಾಡಲಾರಂಭಿಸಿದೆ. ಈಗ ನಮ್ಮ ವೆಬ್‌ಸೈಟ್ ಲಿಂಕ್ ಅನ್ನು ಫೇಸ್‌‌‌ಬುಕ್‌ನಿಂದ ಬ್ಲಾಕ್‌‌ ಮಾಡಲಾಗಿದೆ” ಎಂದು ತಂಡವೂ ಹೇಳಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಪ್ರತಿಧ್ವನಿ ಸಂಸ್ಥಾಪಕರಾದ ಶಿವಕುಮಾರ್‌ ಸಿದ್ದಪ್ಪ,“ವೆಬ್‌ಸೈಟ್‌ನ ಯಾವುದೇ ಕಂಟೆಂಟ್‌ ಅನ್ನು ಫೇಸ್‌ಬುಕ್‌ಗೆ ಹಂಚಲು ಬಿಡುತ್ತಿಲ್ಲ. ಕೆಲವೊಂದು ವಿಡಿಯೊಗಳನ್ನು ಕೂಡಾ ತೆಗೆದು ಹಾಕಿದ್ದಾರೆ. ನಮ್ಮನ್ನು ದೂರ ಇಡಲು ಬೇಕಾಗಿ ಉದ್ದೇಶಪೂರ್ವಕವಾಗಿ ಫೇಸ್‌ಬುಕ್ ಇದನ್ನು ಮಾಡುತ್ತಿದೆ. ಈ ಹಿಂದೆ ನಿಯಮ ಉಲ್ಲಂಘನೆ ಆದರೆ ನೋಟಿಸ್ ನೀಡುತ್ತಿದ್ದರು. ಆದರೆ ಈಗ ಏಕಾಏಕಿ ಎಲ್ಲವನ್ನೂ ತೆಗೆದಿದ್ದಾರೆ. ನಮ್ಮ ಹೆಚ್ಚಿನ ಓದುಗರು ಫೇಸ್‌ಬುಕ್‌ ಮೂಲಕವೇ ಬರುತ್ತಾರೆ. ಅಲ್ಲಿ ನಮ್ಮನ್ನು ತಡೆಹಿಡಿದು ಅವರಿಗೆ ತಲುಪದಂತೆ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

“ಈ ತೊಂದರೆಯ ಬಗ್ಗೆ ನಮ್ಮ ತಾಂತ್ರಿತ ತಂಡ ಫೇಸ್‌ಬುಕ್‌ಗೆ ದೂರು ನೀಡಿದ್ದಾರೆ. ಅವರು ರಿವೀವ್ ಮಾಡಲು 48 ಗಂಟೆ ಕೇಳಿದ್ದಾರೆ. ಇಲ್ಲಿಯೆ ನೋಡಿ, ಅವರಿಗೆ ರಿವೀವ್ ಮಾಡಲು 48 ಗಂಟೆಗಳು ಬೇಕು. ಆದರೆ ತೆಗೆದು ಹಾಕಲು ಯಾವುದೇ ಸಮಯ ನೀಡಿಲ್ಲ. ಅದೂ ಕೂಡಾ ಯಾವುದೇ ನೋಟಿಸ್ ನೀಡದೆ ಎಲ್ಲವನ್ನೂ ತೆಗೆದು ಹಾಕಿದ್ದಾರೆ. ಅವರು ರಿವೀವ್‌ ಮಾಡಲು 48 ಗಂಟೆಗಳು ತೆಗೆದುಕೊಂಡ ಹಾಗೆ ನಮಗೆ ಕೂಡಾ ಒಂದು ಅವಕಾಶ ನೀಡಬೇಕಿತ್ತಲ್ಲವೆ. ಎಲ್ಲಾ ನಿಯಮಗಳನ್ನು ಮೀರಿ ಬರೆಯುವ ಎಷ್ಟೊ ವೆಬ್‌ಸೈಟ್‌ಗಳು ಫೇಸ್‌ಬುಕ್‌ನಲ್ಲಿ ಹಲವಾರು ಇವೆ. ಸರ್ಕಾರದ ಪರವಾಗಿ ಬರೆಯುವ ಅವುಗಳನ್ನು ಫೇಸ್‌ಬುಕ್‌ ಏನು ಮಾಡುವುದೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಫೇಸ್‌ಬುಕ್ ಪ್ರತಿನಿಧಿಗಳಿಗೆ ಸಂಪರ್ಕಿಸಿತ್ತಾದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ತಕ್ಷಣವೇ ಅದನ್ನು ಅಪ್‌ಡೇಟ್‌ ಮಾಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...