Homeಕರ್ನಾಟಕವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ವಕ್ರಬುದ್ಧಿಯ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ: ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ

ಪಠ್ಯಪುಸ್ತಕ ಹಗರಣ ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನಾ ಪಾದಯಾತ್ರೆ

- Advertisement -
- Advertisement -

ಬಿಜೆಪಿಯ ಪಠ್ಯ ಪುಸ್ತಕ ಹಗರಣ ವಿರೋಧಿಸಿ ಚಿಕ್ಕಮಗಳೂರಿನ ದೇವನೂರುನಿಂದ ಪ್ರಾರಂಭವಾದ ಜನ ಜಾಗೃತಿ ಪಾದಯಾತ್ರೆ ನಿಡಘಟ್ಟ ಗ್ರಾಮದ ಗಾಂಧಿ ಗುಡಿಯಲ್ಲಿ ಶುಕ್ರವಾರ ಸಮಾರೋಪಗೊಂಡಿತು. ವಿವಿಧ ಸಂಘಟನೆಗಳು ಆಯೋಜಿಸಿದ್ದ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಳಲಕೆರೆ ತಿಪ್ಪೆರುದ್ರ ಸ್ವಾಮಿಜಿ, “ಶಿಕ್ಷಣ ಜ್ಞಾನೆವೇ ಇಲ್ಲದವನಿಗೆ ಪಠ್ಯ ಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡಿರುವುದು ದೊಡ್ಡ ದುರಂತ. ವಕ್ರಬುದ್ಧಿಯ ರೋಹಿತ್ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಬೇಕು” ಎಂದು ಕರೆ ನೀಡಿದ್ದಾರೆ.

“ಬಡತನ, ಅಸೂಯೆ ನಿವಾರಣೆಗೆ ಹೋರಾಡಿದಂತಹ ಬಸವಣ್ಣ, ಬುದ್ಧ, ಅಂಬೇಡ್ಕರ್‌ ಅಂತಹ ಮಹನೀಯರ ಸಾಧನೆಯನ್ನು ಪಠ್ಯದಿಂದ ತೆಗೆದು ಅವರಿಗೆ ಅವಮಾನ ಮಾಡುವಂತಹ ಕೆಲಸ ಪ್ರಸ್ತುತ ನಡೆಯುತ್ತಿದೆ. ಇದರ ವಿರುದ್ಧ ಸಮಾಜದ ಎಲ್ಲಾ ನಾಗರೀಕರು ಒಗ್ಗಟ್ಟಾಗಿ ಹೋರಾಟ ನಡೆಬೇಕು. ಅಂಹತ ಮಹನೀಯರಿಂದಲೇ ಪ್ರಸ್ತುತ ಹಿಂದೂ ಧರ್ಮ ಉಳಿದಿರುವುದಕ್ಕೆ ಸಾಕ್ಷಿ. ಇಲ್ಲದಿದ್ದರೆ ನಮ್ಮನ್ನು ಗರ್‌ ವಾಪಸ್ಸಿ ಎಂದು ಕರೆದುಕೊಂಡು ಬರಬೇಕಿತ್ತು. ಇದನ್ನು ಅರಿಯದ ಸರ್ಕಾರ, ಶಿಕ್ಷಣ ಜ್ಞಾನೆವೇ ಇಲ್ಲದವನಿಗೆ ಪಠ್ಯ ಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡಿದರುವುದು ದೊಡ್ಡ ದುರಂತ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸರ್ಕಾರ ಮಕ್ಕಳ ಪಠ್ಯದಲ್ಲಿ ಹಸಿ ಸಳ್ಳನ್ನು ಸೇರಿಸುವ ಕೆಲಸ ಮಾಡುತ್ತಿದೆ. ಇದರಿಂದ ನಾಡಿನ ಮಹಾನೀಯರ ಇತಿಹಾಸಗಳು ಕಣ್ಮರೆಯಾಗುವ ಸಂಭವವಿರುವುದರಿಂದ ಅದನ್ನು ಪ್ರತಿಯೊಬ್ಬರು ವಿರೋಧಿಸುವ ಮೂಲಕ ಹೋರಾಟಗಳಲ್ಲಿ ಭಾಗವಹಿಸಬೇಕು. ವಕ್ರಬುದ್ಧಿಯ ರೋಹಿತ್ ಚಕ್ರತೀರ್ಥ ಪರಿಷ್ಕರಿಸುವ ಪಠ್ಯವನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ – ಸಚಿವ ಬಿಸಿ ನಾಗೇಶ್‌ ‘ಮೂರ್ಖ’: ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ

ಹಿರಿಯ ಲೇಖಕ ಎಸ್‌.ಜಿ. ಸಿದ್ದರಾಮಯ್ಯ ಅವರು ಮಾತನಾಡಿ,“ಯಾವುದೇ ಶಿಕ್ಷಣ ಹಿನ್ನೆಲೆ ಹೊಂದಿರದೇ ಟ್ಯುಟೋರಿಯಲ್ ನಡೆಸಿಕೊಂಡು ಜೀವನ ಮಾಡುತ್ತಿದ್ದ ರೋಹಿತ್ ಚಕ್ರತೀರ್ಥನಿಗೆ ರಾಜ್ಯದ ಪಠ್ಯಪುಸ್ತಕ ಪರಿಷ್ಕರಣೆಯ ದೊಡ್ಡ ಜವಾಬ್ದಾರಿ ನೀಡಿರುವುದು ವಿಪರ್ಯಾಸ. ಮುಂದಿನ ಮಕ್ಕಳ ಭವಿಷ್ಯದ ದೃಷ್ಟಿಯಲ್ಲಿ ಅವರ ಕಲಿಕೆಯ ಜೀವನ ಎಂದಿಗೂ ವ್ಯರ್ಥವಾಗಬಾರದೆಂಬುದರಿಂದ ಈ ಪರಿಷ್ಕರಣೆ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ” ಎಂದು ಹೇಳಿದ್ದಾರೆ.

“ರಾಜ್ಯದ ಯಾವ ಪಕ್ಷವು ಮಕ್ಕಳ ಪಠ್ಯ ವಿಷಯದಲ್ಲಿ ಈ ರೀತಿಯ ದ್ವಂದ್ವ ನಿಲುವುಗಳನ್ನು ಮಾಡಿರಲಿಲ್ಲ. ಪ್ರಜಾಪ್ರಭುತ್ವವಾಗಿ ಪಠ್ಯ ರಚನೆ ಮಾಡಿದ್ದರು. ಅದರೆ ಇಂದಿನ ಸರ್ಕಾರ ಬಂದಾಗಿನಿಂದ ಹಿಂದುತ್ವದ ಹೆಸರನ್ನು ಹೇಳಿಕೊಂಡು ಮಕ್ಕಳ ಪಠ್ಯದಲ್ಲೂ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿರುವುದು ದುರ್ದೈವ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಡೂರು ತಾಲೂಕಿನ ಎಸ್. ಕೊಪ್ಪಲಿನಲ್ಲಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಸ್ವಾಮೀಜಿ, “ಮನುಷ್ಯರ ನಡುವೆ ಬೇಲಿ ಕಟ್ಟಲಾಗುತ್ತಿದೆ. ಸಮಾಜದಲ್ಲಿ ವಿಷಬೀಜ ಬಿತ್ತುವವರ ಎದುರು ಜಾಗೃತಿ ಅವಶ್ಯಕವಾಗಿದೆ. ಪಠ್ಯ ಪುಸ್ತಕದಲ್ಲಿ ಸಾಕಷ್ಟು ಗೊಂದಲ ನಿರ್ಮಾಣವಾಗಿದೆ”

“ನಾಡಿನ ಅನೇಕ ಪ್ರಜ್ಞಾವಂತರು ಧ್ವನಿ ಎತ್ತಿದ ಬಳಿಕ ಮತ್ತೆ ಪರಿಷ್ಕರಣೆ ಮಾಡುತ್ತೇವೆ ಎಂದಿದ್ದರೂ, ಇನ್ನೂ ಅನೇಕ ಅವಾಂತಾರಗಳಿವೆ. ಮಕ್ಕಳಿಗೆ ಸರಿಯಾದ ಇತಿಹಾಸ, ಚಾರಿತ್ಯ್ರ ಕೊಡದಿದ್ದರೆ ಅವರ ಭವಿಷ್ಯವೇನು ಎಂಬುವುದರ ಬಗ್ಗೆ ಶಿಕ್ಷಣ ತಜ್ಞರು, ರಾಜಕೀಯ ನೇತಾರರು ಗಂಭೀರವಾಗಿ ಯೋಚಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಹಗರಣ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕ್ಷೇತ್ರ ತಿಪಟೂರಿನಲ್ಲಿ ಪಾದಯಾತ್ರೆ

ಬೆಂಗಳೂರಿನ ಶ್ರೀ ಬಸವಕುಮಾರ ಸ್ವಾಮೀಜಿ, ಕ್ಯಾತನಬೀಡು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ರವೀಶ್ ಕ್ಯಾತನಬೀಡು, ನಟರಾಜ್ ಎಸ್. ಕೊಪ್ಪಲು, ಸಾಹಿತಿ ಶ್ರೀಪಾದ ಭಟ್, ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ, ನಿವೃತ್ತ ಅಧಿಕಾರಿ ರುದ್ರಪ್ಪ, ಸಾಹಿತಿ ಬಿ. ಚಂದ್ರೇಗೌಡ, ರೇಣುಕಾ ಆರಾಧ್ಯ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...