Homeಮುಖಪುಟಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

- Advertisement -
- Advertisement -

ದೇಣಿಗೆಗಳನ್ನು ಸ್ವೀಕರಿಸಲು ಆಲ್ಟ್ ನ್ಯೂಸ್ ಬಳಸುವ ಪೇಮೆಂಟ್‌ ಗೇಟ್‌ವೇ ಆಗಿರುವ ರೇಜರ್‌ಪೇ ಸಂಸ್ಥೆಯು ಶುಕ್ರವಾರ ಪ್ರತಿಕ್ರಿಯೆ ನೀಡಿದ್ದು, “ಕೇವಲ ದೇಶೀಯ ಪಾವತಿಗಳನ್ನು ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್‌ಗೆ ಸಕ್ರಿಯಗೊಳಿಸಲಾಗಿದೆ. ಎಫ್‌ಸಿಆರ್‌ಎ ಅನುಮೋದನೆಯಿಲ್ಲದೆ ವಿದೇಶಿ ವಹಿವಾಟುಗಳನ್ನು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದೆ.

ಆಲ್ಟ್ ನ್ಯೂಸ್‌ನಿಂದ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘನೆಯಾಗಿದ್ದು, ಈ ಸಂಬಂಧ ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ಅವರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ಕಳೆದ ವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ರೇಜರ್‌ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಹರ್ಷಿಲ್ ಮಾಥುರ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ, “ತನಿಖೆಯ ವ್ಯಾಪ್ತಿಯಲ್ಲಿ ನಿರ್ದಿಷ್ಟ ಡೇಟಾವನ್ನು ಮಾತ್ರ ತನಿಖಾ ಅಧಿಕಾರಿಗಳೊಂದಿಗೆ ರೋಜರ್‌ ಪೇ ಹಂಚಿಕೊಂಡಿದೆ” ಎಂದಿದ್ದಾರೆ.

“ದೇಣಿಗೆಗಳಿಗೆ ಎಸ್‌ಸಿಆರ್‌ಎ ಅನುಮೋದನೆಯಿಲ್ಲದೆ ಅಂತರರಾಷ್ಟ್ರೀಯ ವಹಿವಾಟುಗಳನ್ನು ಅನುಮತಿಸುವುದಿಲ್ಲ. ನಮ್ಮ ನೀತಿಗೆ ಅನುಗುಣವಾಗಿ ದೇಶೀಯ ಪಾವತಿಗಳನ್ನು ಸ್ವೀಕರಿಸಲು ಸಂಬಂಧಿಸಿದ ವ್ಯವಹಾರವನ್ನು ಮಾತ್ರ ಸಕ್ರಿಯಗೊಳಿಸಲಾಗಿದೆ” ಎಂದು ಆಲ್‌ನ್ಯೂಸ್ ಹೆಸರು ಪ್ರಸ್ತಾಪಿಸದೆ ಅವರು ಹೇಳಿದ್ದಾರೆ.

“ತನಿಖಾ ಸಂಸ್ಥೆಗಳ ವಿನಂತಿಯ ನಿರ್ದಿಷ್ಟ ವ್ಯಾಪ್ತಿಯು ಯಾವುದೇ ವಿದೇಶಿ ದೇಣಿಗೆಳಿವೆಯೇ ಎಂದು ನಿರ್ಧರಿಸಲು ಮಾತ್ರ ಸೀಮಿತವಾಗಿದೆ” ಎಂದು ರೋಜರ್‌ ಪೇ ತಿಳಿಸಿದೆ.

“ಹಾಗಾಗಿ ದಾನಿಗಳ ಪ್ಯಾನ್, ವಿಳಾಸ, ಪಿನ್ ಕೋಡ್ ಇತ್ಯಾದಿಗಳನ್ನು ಹಂಚಿಕೊಳ್ಳಲಾಗಿಲ್ಲ. ಇದು ತನಿಖೆಯ ವ್ಯಾಪ್ತಿಯಿಂದ ಹೊರಗಿದೆ ಎಂದು ನಾವು ನಂಬಿದ್ದೇವೆ” ಎಂದು ಅವರು ಹೇಳಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಸಿನಿಮಾ ದೃಶ್ಯವೊಂದನ್ನು ಹಂಚಿಕೊಂಡ ಕಾರಣ ಜುಬೈರ್‌ ಅವರು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆಂದು ಟ್ವಿಟರ್‌ ಖಾತೆಯೊಂದು ಆರೋಪಿಸಿತ್ತು. ಈಗ ಅಸ್ತಿತ್ವದಲ್ಲೇ ಇರದ ಖಾತೆಯ ಆರೋಪದ ಮೇರೆಗೆ ಜುಬೈರ್‌ ಅವರನ್ನು ಬಂಧಿಸಲಾಯಿತು. ಇದರ ಜೊತೆಗೆ ಜುಬೇರ್‌ ಮೇಲೆ ಇತರ ಆರೋಪಗಳನ್ನು ಹೊರಿಸಲಾಗಿದೆ.

ಒಂದು ಪ್ರಕರಣದಲ್ಲಿ ಜಾಮೀನು

ಜುಬೇರ್‌ ಮೇಲೆ ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿದ್ದ ದ್ವೇಷ ಭಾಷಣದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಜುಬೇರ್ ತನ್ನ ಟ್ವೀಟ್‌ನಲ್ಲಿ ಯತಿ ನರಸಿಂಗಾನಂದ ಸರಸ್ವತಿ, ಭಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಎಂಬ 3 ಹಿಂದೂ ಧರ್ಮೀಯರನ್ನು ‘ದ್ವೇಷ ಪ್ರಚೋದಕರು’ ಎಂದು ಕರೆದ ಆರೋಪದ ಮೇಲೆ ಅವರ ವಿರುದ್ಧ FIR ದಾಖಲಾಗಿತ್ತು. ಐಪಿಸಿ ಸೆಕ್ಷನ್ 295-ಎ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 67 ರ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಜೂನ್ 1 ರಂದು ಜುಬೈರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿರಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

‘ತಮ್ಮ ಟ್ವೀಟ್‌ನಲ್ಲಿ ಒಂದು ವರ್ಗದ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿಲ್ಲ ಅಥವಾ ಅವಮಾನಿಸುವ ಪ್ರಯತ್ನ ಮಾಡಿಲ್ಲ. ದುಷ್ಟ ಉದ್ದೇಶದಿಂದ ಕಿರುಕುಳ ನೀಡುವುದಕ್ಕಾಗಿಯೇ ನನ್ನ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಹಾಗಾಗಿ ಅದನ್ನು ರದ್ದುಗೊಳಿಸಬೇಕೆಂದು’ ಜುಬೇರ್ ಅಹಲಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ತನಿಖೆಯು ಪ್ರಾಥಮಿಕ ಹಂತದಲ್ಲಿರುವುದರಿಂದ ಹಾಗೆ ಮಾಡಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅಜಯ್ ಕುಮಾರ್ ಶ್ರೀವಾಸ್ತವ ಅವರ ಪೀಠವು ಜೂನ್ 10ರಂದು ಜುಬೇರ್ ಮನವಿಯನ್ನು ವಜಾಗೊಳಿಸಿತ್ತು.

ತಮ್ಮ ಮೇಲೆ ಕೊಲೆ ಬೆದರಿಕೆಯನ್ನು ಉಲ್ಲೇಖಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಸುಪ್ರೀಂ ಪುರಸ್ಕರಿಸಿ ಮಧ್ಯಂತರ ಜಾಮೀನು ನೀಡಿದೆ. ಆದರೆ ದೆಹಲಿ ಪೊಲೀಸರು 2018ರ ಟ್ವೀಟ್ ಗೆ ಸಂಬಂಧಿಸಿ ಪ್ರಕರಣ ದಾಖಲಿಸಿರುವುದರಿಂದ ಅವರಿನ್ನು ಬಂಧನದಲ್ಲಿಯೇ ಮುಂದುವರಿಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದುಷ್ಟರು ಒಳ್ಳೆತನವನ್ನು, ಸತ್ಯವನ್ನು ಸ್ವಲ್ಪ ಸಮಯ ತಡೀಬಹುದೇ ಹೊರತು ಅದನ್ನು ನಾಶಪಡಿಸಲು ಅವರ ಅಪ್ಪಂದಿr8ನಂದಾನು ಸಾಧ್ಯವಿಲ್ಲ.. ಯಾಕೋ ಒಂದು ನಾಯಿ ಬೊಗಳಬೇಕಿತ್ತು…!

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...