Homeಮುಖಪುಟಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

- Advertisement -
- Advertisement -

ದೇಣಿಗೆಗಳನ್ನು ಸ್ವೀಕರಿಸಲು ಆಲ್ಟ್ ನ್ಯೂಸ್ ಬಳಸುವ ಪೇಮೆಂಟ್‌ ಗೇಟ್‌ವೇ ಆಗಿರುವ ರೇಜರ್‌ಪೇ ಸಂಸ್ಥೆಯು ಶುಕ್ರವಾರ ಪ್ರತಿಕ್ರಿಯೆ ನೀಡಿದ್ದು, “ಕೇವಲ ದೇಶೀಯ ಪಾವತಿಗಳನ್ನು ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್‌ಗೆ ಸಕ್ರಿಯಗೊಳಿಸಲಾಗಿದೆ. ಎಫ್‌ಸಿಆರ್‌ಎ ಅನುಮೋದನೆಯಿಲ್ಲದೆ ವಿದೇಶಿ ವಹಿವಾಟುಗಳನ್ನು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದೆ.

ಆಲ್ಟ್ ನ್ಯೂಸ್‌ನಿಂದ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘನೆಯಾಗಿದ್ದು, ಈ ಸಂಬಂಧ ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ಅವರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ಕಳೆದ ವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ರೇಜರ್‌ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಹರ್ಷಿಲ್ ಮಾಥುರ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ, “ತನಿಖೆಯ ವ್ಯಾಪ್ತಿಯಲ್ಲಿ ನಿರ್ದಿಷ್ಟ ಡೇಟಾವನ್ನು ಮಾತ್ರ ತನಿಖಾ ಅಧಿಕಾರಿಗಳೊಂದಿಗೆ ರೋಜರ್‌ ಪೇ ಹಂಚಿಕೊಂಡಿದೆ” ಎಂದಿದ್ದಾರೆ.

“ದೇಣಿಗೆಗಳಿಗೆ ಎಸ್‌ಸಿಆರ್‌ಎ ಅನುಮೋದನೆಯಿಲ್ಲದೆ ಅಂತರರಾಷ್ಟ್ರೀಯ ವಹಿವಾಟುಗಳನ್ನು ಅನುಮತಿಸುವುದಿಲ್ಲ. ನಮ್ಮ ನೀತಿಗೆ ಅನುಗುಣವಾಗಿ ದೇಶೀಯ ಪಾವತಿಗಳನ್ನು ಸ್ವೀಕರಿಸಲು ಸಂಬಂಧಿಸಿದ ವ್ಯವಹಾರವನ್ನು ಮಾತ್ರ ಸಕ್ರಿಯಗೊಳಿಸಲಾಗಿದೆ” ಎಂದು ಆಲ್‌ನ್ಯೂಸ್ ಹೆಸರು ಪ್ರಸ್ತಾಪಿಸದೆ ಅವರು ಹೇಳಿದ್ದಾರೆ.

“ತನಿಖಾ ಸಂಸ್ಥೆಗಳ ವಿನಂತಿಯ ನಿರ್ದಿಷ್ಟ ವ್ಯಾಪ್ತಿಯು ಯಾವುದೇ ವಿದೇಶಿ ದೇಣಿಗೆಳಿವೆಯೇ ಎಂದು ನಿರ್ಧರಿಸಲು ಮಾತ್ರ ಸೀಮಿತವಾಗಿದೆ” ಎಂದು ರೋಜರ್‌ ಪೇ ತಿಳಿಸಿದೆ.

“ಹಾಗಾಗಿ ದಾನಿಗಳ ಪ್ಯಾನ್, ವಿಳಾಸ, ಪಿನ್ ಕೋಡ್ ಇತ್ಯಾದಿಗಳನ್ನು ಹಂಚಿಕೊಳ್ಳಲಾಗಿಲ್ಲ. ಇದು ತನಿಖೆಯ ವ್ಯಾಪ್ತಿಯಿಂದ ಹೊರಗಿದೆ ಎಂದು ನಾವು ನಂಬಿದ್ದೇವೆ” ಎಂದು ಅವರು ಹೇಳಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಸಿನಿಮಾ ದೃಶ್ಯವೊಂದನ್ನು ಹಂಚಿಕೊಂಡ ಕಾರಣ ಜುಬೈರ್‌ ಅವರು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆಂದು ಟ್ವಿಟರ್‌ ಖಾತೆಯೊಂದು ಆರೋಪಿಸಿತ್ತು. ಈಗ ಅಸ್ತಿತ್ವದಲ್ಲೇ ಇರದ ಖಾತೆಯ ಆರೋಪದ ಮೇರೆಗೆ ಜುಬೈರ್‌ ಅವರನ್ನು ಬಂಧಿಸಲಾಯಿತು. ಇದರ ಜೊತೆಗೆ ಜುಬೇರ್‌ ಮೇಲೆ ಇತರ ಆರೋಪಗಳನ್ನು ಹೊರಿಸಲಾಗಿದೆ.

ಒಂದು ಪ್ರಕರಣದಲ್ಲಿ ಜಾಮೀನು

ಜುಬೇರ್‌ ಮೇಲೆ ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿದ್ದ ದ್ವೇಷ ಭಾಷಣದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಜುಬೇರ್ ತನ್ನ ಟ್ವೀಟ್‌ನಲ್ಲಿ ಯತಿ ನರಸಿಂಗಾನಂದ ಸರಸ್ವತಿ, ಭಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಎಂಬ 3 ಹಿಂದೂ ಧರ್ಮೀಯರನ್ನು ‘ದ್ವೇಷ ಪ್ರಚೋದಕರು’ ಎಂದು ಕರೆದ ಆರೋಪದ ಮೇಲೆ ಅವರ ವಿರುದ್ಧ FIR ದಾಖಲಾಗಿತ್ತು. ಐಪಿಸಿ ಸೆಕ್ಷನ್ 295-ಎ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 67 ರ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಜೂನ್ 1 ರಂದು ಜುಬೈರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿರಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

‘ತಮ್ಮ ಟ್ವೀಟ್‌ನಲ್ಲಿ ಒಂದು ವರ್ಗದ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿಲ್ಲ ಅಥವಾ ಅವಮಾನಿಸುವ ಪ್ರಯತ್ನ ಮಾಡಿಲ್ಲ. ದುಷ್ಟ ಉದ್ದೇಶದಿಂದ ಕಿರುಕುಳ ನೀಡುವುದಕ್ಕಾಗಿಯೇ ನನ್ನ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಹಾಗಾಗಿ ಅದನ್ನು ರದ್ದುಗೊಳಿಸಬೇಕೆಂದು’ ಜುಬೇರ್ ಅಹಲಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ತನಿಖೆಯು ಪ್ರಾಥಮಿಕ ಹಂತದಲ್ಲಿರುವುದರಿಂದ ಹಾಗೆ ಮಾಡಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅಜಯ್ ಕುಮಾರ್ ಶ್ರೀವಾಸ್ತವ ಅವರ ಪೀಠವು ಜೂನ್ 10ರಂದು ಜುಬೇರ್ ಮನವಿಯನ್ನು ವಜಾಗೊಳಿಸಿತ್ತು.

ತಮ್ಮ ಮೇಲೆ ಕೊಲೆ ಬೆದರಿಕೆಯನ್ನು ಉಲ್ಲೇಖಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಸುಪ್ರೀಂ ಪುರಸ್ಕರಿಸಿ ಮಧ್ಯಂತರ ಜಾಮೀನು ನೀಡಿದೆ. ಆದರೆ ದೆಹಲಿ ಪೊಲೀಸರು 2018ರ ಟ್ವೀಟ್ ಗೆ ಸಂಬಂಧಿಸಿ ಪ್ರಕರಣ ದಾಖಲಿಸಿರುವುದರಿಂದ ಅವರಿನ್ನು ಬಂಧನದಲ್ಲಿಯೇ ಮುಂದುವರಿಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದುಷ್ಟರು ಒಳ್ಳೆತನವನ್ನು, ಸತ್ಯವನ್ನು ಸ್ವಲ್ಪ ಸಮಯ ತಡೀಬಹುದೇ ಹೊರತು ಅದನ್ನು ನಾಶಪಡಿಸಲು ಅವರ ಅಪ್ಪಂದಿr8ನಂದಾನು ಸಾಧ್ಯವಿಲ್ಲ.. ಯಾಕೋ ಒಂದು ನಾಯಿ ಬೊಗಳಬೇಕಿತ್ತು…!

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...