Homeಮುಖಪುಟಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

- Advertisement -
- Advertisement -

ದೇಣಿಗೆಗಳನ್ನು ಸ್ವೀಕರಿಸಲು ಆಲ್ಟ್ ನ್ಯೂಸ್ ಬಳಸುವ ಪೇಮೆಂಟ್‌ ಗೇಟ್‌ವೇ ಆಗಿರುವ ರೇಜರ್‌ಪೇ ಸಂಸ್ಥೆಯು ಶುಕ್ರವಾರ ಪ್ರತಿಕ್ರಿಯೆ ನೀಡಿದ್ದು, “ಕೇವಲ ದೇಶೀಯ ಪಾವತಿಗಳನ್ನು ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್‌ಗೆ ಸಕ್ರಿಯಗೊಳಿಸಲಾಗಿದೆ. ಎಫ್‌ಸಿಆರ್‌ಎ ಅನುಮೋದನೆಯಿಲ್ಲದೆ ವಿದೇಶಿ ವಹಿವಾಟುಗಳನ್ನು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದೆ.

ಆಲ್ಟ್ ನ್ಯೂಸ್‌ನಿಂದ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘನೆಯಾಗಿದ್ದು, ಈ ಸಂಬಂಧ ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ಅವರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ಕಳೆದ ವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ರೇಜರ್‌ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಹರ್ಷಿಲ್ ಮಾಥುರ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ, “ತನಿಖೆಯ ವ್ಯಾಪ್ತಿಯಲ್ಲಿ ನಿರ್ದಿಷ್ಟ ಡೇಟಾವನ್ನು ಮಾತ್ರ ತನಿಖಾ ಅಧಿಕಾರಿಗಳೊಂದಿಗೆ ರೋಜರ್‌ ಪೇ ಹಂಚಿಕೊಂಡಿದೆ” ಎಂದಿದ್ದಾರೆ.

“ದೇಣಿಗೆಗಳಿಗೆ ಎಸ್‌ಸಿಆರ್‌ಎ ಅನುಮೋದನೆಯಿಲ್ಲದೆ ಅಂತರರಾಷ್ಟ್ರೀಯ ವಹಿವಾಟುಗಳನ್ನು ಅನುಮತಿಸುವುದಿಲ್ಲ. ನಮ್ಮ ನೀತಿಗೆ ಅನುಗುಣವಾಗಿ ದೇಶೀಯ ಪಾವತಿಗಳನ್ನು ಸ್ವೀಕರಿಸಲು ಸಂಬಂಧಿಸಿದ ವ್ಯವಹಾರವನ್ನು ಮಾತ್ರ ಸಕ್ರಿಯಗೊಳಿಸಲಾಗಿದೆ” ಎಂದು ಆಲ್‌ನ್ಯೂಸ್ ಹೆಸರು ಪ್ರಸ್ತಾಪಿಸದೆ ಅವರು ಹೇಳಿದ್ದಾರೆ.

“ತನಿಖಾ ಸಂಸ್ಥೆಗಳ ವಿನಂತಿಯ ನಿರ್ದಿಷ್ಟ ವ್ಯಾಪ್ತಿಯು ಯಾವುದೇ ವಿದೇಶಿ ದೇಣಿಗೆಳಿವೆಯೇ ಎಂದು ನಿರ್ಧರಿಸಲು ಮಾತ್ರ ಸೀಮಿತವಾಗಿದೆ” ಎಂದು ರೋಜರ್‌ ಪೇ ತಿಳಿಸಿದೆ.

“ಹಾಗಾಗಿ ದಾನಿಗಳ ಪ್ಯಾನ್, ವಿಳಾಸ, ಪಿನ್ ಕೋಡ್ ಇತ್ಯಾದಿಗಳನ್ನು ಹಂಚಿಕೊಳ್ಳಲಾಗಿಲ್ಲ. ಇದು ತನಿಖೆಯ ವ್ಯಾಪ್ತಿಯಿಂದ ಹೊರಗಿದೆ ಎಂದು ನಾವು ನಂಬಿದ್ದೇವೆ” ಎಂದು ಅವರು ಹೇಳಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಸಿನಿಮಾ ದೃಶ್ಯವೊಂದನ್ನು ಹಂಚಿಕೊಂಡ ಕಾರಣ ಜುಬೈರ್‌ ಅವರು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆಂದು ಟ್ವಿಟರ್‌ ಖಾತೆಯೊಂದು ಆರೋಪಿಸಿತ್ತು. ಈಗ ಅಸ್ತಿತ್ವದಲ್ಲೇ ಇರದ ಖಾತೆಯ ಆರೋಪದ ಮೇರೆಗೆ ಜುಬೈರ್‌ ಅವರನ್ನು ಬಂಧಿಸಲಾಯಿತು. ಇದರ ಜೊತೆಗೆ ಜುಬೇರ್‌ ಮೇಲೆ ಇತರ ಆರೋಪಗಳನ್ನು ಹೊರಿಸಲಾಗಿದೆ.

ಒಂದು ಪ್ರಕರಣದಲ್ಲಿ ಜಾಮೀನು

ಜುಬೇರ್‌ ಮೇಲೆ ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿದ್ದ ದ್ವೇಷ ಭಾಷಣದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಜುಬೇರ್ ತನ್ನ ಟ್ವೀಟ್‌ನಲ್ಲಿ ಯತಿ ನರಸಿಂಗಾನಂದ ಸರಸ್ವತಿ, ಭಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಎಂಬ 3 ಹಿಂದೂ ಧರ್ಮೀಯರನ್ನು ‘ದ್ವೇಷ ಪ್ರಚೋದಕರು’ ಎಂದು ಕರೆದ ಆರೋಪದ ಮೇಲೆ ಅವರ ವಿರುದ್ಧ FIR ದಾಖಲಾಗಿತ್ತು. ಐಪಿಸಿ ಸೆಕ್ಷನ್ 295-ಎ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 67 ರ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಜೂನ್ 1 ರಂದು ಜುಬೈರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿರಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

‘ತಮ್ಮ ಟ್ವೀಟ್‌ನಲ್ಲಿ ಒಂದು ವರ್ಗದ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿಲ್ಲ ಅಥವಾ ಅವಮಾನಿಸುವ ಪ್ರಯತ್ನ ಮಾಡಿಲ್ಲ. ದುಷ್ಟ ಉದ್ದೇಶದಿಂದ ಕಿರುಕುಳ ನೀಡುವುದಕ್ಕಾಗಿಯೇ ನನ್ನ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಹಾಗಾಗಿ ಅದನ್ನು ರದ್ದುಗೊಳಿಸಬೇಕೆಂದು’ ಜುಬೇರ್ ಅಹಲಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ತನಿಖೆಯು ಪ್ರಾಥಮಿಕ ಹಂತದಲ್ಲಿರುವುದರಿಂದ ಹಾಗೆ ಮಾಡಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅಜಯ್ ಕುಮಾರ್ ಶ್ರೀವಾಸ್ತವ ಅವರ ಪೀಠವು ಜೂನ್ 10ರಂದು ಜುಬೇರ್ ಮನವಿಯನ್ನು ವಜಾಗೊಳಿಸಿತ್ತು.

ತಮ್ಮ ಮೇಲೆ ಕೊಲೆ ಬೆದರಿಕೆಯನ್ನು ಉಲ್ಲೇಖಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಸುಪ್ರೀಂ ಪುರಸ್ಕರಿಸಿ ಮಧ್ಯಂತರ ಜಾಮೀನು ನೀಡಿದೆ. ಆದರೆ ದೆಹಲಿ ಪೊಲೀಸರು 2018ರ ಟ್ವೀಟ್ ಗೆ ಸಂಬಂಧಿಸಿ ಪ್ರಕರಣ ದಾಖಲಿಸಿರುವುದರಿಂದ ಅವರಿನ್ನು ಬಂಧನದಲ್ಲಿಯೇ ಮುಂದುವರಿಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದುಷ್ಟರು ಒಳ್ಳೆತನವನ್ನು, ಸತ್ಯವನ್ನು ಸ್ವಲ್ಪ ಸಮಯ ತಡೀಬಹುದೇ ಹೊರತು ಅದನ್ನು ನಾಶಪಡಿಸಲು ಅವರ ಅಪ್ಪಂದಿr8ನಂದಾನು ಸಾಧ್ಯವಿಲ್ಲ.. ಯಾಕೋ ಒಂದು ನಾಯಿ ಬೊಗಳಬೇಕಿತ್ತು…!

LEAVE A REPLY

Please enter your comment!
Please enter your name here

- Advertisment -

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...