Homeಮುಖಪುಟಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

- Advertisement -
- Advertisement -

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ಮೇಲೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಮೇ 27 ರಂದು ಪೋಸ್ಟ್ ಮಾಡಿದ ಟ್ವೀಟ್‌ನಲ್ಲಿ ಹಿಂದುತ್ವ ನಾಯಕರಾದ ಯತಿ ನರಸಿಂಗಾನಂದ, ಮಹಂತ್ ಬಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಅವರನ್ನು ‘ಹೇಟ್‌ಮಾಂಗರ್ಸ್’ (ಒಂದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುವ ವ್ಯಕ್ತಿಗಳು) ಎಂದು ಕರೆದಿದ್ದಕ್ಕಾಗಿ ಜೂನ್ 1 ರಂದು ಉತ್ತರ ಪ್ರದೇಶ ಪೊಲೀಸರು ಖೈರಾಬಾದ್ ಪೊಲೀಸ್ ಠಾಣೆಯಲ್ಲಿ ಜುಬೈರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಜುಬೇರ್‌ ಬಂಧನಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ನಡೆದ ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ, ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ.ರಾಜು ಅವರು ಸರ್ಕಾರ ಪರವಾಗಿ ಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಜರಂಗ ಮುನಿಯು ಸೀತಾಪುರದಲ್ಲಿ ದೊಡ್ಡ ಸಂಖ್ಯೆಯ ಅನುಯಾಯಿಗಳನ್ನು ಹೊಂದಿರುವ ‘ಗೌರವಾನ್ವಿತ’ ಧಾರ್ಮಿಕ ನಾಯಕ” ಎಂದು ಎಎಸ್‌ಜಿ ವಾದ ಮಾಡಿದ್ದಾರೆ.

“ನೀವು ಧಾರ್ಮಿಕ ಮುಖಂಡರನ್ನು ಹೇಟ್‌ಮಾಂಗರ್‌‌ ಎಂದು ಕರೆದರೆ, ಅದು ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದಿದ್ದಾರೆ.

ಎಎಸ್‌ಜಿ ರಾಜು ಅವರು ಯಾರನ್ನು ಗೌರವಾನ್ವಿತ ವ್ಯಕ್ತಿ ಎಂದು ಕರೆದಿದ್ದಾರೋ, ಆ ವ್ಯಕ್ತಿ ಮುಸ್ಲಿಂ ಸಮುದಾಯದ ವಿರುದ್ಧ ಸರಣಿ ದ್ವೇಷ ಭಾಷಣ ಮಾಡಿರುವ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಬಲಪಂಥೀಯ ಗುಂಪುಗಳು ನಂಬಿರುವ ಪಿತೂರಿ ಸಿದ್ಧಾಂತವಾದ ‘ಲವ್ ಜಿಹಾದ್’ಗೆ ಪ್ರತೀಕಾರವಾಗಿ ಮುಸ್ಲಿಂ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗುವುದಾಗಿ ಪದೇ ಪದೇ ಬೆದರಿಕೆ ಹಾಕಿದ ಕುಖ್ಯಾತಿಯನ್ನು ಭಜರಂಗ ಮುನಿ ಉದಾಸಿನ್ ಪಡೆದಿದ್ದಾರೆ.

ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಎಸಗುವುದಾಗಿ ಬಜರಂಗ ಮುನಿ ಬೆದರಿಕೆ ಹಾಕಿರುವ ವೈರಲ್ ವಿಡಿಯೋವನ್ನು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಮತ್ತೊಂದೆಡೆ ಬೆಂಬಲಿಗರ ದೊಡ್ಡ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಬಜರಂಗಮುನಿ, ಮುಸ್ಲಿಂ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯದ ಬೆದರಿಕೆ ಹಾಕುವುದು ವಿಡಿಯೊದಲ್ಲಿ ದಾಖಲಾಗಿದೆ. ಮುಸ್ಲಿಮರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾ, “ನಾನು ಸತ್ತರೂ ಇಲ್ಲಿನ ಹಿಂದೂಗಳಿಗೆ ಸಾಕಷ್ಟು ತಾಪವನ್ನು ಬಿಟ್ಟು ಹೋಗುತ್ತೇನೆ. ಹಿಂದೂಗಳು ಖೈರಾಬಾದ್ ಅನ್ನು ಶ್ರೀರಾಮನಗರವನ್ನಾಗಿ ಮಾಡುತ್ತಾರೆ. ನಾನು ಇದನ್ನು ಬಹಿರಂಗವಾಗಿ ಹೇಳುತ್ತೇನೆ- ನೀವು ಒಬ್ಬ ಹಿಂದೂವನ್ನು ಕೊಂದರೆ, ನಾನು 10 ಮುಸ್ಲಿಮರನ್ನು ಕೊಲ್ಲುತ್ತೇನೆ” ಎನ್ನುತ್ತಾರೆ.

ಮುಸ್ಲಿಂ ಮಹಿಳೆಯರನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ ಬಜರಂಗಮುನಿ, “ಒಬ್ಬ ಹಿಂದೂ ಹುಡುಗಿಯನ್ನು ಲವ್ ಜಿಹಾದ್‌ಗೆ ಸಿಲುಕಿಸಿ ದೌರ್ಜನ್ಯ ಎಸಗಿದರೆ, ನಾನು 10 ಮುಸ್ಲಿಂ ಹುಡುಗಿಯರನ್ನು ‘ಲವ್ ಸನಾತನ’ಕ್ಕೆ ಸಿಲುಕಿಸಿ ಕಿರುಕುಳ ನೀಡುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ.

ಬಜರಂಗ ಮುನಿಯನ್ನು ಏಪ್ರಿಲ್ 13 ರಂದು ಬಂಧಿಸಿ, ಏಪ್ರಿಲ್ 24 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ ನಂತರ ಬಜರಂಗಮುನಿ, “ನಾನು ನೀಡಿದ ಹೇಳಿಕೆಗಳಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನ್ನ ಧರ್ಮಕ್ಕಾಗಿ ನಾನು 1,000 ಬಾರಿ ಜೈಲಿಗೆ ಹೋಗುತ್ತೇನೆ. ನಾನು ನನ್ನ ಧರ್ಮಕ್ಕಾಗಿ ಏನು ಬೇಕಾದರೂ ಮಾಡುತ್ತೇನೆ, ನನ್ನನ್ನೇ ತ್ಯಾಗ ಕೂಡ ಮಾಡುತ್ತೇನೆ” ಎನ್ನುತ್ತಾರೆ.

ಇದನ್ನೂ ಓದಿರಿ: ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆ ಸಮಯದಲ್ಲಿ ವೀಡಿಯೊವನ್ನು ಟ್ವೀಟ್ ಮಾಡಿದ ಜುಬೈರ್ ಅವರನ್ನು “ಹಿಂದೂ ವಿರೋಧಿ” ಎಂದು ಆರೋಪಿಸುತ್ತಾರೆ. “ನೀವು ಅವರ ಪ್ರೊಫೈಲ್ ಅನ್ನು ಪರಿಶೀಲಿಸಿದರೆ, ಹಿಂದೂ ವಿರೋಧಿಯಲ್ಲದ ಒಂದೇ ಒಂದು ಪೋಸ್ಟ್ ಇಲ್ಲ. ಅವರು ಮಾನವತಾವಾದಿ ಅಥವಾ ಜಾತ್ಯತೀತ ವ್ಯಕ್ತಿಯಾಗಿದ್ದರೆ, ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದೌರ್ಜನ್ಯ ಅಥವಾ ಅವರ ದ್ವೇಷದ ಭಾಷಣಗಳ ಬಗ್ಗೆ ಪೋಸ್ಟ್ ಮಾಡುತ್ತಿದ್ದರು. ಆದರೆ ಅವರು ಹಿಂದೂಗಳನ್ನು ಆಕ್ರಮಣಕಾರಿ ಎಂದು ತೋರಿಸುವ ಟ್ವೀಟ್‌ಗಳನ್ನು ಮಾತ್ರ ಪೋಸ್ಟ್ ಮಾಡಿದ್ದಾರೆ” ಎಂದು ದೂರುತ್ತಾರೆ.

ದ್ವೇಷ ಭಾಷಣ ಪ್ರಕರಣಗಳ ಹೊರತಾಗಿ ಭಜರಂಗ ಮುನಿ 2021ರಲ್ಲಿ ಮೂವರು ಮುಸ್ಲಿಂ ಸಹೋದರರಿಂದ ಹಿಂಸಾತ್ಮಕವಾಗಿ ಭೂಕಬಳಿಕೆ ಮಾಡಿದ ಆರೋಪ ಹೊಂದಿದ್ದಾರೆ. ಭಜರಂಗ ಮುನಿಯು ಮುಸ್ಲಿಂ ಸಹೋದರರ  ವಿರುದ್ಧ ಪ್ರತಿ ಪ್ರಕರಣವನ್ನು ದಾಖಲಿಸಿದ ನಂತರ ಮೂವರು ಸಹೋದರರು ಐದು ತಿಂಗಳು ಜೈಲಿನಲ್ಲಿ ಕಳೆಯುತ್ತಾರೆ. ಆದರೆ ಈ ಪ್ರಕರಣದಲ್ಲಿ ಮಹಂತ್ ಅವರನ್ನು ಇಂದಿಗೂ ಬಂಧಿಸಲಾಗಿಲ್ಲ.

ಮೂಲ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಪಂಚದ ಎಲ್ಲ ಪ್ರಜಾಪ್ರಭುತ್ವ, ಸಾಂವಿಧಾನಿಕ ದೇಶಗಳು ನಮ್ಮ ದೇಶಕ್ಕೆ ಛಿಮಾರಿ ಹಾಕಿದ್ರು ಇನ್ನು ಇವರ ಕೋಮು ಭಾವನೆ ಕುಗ್ಗಲೇ ಇಲ್ಲ ಇಲ್ಲಿ ಬೇಲಿ ಹೊಲ ಮೆಯುತ್ತಿಲ್ಲ ಇಡೀ ಹೊಲವನ್ನೇ ಅಕ್ರಮಿಸಿಕೊಂಡಿದೆ ಇದೆ ನಮ್ಮ ನಿಜವಾದ ಭಾರತೀಯರ ವಿಪರ್ಯಾಸ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...