Homeಮುಖಪುಟಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

- Advertisement -
- Advertisement -

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ಮೇಲೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಮೇ 27 ರಂದು ಪೋಸ್ಟ್ ಮಾಡಿದ ಟ್ವೀಟ್‌ನಲ್ಲಿ ಹಿಂದುತ್ವ ನಾಯಕರಾದ ಯತಿ ನರಸಿಂಗಾನಂದ, ಮಹಂತ್ ಬಜರಂಗ ಮುನಿ ಮತ್ತು ಆನಂದ್ ಸ್ವರೂಪ್ ಅವರನ್ನು ‘ಹೇಟ್‌ಮಾಂಗರ್ಸ್’ (ಒಂದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುವ ವ್ಯಕ್ತಿಗಳು) ಎಂದು ಕರೆದಿದ್ದಕ್ಕಾಗಿ ಜೂನ್ 1 ರಂದು ಉತ್ತರ ಪ್ರದೇಶ ಪೊಲೀಸರು ಖೈರಾಬಾದ್ ಪೊಲೀಸ್ ಠಾಣೆಯಲ್ಲಿ ಜುಬೈರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಜುಬೇರ್‌ ಬಂಧನಕ್ಕೆ ಸಂಬಂಧಿಸಿದಂತೆ ಜುಲೈ 8ರಂದು ನಡೆದ ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ, ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ.ರಾಜು ಅವರು ಸರ್ಕಾರ ಪರವಾಗಿ ಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಜರಂಗ ಮುನಿಯು ಸೀತಾಪುರದಲ್ಲಿ ದೊಡ್ಡ ಸಂಖ್ಯೆಯ ಅನುಯಾಯಿಗಳನ್ನು ಹೊಂದಿರುವ ‘ಗೌರವಾನ್ವಿತ’ ಧಾರ್ಮಿಕ ನಾಯಕ” ಎಂದು ಎಎಸ್‌ಜಿ ವಾದ ಮಾಡಿದ್ದಾರೆ.

“ನೀವು ಧಾರ್ಮಿಕ ಮುಖಂಡರನ್ನು ಹೇಟ್‌ಮಾಂಗರ್‌‌ ಎಂದು ಕರೆದರೆ, ಅದು ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದಿದ್ದಾರೆ.

ಎಎಸ್‌ಜಿ ರಾಜು ಅವರು ಯಾರನ್ನು ಗೌರವಾನ್ವಿತ ವ್ಯಕ್ತಿ ಎಂದು ಕರೆದಿದ್ದಾರೋ, ಆ ವ್ಯಕ್ತಿ ಮುಸ್ಲಿಂ ಸಮುದಾಯದ ವಿರುದ್ಧ ಸರಣಿ ದ್ವೇಷ ಭಾಷಣ ಮಾಡಿರುವ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಬಲಪಂಥೀಯ ಗುಂಪುಗಳು ನಂಬಿರುವ ಪಿತೂರಿ ಸಿದ್ಧಾಂತವಾದ ‘ಲವ್ ಜಿಹಾದ್’ಗೆ ಪ್ರತೀಕಾರವಾಗಿ ಮುಸ್ಲಿಂ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗುವುದಾಗಿ ಪದೇ ಪದೇ ಬೆದರಿಕೆ ಹಾಕಿದ ಕುಖ್ಯಾತಿಯನ್ನು ಭಜರಂಗ ಮುನಿ ಉದಾಸಿನ್ ಪಡೆದಿದ್ದಾರೆ.

ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಎಸಗುವುದಾಗಿ ಬಜರಂಗ ಮುನಿ ಬೆದರಿಕೆ ಹಾಕಿರುವ ವೈರಲ್ ವಿಡಿಯೋವನ್ನು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಎನ್‌ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಮತ್ತೊಂದೆಡೆ ಬೆಂಬಲಿಗರ ದೊಡ್ಡ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಬಜರಂಗಮುನಿ, ಮುಸ್ಲಿಂ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯದ ಬೆದರಿಕೆ ಹಾಕುವುದು ವಿಡಿಯೊದಲ್ಲಿ ದಾಖಲಾಗಿದೆ. ಮುಸ್ಲಿಮರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾ, “ನಾನು ಸತ್ತರೂ ಇಲ್ಲಿನ ಹಿಂದೂಗಳಿಗೆ ಸಾಕಷ್ಟು ತಾಪವನ್ನು ಬಿಟ್ಟು ಹೋಗುತ್ತೇನೆ. ಹಿಂದೂಗಳು ಖೈರಾಬಾದ್ ಅನ್ನು ಶ್ರೀರಾಮನಗರವನ್ನಾಗಿ ಮಾಡುತ್ತಾರೆ. ನಾನು ಇದನ್ನು ಬಹಿರಂಗವಾಗಿ ಹೇಳುತ್ತೇನೆ- ನೀವು ಒಬ್ಬ ಹಿಂದೂವನ್ನು ಕೊಂದರೆ, ನಾನು 10 ಮುಸ್ಲಿಮರನ್ನು ಕೊಲ್ಲುತ್ತೇನೆ” ಎನ್ನುತ್ತಾರೆ.

ಮುಸ್ಲಿಂ ಮಹಿಳೆಯರನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ ಬಜರಂಗಮುನಿ, “ಒಬ್ಬ ಹಿಂದೂ ಹುಡುಗಿಯನ್ನು ಲವ್ ಜಿಹಾದ್‌ಗೆ ಸಿಲುಕಿಸಿ ದೌರ್ಜನ್ಯ ಎಸಗಿದರೆ, ನಾನು 10 ಮುಸ್ಲಿಂ ಹುಡುಗಿಯರನ್ನು ‘ಲವ್ ಸನಾತನ’ಕ್ಕೆ ಸಿಲುಕಿಸಿ ಕಿರುಕುಳ ನೀಡುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ.

ಬಜರಂಗ ಮುನಿಯನ್ನು ಏಪ್ರಿಲ್ 13 ರಂದು ಬಂಧಿಸಿ, ಏಪ್ರಿಲ್ 24 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಿಡುಗಡೆಯಾದ ನಂತರ ಬಜರಂಗಮುನಿ, “ನಾನು ನೀಡಿದ ಹೇಳಿಕೆಗಳಿಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನ್ನ ಧರ್ಮಕ್ಕಾಗಿ ನಾನು 1,000 ಬಾರಿ ಜೈಲಿಗೆ ಹೋಗುತ್ತೇನೆ. ನಾನು ನನ್ನ ಧರ್ಮಕ್ಕಾಗಿ ಏನು ಬೇಕಾದರೂ ಮಾಡುತ್ತೇನೆ, ನನ್ನನ್ನೇ ತ್ಯಾಗ ಕೂಡ ಮಾಡುತ್ತೇನೆ” ಎನ್ನುತ್ತಾರೆ.

ಇದನ್ನೂ ಓದಿರಿ: ಆಲ್ಟ್‌ ನ್ಯೂಸ್‌ ವಿದೇಶಿ ದೇಣಿಗೆ ಸ್ವೀಕರಿಸಿಲ್ಲ: ರೋಜರ್‌ಪೇ ಸ್ಪಷ್ಟನೆ

ಆ ಸಮಯದಲ್ಲಿ ವೀಡಿಯೊವನ್ನು ಟ್ವೀಟ್ ಮಾಡಿದ ಜುಬೈರ್ ಅವರನ್ನು “ಹಿಂದೂ ವಿರೋಧಿ” ಎಂದು ಆರೋಪಿಸುತ್ತಾರೆ. “ನೀವು ಅವರ ಪ್ರೊಫೈಲ್ ಅನ್ನು ಪರಿಶೀಲಿಸಿದರೆ, ಹಿಂದೂ ವಿರೋಧಿಯಲ್ಲದ ಒಂದೇ ಒಂದು ಪೋಸ್ಟ್ ಇಲ್ಲ. ಅವರು ಮಾನವತಾವಾದಿ ಅಥವಾ ಜಾತ್ಯತೀತ ವ್ಯಕ್ತಿಯಾಗಿದ್ದರೆ, ಹಿಂದೂಗಳ ಮೇಲೆ ಮುಸ್ಲಿಮರು ನಡೆಸಿದ ದೌರ್ಜನ್ಯ ಅಥವಾ ಅವರ ದ್ವೇಷದ ಭಾಷಣಗಳ ಬಗ್ಗೆ ಪೋಸ್ಟ್ ಮಾಡುತ್ತಿದ್ದರು. ಆದರೆ ಅವರು ಹಿಂದೂಗಳನ್ನು ಆಕ್ರಮಣಕಾರಿ ಎಂದು ತೋರಿಸುವ ಟ್ವೀಟ್‌ಗಳನ್ನು ಮಾತ್ರ ಪೋಸ್ಟ್ ಮಾಡಿದ್ದಾರೆ” ಎಂದು ದೂರುತ್ತಾರೆ.

ದ್ವೇಷ ಭಾಷಣ ಪ್ರಕರಣಗಳ ಹೊರತಾಗಿ ಭಜರಂಗ ಮುನಿ 2021ರಲ್ಲಿ ಮೂವರು ಮುಸ್ಲಿಂ ಸಹೋದರರಿಂದ ಹಿಂಸಾತ್ಮಕವಾಗಿ ಭೂಕಬಳಿಕೆ ಮಾಡಿದ ಆರೋಪ ಹೊಂದಿದ್ದಾರೆ. ಭಜರಂಗ ಮುನಿಯು ಮುಸ್ಲಿಂ ಸಹೋದರರ  ವಿರುದ್ಧ ಪ್ರತಿ ಪ್ರಕರಣವನ್ನು ದಾಖಲಿಸಿದ ನಂತರ ಮೂವರು ಸಹೋದರರು ಐದು ತಿಂಗಳು ಜೈಲಿನಲ್ಲಿ ಕಳೆಯುತ್ತಾರೆ. ಆದರೆ ಈ ಪ್ರಕರಣದಲ್ಲಿ ಮಹಂತ್ ಅವರನ್ನು ಇಂದಿಗೂ ಬಂಧಿಸಲಾಗಿಲ್ಲ.

ಮೂಲ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಪಂಚದ ಎಲ್ಲ ಪ್ರಜಾಪ್ರಭುತ್ವ, ಸಾಂವಿಧಾನಿಕ ದೇಶಗಳು ನಮ್ಮ ದೇಶಕ್ಕೆ ಛಿಮಾರಿ ಹಾಕಿದ್ರು ಇನ್ನು ಇವರ ಕೋಮು ಭಾವನೆ ಕುಗ್ಗಲೇ ಇಲ್ಲ ಇಲ್ಲಿ ಬೇಲಿ ಹೊಲ ಮೆಯುತ್ತಿಲ್ಲ ಇಡೀ ಹೊಲವನ್ನೇ ಅಕ್ರಮಿಸಿಕೊಂಡಿದೆ ಇದೆ ನಮ್ಮ ನಿಜವಾದ ಭಾರತೀಯರ ವಿಪರ್ಯಾಸ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...