Homeಮುಖಪುಟಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

- Advertisement -
- Advertisement -

ಎಲ್ಲಾ ಶಾಲಾ ಮಕ್ಕಳಿಗೆ ಸಂಸ್ಕೃತವನ್ನು ಕಡ್ಡಾಯವಾಗಿ ತೃತೀಯ ಭಾಷೆಯಾಗಿ ಕಲಿಸಲು, ಮನುಸ್ಮೃತಿ ಮತ್ತು ಪ್ರಾಚೀನ ಸಂಖ್ಯಾ ಪದ್ಧತಿಗಳನ್ನು ಪಠ್ಯಕ್ರಮದಲ್ಲಿ ಪರಿಚಯಿಸಲು ರಾಜ್ಯ ಸರ್ಕಾರ ಎನ್‌ಸಿಇಆರ್‌ಟಿಗೆ ಪ್ರಸ್ತಾವನೆ ಸಲ್ಲಿಸಿದೆ.

“ಪೈಥಾಗರಸ್ ಪ್ರಮೇಯ, ನ್ಯೂಟನ್‌ನ ತಲೆಯ ಮೇಲೆ ಸೇಬು ಬೀಳುವ ಪ್ರಸಂಗ ಇತ್ಯಾದಿ ಸುಳ್ಳುಗಳನ್ನು ಹೇಗೆ ರಚಿಸಲಾಗುತ್ತಿದೆ ಮತ್ತು ಪ್ರಚಾರ ಮಾಡಲಾಗುತ್ತಿದೆ” ಎಂದು ಪ್ರಶ್ನಿಸಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು ಎಂದು ತಿಳಿಸಿದೆ.

ರಾಜ್ಯ ಸರ್ಕಾರದಿಂದ ಸಲ್ಲಿಕೆಯಾಗಿರುವ ಪ್ರಸ್ತಾವನೆ ಸಂಬಂಧಿಸಿದಂತೆ ಕರ್ನಾಟಕದ ಶಿಕ್ಷಣ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎನ್‌ಇಪಿ ಅಡಿಯಲ್ಲಿ ರಾಜ್ಯ ಪಠ್ಯಕ್ರಮವನ್ನು ಎನ್‌ಸಿಇಆರ್‌ಟಿ ವೆಬ್‌ಸೈಟ್‌ಗೆ ಕಳುಹಿಸಬೇಕು. ಪ್ರತಿ ರಾಜ್ಯವೂ ಪೊಷಿಷನ್‌ ಪೇಪರ್‌ ಅಪ್‌ಲೋಡ್‌ ಮಾಡಬೇಕಿದೆ. ಅದರ ಭಾಗವಾಗಿ ಕರ್ನಾಟಕ ಈ ಪ್ರಸ್ತಾವನೆಗಳನ್ನು ಸಲ್ಲಿಸಿದೆ ಎಂದು ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ರಾಜ್ಯದಲ್ಲಿ ಎನ್‌ಇಪಿ ಕಾರ್ಯಗತಗೊಳಿಸುವ ಕಾರ್ಯಪಡೆಯ ಅಧ್ಯಕ್ಷರಾದ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ,  “ಎನ್‌ಸಿಇಆರ್‌ಟಿಗೆ ಸಲ್ಲಿಕೆ ಮಾಡಿದ ತಕ್ಷಣ ಅದು ಪಠ್ಯಪುಸ್ತಕದಲ್ಲಿ ಬಂದು ಬಿಡುತ್ತದೆ ಎಂದು ಅರ್ಥವಲ್ಲ. ಪೈಥಾಗರಸ್‌ ಥಿಯರಿ ಸುಳ್ಳು ಎಂಬ ಚರ್ಚೆ ಅಂತಾರಾಷ್ಟ್ರೀಯ ಮಟ್ಟದಲ್ಲಿದೆ. ಫೈಥಾಗರಸ್ ಥಿಯರಿ ಬೌದ್ಧಾಯನ ಸಿದ್ಧಾಂತದಲ್ಲಿ ಮೊದಲು ಚರ್ಚೆಯಾಗಿದೆ. ಆದರೆ ಪಾಶ್ಚಿಮಾತ್ಯರು ಹೇಳಿದ್ದನ್ನು ನಂಬುತ್ತಿದ್ದೇವೆ. ವೈಶೇಷಿಕ ದಾರ್ಶನಿಕ ಶಾಸ್ತ್ರದಲ್ಲಿ ಗುರುತ್ವ ಎಂಬ ವಿಷಯ ಬರುತ್ತದೆ. ಇದೆಲ್ಲವೂ ಚರ್ಚೆಯಾಗಬೇಕು. ಇದು ಸರಿ, ಅದು ತಪ್ಪು ಎಂದು ಹೇಳುತ್ತಿಲ್ಲ. ಕೆಲವು ಸಿದ್ಧಾಂತಗಳನ್ನು ನಮ್ಮ ತಲೆಯ ಮೇಲೆ ಹಾಕಿದ್ದಾರೆ. ಅವುಗಳಿಗೆ ಯಾವುದೇ ವೈಜ್ಞಾನಿಕ ತಳಹದಿ ಇಲ್ಲ. ಅವುಗಳನ್ನು ಪ್ರಶ್ನೆ ಮಾಡುವ ಕೌಂಟರ್‌ ಥಿಯರಿಗಳು ಈಗ ಬರುತ್ತಿವೆ. ಇದನ್ನು ಒಪ್ಪಲೇಬೇಕೆಂದೂ ಇಲ್ಲ” ಎಂದು ತಿಳಿಸಿದರು.

“ಸ್ಮೃತಿಗಳನ್ನು ಬೋಧಿಸುವ ಸಲಹೆ ನೀಡಲಾಗಿದೆ. ಮನುಸ್ಮೃತಿ ಎಂದರೆ ಪುರುಷಸೂಕ್ತ ಮಾತ್ರವಲ್ಲ. ಒಳ್ಳೆಯದನ್ನು ತೆಗೆದುಕೊಂಡು ಕೆಟ್ಟದ್ದನ್ನು ಬಿಡಬೇಕು. ಭಾರತೀಯ ಭಾಷೆಯ ಆಯ್ಕೆ ಎಂದರೆ ಸಂಸ್ಕೃತವೇ ಆಗಬೇಕೆಂದೇನೂ ಅಲ್ಲ. ತಮಿಳು ಆಗಬಹುದು. ಇನ್ಯಾವುದೇ ಭಾಷೆಯೂ ಆಗಬಹುದು. ಆದರೆ ಸಂಸ್ಕೃತದಲ್ಲಿ ವಿಚಾರಗಳಿವೆ” ಎಂದು ಸಮರ್ಥಿಸಿಕೊಂಡರು.

ಏನಿದು ಪೊಷಿಷನ್‌ ಪೇಪರ್‌?

ಯಾವುದಾದರೂ ಒಂದು ವಿಷಯವನ್ನು ಯಾವ ಆಧಾರದ ಮೇಲೆ ಬೋಧಿಸಬೇಕಾಗುತ್ತದೆ ಎಂದು ತಿಳಿಸುವ ಪ್ರಬಂಧವೇ ಪೊಸಿಷನ್ ಪೇಪರ್‌. ಯಾವುದಾದರೂ ಒಂದು ವಿಷಯದಲ್ಲಿ ತೀರ್ಮಾನ ತೆಗೆದುಕೊಳ್ಳುವಾಗ ತಮ್ಮ ನಿಲುವನ್ನು ಸಮರ್ಥನೆ ಮಾಡಿಕೊಳ್ಳುವ ಪ್ರಬಂಧವೇ ಪೊಸಿಷನ್‌ ಪೇಪರ್‌. ರಾಮಾಯಣ, ಮಹಾಭಾರತ, ಪುರಾಣ, ಕಥೆ, ಪುಣ್ಯಕತೆ, ಪಂಚತಂತ್ರ ಇತ್ಯಾದಿಗಳಲ್ಲಿ ಏನಾಗಿತ್ತು? ಅದನ್ನು ಏಕೆ ಬೋಧಿಸಬೇಕು ಇತ್ಯಾದಿಗಳನ್ನು ಈ ಪ್ರಬಂಧದಲ್ಲಿ ವಿವರಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿಗೆ ಸಲ್ಲಿಸುವ ಈ ಪೊಷಿಷನ್‌ ಪೇಪರ್‌ಗಳ ಆಧಾರದಲ್ಲಿ ಪಠ್ಯ ರೂಪಿತವಾಗುತ್ತದೆ.

ಕರ್ನಾಟಕ ಸರ್ಕಾರ ಒಟ್ಟು 26 ಪೊಷಿಷನ್ ಪೇಪರ್‌ಗಳನ್ನು ಸಲ್ಲಿಸಿದೆ. ಅದರಲ್ಲಿ ಪೊಷಿಷನ್‌ ಪೇಪರ್ಸ್ ಆಫ್‌ ನಾಲೆಡ್ಜ್‌ ಆಫ್‌ ಇಂಡಿಯಾ ಹಲವಾರು ಸಮಸ್ಯಾತ್ಮಕ ಅಂಶಗಳನ್ನು ಒಳಗೊಂಡಿದೆ. ಈ ಆಕ್ಷೇಪಗಳನ್ನು ಅಲ್ಲಗಳೆಯುವ ಮದನ್‌ ಗೋಪಾಲ್‌, “ವಿದ್ವತ್‌ಪೂರ್ಣ ಐಐಟಿ ಪ್ರೊಫೆಸರ್‌ ಅಧ್ಯಕ್ಷತೆಯಲ್ಲಿ ಈ ಪೇಪರ್‌ ಸಿದ್ಧಪಡಿಸಲಾಗಿದೆ. ಇದನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ” ಎಂದಿದ್ದಾರೆ.

‘ಸಂಸ್ಕೃತ ಕಡ್ಡಾಯ ಕಲಿಕೆಗೆ ಪ್ರಸ್ತಾಪ’

ಭಾರತೀಯ ಜ್ಞಾನವೆಲ್ಲ ಸಂಸ್ಕೃತದಲ್ಲಿದ್ದು, ಅದನ್ನು ಕಡ್ಡಾಯವಾಗಿ ಕಲಿಸಬೇಕೆಂಬ ಪ್ರಸ್ತಾಪವನ್ನು ಸರ್ಕಾರ ಮಾಡಿದೆ. ಸಾವಿರಾರು ಭಾಷೆಗಳಿರುವ ನಾಡಿನಲ್ಲಿ ಮೂರು ಭಾಷೆಗಳನ್ನು ಕಡ್ಡಾಯವಾಗಿ ಕಲಿಯಬೇಕು. ಒಂದು: ಪ್ರಾದೇಶಿಕ ಭಾಷೆ, ಎರಡು: ಇಂಗ್ಲಿಷ್‌ ಮೂರು: ಭಾರತೀಯ ಭಾಷೆ (ಸಂಸ್ಕೃತ). ಸಂಸ್ಕೃತ ಭಾಷೆಯಲ್ಲಿ ಭಾರತದ ಎಲ್ಲ ಜ್ಞಾನವು ಇದ್ದು, ಅದು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಪೊಷಿಷನ್‌ ಪೇಪರ್‌ನಲ್ಲಿ ಹೇಳಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಎಲ್ಲವೂ ಭಾರತದಲ್ಲಿಯೇ ಇತ್ತು ಎನ್ನುವುದು ಎನ್‌ಇಪಿ ಉದ್ದೇಶ: ನಿರಂಜನಾರಾಧ್ಯ

“ಪಾಶ್ಚಾತ್ಯ ವಿಜ್ಞಾನ ಸುಳ್ಳು. ಭಾರತದಲ್ಲಿ ಎಲ್ಲವೂ ಇತ್ತು ಎಂಬುದನ್ನು ಪ್ರತಿಪಾದಿಸುವುದೇ ಎನ್‌ಇಪಿ. ಭಾರತೀಕರಣ, ಭರತವರ್ಷ- ಇತರೆ ಹೆಸರುಗಳಲ್ಲಿ ಈ ವಿಷಯಗಳನ್ನು ಬೋಧಿಸಲಾಗುತ್ತದೆ. 26 ಪೋಷಿಷನ್ ಪೇಪರ್‌ಗಳನ್ನು ರಾಜ್ಯ ಸರ್ಕಾರ ಮಾಡಿದೆ. ಅವುಗಳನ್ನು ಈಗ ಎನ್‌ಸಿಇಆರ್‌ಟಿಗೆ ಕಳುಹಿಸಲಾಗಿದೆ. ಅವುಗಳನ್ನೆಲ್ಲ ಕೇಂದ್ರೀಕರಿಸಿ ಪಠ್ಯ ರೂಪಿಸಲಾಗುತ್ತದೆ. ಶಿಕ್ಷಣ ವ್ಯವಸ್ಥೆಗೆ ಇದು ಮಾರ್ಗಸೂಚಿಯಾಗುತ್ತದೆ” ಎಂದರು.

ಇದನ್ನೂ ಓದಿರಿ: ಈ ಎನ್‌ಇಪಿ ಅಂದ್ರೆ ಏನು? ಅದರೊಳಗ ಏನೈತಿ, ಏನಿಲ್ಲ?

“ಶಿಕ್ಷಣಯನ್ನು ಅನುಸರಿಸದೆಯೇ ಈ ಹಿಂದೆ ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಪಠ್ಯದಲ್ಲಿ ಈ ವಿಷಯಗಳನ್ನು ಸೇರಿಸಲಾಗುತ್ತಿತ್ತು. ಅದಕ್ಕೆ ವಿರೋಧವೂ ಬಂತು. ಈಗ ಫ್ರೇಮ್‌ ವರ್ಕ್ ಇಟ್ಟುಕೊಂಡು ದೊಡ್ಡ ಮಟ್ಟದಲ್ಲಿ ಜಾರಿಗೆ ತರುತ್ತಿದ್ದಾರೆ. ಈ ರೀತಿಯ ಬದಲಾವಣೆಗಳು ಸಮಾಜ, ವಿಜ್ಞಾನ, ಗಣಿತಕ್ಕೆ ನಿಲ್ಲುವುದು” ಎಂದು ತಿಳಿಸಿದರು.

“ಸನಾತನ ಭಾರತದಲ್ಲಿ ಎಲ್ಲವೂ ಇತ್ತು. ನಮಗೆ ಪಾಶ್ಚಿಮಾತ್ಯ ಶಿಕ್ಷಣ ಬೇಕಿಲ್ಲ. ನಾವೇ ಮೊದಲು ಎಲ್ಲವನ್ನೂ ಕಂಡು ಹಿಡಿದಿದ್ದು, ನಂತರದಲ್ಲಿ ನಮ್ಮ ಜ್ಞಾನವನ್ನು ಪಾಶ್ಚೀಮಾತ್ಯರು ಕದ್ದರು. ಭಾರತೀಯ ಜ್ಞಾನ ವ್ಯವಸ್ಥೆಯನ್ನು ಬಿಟ್ಟು, ಪಾಶ್ಚಿಮಾತ್ಯ ಜ್ಞಾನ ವ್ಯವಸ್ಥೆಯನ್ನು ನಾವು ಕಟ್ಟಿಕೊಂಡಿದ್ದೇವೆ. ಅದನ್ನು ಸರ್ವನಾಶ (ಬುಲ್ಡೋಜ್‌) ಮಾಡಿ ಭಾರತೀಯ ಜ್ಞಾನ ವ್ಯವಸ್ಥೆಯನ್ನು ಪುನರುತ್ಥಾನ ಮಾಡಬೇಕು ಎಂಬುದು ಅವರ ಅಜೆಂಡಾ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ, ಪೋಷಿಷನ್‌ ಪೇಪರ್‌, ಪಠ್ಯಕ್ರಮ ಚೌಕಟ್ಟು ಎಂಬ ಮಾರ್ಗಗಳನ್ನು ಹಿಡಿದಿದ್ದಾರೆ” ಎಂದು ವಿವರಿಸಿದರು.

ಯಾವ ಶಿಕ್ಷಣ ವ್ಯವಸ್ಥೆಯಿಂದ ವಿಚಾರವಂತರಾಗಿ ಮಹಾತ್ಮ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಥರದ ಮಹನೀಯರು ಸ್ವಾತಂತ್ರ್ಯ ಹೋರಾಟವನ್ನು ಕಟ್ಟಿದರೋ ಅದನ್ನು ಸಮಸ್ಯಾತ್ಮಕವಾದದ್ದು ಎಂದು ಇವರು ಭಾವಿಸುತ್ತಾರೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶೂದ್ರ ಮತ್ತು ದಲಿತ ಸಮುದಾಯಗಳ ಗುಲಾಮ ಶಾಸಕರು ಏನು ಕತ್ತೆ ಮೆಯುಸುತ್ತಿದ್ದಾರಾ?ಕೇವಲ 3% ಇರುವ ಸಮುದಾಯದವರ ಅಡಿಯಾಳು ಗುಲಾಮರೆ ಇವರು? ಥು ನಿಮ್ಮ ಜನ್ಮಕ್ಕಿಷ್ಟು ,ಭಾಬಾಸಾಹೇಬರ ಸಂವಿಧಾನದ ಮೇರೆಗೆ ನೀವೆಲ್ಲಾ ಶಾಸಕ,ಮಂತ್ರಿಗಳಾಗಿದ್ದೀರಾ, ಅದನ್ನ ತೆಗೆದರೆ ಆಗ ನಿಮ್ಮ ಬುಡಗಳಿಗೆ ಬೆಂಕಿ ತಗಲತ್ತೇನೋ?

  2. ಮಾನ್ಯರೇ ತಾವೂ ಸತ್ಯ ಸಂಗತಿ ನಿಜವಾದ ಮಾತು ಹೇಳಿದಿರಿ , ಅನಂತ ಧನ್ಯವಾದಗಳು ಶರಣು ಶರಣಾರ್ಥಿ ಮಲ್ಲಿಕಾರ್ಜುನ ನಾಗಶೆಟ್ಟಿ ಬೀದರ್ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...