Homeಮುಖಪುಟಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

- Advertisement -
- Advertisement -

ಎಲ್ಲಾ ಶಾಲಾ ಮಕ್ಕಳಿಗೆ ಸಂಸ್ಕೃತವನ್ನು ಕಡ್ಡಾಯವಾಗಿ ತೃತೀಯ ಭಾಷೆಯಾಗಿ ಕಲಿಸಲು, ಮನುಸ್ಮೃತಿ ಮತ್ತು ಪ್ರಾಚೀನ ಸಂಖ್ಯಾ ಪದ್ಧತಿಗಳನ್ನು ಪಠ್ಯಕ್ರಮದಲ್ಲಿ ಪರಿಚಯಿಸಲು ರಾಜ್ಯ ಸರ್ಕಾರ ಎನ್‌ಸಿಇಆರ್‌ಟಿಗೆ ಪ್ರಸ್ತಾವನೆ ಸಲ್ಲಿಸಿದೆ.

“ಪೈಥಾಗರಸ್ ಪ್ರಮೇಯ, ನ್ಯೂಟನ್‌ನ ತಲೆಯ ಮೇಲೆ ಸೇಬು ಬೀಳುವ ಪ್ರಸಂಗ ಇತ್ಯಾದಿ ಸುಳ್ಳುಗಳನ್ನು ಹೇಗೆ ರಚಿಸಲಾಗುತ್ತಿದೆ ಮತ್ತು ಪ್ರಚಾರ ಮಾಡಲಾಗುತ್ತಿದೆ” ಎಂದು ಪ್ರಶ್ನಿಸಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು ಎಂದು ತಿಳಿಸಿದೆ.

ರಾಜ್ಯ ಸರ್ಕಾರದಿಂದ ಸಲ್ಲಿಕೆಯಾಗಿರುವ ಪ್ರಸ್ತಾವನೆ ಸಂಬಂಧಿಸಿದಂತೆ ಕರ್ನಾಟಕದ ಶಿಕ್ಷಣ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎನ್‌ಇಪಿ ಅಡಿಯಲ್ಲಿ ರಾಜ್ಯ ಪಠ್ಯಕ್ರಮವನ್ನು ಎನ್‌ಸಿಇಆರ್‌ಟಿ ವೆಬ್‌ಸೈಟ್‌ಗೆ ಕಳುಹಿಸಬೇಕು. ಪ್ರತಿ ರಾಜ್ಯವೂ ಪೊಷಿಷನ್‌ ಪೇಪರ್‌ ಅಪ್‌ಲೋಡ್‌ ಮಾಡಬೇಕಿದೆ. ಅದರ ಭಾಗವಾಗಿ ಕರ್ನಾಟಕ ಈ ಪ್ರಸ್ತಾವನೆಗಳನ್ನು ಸಲ್ಲಿಸಿದೆ ಎಂದು ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ರಾಜ್ಯದಲ್ಲಿ ಎನ್‌ಇಪಿ ಕಾರ್ಯಗತಗೊಳಿಸುವ ಕಾರ್ಯಪಡೆಯ ಅಧ್ಯಕ್ಷರಾದ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ,  “ಎನ್‌ಸಿಇಆರ್‌ಟಿಗೆ ಸಲ್ಲಿಕೆ ಮಾಡಿದ ತಕ್ಷಣ ಅದು ಪಠ್ಯಪುಸ್ತಕದಲ್ಲಿ ಬಂದು ಬಿಡುತ್ತದೆ ಎಂದು ಅರ್ಥವಲ್ಲ. ಪೈಥಾಗರಸ್‌ ಥಿಯರಿ ಸುಳ್ಳು ಎಂಬ ಚರ್ಚೆ ಅಂತಾರಾಷ್ಟ್ರೀಯ ಮಟ್ಟದಲ್ಲಿದೆ. ಫೈಥಾಗರಸ್ ಥಿಯರಿ ಬೌದ್ಧಾಯನ ಸಿದ್ಧಾಂತದಲ್ಲಿ ಮೊದಲು ಚರ್ಚೆಯಾಗಿದೆ. ಆದರೆ ಪಾಶ್ಚಿಮಾತ್ಯರು ಹೇಳಿದ್ದನ್ನು ನಂಬುತ್ತಿದ್ದೇವೆ. ವೈಶೇಷಿಕ ದಾರ್ಶನಿಕ ಶಾಸ್ತ್ರದಲ್ಲಿ ಗುರುತ್ವ ಎಂಬ ವಿಷಯ ಬರುತ್ತದೆ. ಇದೆಲ್ಲವೂ ಚರ್ಚೆಯಾಗಬೇಕು. ಇದು ಸರಿ, ಅದು ತಪ್ಪು ಎಂದು ಹೇಳುತ್ತಿಲ್ಲ. ಕೆಲವು ಸಿದ್ಧಾಂತಗಳನ್ನು ನಮ್ಮ ತಲೆಯ ಮೇಲೆ ಹಾಕಿದ್ದಾರೆ. ಅವುಗಳಿಗೆ ಯಾವುದೇ ವೈಜ್ಞಾನಿಕ ತಳಹದಿ ಇಲ್ಲ. ಅವುಗಳನ್ನು ಪ್ರಶ್ನೆ ಮಾಡುವ ಕೌಂಟರ್‌ ಥಿಯರಿಗಳು ಈಗ ಬರುತ್ತಿವೆ. ಇದನ್ನು ಒಪ್ಪಲೇಬೇಕೆಂದೂ ಇಲ್ಲ” ಎಂದು ತಿಳಿಸಿದರು.

“ಸ್ಮೃತಿಗಳನ್ನು ಬೋಧಿಸುವ ಸಲಹೆ ನೀಡಲಾಗಿದೆ. ಮನುಸ್ಮೃತಿ ಎಂದರೆ ಪುರುಷಸೂಕ್ತ ಮಾತ್ರವಲ್ಲ. ಒಳ್ಳೆಯದನ್ನು ತೆಗೆದುಕೊಂಡು ಕೆಟ್ಟದ್ದನ್ನು ಬಿಡಬೇಕು. ಭಾರತೀಯ ಭಾಷೆಯ ಆಯ್ಕೆ ಎಂದರೆ ಸಂಸ್ಕೃತವೇ ಆಗಬೇಕೆಂದೇನೂ ಅಲ್ಲ. ತಮಿಳು ಆಗಬಹುದು. ಇನ್ಯಾವುದೇ ಭಾಷೆಯೂ ಆಗಬಹುದು. ಆದರೆ ಸಂಸ್ಕೃತದಲ್ಲಿ ವಿಚಾರಗಳಿವೆ” ಎಂದು ಸಮರ್ಥಿಸಿಕೊಂಡರು.

ಏನಿದು ಪೊಷಿಷನ್‌ ಪೇಪರ್‌?

ಯಾವುದಾದರೂ ಒಂದು ವಿಷಯವನ್ನು ಯಾವ ಆಧಾರದ ಮೇಲೆ ಬೋಧಿಸಬೇಕಾಗುತ್ತದೆ ಎಂದು ತಿಳಿಸುವ ಪ್ರಬಂಧವೇ ಪೊಸಿಷನ್ ಪೇಪರ್‌. ಯಾವುದಾದರೂ ಒಂದು ವಿಷಯದಲ್ಲಿ ತೀರ್ಮಾನ ತೆಗೆದುಕೊಳ್ಳುವಾಗ ತಮ್ಮ ನಿಲುವನ್ನು ಸಮರ್ಥನೆ ಮಾಡಿಕೊಳ್ಳುವ ಪ್ರಬಂಧವೇ ಪೊಸಿಷನ್‌ ಪೇಪರ್‌. ರಾಮಾಯಣ, ಮಹಾಭಾರತ, ಪುರಾಣ, ಕಥೆ, ಪುಣ್ಯಕತೆ, ಪಂಚತಂತ್ರ ಇತ್ಯಾದಿಗಳಲ್ಲಿ ಏನಾಗಿತ್ತು? ಅದನ್ನು ಏಕೆ ಬೋಧಿಸಬೇಕು ಇತ್ಯಾದಿಗಳನ್ನು ಈ ಪ್ರಬಂಧದಲ್ಲಿ ವಿವರಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿಗೆ ಸಲ್ಲಿಸುವ ಈ ಪೊಷಿಷನ್‌ ಪೇಪರ್‌ಗಳ ಆಧಾರದಲ್ಲಿ ಪಠ್ಯ ರೂಪಿತವಾಗುತ್ತದೆ.

ಕರ್ನಾಟಕ ಸರ್ಕಾರ ಒಟ್ಟು 26 ಪೊಷಿಷನ್ ಪೇಪರ್‌ಗಳನ್ನು ಸಲ್ಲಿಸಿದೆ. ಅದರಲ್ಲಿ ಪೊಷಿಷನ್‌ ಪೇಪರ್ಸ್ ಆಫ್‌ ನಾಲೆಡ್ಜ್‌ ಆಫ್‌ ಇಂಡಿಯಾ ಹಲವಾರು ಸಮಸ್ಯಾತ್ಮಕ ಅಂಶಗಳನ್ನು ಒಳಗೊಂಡಿದೆ. ಈ ಆಕ್ಷೇಪಗಳನ್ನು ಅಲ್ಲಗಳೆಯುವ ಮದನ್‌ ಗೋಪಾಲ್‌, “ವಿದ್ವತ್‌ಪೂರ್ಣ ಐಐಟಿ ಪ್ರೊಫೆಸರ್‌ ಅಧ್ಯಕ್ಷತೆಯಲ್ಲಿ ಈ ಪೇಪರ್‌ ಸಿದ್ಧಪಡಿಸಲಾಗಿದೆ. ಇದನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ” ಎಂದಿದ್ದಾರೆ.

‘ಸಂಸ್ಕೃತ ಕಡ್ಡಾಯ ಕಲಿಕೆಗೆ ಪ್ರಸ್ತಾಪ’

ಭಾರತೀಯ ಜ್ಞಾನವೆಲ್ಲ ಸಂಸ್ಕೃತದಲ್ಲಿದ್ದು, ಅದನ್ನು ಕಡ್ಡಾಯವಾಗಿ ಕಲಿಸಬೇಕೆಂಬ ಪ್ರಸ್ತಾಪವನ್ನು ಸರ್ಕಾರ ಮಾಡಿದೆ. ಸಾವಿರಾರು ಭಾಷೆಗಳಿರುವ ನಾಡಿನಲ್ಲಿ ಮೂರು ಭಾಷೆಗಳನ್ನು ಕಡ್ಡಾಯವಾಗಿ ಕಲಿಯಬೇಕು. ಒಂದು: ಪ್ರಾದೇಶಿಕ ಭಾಷೆ, ಎರಡು: ಇಂಗ್ಲಿಷ್‌ ಮೂರು: ಭಾರತೀಯ ಭಾಷೆ (ಸಂಸ್ಕೃತ). ಸಂಸ್ಕೃತ ಭಾಷೆಯಲ್ಲಿ ಭಾರತದ ಎಲ್ಲ ಜ್ಞಾನವು ಇದ್ದು, ಅದು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಪೊಷಿಷನ್‌ ಪೇಪರ್‌ನಲ್ಲಿ ಹೇಳಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಎಲ್ಲವೂ ಭಾರತದಲ್ಲಿಯೇ ಇತ್ತು ಎನ್ನುವುದು ಎನ್‌ಇಪಿ ಉದ್ದೇಶ: ನಿರಂಜನಾರಾಧ್ಯ

“ಪಾಶ್ಚಾತ್ಯ ವಿಜ್ಞಾನ ಸುಳ್ಳು. ಭಾರತದಲ್ಲಿ ಎಲ್ಲವೂ ಇತ್ತು ಎಂಬುದನ್ನು ಪ್ರತಿಪಾದಿಸುವುದೇ ಎನ್‌ಇಪಿ. ಭಾರತೀಕರಣ, ಭರತವರ್ಷ- ಇತರೆ ಹೆಸರುಗಳಲ್ಲಿ ಈ ವಿಷಯಗಳನ್ನು ಬೋಧಿಸಲಾಗುತ್ತದೆ. 26 ಪೋಷಿಷನ್ ಪೇಪರ್‌ಗಳನ್ನು ರಾಜ್ಯ ಸರ್ಕಾರ ಮಾಡಿದೆ. ಅವುಗಳನ್ನು ಈಗ ಎನ್‌ಸಿಇಆರ್‌ಟಿಗೆ ಕಳುಹಿಸಲಾಗಿದೆ. ಅವುಗಳನ್ನೆಲ್ಲ ಕೇಂದ್ರೀಕರಿಸಿ ಪಠ್ಯ ರೂಪಿಸಲಾಗುತ್ತದೆ. ಶಿಕ್ಷಣ ವ್ಯವಸ್ಥೆಗೆ ಇದು ಮಾರ್ಗಸೂಚಿಯಾಗುತ್ತದೆ” ಎಂದರು.

ಇದನ್ನೂ ಓದಿರಿ: ಈ ಎನ್‌ಇಪಿ ಅಂದ್ರೆ ಏನು? ಅದರೊಳಗ ಏನೈತಿ, ಏನಿಲ್ಲ?

“ಶಿಕ್ಷಣಯನ್ನು ಅನುಸರಿಸದೆಯೇ ಈ ಹಿಂದೆ ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಪಠ್ಯದಲ್ಲಿ ಈ ವಿಷಯಗಳನ್ನು ಸೇರಿಸಲಾಗುತ್ತಿತ್ತು. ಅದಕ್ಕೆ ವಿರೋಧವೂ ಬಂತು. ಈಗ ಫ್ರೇಮ್‌ ವರ್ಕ್ ಇಟ್ಟುಕೊಂಡು ದೊಡ್ಡ ಮಟ್ಟದಲ್ಲಿ ಜಾರಿಗೆ ತರುತ್ತಿದ್ದಾರೆ. ಈ ರೀತಿಯ ಬದಲಾವಣೆಗಳು ಸಮಾಜ, ವಿಜ್ಞಾನ, ಗಣಿತಕ್ಕೆ ನಿಲ್ಲುವುದು” ಎಂದು ತಿಳಿಸಿದರು.

“ಸನಾತನ ಭಾರತದಲ್ಲಿ ಎಲ್ಲವೂ ಇತ್ತು. ನಮಗೆ ಪಾಶ್ಚಿಮಾತ್ಯ ಶಿಕ್ಷಣ ಬೇಕಿಲ್ಲ. ನಾವೇ ಮೊದಲು ಎಲ್ಲವನ್ನೂ ಕಂಡು ಹಿಡಿದಿದ್ದು, ನಂತರದಲ್ಲಿ ನಮ್ಮ ಜ್ಞಾನವನ್ನು ಪಾಶ್ಚೀಮಾತ್ಯರು ಕದ್ದರು. ಭಾರತೀಯ ಜ್ಞಾನ ವ್ಯವಸ್ಥೆಯನ್ನು ಬಿಟ್ಟು, ಪಾಶ್ಚಿಮಾತ್ಯ ಜ್ಞಾನ ವ್ಯವಸ್ಥೆಯನ್ನು ನಾವು ಕಟ್ಟಿಕೊಂಡಿದ್ದೇವೆ. ಅದನ್ನು ಸರ್ವನಾಶ (ಬುಲ್ಡೋಜ್‌) ಮಾಡಿ ಭಾರತೀಯ ಜ್ಞಾನ ವ್ಯವಸ್ಥೆಯನ್ನು ಪುನರುತ್ಥಾನ ಮಾಡಬೇಕು ಎಂಬುದು ಅವರ ಅಜೆಂಡಾ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ, ಪೋಷಿಷನ್‌ ಪೇಪರ್‌, ಪಠ್ಯಕ್ರಮ ಚೌಕಟ್ಟು ಎಂಬ ಮಾರ್ಗಗಳನ್ನು ಹಿಡಿದಿದ್ದಾರೆ” ಎಂದು ವಿವರಿಸಿದರು.

ಯಾವ ಶಿಕ್ಷಣ ವ್ಯವಸ್ಥೆಯಿಂದ ವಿಚಾರವಂತರಾಗಿ ಮಹಾತ್ಮ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಥರದ ಮಹನೀಯರು ಸ್ವಾತಂತ್ರ್ಯ ಹೋರಾಟವನ್ನು ಕಟ್ಟಿದರೋ ಅದನ್ನು ಸಮಸ್ಯಾತ್ಮಕವಾದದ್ದು ಎಂದು ಇವರು ಭಾವಿಸುತ್ತಾರೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶೂದ್ರ ಮತ್ತು ದಲಿತ ಸಮುದಾಯಗಳ ಗುಲಾಮ ಶಾಸಕರು ಏನು ಕತ್ತೆ ಮೆಯುಸುತ್ತಿದ್ದಾರಾ?ಕೇವಲ 3% ಇರುವ ಸಮುದಾಯದವರ ಅಡಿಯಾಳು ಗುಲಾಮರೆ ಇವರು? ಥು ನಿಮ್ಮ ಜನ್ಮಕ್ಕಿಷ್ಟು ,ಭಾಬಾಸಾಹೇಬರ ಸಂವಿಧಾನದ ಮೇರೆಗೆ ನೀವೆಲ್ಲಾ ಶಾಸಕ,ಮಂತ್ರಿಗಳಾಗಿದ್ದೀರಾ, ಅದನ್ನ ತೆಗೆದರೆ ಆಗ ನಿಮ್ಮ ಬುಡಗಳಿಗೆ ಬೆಂಕಿ ತಗಲತ್ತೇನೋ?

  2. ಮಾನ್ಯರೇ ತಾವೂ ಸತ್ಯ ಸಂಗತಿ ನಿಜವಾದ ಮಾತು ಹೇಳಿದಿರಿ , ಅನಂತ ಧನ್ಯವಾದಗಳು ಶರಣು ಶರಣಾರ್ಥಿ ಮಲ್ಲಿಕಾರ್ಜುನ ನಾಗಶೆಟ್ಟಿ ಬೀದರ್ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...