Homeಮುಖಪುಟಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

ಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

- Advertisement -
- Advertisement -

ಶಿವ-ಪಾರ್ವತಿ ವೇಷ ಧರಿಸಿದ ರಂಗಭೂಮಿ ಕಲಾವಿದರಿಬ್ಬರು ಬೆಲೆ ಏರಿಕೆ ವಿರುದ್ಧ ವಿನೂತನ ಬೀದಿ ನಾಟಕ ಪ್ರದರ್ಶಿಸಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಜನರ ಗಮನ ಸೆಳೆದಿದೆ. ಕೂಡಲೇ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಎಂಬ ಆರೋಪದಲ್ಲಿ ಶಿವನ ಪಾತ್ರ ನಿರ್ವಹಿಸಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಅಸ್ಸಾಂನಲ್ಲಿ ಜರುಗಿದೆ.

ಅಸ್ಸಾಂನ ನಾಗೋನ್ ನಗರದಲ್ಲಿ ಈ ಬೀದಿ ನಾಟಕ ನಡೆದಿದ್ದು, ಸಾರ್ವಜನಿಕರ ಗಮನೆ ಸೆಳೆದಿದೆ. ಇಬ್ಬರೆ ನಟರು ಶಿವ-ಪಾರ್ವತಿಯ ವೇಷ ಧರಿಸಿ ಹಲವೆಡೆ ನಾಟಕ ಪ್ರದರ್ಶಿಸಿದ್ದಾರೆ.

ಬಿರಿಂಚಿ ಬೋರಾ ಎಂಬ ಕಲಾವಿದರೊಬ್ಬರು ಶಿವನ ವೇಷ ಧರಿಸಿದರೆ, ನಟಿ ಪರಿಶಿಮಿತ ಎನ್ನುವವರು ಪಾರ್ವತಿಯ ವೇಷ ಧರಿಸಿ ಬೀದಿ ನಾಟಕದಲ್ಲಿ ಭಾಗವಹಿಸಿದ್ದರು. ಮನೆಯಿಂದಲೇ ಶಿವ ಪಾರ್ವತಿಯ ವೇಷದಲ್ಲಿ ರಾಯಲ್ ಎನ್‌ಫೀಲ್ಡ್‌ ಬೈಕ್‌ನಲ್ಲಿ ಹೊರಟ ಅವರ ಬೈಕ್ ದಾರಿ ಮಧ್ಯೆಯೆ ನಿಂತು ಹೋಗುತ್ತದೆ. ಆಗ ಪಾರ್ವತಿ ಗೊಣಗುಡುತ್ತಾ ಶಿವನನ್ನು ಶಪಿಸುತ್ತಾರೆ. ಆಗ ಶಿವ ಪಾರ್ವತಿಯ ನಡುವೆ ವಾದ-ವಿದಾದ ನಡೆದು, ‘ಪೆಟ್ರೋಲ್ ಖಾಲಿ ಆದರೆ ನಾನೇನು ಮಾಡುವುದು, ಎಷ್ಟು ದುಡ್ಡು ಕೊಟ್ಟರೂ ಬೇಗ ಖಾಲಿಯಾಗುತ್ತದೆ. ನನ್ನನ್ನು ಬೈಯ್ಯುವುದರ ಬದಲು ಪೆಟ್ರೋಲ್ ದರ ಹೆಚ್ಚು ಮಾಡಿದ ನರೇಂದ್ರ ಮೋದಿ ಸರ್ಕಾರಕ್ಕೆ ಬೈಯಿ’ ಎನ್ನುತ್ತಾರೆ ಶಿವ. ಅಲ್ಲದೆ ಅಲ್ಲಿ ಸುತ್ತ ನೆರೆದಿದ್ದ ಜನರನ್ನು ಉದ್ದೇಶಿಸಿ ದಯವಿಟ್ಟು ಸರ್ಕಾರದ ಬೆಲೆ ಏರಿಕೆ ವಿರುದ್ಧ ದನಿಯೆತ್ತಿ ಪ್ರತಿಭಟಿಸಿ ಎಂದು ಕರೆ ನೀಡುತ್ತಾರೆ.

ಇಂತಹ ವಿನೂತನ ಬೀದಿನಾಟಕವನ್ನು ಅಲ್ಲಿ ನೆರೆದಿದ್ದವರು ಕುತೂಹಲದಿಂದ ವೀಕ್ಷಿಸಿ ಚಪ್ಪಾಳೆ ತಟ್ಟಿ ಬೆಂಬಲಿಸಿದ್ದಾರೆ. ಅಲ್ಲದೆ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಆದರೆ ಅದೇ ಸಂದರ್ಭದಲ್ಲಿ ಇದನ್ನು ಸಹಿಸದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಯವರು ಬೀದಿ ನಾಟಕ ಮಾಡಿದ ಕಲಾವಿದನ ವಿರುದ್ಧ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಎಂದು ಪೊಲೀಸ್ ದೂರು ಸಲ್ಲಿಸಿದ್ದಾರೆ.

ಪೊಲೀಸರು ನಟ ಬಿರಿಂಚಿ ಬೋರಾರನ್ನು ಬಂಧಿಸಿದ್ದಾರೆ. ಆನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ; ಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದ್ದದ್ದು ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಅಂದ್ರಂತೆ.. ಇಲ್ಲಿ ಯಾರು ಅನ್ಯಾಯದ ವಿರುದ್ಧ ದ್ವನಿ ಎತ್ತಬಾರದು, ಪ್ರತಿಭಟಿಸಬಾರದು ಒಂದು ವೇಳೆ ಹಾಗೇನಾದ್ರೂ ಮಾಡಿದ್ರೆ ಕೆಲವರು ಅವರೇ ಮೆಣಸಿನಕಾಯಿಯ ತುದಿ ಚಿವುಟಿ ಅಂಡಿಗೆ ಏರಿಸ್ಕೊಂಡು ಬಂದಬಿಡತಾವೇ ಅವ್ರಿಗೆ ಇಲ್ದಿರೋ ಸೆಕ್ಷನ್ ಅಡಿ ಕೇಸ್ ದಾಖಸೋಕೆ ಥೂ…. ಇವರ ಜನ್ಮಕ್ಕೆ ನಾಯಿ ಉಚ್ಚೆ ಹುಯ್ಲಿ.. ಇದೇನು ಪ್ರಜಾಪ್ರಭುತ್ವನಾ ಇಲ್ಲ ರಾಜಬ್ರಭುತ್ವನಾ ಅನ್ನೋದೇ ದೊಡ್ಡ ಪ್ರಶ್ನೆಯಾಗಿದೆ.ಇದೆ ಕೆಲಸ ಬೇರೆ ಧರ್ಮದ ನಟರು ಮಾಡಿದ್ರೆ ಆಗ್ಲೇ ಇಲ್ಲೊಂದು ಹುಚ್ಚು, ಬೇವರ್ಸಿ, ಕಂತ್ರಿ, ಕಜ್ಜಿ, ಹಲ್ಕಟ್, ಹಡಬಿಟ್ಟಿ ನಾಯಿ ಬೊಗಳಿರೋದು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...