Homeಮುಖಪುಟಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

ಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

- Advertisement -
- Advertisement -

ಶಿವ-ಪಾರ್ವತಿ ವೇಷ ಧರಿಸಿದ ರಂಗಭೂಮಿ ಕಲಾವಿದರಿಬ್ಬರು ಬೆಲೆ ಏರಿಕೆ ವಿರುದ್ಧ ವಿನೂತನ ಬೀದಿ ನಾಟಕ ಪ್ರದರ್ಶಿಸಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಜನರ ಗಮನ ಸೆಳೆದಿದೆ. ಕೂಡಲೇ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಎಂಬ ಆರೋಪದಲ್ಲಿ ಶಿವನ ಪಾತ್ರ ನಿರ್ವಹಿಸಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಅಸ್ಸಾಂನಲ್ಲಿ ಜರುಗಿದೆ.

ಅಸ್ಸಾಂನ ನಾಗೋನ್ ನಗರದಲ್ಲಿ ಈ ಬೀದಿ ನಾಟಕ ನಡೆದಿದ್ದು, ಸಾರ್ವಜನಿಕರ ಗಮನೆ ಸೆಳೆದಿದೆ. ಇಬ್ಬರೆ ನಟರು ಶಿವ-ಪಾರ್ವತಿಯ ವೇಷ ಧರಿಸಿ ಹಲವೆಡೆ ನಾಟಕ ಪ್ರದರ್ಶಿಸಿದ್ದಾರೆ.

ಬಿರಿಂಚಿ ಬೋರಾ ಎಂಬ ಕಲಾವಿದರೊಬ್ಬರು ಶಿವನ ವೇಷ ಧರಿಸಿದರೆ, ನಟಿ ಪರಿಶಿಮಿತ ಎನ್ನುವವರು ಪಾರ್ವತಿಯ ವೇಷ ಧರಿಸಿ ಬೀದಿ ನಾಟಕದಲ್ಲಿ ಭಾಗವಹಿಸಿದ್ದರು. ಮನೆಯಿಂದಲೇ ಶಿವ ಪಾರ್ವತಿಯ ವೇಷದಲ್ಲಿ ರಾಯಲ್ ಎನ್‌ಫೀಲ್ಡ್‌ ಬೈಕ್‌ನಲ್ಲಿ ಹೊರಟ ಅವರ ಬೈಕ್ ದಾರಿ ಮಧ್ಯೆಯೆ ನಿಂತು ಹೋಗುತ್ತದೆ. ಆಗ ಪಾರ್ವತಿ ಗೊಣಗುಡುತ್ತಾ ಶಿವನನ್ನು ಶಪಿಸುತ್ತಾರೆ. ಆಗ ಶಿವ ಪಾರ್ವತಿಯ ನಡುವೆ ವಾದ-ವಿದಾದ ನಡೆದು, ‘ಪೆಟ್ರೋಲ್ ಖಾಲಿ ಆದರೆ ನಾನೇನು ಮಾಡುವುದು, ಎಷ್ಟು ದುಡ್ಡು ಕೊಟ್ಟರೂ ಬೇಗ ಖಾಲಿಯಾಗುತ್ತದೆ. ನನ್ನನ್ನು ಬೈಯ್ಯುವುದರ ಬದಲು ಪೆಟ್ರೋಲ್ ದರ ಹೆಚ್ಚು ಮಾಡಿದ ನರೇಂದ್ರ ಮೋದಿ ಸರ್ಕಾರಕ್ಕೆ ಬೈಯಿ’ ಎನ್ನುತ್ತಾರೆ ಶಿವ. ಅಲ್ಲದೆ ಅಲ್ಲಿ ಸುತ್ತ ನೆರೆದಿದ್ದ ಜನರನ್ನು ಉದ್ದೇಶಿಸಿ ದಯವಿಟ್ಟು ಸರ್ಕಾರದ ಬೆಲೆ ಏರಿಕೆ ವಿರುದ್ಧ ದನಿಯೆತ್ತಿ ಪ್ರತಿಭಟಿಸಿ ಎಂದು ಕರೆ ನೀಡುತ್ತಾರೆ.

ಇಂತಹ ವಿನೂತನ ಬೀದಿನಾಟಕವನ್ನು ಅಲ್ಲಿ ನೆರೆದಿದ್ದವರು ಕುತೂಹಲದಿಂದ ವೀಕ್ಷಿಸಿ ಚಪ್ಪಾಳೆ ತಟ್ಟಿ ಬೆಂಬಲಿಸಿದ್ದಾರೆ. ಅಲ್ಲದೆ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಆದರೆ ಅದೇ ಸಂದರ್ಭದಲ್ಲಿ ಇದನ್ನು ಸಹಿಸದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಯವರು ಬೀದಿ ನಾಟಕ ಮಾಡಿದ ಕಲಾವಿದನ ವಿರುದ್ಧ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಎಂದು ಪೊಲೀಸ್ ದೂರು ಸಲ್ಲಿಸಿದ್ದಾರೆ.

ಪೊಲೀಸರು ನಟ ಬಿರಿಂಚಿ ಬೋರಾರನ್ನು ಬಂಧಿಸಿದ್ದಾರೆ. ಆನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ; ಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದ್ದದ್ದು ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಅಂದ್ರಂತೆ.. ಇಲ್ಲಿ ಯಾರು ಅನ್ಯಾಯದ ವಿರುದ್ಧ ದ್ವನಿ ಎತ್ತಬಾರದು, ಪ್ರತಿಭಟಿಸಬಾರದು ಒಂದು ವೇಳೆ ಹಾಗೇನಾದ್ರೂ ಮಾಡಿದ್ರೆ ಕೆಲವರು ಅವರೇ ಮೆಣಸಿನಕಾಯಿಯ ತುದಿ ಚಿವುಟಿ ಅಂಡಿಗೆ ಏರಿಸ್ಕೊಂಡು ಬಂದಬಿಡತಾವೇ ಅವ್ರಿಗೆ ಇಲ್ದಿರೋ ಸೆಕ್ಷನ್ ಅಡಿ ಕೇಸ್ ದಾಖಸೋಕೆ ಥೂ…. ಇವರ ಜನ್ಮಕ್ಕೆ ನಾಯಿ ಉಚ್ಚೆ ಹುಯ್ಲಿ.. ಇದೇನು ಪ್ರಜಾಪ್ರಭುತ್ವನಾ ಇಲ್ಲ ರಾಜಬ್ರಭುತ್ವನಾ ಅನ್ನೋದೇ ದೊಡ್ಡ ಪ್ರಶ್ನೆಯಾಗಿದೆ.ಇದೆ ಕೆಲಸ ಬೇರೆ ಧರ್ಮದ ನಟರು ಮಾಡಿದ್ರೆ ಆಗ್ಲೇ ಇಲ್ಲೊಂದು ಹುಚ್ಚು, ಬೇವರ್ಸಿ, ಕಂತ್ರಿ, ಕಜ್ಜಿ, ಹಲ್ಕಟ್, ಹಡಬಿಟ್ಟಿ ನಾಯಿ ಬೊಗಳಿರೋದು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...