Homeಚಳವಳಿಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

ಸಿದ್ದರಾಮಯ್ಯನವರಿಂದ ಅಂಬೇಡ್ಕರ್ ಓದು ಸರಣಿಯ 500 ನೇ ಸಂಚಿಕೆಯ ಓದು: ವಿಶಿಷ್ಟ ಪ್ರಯತ್ನಕ್ಕೆ ಶ್ಲಾಘನೆ

- Advertisement -
- Advertisement -

ಡಾ.ಬಿ.ಆರ್ ಅಂಬೇಡ್ಕರ್‌ರವರ ಮೂಲ ಬರಹಗಳು ಮತ್ತು ಭಾಷಣಗಳನ್ನು ಕನ್ನಡದಲ್ಲಿ ಕೇಳುವ ವಿಶಿಷ್ಟ ಪ್ರಯತ್ನವಾದ ‘ಅಂಬೇಡ್ಕರ್ ಓದು ಸರಣಿ’ಯ 500ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಓದಿದ್ದಾರೆ.

ಈ ಕಾರ್ಯಕ್ರಮವನ್ನು ನಡೆಸುತ್ತಿರುವ ಡಾ.ಅರುಣ್ ಜೋಳದ ಕೂಡ್ಲಿಗಿ ಮತ್ತು ಅನೇಕ ವಿದ್ವಾಂಸರ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ. ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ ಎಂಬ ಆತಂಕ ಅನೇಕರನ್ನು ಕಾಡುತ್ತಿರುವ ಸಂದರ್ಭದಲ್ಲಿ ಈ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಇದು ಸಾವಿರಾರು ಸಂಚಿಕೆಗಳನ್ನು ಕಾಣಲಿ ಎಂದು ಹಾರೈಸುತ್ತೇನೆ ಎಂದ ಸಿದ್ದರಾಮಯ್ಯನವರು, “ಪ್ರಜಾಪ್ರಭುತ್ವ ನ್ಯಾಯಪ್ರದವಾಗಿ ಕಾರ್ಯನಿರ್ವಹಿಸಲು ಇರುವ ಪೂರ್ವಭಾವಿ ನಿಯಮಗಳು” ಎಂಬ ಅಧ್ಯಾಯವನ್ನು ಓದಿದರು.

ಅದಕ್ಕೂ ಮುನ್ನ ಈ ದಿನ ಮಾಧ್ಯಮ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಚಿಂತಕ, ಬರಹಗಾರ ವಿಕಾಸ್ ಆರ್ ಮೌರ್ಯ ಮಾತನಾಡಿ, “ಡಿಜಿಟಲ್ ಸ್ಪೇಸ್‌ನಲ್ಲಿ ಅಂಬೇಡ್ಕರ್‌ರವರ ಚಿಂತನೆಗಳನ್ನು ನೆಲೆಗೊಳಿಸುವ ಈ ಪ್ರಯತ್ನ ಅಸಾಮಾನ್ಯವಾದುದು” ಎಂದರು.

ನಮ್ಮ ದೇಶಕ್ಕೆ ಅಂಟಿರುವ ಅಸ್ಪೃಶ್ಯತೆ ಮತ್ತು ಜಾತೀಯತೆಯ ಕಾರಣಕ್ಕೆ ಅಂಬೇಡ್ಕರ್‌ರನ್ನು ಮೂಲೆಗುಂಪು ಮಾಡಲಾಗಿತ್ತು. ಅವರು ನಿಧನರಾದ 10 ವರ್ಷಗಳ ನಂತರವಷ್ಟೆ 1966ರಲ್ಲಿ ಭಾರತೀಯ ಅಂಚೆ ಚೀಟಿಯಲ್ಲಿ ಅವರ ಭಾವಚಿತ್ರವನ್ನು ಒಳಗೊಳ್ಳಲಾಯಿತು. ಅಂಬೇಡ್ಕರ್‌ರವರಿಗೆ ಭಾರತ ರತ್ನ ಪ್ರಶಸ್ತ ಕೊಟ್ಟಿದ್ದು 1991ರಲ್ಲಿ. ಅವರ ಸಂಪೂರ್ಣ ಬರಹಗಳು ಮತ್ತು ಭಾಷಣಗಳನ್ನು 1991ರ ಇಸವಿಯಿಂದ ನಮಗೆ ತಲುಪಿದವು. 1916ರಿಂದಲೇ ಅಂಬೇಡ್ಕರ್ ಪ್ರಕಾರವಾಗಿ ಬರೆದಿದ್ದರು, 1936ರಲ್ಲಿಯೇ ಜಾತಿವಿನಾಶ ಕೃತಿ ರಚಿಸಿದ್ದರು. ಆದರೂ ಸಂವಿಧಾನ ಜಾರಿಯಾದ 41 ವರ್ಷದವರೆಗೂ ಅವರ ಬರಹಗಳನ್ನು ಸಾರ್ವಜನಿಕಗೊಳಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

21 ಸಂಪುಟಗಳಲ್ಲಿ ಅಂಬೇಡ್ಕರ್‌ರವರ ಬರಹಗಳು ಸಿಗುತ್ತಿವೆ. ಅವುಗಳನ್ನು ಆಡಿಯೋ ರೂಪದಲ್ಲಿ ಪ್ರತಿಯೊಂದು ಮನೆಮನೆಗೂ ತಲುಪಿಸುವ ಈ ಕೆಲಸ ಸಾಮಾನ್ಯವಾದುದ್ದಲ್ಲ. ಸೆಪ್ಟಂಬರ್ 09, 2020ರಿಂದ ಮೊದಲ ಕಂತು ಆರಂಭವಾಗಿ ಈಗ 500ನೇ ಸಂಚಿಕೆ ತಲುಪಿದ್ದೇವೆ. ಇದೊಂದು ಸಾಹಸವೇ ಆಗಿದೆ. ಜಾನಪದ, ಪುರಾಣ, ಭಜನೆ ಇತ್ಯಾದಿಗಳಲ್ಲಿ ಅಂಬೇಡ್ಕರ್‌ರವರನ್ನು ಹೇಗೆ ಕಾಣಲಾಗುತ್ತದೆ ಎಂದು ಅಧ್ಯಯನ ಮಾಡುತ್ತಿದ್ದ ಅರುಣ್ ಜೋಳದ ಕೂಡ್ಲಿಗಿಯರವರು ಈ ಕೆಲಸ ಮಾಡಿರುವುದು ಹೆಮ್ಮೆಯ ವಿಷಯ ಎಂದರು.

ಡಿಜಿಟಲ್ ಮಾಧ್ಯಮದಲ್ಲಿ ಅಂಬೇಡ್ಕರ್‌ರನ್ನು ಕಾಣುವುದು ವಿರಳ. ಕೌಂಟರ್‌ ಕರೆಂಟ್ಸ್, ರೌಂಟ್‌ ಟೇಬಲ್ ನಂತಹ ಕೆಲವೇ ವೆಬ್‌ಸೈಟ್‌ಗಳು ಆ ಕೆಲಸ ಮಾಡುತ್ತಿವೆ. ನಮ್ಮ ಕರ್ನಾಟಕದಲ್ಲಿ ಈ ಓದು ಸರಣಿ ಆರಂಭವಾದ್ದರಿಂದ ನೇರವಾಗಿ ಅಂಬೇಡ್ಕರ್‌ರವರ ಬರಹ ಮತ್ತು ಭಾಷಣಗಳನ್ನು ನಮಗೆ ಸಿಗುತ್ತಿವೆ. ಈ ಪ್ರಯತ್ನ ಇಡೀ ದೇಶಕ್ಕೆ ಮೊಟ್ಟಮೊದಲ ಪ್ರಯತ್ನವಾಗಿದೆ. ಈ ಆಡಿಯೋ ಆರ್ಕೈವ್ ಸರಣಿಯನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡೋಣ. ಇದು ಮುಂದುವರೆಯಲಿ ಎಂದರು.

ಹೋರಾಟಗಾರ್ತಿ ದು.ಸರಸ್ವತಿಯವರು ಮಾತನಾಡಿ, “ಅಂಬೇಡ್ಕರ್‌ ಎಲ್ಲರಿಗೂ ದಕ್ಕುತ್ತಿದ್ದಾರೆ, ಇಂದಿಗೂ ನಮ್ಮೊಳಗೆ ಜೀವಂತವಿದ್ದಾರೆ. ಇನ್ನೂ ನೂರು ವರ್ಷ ಕಳೆದರೂ ಜೀವಂತವಾಗಿಯೇ ಇರುತ್ತಾರೆ. ಏಕೆಂದರೆ ಅಂಬೇಡ್ಕರ್ ಮಾಡಿರುವ ಕೆಲಸಗಳಿಗೆ ಎಂದಿಗೂ ಸಾವಿಲ್ಲ” ಎಂದರು.

“ಮಹಾರಾಷ್ಟ್ರದ ಸಂಶೋಧಕರಾದ ಉರ್ಮಿಳಾ ಪಾವರ್, ಮೀನಾಕ್ಷಿ ಮೂನ್‌ರವರು ಅಂಬೇಡ್ಕರ್‌ ಬಗ್ಗೆ ಹೆಚ್ಚು ತಿಳಿದುಕೊಳ್ಳಲು, ಓದಲು ಮುಂದಾದಾಗ ಅವರಿಗೆ ಕೊನೆಗೆ ಹೆಚ್ಚಿನ ಮಾಹಿತಿ ಸಿಕ್ಕಿದ್ದು ಅಂಬೇಡ್ಕರ್‌ರವರೆ ಹೊರತಂದಿದ್ದ ಮೂಕನಾಯಕ, ಬಹಿಷ್ಕೃತ ಭಾರತ ಪತ್ರಿಕೆಗಳಿಂದ ಮಾತ್ರ. ಏಕೆಂದರೆ ಆ ಕಾಲದಲ್ಲಿಯೇ ಮುಖ್ಯವಾಹಿನಿ ಮಾಧ್ಯಮಗಳು ಅಂಬೇಡ್ಕರ್‌ರವರನ್ನು ನಿರ್ಲಕ್ಷಿಸಿದ್ದವು. ದಲಿತ ಚಳವಳಿ ದೇಶಾದ್ಯಂತ ಹರಡಿದ ಕಾರಣಕ್ಕೆ ಮಾತ್ರ ಅವರಿಗೆ ಭಾರತ ರತ್ನ ನೀಡಲಾಯಿತು” ಎಂದರು.

ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರು ಅಂಬೇಡ್ಕರ್ ಓದು ಕುರಿತು ಮಾತನಾಡಿದರು. ರಂಗಭೂಮಿ ಕಲಾವಿದರಾದ ರವಿಕಿರಣ್ ರಾಜೇಂದ್ರನ್ ಮತ್ತು ಅಶ್ವಿನಿ ಬೋಧ್ ತಮ್ಮ ಅನಿಸಿಕೆ ಹಂಚಿಕೊಂಡರು.

ಅಂಬೇಡ್ಕರ್‌ ಓದು ಅಭಿಯಾನದ ಎಲ್ಲಾ ಆಡಿಯೋಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: 100 ಗಂಟೆ ಪೂರೈಸಿದ ಅಂಬೇಡ್ಕರ್ ಓದು ಸರಣಿ: ಅಂಬೇಡ್ಕರ್ ಬರಹಗಳನ್ನು ಕೇಳಲು ಇರುವ ಜ್ಞಾನ ಭಂಡಾರವಿದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಉಳಿವಿಗಾಗಿ dr b r ambedkar ಅವರನ್ನು ಎಳೆದು ತರಬೇಡಿ. ಸಿದ್ದರಾಮಯ್ಯ ನವರು ನಮಗೆ ಅಂಬೇಡ್ಕರನ್ನು ಪರಿಚಯಿಸಿ ಕೊಡುವ ಪ್ರಯತ್ನ ಮಾಡುವುದು ಬೇಡ. ಆತ ಮಹಾನ್ ವ್ಯಕ್ತಿ, ದೀನ ದಲಿತರಿಗೆ ತಮ್ಮ ಜೀವನವನ್ನೇ ಪಣವಾಗಿಟ್ಟ ದೇವರು. ಅಂಥ ವ್ಯಕ್ತಿಯನ್ನ ಸಿದ್ದರಾಮಯ್ಯ ನವರೂ ಪ್ರಚಾರಕ್ಕೆ ಬಳಿಸಿದ್ದು ಏಕೋ ಸರಿ ಕಾಣಿಸುತ್ತಿಲ್ಲ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...