Homeಮುಖಪುಟಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

ಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಬಿಜೆಪಿ ಕುರಿತು ಟೀಕಾಪ್ರಹಾರ ನಡೆಸಿರುವ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ, “ತೆಲಂಗಾಣ ರಾಷ್ಟ್ರ ಸಮಿತಿ ಅಥವಾ ಟಿಆರ್‌ಎಸ್‌ನಲ್ಲಿ ಹಲವಾರು ಏಕನಾಥ್ ಶಿಂಧೆಗಳು ಇದ್ದಾರೆ” ಎಂದಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್, “ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಏನಾಗುತ್ತದೆ ಎಂದು ಮುಖ್ಯಮಂತ್ರಿ ಕೆಸಿಆರ್‌ಗೆ ಹೇಗೆ ಗೊತ್ತು? ಬಿಜೆಪಿಗೆ ಯಾವುದೇ ತಂತ್ರವಿಲ್ಲ ಎಂದು ಹೇಳುತ್ತಿರುವ ಮುಖ್ಯಮಂತ್ರಿ ನೀವು. ಬಿಜೆಪಿಯ ಬಳಿ ಯಾವುದೇ ತಂತ್ರವಿಲ್ಲ ಎಂದಾದರೆ 18 ರಾಜ್ಯಗಳಲ್ಲಿ ಅಧಿಕಾರದಲ್ಲಿರಲು ಹೇಗೆ ಸಾಧ್ಯ? ಮುಖ್ಯಮಂತ್ರಿ ಬಳಸುತ್ತಿರುವ ಭಾಷೆ ಅತ್ಯಂತ ನಾಚಿಕೆಗೇಡಿನದ್ದಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಕೆಸಿಆರ್ ನಡುವೆ ಅಜಗಜಾಂತರ ವ್ಯತ್ಯಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ನೀವು ದೇಶ್ ಕಿ ನೇತಾ (ದೇಶದ ನಾಯಕ) ಆಗಿದ್ದೀರಾ? ನೀವು ನಿಮ್ಮನ್ನು ಪ್ರಧಾನಿ ಮೋದಿಯೊಂದಿಗೆ ಹೋಲಿಸುತ್ತಿದ್ದೀರಿ. ಪ್ರಧಾನಿ ಮೋದಿ ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನೀವು ನಿಮ್ಮ ಫಾರ್ಮ್‌ಹೌಸ್‌ನಿಂದ ಹೊರಗೆ ಬರುವುದಿಲ್ಲ. ಎಲ್ಲರೂ ನಿಮ್ಮನ್ನು ನೋಡಿ ನಗುತ್ತಿದ್ದಾರೆ” ಎಂದು ಕರೀಂನಗರದ ಸಂಸದರೂ ಆಗಿರುವ ಬಂಡಿ ಸಂಜಯ್ ಟೀಕಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಗ್ಗೆ ಕೆಸಿಆರ್ ಹೇಳಿಕೆಯನ್ನು ಉಲ್ಲೇಖಿಸಿದ ಬಂಡಿ ಸಂಜಯ್, “ನೀವು ಏಕನಾಥ್ ಶಿಂಧೆ ಬಗ್ಗೆ ಮಾತನಾಡುತ್ತಿದ್ದೀರಿ, ಮೊದಲು ನಿಮ್ಮ ಸ್ವಂತ ಪಕ್ಷವನ್ನು ನೋಡಿ. ಟಿಆರ್‌ಎಸ್‌ನಲ್ಲಿ ಅನೇಕ ಏಕನಾಥ್ ಶಿಂಧೆಗಳಿದ್ದಾರೆ ಎಂದು ನಾನು ಭಾವಿಸುತ್ತೇನೆ. ಏಕನಾಥ್ ಶಿಂಧೆಯಂತಹ ನಾಯಕರು ತಮ್ಮದೇ ಪಕ್ಷದಲ್ಲಿ ಬೆಳೆಯುತ್ತಿದ್ದಾರೆ ಎಂದು ಕೆಸಿಆರ್‌ ಭಯಪಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಅವರ ಪಕ್ಷದಲ್ಲಿ ಯಾರಾದರೂ ಏಕನಾಥ್ ಶಿಂಧೆ ಆಗಬಹುದು, ಅದು ಅವರ ಮಗ ಕೆಟಿಆರ್, ಮಗಳು (ಕೆ.ಕವಿತಾ), ಅಥವಾ ಸೋದರಳಿಯ (ಹರೀಶ್ ರಾವ್) ಆಗಬಹುದು” ಎಂದು ಭವಿಷ್ಯ ನುಡಿದಿದ್ದಾರೆ.

ಕೆಸಿಆರ್ ಅವರು ಭಾನುವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿರುಸಿನ ವಾಗ್ದಾಳಿ ನಡೆಸಿದ ನಂತರ ಬಿಜೆಪಿ ಪ್ರತಿದಾಳಿ ನಡೆಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾವ್, “ನರೇಂದ್ರ ಮೋದಿ ಸರ್ಕಾರ ಹೋಗಬೇಕು, ಬಿಜೆಪಿಯೇತರ ಸರ್ಕಾರ ಬರಬೇಕು” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

“ಇಂದಿರಾ ಗಾಂಧಿ ಅವರಿಗೆ ಧನ್ಯವಾದಗಳು, ಅವರು ತುರ್ತು ಪರಿಸ್ಥಿತಿಯನ್ನು ಘೋಷಿಸುವಷ್ಟು ಧೈರ್ಯಶಾಲಿಯಾಗಿದ್ದರು. ಅದು ನೇರವಾಗಿ ಘೋಷಿಸಿದ ತುರ್ತು ಪರಿಸ್ಥಿತಿಯಾಗಿತ್ತು. ಆದರೆ ಇಂದು ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ” ಎಂದು ಕೆಸಿಆರ್‌ ಬೇಸರ ವ್ಯಕ್ತಪಡಿಸಿದ್ದರು.

ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಬಿಜೆಪಿ ನಾಯಕಿ ನೂಪುರ್‌ ಶರ್ಮಾ ಕುರಿತು ಮಾತನಾಡಿದ್ದ ಕೆಸಿಆರ್, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನಡೆಯನ್ನು ಶ್ಲಾಘಿಸಿದ್ದರು.

“ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜಸ್ಟಿಸ್ ಪಾರ್ದಿವಾಲಾ ಅವರಿಗೆ ನಮಸ್ಕರಿಸುತ್ತೇನೆ. ಭಾರತವನ್ನು ಉಳಿಸಲು ದಯವಿಟ್ಟು ಅದೇ ಮನೋಭಾವವನ್ನು ಇಟ್ಟುಕೊಳ್ಳಿ. ನ್ಯಾಯಾಂಗವು ದೇಶವನ್ನು ಈ ದೇಶದ್ರೋಹಿಗಳು, ರಾಕ್ಷಸರು ಮತ್ತು ಸರ್ವಾಧಿಕಾರಿಗಳಿಂದ ರಕ್ಷಿಸಬೇಕಾಗಿದೆ” ಎಂದು ಕೆಸಿಆರ್‌ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...