Homeಮುಖಪುಟಹೈದ್ರಾಬಾದ್‌: ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಸರ್ಕಲ್‌ ಇನ್‌ಸ್ಪೆಕ್ಟರ್‌‌

ಹೈದ್ರಾಬಾದ್‌: ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಸರ್ಕಲ್‌ ಇನ್‌ಸ್ಪೆಕ್ಟರ್‌‌

ಅತ್ಯಾಚಾರ ಮತ್ತು ಕೊಲೆ ಯತ್ನ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಇನ್‌ಸ್ಪೆಕ್ಟರ್‌‌‍ ತಲೆಮರೆಸಿಕೊಂಡಿದ್ದಾನೆ.

- Advertisement -
- Advertisement -

ಹೈದ್ರಾಬಾದ್: ಇಲ್ಲಿನ ಸಿಕಂದರಾಬಾದ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ತನ್ನ ಫಾರ್ಮ್‌ಹೌಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯ ಹೆಂಡತಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ, ಬಳಿಕ ಗಂಡ-ಹೆಂಡತಿಗೆ ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

“ಮರೇಡಪಲ್ಲಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ವರ ರಾವ್ ನನ್ನ ಮನೆಗೆ ನುಗ್ಗಿ ನನ್ನ ಮೇಲೆ ಅತ್ಯಾಚಾರ ಎಸಗಿ, ಪತಿಯ ಮೇಲೆ ಹಲ್ಲೆ ನಡೆಸಿ ರಿವಾಲ್ವರ್‌ನಿಂದ ಬೆದರಿಸಿ ಜುಲೈ 7 ಮತ್ತು 8ರ ಮಧ್ಯರಾತ್ರಿ ನಮ್ಮನ್ನು ಅಪಹರಿಸಿದ್ದನು” ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಾಚಾರ ಮತ್ತು ಕೊಲೆ ಯತ್ನ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್ ತನ್ನ ವಿರುದ್ಧ ಪ್ರಕರಣ ದಾಖಲಿಸಿದಾಗಿನಿಂದ ತಲೆಮರೆಸಿಕೊಂಡಿದ್ದಾನೆ. ನಾಗೇಶ್ವರ ರಾವ್‌ನನ್ನು ಬಂಧಿಸಲು ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಇನ್ಸ್‌ಪೆಕ್ಟರ್ ನಾಗೇಶ್ವರ್ ರಾವ್, 2018ರಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದರು. ನಂತರ ಆತನನ್ನ ತನ್ನ ತೋಟದ ಮನೆಯಲ್ಲಿ ಮಾಸಿಕ ಸಂಬಳದ ಕೂಲಿಯನ್ನಾಗಿ ನೇಮಿಸಿಕೊಂಡಿದ್ದರು ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘‘ನನ್ನ ಗಂಡ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಇನ್‌ಸ್ಪೆಕ್ಟರ್ ನಾಗೇಶ್ವರ್ ರಾವ್ ನನ್ನ ಗಂಡನಿಗೆ ತಿಳಿಯದಂತೆ ನನ್ನನ್ನು ಬಲವಂತವಾಗಿ ಕೃಷಿ ಜಮೀನಿಗೆ ಎಳೆದುಕೊಂಡು ಬಂದನು” ಎಂದು ಸಂತ್ರಸ್ತ ಮಹಿಳೆ ಜುಲೈ 8 ರಂದು ವನಸ್ಥಲಿಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಮಹಿಳೆ ತನ್ನ ಗಂಡನಿಗೆ ಘಟನೆಯ ಕುರಿತು ವಿವರಿಸಿದಾಗ, ಆಕೆಯ ಪತಿ ಇನ್ಸ್‌ಪೆಕ್ಟರ್‌ಗೆ ಕರೆ ಮಾಡಿ ನನ್ನ ಕುಟುಂಬಕ್ಕೆ ತೊಂದರೆ ನೀಡದಂತೆ ಕೇಳಿಕೊಂಡಿದ್ದಾನೆ. ಇದು ಮುಂದುವರಿದರೆ ನಿಮ್ಮ ಹೆಂಡತಿಗೆ ವಿಷಯ ತಿಳಿಸುತ್ತೇನೆ ಎಂದು ದಂಪತಿ ಹೇಳಿದ್ದಾರೆ. ಆ ಸಮಯದಲ್ಲಿ, ಇನ್ಸ್‌ಪೆಕ್ಟರ್ ನಾಗೇಶ್ವರ ರಾವ್‌ ಕ್ಷಮೆಯಾಚಿಸಿದ್ದನು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಇಷ್ಟಾದ ಮೇಲೆ ಒಬ್ಬ ಇನ್‌ಸ್ಪೆಕ್ಟರ್, ಒಬ್ಬ ಸಬ್ ಇನ್‌ಸ್ಪೆಕ್ಟರ್ ಮತ್ತು ಕೆಲವು ಕಾನ್‌ಸ್ಟೆಬಲ್‌ಗಳು ನಮ್ಮ ಮನೆಗೆ ಬಂದು ನನ್ನ ಪತಿಯನ್ನು ಟಾಸ್ಕ್ ಫೋರ್ಸ್ ಕಚೇರಿಗೆ ಕರೆದೊಯ್ದರು. ಪೊಲೀಸರು ನನ್ನ ಪತಿಗೆ ಥಳಿಸಿ, ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದರು. ಪೊಲೀಸರು ನನ್ನ ಗಂಡನ ಕೈಯಲ್ಲಿ ಗಾಂಜಾ ಪೊಟ್ಟಣಗಳನ್ನು ಇಟ್ಟು ಫೋಟೋ ಮತ್ತು ವಿಡಿಯೊಗಳನ್ನು ಮಾಡಿಕೊಂಡರು. ಏನಾದರೂ ಇನ್ಸ್‌ಸ್ಪೆಕ್ಟರ್‌ ಪತ್ನಿಗೆ ವಿಷಯ ತಿಳಿಸಿದರೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ನಮ್ಮಿಬ್ಬರನ್ನು ಹೆದರಿಸಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾರೆ.

ಜುಲೈ 7 ರಂದು ರಾತ್ರಿ 9.30 ಗಂಟೆಗೆ ಇನ್ಸ್‌ಪೆಕ್ಟರ್ ನಾಗೇಶ್ವರ್ ರಾವ್ ವನಸ್ಥಲಿಪುರಂನಲ್ಲಿರುವ ತನ್ನ ಮನೆಗೆ ಅತಿಕ್ರಮವಾಗಿ ನುಗ್ಗಿ ಥಳಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ನನ್ನ ಗಂಡ ಮನೆಗೆ ಬಂದು ಬಾಗಿಲು ತೆರೆದು ಇನ್ಸ್‌ಪೆಕ್ಟರ್‌ಗೆ ಕೋಲಿನಿಂದ ಹೊಡೆಯಲು ಪ್ರಾರಂಭಿಸಿದರು. ನಂತರ ಇನ್‌ಸ್ಪೆಕ್ಟರ್‌ ನಾಗೇಶ್ವರ್ ನಮ್ಮಿಬ್ಬರಿಗೂ ರಿವಾಲ್ವರ್ ತೋರಿಸಿ ಬೆದರಿಸಿದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಅಪ್ರಾಪ್ತ ತಂಗಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲು ಸಹಾಯ ಮಾಡಿದ ಅಕ್ಕ

ಹೈದರಾಬಾದ್ ಬಿಟ್ಟು ಹೋಗದಿದ್ದರೆ ನೀವಿಬ್ಬರು ‘ವೇಶ್ಯಾಗೃಹ’ ನಡೆಸುತ್ತಿದ್ದಿರಿ ಎಂದು ಸುಳ್ಳು ಪ್ರಕರಣ ದಾಖಲಿಸುವುದಾಗಿ ಇನ್ಸ್‌ಪೆಕ್ಟರ್ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಗಂಡ ಹೆಂಡತಿಯನ್ನು ವಾಹನದಲ್ಲಿ ಕೂರಿಸಿಕೊಂಡು ಇಬ್ರಾಹಿಂಪಟ್ಟಣದತ್ತ ಕರೆದೊಯ್ಯಲಾಗುತ್ತಿತ್ತು. ಜುಲೈ 8ರ ಮುಂಜಾನೆ ಕಾರು ಅಪಘಾತಕ್ಕೀಡಾಯಿತು, ಆಗ ದಂಪತಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ, ರಾಚಕೊಂಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವನಸ್ಥಲಿಪುರಂ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಯ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಅತಿಕ್ರಮಣ, ಕೊಲೆಯತ್ನ, ಅಪಹರಣ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...