Homeಕರ್ನಾಟಕಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

ಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

- Advertisement -
- Advertisement -

ಬೆಂಗಳೂರಿನ ಮಧ್ಯದ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ 1942ರ ಕ್ವಿಟ್ ಇಂಡಿಯಾ ಚಳವಳಿ ಹುತಾತ್ಮ ಸ್ಮಾರಕ ಸಂರಕ್ಷಣೆಗೆ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ವೇದಿಕೆ ಹಾಗೂ ಇತರೆ ಎಲ್ಲ ಜನಪರ ಸಂಘಟನೆಗಳು ಸಹಿ ಸಂಗ್ರಹ ಅಭಿಯಾನ ಆರಂಭಿಸಿವೆ.

ಸಹಿ ಸಂಗ್ರಹ ಮಾಡಿ ಜುಲೈ 20ರಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೀಡಲು ನಿರ್ಧರಿಸಲಾಗಿದೆ. ಈ ಅಭಿಯಾನಕ್ಕೆ ಕೈ ಜೋಡಿಸಿ, ಮನವಿ ಪತ್ರಕ್ಕೆ ತಮ್ಮ ಹೆಸರನ್ನು ಸೇರಿಸುವ ಮೂಲಕ ಸಾಮಾಜಿಕ ಮಾಧ್ಯದಲ್ಲಿ ಬೆಂಬಲ ಸೂಚಿಸುವಂತೆ ಜನಪರ ಹೋರಾಟಗಾರರು ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಖಿಲ ಭಾರತ ಸ್ವಾತಂತ್ರ್ಯ ಯೋಧರ ಸಮಿತಿ ಪ್ರಧಾನ ಕಾರ್ಯದರ್ಶಿ ಅಪ್ಪರಾವ್ ನವಲೆ, ಸಮಿತಿ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ಜಾನ್ಸಿರಾಣಿ, ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ, ಕೆಜೆವಿಎಸ್‌ನ ಈ ಬಸವರಾಜು, ಸಮತಾ ಸಂಘಟನೆ ಪ್ರಭಾ ಬೆಳವಂಗಲ, ಕರ್ನಾಟಕ ಜನಶಕ್ತಿಯ ಸಿರಿಮನೆ ನಾಗರಾಜ, ಸಮುದಾಯ ಸಾಂಸ್ಕೃತಿಕ ಸಂಘಟನೆಯ ಗುಂಡಣ್ಣ ಚಿಕ್ಕಮಗಳೂರು, ಸಾಮಾಜಿಕ ಹೋರಾಟಗಾರ ಎಚ್.ಎಂ.ವೆಂಕಟೇಶ್, ಸಾಮಾಜಿಕ ಕಾರ್ಯಕರ್ತ ಅಲ್ದೂರ್ ಶಿವರಾಜ್, ಭೂಮಿಕ ಪತ್ರಿಕೆಯ ಸಂಪಾದಕ ಲಕ್ಷ್ಮಣ್‌, ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯು.ಬಸವರಾಜ್ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಸಂಘಟನೆಗಳ ಮನವಿ ಪತ್ರದಲ್ಲಿ ಏನಿದೆ?

ನಮ್ಮ ದೇಶವು ‘ಆಜಾದಿ 75’ ವರ್ಷಾಚರಣೆಯನ್ನು ದೇಶದೆಲ್ಲಡೆ ಸಂಭ್ರಮದಿಂದ ಆಚರಿಸುತ್ತಿರುವುದು ತಮಗೆ ತಿಳಿದ ಸಂಗತಿಯಾಗಿದೆ.

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದ ಜನಸಾಮಾನ್ಯರು ‌ಕೂಡ ಸ್ವಾತಂತ್ರ್ಯಕ್ಕಾಗಿ ಅಂದಿನ ವಿವಿಧ ಪ್ರದೇಶಗಳಲ್ಲಿ ಹಲವು ರೀತಿಯ ತ್ಯಾಗ ಬಲಿದಾನದ ಹೋರಾಟಗಳನ್ನು ನಡೆಸಿದ್ದಾರೆ. ಅದರಲ್ಲಿ 1942 ರಲ್ಲಿ ‌ಮಹಾತ್ಮಾ ಗಾಂಧಿಜೀಯವರು ಕರೆ ನೀಡಿದ ‘ಕ್ವಿಟ್ ಇಂಡಿಯಾ’ ಚಳವಳಿ ಕರೆಗೆ ಓಗೊಟ್ಟು ಬೆಂಗಳೂರಿನ ‘ಸೆಂಟ್ರಲ್ ಕಾಲೇಜ್‌’ನ ವಿದ್ಯಾರ್ಥಿಗಳು ನಡೆಸಿದ ನಡೆಸಿದ ಹೋರಾಟ ಸ್ಪೂರ್ತಿದಾಯಕವಾದುದ್ದು.
ವಿದ್ಯಾರ್ಥಿಗಳು ಅಂದು ನಡೆಸಿದ ಹೋರಾಟದ ಮೇಲೆ ಅಂದಿನ ಬ್ರಿಟಿಷ್‌ ಪೊಲೀಸರು ಗುಂಡಿನ‌ದಾಳಿ ನಡೆಸಿದ ಪರಿಣಾಮ ಸೆಂಟ್ರಲ್ ಕಾಲೇಜಿನ ವಿದ್ಯಾರ್ಥಿಗಳಾದ ಶಾಮಣ್ಣ ಬೇಟೆ ರಂಗಪ್ಪ, ಜಿ.ವಿ.ತಿರುಮಲಯ್ಯ, ಪ್ರಲ್ಹಾದ ಶೆಟ್ಟಿ ಹಾಗೂ ಗುಂಡಪ್ಪ ಎನ್ನುವ ನಾಲ್ಕು ವಿದ್ಯಾರ್ಥಿಗಳು ಹುತಾತ್ಮರಾದರು.

ಈ ಹುತಾತ್ಮರ ನೆನಪಿನಲ್ಲಿ ಬೆಂಗಳೂರು‌ ನಗರ ಪಾಲಿಕೆ 1972ರಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ‘ಹುತಾತ್ಮರ ನೆನಪಿನಲ್ಲಿ ಸ್ಮಾರಕ’ ಸ್ಥಾಪಿಸಿ ಅವರಿಗೆ ಗೌರವ ಸಲ್ಲಿಸಿದೆ. ಆದರೆ ಬೆಂಗಳೂರಿನ ಕೇಂದ್ರಸ್ಥಾನದಲ್ಲಿರುವ ಆ ಹುತಾತ್ಮ ಸ್ಮಾರಕದ ಸುತ್ತ ಇತ್ತೀಚಿನ ವರ್ಷಗಳಲ್ಲಿ ಎದ್ದಿರುವ ಅನಧಿಕೃತ ಕಟ್ಟಡದ ಪರಿಣಾಮ ಅಲ್ಲಿರುವ ‘ಹುತಾತ್ಮ ಸ್ಮಾರಕ’ವೇ ಸಾರ್ವಜನಿಕವಾಗಿ ಮರೆಯಾಗಿ ಹೋಗಿದೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಇರುವ ಈ ಹುತಾತ್ಮ ಸ್ಮಾರಕವನ್ನು ಸಂರಕ್ಷಿಸಬೇಕು ಮತ್ತು ಮೈಸೂರು ಬ್ಯಾಂಕ್ ವೃತ್ತವನ್ನು ‘ಹುತಾತ್ಮ ವೃತ್ತ’ವೆಂದು ಘೋಷಿಸಬೇಕೆಂದು ಈ ಹಿಂದೆಯೇ ಹಲವು ಬಾರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಎಚ್.ಎಸ್.ದೊರೆಸ್ವಾಮಿಯವರ ನೇತೃತ್ವದಲ್ಲಿ ಹಲವು ಸ್ವಾತಂತ್ರ್ಯ ಹೋರಾಟಗಾರರು ಮತ್ತು ಹಲವು ಸಂಘಟನೆಗಳು ಚಳವಳಿ ನಡೆಸಿ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದ್ದರು. ಆದರೆ ಆ ಬಗ್ಗೆ ಇದುವರೆಗೂ ಯಾವುದೇ ಸೂಕ್ತ ಕ್ರಮವಹಿಸದಿರುವುದು ನೋವಿನ‌ ಸಂಗತಿ.

ಆದುದರಿಂದ ಈಗ ದೇಶ ‘ಆಜಾದಿ 75’ರ ಆಚರಣೆಯಲ್ಲಿದೆ. ಇಂತಹ ಸನ್ನಿವೇಶದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಹೆಚ್ಚಿನ ಗೌರವ ನೀಡಬೇಕಿರುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಅಲ್ಲದೆ ಆಧುನಿಕತೆಯ ಭರಾಟೆಯಲ್ಲಿ ಸಿಲುಕಿರುವ ವಿದ್ಯಾರ್ಥಿ ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಇಂತಹ ಹುತಾತ್ಮರ ಬಗ್ಗೆ ತಿಳಿಯಪಡಿಸುವುದು ತೀರ ಅವಶ್ಯವಿದೆ.

ಇದನ್ನೂ ಓದಿರಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ಈ ಹಿನ್ನಲೆಯಲ್ಲಿ ತಾವು ಬೆಂಗಳೂರಿನ ಕೇಂದ್ರಭಾಗದಲ್ಲಿರುವ ಆ ಹುತಾತ್ಮ ಸ್ಮಾರಕವನ್ನು ಸಾರ್ವಜನಿಕರ ಕಾಣುವಂತೆ ಮಾಡುವುದು ಹಾಗೂ ಅದರ ದರ್ಶನಕ್ಕೆ ಮುಕ್ತ ಲಭ್ಯವಾಗುವಾಗುವಂತೆ ಕೂಡಲೇ ಕ್ರಮವಹಿಸಬೇಕು ಎಂದು ಕೋರುತ್ತವೆ.

ನಮ್ಮ ಸಂಘಟನೆ ಹಾಗೂ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ವೇದಿಕೆ ಹಾಗೂ ಇತರೆ ಎಲ್ಲ ಜನಪರ ಸಂಘಟನೆಗಳೊಂದಿಗೆ ಸೇರಿ ಇದೇ ಆಗಸ್ಟ್ 9ರ ಕ್ವಿಟ್ ಇಂಡಿಯಾ ನೆನಪಿನಲ್ಲಿ ಒಂದು ಕಿರು ಕಾರ್ಯಕ್ರಮವನ್ನು ಹುತಾತ್ಮ ಸ್ಮಾರಕದ ಬಳಿ ಆಯೋಜಿಸಲು ನಿರ್ಧರಿಸಿದ್ದೇವೆ. ಅದಕ್ಕೆ ಅಲ್ಲಿ ಸೂಕ್ತ ಸ್ಥಳಾವಕಾಶ ಮಾಡಿಕೊಡಲು ಕೋರುತ್ತೇವೆ ಮತ್ತು ಮುಂದಿನ ತಮ್ಮ‌ಸಚಿವ ಸಂಪುಟದ ಸಭೆಯಲ್ಲಿ ಮೈಸೂರು ಬ್ಯಾಂಕ್ ವೃತ್ತವನ್ನು ‘ಹುತಾತ್ಮರ ವೃತ್ತ’ ಎಂದು ಅಧಿಕೃತವಾಗಿ ಘೋಷಿಸಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಅಮೂಲ್ಯ ಜೀವಗಳನ್ನು ತೆತ್ತ ಆ ಹುತಾತ್ಮರಿಗೆ ಸೂಕ್ತ ಗೌರವವನ್ನು ತಮ್ಮ ಸರ್ಕಾರ ಸಲ್ಲಿಸಲು ಕೋರುತ್ತಿದ್ದೇವೆ. ಈ ಬಗ್ಗೆ ತಮ್ಮ‌ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂದು‌ ಭಾವಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...