Homeಕರ್ನಾಟಕಮನೆ ಮಟ್ಟದಲ್ಲಿ ಹಸಿ ತ್ಯಾಜ್ಯ ನಿರ್ವಹಣೆ ಪೌರಕಾರ್ಮಿಕರ ಹೊರೆ ತಗ್ಗಿಸಬಹುದು

ಮನೆ ಮಟ್ಟದಲ್ಲಿ ಹಸಿ ತ್ಯಾಜ್ಯ ನಿರ್ವಹಣೆ ಪೌರಕಾರ್ಮಿಕರ ಹೊರೆ ತಗ್ಗಿಸಬಹುದು

- Advertisement -
- Advertisement -

ಆಗತಾನೇ ಅಡುಗೆಮನೆಯಲ್ಲಿದ್ದ ಕಾಂಪೋಸ್ಟ್ ಡಬ್ಬವನ್ನು ಮೂಗು ಮುಚ್ಚಿಕೊಂಡು ಕಂಬಕ್ಕೆ ರವಾನಿಸಿ ಕೂತಿದ್ದೆ; ಅದೇ ಸಮಯಕ್ಕೆ ಫೋನ್ ಬಂತು; ನಿಮ್ಮನೇಲಿ ಹಸಿ ಕಸ ಕಾಂಪೋಸ್ಟ್ ಮಾಡ್ತೀರಲ್ಲ, ಅದರ ಬಗ್ಗೆ ಲೇಖನ ಬರೆದು ಕೊಡಿ ಅಂತ.

ಮೂವ್ವತ್ತು ವರ್ಷಗಳ ಹಿಂದೆ ನಾವು ಈಗಿರುವ ಮನೆಗೆ ಬಂದಾಗ ಅಕ್ಕಪಕ್ಕದ ಸೈಟುಗಳು ಖಾಲಿ ಇದ್ದವು. ತುಸು ದೂರದಲ್ಲಿದ್ದ ಹೊಲಗಳು ಕಣ್ಣಿಗೆ ಬೀಳ್ತಾ ಇದ್ದವು. ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಅಜ್ಜಅಜ್ಜಿಯರು ತಮ್ಮ ದನಕರುಗಳನ್ನು ನಮ್ಮ ಪಕ್ಕದ ಸೈಟಿನಲ್ಲಿ ಮೇಯಿಸುತ್ತಾ ತಮ್ಮ ಕಷ್ಟಸುಖ ಮಾತಾಡಿಕೊಳ್ತಾ, ಅಮ್ಮನ ಜೊತೆ ಆಗೀಗ ಕುಶಲೋಪರಿ ಮಾತುಕತೆ ಆಡ್ತಾ ಇದ್ದರು. ಅವರೆಕಾಯಿ, ಅಲಸಂದೆಕಾಯಿ ಸಿಪ್ಪೆ, ಹಲಸಿನ ಸಿಪ್ಪೆ, ಮಿಕ್ಕಿದ ಅನ್ನ-ಸಾರು ಇವೆಲ್ಲವೂ ಹಸುಗಳಿಗೆ ಆಹಾರವಾಗ್ತಾ ಇತ್ತು. ಕಾಲಕ್ರಮೇಣ ಸೈಟುಗಳಿದ್ದ ಕಡೆ ಮನೆಗಳೆದ್ದವು. ಅಜ್ಜ-ಅಜ್ಜಿಯರು ಹಸು ಮೇಯಿಸಲು ಶಕ್ತಿಯಿಲ್ಲದೆ ತಾವೇ ಹಾಲು ಕೊಳ್ಳುವ ಸ್ಥಿತಿಗೆ ತಲುಪಿದರು. ತರಕಾರಿ ಸಿಪ್ಪೆ ಕಸದಗಾಡಿಗೆ, ತಂಗಳು ಬಚ್ಚಲ ಕಿಂಡಿಯ ಮೂಲಕ ಚರಂಡಿ ಸೇರಲಾರಂಭಿಸಿತು. ಸುಮಾರು ಹತ್ತು ವರ್ಷಗಳ ಹಿಂದೆ ಇರ್ಬೇಕು, ಕೃಷಿ ವಿಜ್ಞಾನಿಯಾಗಿರುವ ನಮ್ಮಣ್ಣ ತರಕಾರಿ ಸಿಪ್ಪೆಯನ್ನು ಇನ್ಮೇಲೆ ಮಹಡಿ ಮೇಲೆ ಖಾಲಿ ಪಾಟ್‌ಗಳಿಗೆ ಹಾಕಿ ಮಣ್ಣು ತುಂಬಿ ಅಂದ್ರು. ಅದಾದಮೇಲೆ ಮನೆಯ ಎಲ್ಲಾ ಹಸಿ ಕಸವನ್ನು ಹೊರಗೆ ಹಾಕೋದು ಬೇಡ ಅಂದ್ರು. ಏನೋ ದೊಡ್ಡ ಕ್ರಾಂತಿ ಮಾಡುವ ಉತ್ಸಾಹದಲ್ಲಿ ಅಡುಗೆ ಮನೆಯ ಸಿಂಕ್ ಹತ್ತಿರ ೭-೮ ಕೆಜಿ ತುಂಬುವ ಡಬ್ಬ ಇಟ್ಟುಕೊಂಡು ತರಕಾರಿ ಸಿಪ್ಪೆ, ಅಳಿದುಳಿದ ಊಟ ತಿಂಡಿ ಎಲ್ಲಾ ಅದರಲ್ಲಿ ಹಾಕತೊಡಗಿದೆವು. ಮೂರನೇ ದಿವಸಕ್ಕೆ ಡಬ್ಬದ ಮುಚ್ಚಳ ತೆಗೆದರೆ ಸಹಿಸಲಾರದ ವಾಸನೆ, ಜೊತೆಗೆ ಪಿತಗರೆಯುವ ಬಿಳಿ ಹುಳುಗಳು. ಅವಾದರೋ ಜಿಗಿಯುವ ಸಾಮರ್ಥ್ಯವುಳ್ಳವು! ಫ್ರೂಟ್ ಫ್ಲೈಗಳ ಲಾರ್ವಾಗಳಂತೆ ಅವು! ಮಹಡಿಯ ಮೇಲಿನ ಪಾಟ್‌ಗಳಿಗೆ ಹಾಕಿ ಮಣ್ಣು ಸುರಿದರೂ ದುರ್ವಾಸನೆ. ಅಕ್ಕಪಕ್ಕದ ಮನೆಯವರು ಕೆಲವೊಮ್ಮೆ ಮೆಲ್ಲಗೆ, ಕೆಲವೊಮ್ಮೆ ಕೇಳುವ ಹಾಗೆ ಬೈದುಕೊಂಡದ್ದೂ ಉಂಟು. ಯಾರೂ ನೇರವಾಗಿ ಕೇಳಲಿಲ್ಲ ಸದ್ಯ!

ಇದನ್ನೂ ಓದಿ : ಹೈದ್ರಾಬಾದ್‌: ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಸರ್ಕಲ್‌ ಇನ್‌ಸ್ಪೆಕ್ಟರ್‌‌

ಅಲ್ಲಿಇಲ್ಲಿ ಲೇಖನ ಓದಿ, ಮನೆಯ ಹಾಲ್‌ನಲ್ಲೆ ಇಟ್ಕೋಬಹುದಾದ, ವಾಸನೆ ಬರದ ಕಾಂಪೋಸ್ಟ್ ನಿರ್ವಹಣೆಯ ಬಗ್ಗೆ ತಿಳಿದುಕೊಂಡದ್ದಾಯ್ತು. ಮುಂದಿನ ಹಂತ: ಸಾವಿರಾರು ರೂಪಾಯಿ ಕೊಟ್ಟು ಮೂರು ಪಾಟ್‌ಗಳ ಕಂಬ ತಂದಿದ್ದಾಯ್ತು. ಆದರೆ ಮೂರೇ ಮಂದಿಯ ನಮ್ಮ ಪುಟ್ಟ ಮನೆಯ ಅಡುಗೆಮನೆ ಹಸಿ ಕಸಕ್ಕೆ ಆ ಕಂಬ ವಾರಕ್ಕೂ ಮುಂಚೆ ತುಂಬಿಹೋಗುತ್ತಿತ್ತು! ಮತ್ತದೇ ಪುನರಾವರ್ತನೆ. ಹೈಡ್ರೋಜನ್ ಸಲ್ಫೈಡ್ ವಾಸನೆಯನ್ನು ಬೀರುವ ಮಹಡಿ ಮೇಲಿನ ಪಾಟ್‌ಗಳಲ್ಲಿ ಕಾಂಪೋಸ್ಟ್ ಮಾಡುವ ಕೆಲಸ ಮತ್ತೆ ಶುರು. ಪಾಟ್‌ಗಳು ಸಾಲದೆಂದು ಪ್ಲಾಸ್ಟಿಕ್ ಚೀಲಗಳನ್ನೂ ಕೆಲ ಸಮಯ ಉಪಯೋಗಿಸಲಾಯ್ತು. ಆದರೆ ಕಾಂಪೋಸ್ಟ್ ಚೀಲವನ್ನು ಆಚೀಚೆ ಸರಿಸಿ ಇಡುವಾಗ ಚೀಲ ಹರಿದು, ಅರೆಬರೆ ಕೊಳೆತ ಕಾಂಪೋಸ್ಟ್ ಸುರಿದು, ಅದನ್ನು ಶುಚಿ ಮಾಡುವ ಮತ್ತೊಂದು ಕೆಲಸದ ಹೊರೆ ಆಗುತ್ತಿತ್ತು. ಹಸಿ ಕಸ ಸಂಗ್ರಹಿಸಿದ ಡಬ್ಬದಲ್ಲಿ ಗಾಳಿ ಆಡದೆ ಇದ್ದರೆ ಕಾಂಪೋಸ್ಟ್ ತಯಾರಿಕೆ ಕ್ರಿಯೆ ತುಸು ಇರಿಸುಮುರಿಸು ತರುತ್ತದೆ, ಮನೆಯವರಿಗೂ, ಅಕ್ಕಪಕ್ಕದವರಿಗೂ.
ಕೊನೆಗೂ ಈ ದುರ್ವಾಸನೆಯುಕ್ತ ಕಾಂಪೋಸ್ಟ್ ಮಾಡುವ ವಿಧಾನ ಕೊನೆಯಾಗಿದ್ದು ಏರೋಬಿಕ್ ವಿಧಾನವನ್ನು ಅಳವಡಿಸಿಕೊಂಡಾಗ.

ಹೆಸರಿನಿಂದ ಇದೇನೋ ಭಾರೀ ಕಷ್ಟದ ವಿಧಾನ ಅನಿಸಿರಬಹುದು! ಹಾಗೇನೂ ಇಲ್ಲ. ದೊಡ್ಡದೊಡ್ಡ ಅಂಗಡಿಗಳಲ್ಲಿ, ಹಾಪ್ಕಾಮ್ಸ್ ಅಂಗಡಿಗಳಲ್ಲಿ ನೋಡಿಯೇ ಇರುತ್ತೀರಿ ಪ್ಲಾಸ್ಟಿಕ್ ಕ್ರೇಟ್‌ಗಳನ್ನು. 200-300 ರೂಪಾಯಿಗಳಿಗೆ ದೊರಕುವ ಈ ಕ್ರೇಟ್‌ಗಳಿಗೆ ತಳದಲ್ಲಿ ತೂತು ಮಾಡಿ, ಕಬ್ಬಿಣದ ಸ್ಟಾಂಡ್ ಮೇಲೆ ಅವನ್ನಿಟ್ಟು ಅದರಲ್ಲಿ ಹಸಿ ಕಸವನ್ನು ಸಂಗ್ರಹಿಸಲು ಆರಂಭಿಸಿದೆವು. ಇದು ಪ್ರಾರಂಭಿಸಿ 4-5 ವರ್ಷಗಳಾಯ್ತು. ನಮ್ಮ ಬಿಲ್ಡಿಂಗ್‌ನಲ್ಲಿರುವ ಮೂರು ಮನೆಗಳಿಂದ ಏನಿಲ್ಲವೆಂದರೂ ವಾರಕ್ಕೆ 15-20 ಕೆಜಿ ಹಸಿ ಕಸ ಸಂಗ್ರಹವಾಗುತ್ತದೆ. ಅದನ್ನು ದಿನಾ ದಿನ ಕ್ರೇಟ್‌ನಲ್ಲಿ ತುಂಬಿ, ಅದರ ಮೇಲೆ ಈಗಾಗಲೇ ತಯಾರಾಗಿರುವ ಕಾಂಪೋಸ್ಟ್, ಅಥವಾ
ಮಣ್ಣು, ಜೊತೆಗೆ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಇಲಾಖೆಯಲ್ಲಿ ಸಿಗುವ ಡಿಕಂಪೋಸರ್‌ಅನ್ನು ಬೆರೆಸಿ ಮಳೆ ನೀರು ಬೀಳದ ಹಾಗೆ ಮುಚ್ಚಿಟ್ಟರೆ, ಸುಮಾರು ಒಂದು ತಿಂಗಳಲ್ಲಿ ಹಸಿ ಕಸದ ಶೇ.೧೦ರಷ್ಟು ಪ್ರಮಾಣದಲ್ಲಿ ಸಾವಯವ ಗೊಬ್ಬರ ತಯಾರು. ನಮ್ಮ ಟೆರೇಸ್ ಗಾರ್ಡನ್‌ನಲ್ಲಿನ ಗಿಡಗಳಿಗೂ ಆಗಿ ಮಿಗುವಷ್ಟು ಕಾಂಪೋಸ್ಟ್ ತಯಾರಾಗುತ್ತದೆ. ಕಾಂಪೋಸ್ಟ್ ತಯಾರಿಯಲ್ಲಿ ಸ್ವಾಭಾವಿಕವಾಗಿ ಸಹಾಯ ಮಾಡುವ ಇತರೆ ಜೀವಿಗಳೆಂದರೆ ಎರೆಹುಳುಗಳು, ಸೋಲ್ಜರ್ ಹುಳುಗಳು, ಜಿರಳೆ, ಇರುವೆಗಳು. 10 ವರ್ಷಗಳಲ್ಲಿ ಸಂಗ್ರಹಿಸಿದ ಹಸಿ ಕಸ ವರ್ಷಕ್ಕೆ 1000 ಕೆಜಿಯಂತೆ 10 ಟನ್. ತನ್ಮೂಲಕ ತಯಾರಾದ ಸಾವಯವ ಗೊಬ್ಬರ ವರ್ಷಕ್ಕೆ 100 ಕೆಜಿಯಂತೆ 1 ಟನ್.

ಹಸಿಕಸವನ್ನು ಗೊಬ್ಬರವನ್ನಾಗಿಸುವುದು ಸುಲಲಿತವಾದ ಪಯಣವೇನಲ್ಲ. ಅಡುಗೆ ಮನೆಯಲ್ಲಿ ತರಕಾರಿ, ಊಟದ ತ್ಯಾಜ್ಯ ಸಂಗ್ರಹಿಸುವ ಜಾಗದಲ್ಲಿ ಯಾವಾಗಲೂ ಸೊಳ್ಳೆ, ಇರುವೆ ಮುಸುರುತ್ತವೆ. ಕಸವನ್ನು ಮಹಡಿಗೆ ಸಾಗಿಸುವುದು ನಿಧಾನಿಸಿದಷ್ಟು ಹೆಚ್ಚೆಚ್ಚು ದುರ್ಗಂಧ ಆವರಿಸುತ್ತದೆ. ಮಹಡಿಯ ಮೇಲೂ ಕೂಡ ಈ ಹಸಿ ಕಸವನ್ನು ತಿನ್ನಲೆಂದೇ ಹೇರಳವಾಗಿ ಇರುವೆ, ಜಿರಳೆ, ಹಲ್ಲಿ, ಹೆಗ್ಗಣ ಮುಗಿಬೀಳುತ್ತವೆ. ಒಂದು ಸಣ್ಣ ಮಳೆ ಬಿದ್ದರೂ ಸಾಕು ಸೋಲ್ಜರ್ ಹುಳುಗಳು ಮಹಡಿ, ಮೆಟ್ಟಿಲು ಎಲ್ಲೆಲ್ಲೂ ಹರಡಿ ತಮ್ಮ ಇರವನ್ನು ಖಚಿತಪಡಿಸುತ್ತವೆ. ಮಳೆಗಾಲದಲ್ಲಿ ಕಸ ಬೇಗ ಒಣಗುವುದಿಲ್ಲ. ಕ್ರೇಟ್‌ಗಳ ತಳದಿಂದ ಸೋರಿದ ನೀರು ಸರಿಯಾದ ವಾಟರ್ ಪ್ರೂಫಿಂಗ್ ಇಲ್ಲದಲ್ಲಿ ಗೋಡೆಗೆ ಇಳಿದು ಹಾನಿ ಮಾಡಬಹುದು. ಕಸ ಒಣಗಿದ ಮೇಲೆ ಗಾಳಿಗೆ ಹಾರಿ ಮಹಡಿಯೆಲ್ಲ ಹರಡಬಹುದು. ನಿತ್ಯ ಅದನ್ನು ಗುಡಿಸುವುದೂ ಸಹ ದಿನಚರಿಯಲ್ಲಿ
ಸೇರಿಸಿಕೊಳ್ಳಬೇಕಾಗುತ್ತದೆ.

ಇಷ್ಟೆಲ್ಲಾ ಅಡಚಣೆಗಳ ಮಧ್ಯೆಯೂ ಒಂದು ಸುಂದರ ಪರಿಸರ ವ್ಯವಸ್ಥೆ (eco system) ರೂಪುಗೊಳ್ಳುತ್ತದೆ. ಕಾಂಪೋಸ್ಟ್‌ನಲ್ಲಿರುವ ಹುಳುಗಳನ್ನು ತಿನ್ನಲೆಂದೇ ಕಾಗೆ, ಗೊರವಂಕಗಳು ಬರುತ್ತವೆ. ಪುಟಾಣಿ ಸನ್ ಬರ್ಡ್ ಗೂಡು ಕಟ್ಟಲು ಒಣಗಿದ ಕಡ್ಡಿಯ ಹುಡುಕಾಟದಲ್ಲಿ, ಗಿಡಗಳ ಮೇಲಿನೆ ಹುಳು-ಹುಪ್ಪಟೆ ತಿನ್ನಲು ಅಥವಾ
ನೀರಿಗಾಗಿ ದಿನಾಲು ನಿಗದಿತ ಸಮಯದಲ್ಲಿ ಹಾಜರಾಗುತ್ತವೆ. ಟೆರೇಸ್ ಗಾರ್ಡನ್‌ನಲ್ಲಿನ ಹೂವುಗಳನ್ನರಸಿ ಜೇನುನೊಣ, ಬಣ್ಣಬಣ್ಣದ ಚಿಟ್ಟೆಗಳು, ಕೆಲವೊಮ್ಮೆ ಕಣಜಗಳು ಕೂಡ ಆಗಮಿಸುತ್ತವೆ. ನೀರು ತುಂಬಿಟ್ಟ ಪಾತ್ರೆಗಳಲ್ಲಿ ಸ್ನಾನ ಮಾಡಲು ಬುಲ್ಬುಲ್ ಜೋಡಿ ಕೂಡ ಹಾಜರ್. ಬೇರೆ ಪಕ್ಷಿಗಳು ಬಂದರೆ ತುಸು ದೂರವೇ ನಿಂತು ತಮ್ಮ ಸರತಿ ಬರುವವರೆಗೂ ಕಾದು ಯಾವುದೇ ಜಗಳವಿಲ್ಲದೆ ನೀರಿನ ದಾಹ ಪರಿಹರಿಸಿಕೊಂಡು ಮನಸೋ ಇಚ್ಛೆ ಸ್ನಾನ ಮಾಡಿ ತೆರಳುತ್ತವೆ. ಆಗೀಗ ಮಾನವನ ಉಗಮ ಪ್ರಕ್ರಿಯೆಯಲ್ಲಿ ಕೊಂಡಿ ಎನ್ನಲಾಗುವ ಪೂರ್ವಜರು ಕೂಡ ಬರುವುದೂ ಉಂಟು. ಹಣ್ಣುಗಳನ್ನು ತಿಂದು ನಮಗೂ ಸ್ವಲ್ಪ ಉಳಿಸಿಯೇ ಸಾಗುತ್ತವೆ!
ಉದ್ಯಾನ ನಗರಿ ಬೆಂಗಳೂರಿನ ಹಸಿ ತ್ಯಾಜ್ಯಕ್ಕೆ ಕೆಲವು ಟನ್‌ಗಳಷ್ಟು ಹೊರೆ ಇಳಿಸಿದ್ದೇವೆ ಅನ್ನುವುದೇ ಸಮಾಧಾನದ ವಿಷಯ. ಅನುಕೂಲವಿದ್ದ ವಸತಿ ಪ್ರದೇಶಗಳಲ್ಲಿ ನಿಯಮಿತವಾಗಿ ಹಸಿ ತ್ಯಾಜ್ಯವನ್ನು ಕಾಂಪೋಸ್ಟ್ ಮಾಡುವ ವ್ಯವಸ್ಥೆ ಸಾರ್ವಜನಿಕವಾಗಿ ಲಭ್ಯವಿದ್ದಲ್ಲಿ ಅಥವಾ ಮಹಡಿಯ ಮೇಲೆ ಜಾಗದ ಅನುಕೂಲವಿರುವವರು ತಾವೇ ಕಾಂಪೋಸ್ಟ್ ಮಾಡುವ ಮನಸ್ಸು ಮಾಡಿ ಸೂಕ್ತ ವ್ಯವಸ್ಥೆ ಮಾಡಿಕೊಂಡರೂ ಸಹ ಹಲವಾರು ಟನ್ ಹಸಿ ಕಸದ ವಿಲೇವಾರಿ ಕಡಿಮೆಯಾಗುತ್ತದೆ. ಪರಿಸರಕ್ಕೂ ಒಳ್ಳೆಯದು, ಪೌರಕಾರ್ಮಿಕರಿಗೂ ತುಸು ಶ್ರಮ ಕಡಿಮೆಯಾಗಬಹುದು.

ರಾಧಿಕಾ ಗಂಗಣ್ಣ
ವೃತ್ತಿಯಲ್ಲಿ ಎಂಜಿನಿಯರ್. ಸಾಹಿತ್ಯ ಆಸಕ್ತಿಯ ಕ್ಷೇತ್ರ.
ಗೆಳೆಯರೊಂದಿಗೆ ಸೇರಿ ಕನ್ನಡ ಪುಸ್ತಕಗಳ ಬಗ್ಗೆ ಪ್ರತಿ ವಾರ
ಕ್ಲಬ್ ಹೌಸ್ ಕಾರ್ಯಕ್ರಮವೊಂದನ್ನು ನಿರ್ವಹಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...