Homeಕರ್ನಾಟಕನಾರಾಯಣಗುರು ಪಠ್ಯ ಸಮಾಜ ವಿಜ್ಞಾನಕ್ಕೆ ಸೇರಿಸಿ: ಸಚಿವ ಸುನಿಲ್‌ಕುಮಾರ್‌

ನಾರಾಯಣಗುರು ಪಠ್ಯ ಸಮಾಜ ವಿಜ್ಞಾನಕ್ಕೆ ಸೇರಿಸಿ: ಸಚಿವ ಸುನಿಲ್‌ಕುಮಾರ್‌

- Advertisement -
- Advertisement -

“ಸಮಾಜ ಸುಧಾರಕ ನಾರಾಯಣಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಿ” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನಿಲ್‌ಕುಮಾರ್‌‌ ಪತ್ರ ಬರೆದಿದ್ದಾರೆ.

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿದ್ದ ನಾರಾಯಣಗುರುಗಳ ಪಾಠವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ತೆಗೆದಿದ್ದರಿಂದ ಕರಾವಳಿ ಭಾಗದಲ್ಲಿ ಬಿಲ್ಲವ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸುನಿಲ್‌ಕುಮಾರ್‌‌ ಪತ್ರ ಬರೆದಿದ್ದಾರೆ.

ಬಿಲ್ಲವ ಸಮಾಜದ ನಿರಂತರ ಪ್ರತಿರೋಧದ ಹೊರತಾಗಿಯೂ ಈ ಕುರಿತು ಸರ್ಕಾರ ಮೌನ ವಹಿಸಿತ್ತು. ಕನ್ನಡ ಭಾಷಾ ವಿಷಯದಲ್ಲಿ ನಾರಾಯಣಗುರುಗಳ ಪಾಠವಿದೆ ಎಂದು ಸಬೂಬು ಹೇಳುತ್ತಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಪಾಠವಿದ್ದರೆ ಎಲ್ಲ ವಿದ್ಯಾರ್ಥಿಗಳು ಓದಲು ಸಾಧ್ಯವಾಗುತ್ತದೆ ಎಂದು ಸಮುದಾಯದ ಮುಖಂಡರು ಹೇಳುತ್ತಲೇ ಬಂದಿದ್ದರು. ಹೆದ್ದಾರಿ ಬಂದ್ ಸೇರಿದಂತೆ ಪಾದಯಾತ್ರೆ ನಡೆಸುವ ಮೂಲಕ ಬೃಹತ್ ಹೋರಾಟ ನಡೆಸುವುದಾಗಿ ಬಿಲ್ಲವ ಸಮುದಾಯ ಹೇಳಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಹಿಂದೆ ಗಣರಾಜ್ಯೋತ್ಸವ ಟ್ಯಾಬ್ಲೋ ವಿಚಾರದಲ್ಲಿಯೂ ನಾರಾಯಣಗುರುಗಳಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿತ್ತು. ಇದರ ನಡುವೆ ಪಠ್ಯ ಕೈಬಿಡಲಾಗಿತ್ತು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯನವರ ಹೆಸರಿಡಬೇಕು, ಬಿಲ್ಲವ ಅಭಿವೃದ್ದಿ ಮಂಡಳಿ ರಚಿಸಬೇಕು, ಬಿಲ್ಲವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿ ಹಲವು ಸೌಲಭ್ಯಗಳಿಗಾಗಿ ಬಿಲ್ಲವ ಸಮಾಜ ಹೋರಾಟ ಮಾಡುತ್ತಲೇ ಬಂದಿದೆ. ಆದರೆ ಇವೆಲ್ಲಕ್ಕೂ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಬಿಲ್ಲವ ಮುಖಂಡರನ್ನು ಕೆರಳಿಸಿತ್ತು. ಹಾಗಾಗಿ ಬಿಲ್ಲವ ಸಂಘ ಸಂಸ್ಥೆಗಳು ರಿಲೇ ರೀತಿಯ ಪಾದಯಾತ್ರೆ, ಹೆದ್ದಾರಿ ಬಂದ್ ಸೇರಿದಂತೆ 50 ದಿನಗಳವರೆಗೆ ನಿರಂತರ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದವು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಕಂಕನಾಡಿ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕೆ, ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ಬೈ, ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಸೇರಿದಂತೆ ನೂರಾರು ಹೋರಾಟಗಾರರು, ಮುಖಂಡರು ಸರ್ಕಾರದ ವಿರುದ್ಧ ಗುಡುಗಿದ್ದರು. ಈ ಹಿನ್ನೆಲೆಯಲ್ಲಿ ಸಚಿವರ ಪತ್ರ ಹೊರಬಿದ್ದಿದೆ.

ಸಚಿವರು ಹೇಳಿರುವುದೇನು?

“ಈ ಬಾರಿ, ಪಠ್ಯ ಪುಸ್ತಕದಲ್ಲಿ ಬ್ರಹ್ಮಶ್ರೀ ಗುರುನಾರಾಯಣ ಗುರುಗಳ ಕುರಿತಂತೆ ಅಳವಡಿಸಲಾಗಿದ್ದ ವಿಷಯಗಳ ಬಗ್ಗೆ, ಗೊಂದಲಗಳು ನಿರ್ಮಾಣವಾಗಿದ್ದು, ಈ ಕುರಿತು ಹಲವರು ನಮ್ಮ ಬಳಿ ಚರ್ಚೆಯನ್ನು ಮಾಡಿರುತ್ತಾರೆ. ಬ್ರಹ್ಮ ಶ್ರೀ ನಾರಾಯಣಗುರುಗಳ ವಿಷಯಗಳು ಈ ಹಿಂದೆ ಸಮಾಜ ವಿಜ್ಞಾನ ವಿಷಯದಲ್ಲಿ ಇದ್ದು, ಅದನ್ನು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದರು. ಈ ವರ್ಷದಿಂದ ಅದನ್ನು ಕನ್ನಡ ವಿಷಯಕ್ಕೆ ವರ್ಗಾಯಿಸಲಾಗಿದೆ. ಕನ್ನಡ ವಿಷಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸೇರಿಸಿರುವುದರ ಬಗ್ಗೆ ಹಲವು ಆಕ್ಷೇಪಣೆಗಳು ವ್ಯಕ್ತವಾಗುತ್ತಿವೆ” ಎಂದು ಸುನಿಲ್‌ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿರಿ: ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ…

“ಕನ್ನಡದ ಬದಲು ಸಮಾಜ ವಿಜ್ಞಾನದಲ್ಲಿದ್ದರೆ ಎಲ್ಲಾ ವಿದ್ಯಾರ್ಥಿಗಳು ಅಭ್ಯಾಸ ಮಾಡುವುದಕ್ಕೆ ಸಾಧ್ಯವಾಗುತ್ತದೆ. ಮತ್ತು ಅದು ಸರ್ವ ಸಮ್ಮತವಾಗಿರುತ್ತದೆ ಎಂಬುದು ವಿವಿಧ ಸಂಘಟನೆಗಳ ಹಾಗೂ ರಾಜ್ಯದ ಗಣ್ಯರ ಅಭಿಪ್ರಾಯವಾಗಿದೆ. ಕನ್ನಡ ಭಾಷಾ ವಿಷಯವನ್ನು ಎಲ್ಲರೂ ಅಭ್ಯಾಸ ಮಾಡಲು ಸಾಧ್ಯವಿಲ್ಲ. ಇದರಿಂದಾಗಿ ಬೇರೆ ಭಾಷಾ ಮಾಧ್ಯಮದ ವಿದ್ಯಾರ್ಥಿಗಳು ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯದಿಂದ ವಂಚಿತರಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ ಎಲ್ಲಾ ಭಾಷಾ ಮಾಧ್ಯಮದ ವಿದ್ಯಾರ್ಥಿಗಳಿಗೆ ನಾರಾಯಣಗುರುಗಳ ತನ್ನ ಆದರ್ಶಗಳು ತಿಳಿಯಬೇಕೆಂದಾದಲ್ಲಿ ಸಮಾಜ ವಿಜ್ಞಾನ ವಿಷಯಕ್ಕೆ ಸೇರಿಸುವುದು ಸೂಕ್ತವೆಂಬುದು ನಾಡಿನ ಅನೇಕ ಶೈಕ್ಷಣಿಕ ತಜ್ಞರ ಹಾಗೂ ಹಿರಿಯರ ಒತ್ತಾಸೆಯಾಗಿದೆ. ಆದುದರಿಂದ, ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಲು ಅದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು” ಎಂದು ವಿನಂತಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...