Homeಮುಖಪುಟಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

ಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

- Advertisement -
- Advertisement -

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಾಳಗಂ (ಎಐಎಡಿಎಂಕೆ) ಒಳಗಿನ ಒಳ ಜಗಳದ ನಡುವೆ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್‌) ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಆಯ್ಕೆ ಘೋಷಣೆಯಾದ ಕೂಡಲೇ ಕಾರ್ಯಕಾರಿ ಮಂಡಳಿ ಸದಸ್ಯರು ನಿರ್ಣಯವನ್ನು ಅಂಗೀಕರಿಸಿ ಓ ಪನ್ನರ್‌ಸೆಲ್ವಂ (ಒಪಿಎಸ್‌) ಮತ್ತು ಅವರ ಬೆಂಬಲಿಗರನ್ನು ಪಕ್ಷದಿಂದ ಉಚ್ಚಾಟಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಐಎಡಿಎಂಕೆಯ ಟ್ವಿಟ್ಟರ್‌ ಪ್ರೊಫೈಲ್‌‌ ಚಿತ್ರವಾಗಿ ಪಳನಿಸ್ವಾಮಿ ಫೋಟೋವನ್ನು ಹಾಕಿಕೊಳ್ಳಲಾಯಿತು. ಇದಕ್ಕೂ ಮುನ್ನ ಬೆಳಿಗ್ಗೆ ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯನ್ನು ಬೆಳಗ್ಗೆ 9 ಗಂಟೆಗೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಓ ಪನ್ನೀರ ಸೆಲ್ವಂ ಮನವಿಯನ್ನು ಕೋರ್ಟ್ ತಿರಸ್ಕರಿಸಿ‌ತು. ಬಹುಮತದವರ ಇಚ್ಛೆ ಮೇಲುಗೈ ಸಾಧಿಸಬೇಕು. ಹೀಗಾಗಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ನಾಯಕತ್ವ ತಿಕ್ಕಾಟದಿಂದಾಗಿ ಎಐಎಡಿಎಂಕೆಯ ಎರಡು ಬಣಗಳ ನಡುವಿನ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪಕ್ಷದ ಪ್ರಧಾನ ಕಚೇರಿಯ ಹೊರಗೆ ಅಹಿತಕರ ಘಟನೆಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸಂಯೋಜಕ ಓ ಪನ್ನೀರಸೆಲ್ವಂ ಬೆಂಬಲಿಗರೊಂದಿಗೆ ಪಕ್ಷದ ಕಚೇರಿಗೆ ಆಗಮಿಸಿದ್ದರು. ಜನರಲ್ ಕೌನ್ಸಿಲ್ ಸಭೆ ನಡೆಯಲಿರುವ ನಗರದ ಮದುವೆ ಮಂಟಪಕ್ಕೆ ಇಪಿಎಸ್ ಅವರು ತೆರಳುತ್ತಿದ್ದರು.

ಇಬ್ಬರು ನಾಯಕರ ಬೆಂಬಲಿಗರೆಂದು ಶಂಕಿಸಲಾದ ಮತ್ತು ಎಐಎಡಿಎಂಕೆ ಧ್ವಜಗಳನ್ನು ಹೊತ್ತ ಎರಡು ಗುಂಪುಗಳು ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದವು. ಕೆಲವು ವ್ಯಕ್ತಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವುದನ್ನು, ಹತ್ತಿರದಲ್ಲಿ ನಿಲ್ಲಿಸಿದ ಕೆಲವು ವಾಹನಗಳು ಹಾನಿಗೊಳಿಸಿರುವುದನ್ನು ಸೆರೆಯಾದ ದೃಶ್ಯಗಳಲ್ಲಿ ಕಾಣಬಹುದಾಗಿದೆ. ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇದೇ ವೇಳೆ ಕೆಲವರು ಪಕ್ಷದ ಕಚೇರಿಯ ಬಾಗಿಲು ಮುರಿದು ಬಲವಂತವಾಗಿ ಒಳಗೆ ನುಗ್ಗಿದ್ದು ಕಂಡುಬಂದಿದೆ. ಪಕ್ಷದ ಕಚೇರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಘರ್ಷಣೆಯ ಕುರಿತು ಮಾತನಾಡಿದ ಪಳನಿಸ್ವಾಮಿ, “ಸಮಾಜ ವಿರೋಧಿಗಳು ಪಕ್ಷದ ಮುಖ್ಯ ಕಚೇರಿಗೆ ಪ್ರವೇಶಿಸಬಹುದು ಎಂದು ನಮ್ಮ ಪಕ್ಷದ ಕಾರ್ಯಕರ್ತರು ರಾಯಪೆಟ್ಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರಕ್ಷಣೆ ನೀಡುವಂತೆ ಕೋರಿದ್ದರು. ನಮ್ಮ ಮಾಹಿತಿ ನಿಜವೆಂದು ಸಾಬೀತಾಗಿದೆ” ಎಂದಿದ್ದಾರೆ.

ಪಕ್ಷದ ಕೇಂದ್ರ ಕಚೇರಿಗೆ ಸೂಕ್ತ ಭದ್ರತೆ ಒದಗಿಸಲು ರಾಯಪೆಟ್ಟಾ ಪೊಲೀಸರು ಮತ್ತು ಆಯುಕ್ತರ ಕಚೇರಿ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಪುಷ್ಪ ನಮನ

ಎಐಎಡಿಎಂಕೆ ನಾಯಕ ಮತ್ತು ಮಾಜಿ ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಎಂಜಿಆರ್ ಹಾಗೂ ಜಯಲಲಿತಾ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

‘ವೈಯಕ್ತಿಕ ಹಿತಾಸಕ್ತಿಯಿಂದ ಜನರಲ್ ಕೌನ್ಸಿಲ್ ಸಭೆ ನಡೆಸಲಾಗಿದೆ’: ವಿಕೆ ಶಶಿಕಲಾ

‘ವೈಯಕ್ತಿಕ ಹಿತಾಸಕ್ತಿಗಾಗಿ ಸೋಮವಾರದ ಸಾಮಾನ್ಯ ಸಭೆ ನಡೆಸಲಾಗಿದೆ’ ಎಂದು ಹೇಳಿದ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ, ‘ಹೈಕೋರ್ಟ್‌ನಲ್ಲಿ ನಾನು ಹೂಡಿರುವ ಪ್ರಕರಣ ಬಾಕಿ ಇರುವಾಗ ಇಂತಹ ಕಾರ್ಯಕ್ರಮಗಳನ್ನು ನಡೆಸಬಾರದು. ಇಂದು ನಡೆದ ಸಾಮಾನ್ಯ ಮಂಡಳಿ ಸಭೆ ಖಂಡಿತವಾಗಿಯೂ ಅಸಿಂಧು” ಎಂದಿದ್ದಾರೆ.

“ತಮಿಳುನಾಡಿನ ಮಾಜಿ ಸಿಎಂ ಎಂಜಿಆರ್ ಅವರು ಡಿಎಂಕೆಯಲ್ಲಿನ ತಪ್ಪುಗಳನ್ನು ಖಂಡಿಸಿ ಪ್ರತ್ಯೇಕ ಪಕ್ಷವನ್ನು ಪ್ರಾರಂಭಿಸಿದರು. ಅವರು ಪ್ರಾರಂಭಿಸಿದ ಪಕ್ಷದಲ್ಲಿ ಯಾರಿಗೂ ಈ ಪರಿಸ್ಥಿತಿ ಬರಬಾರದು. ಪ್ರಧಾನ ಕಾರ್ಯದರ್ಶಿಯನ್ನು ತಳಮಟ್ಟದ ಕಾರ್ಯಕರ್ತರಿಂದ ಆಯ್ಕೆ ಮಾಡಬೇಕಾದ ವ್ಯವಸ್ಥೆಯನ್ನು ಎಂಜಿಆರ್‌‌ ಸೃಷ್ಟಿಸಿದ್ದರು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...